ಪುತ್ತೂರು

ರಾಮನ ಕೆಲಸಕ್ಕೆ ಅಡ್ಡಿ ಮಾಡಿದರೆ, ಲಂಕೆಯ ಉತ್ತರ |  ಬೃಹತ್ ಪ್ರತಿಭಟನಾ ಸಭೆಯಲ್ಲಿ ಮುಖ್ಯಮಂತ್ರಿಗೆ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ

ಪುತ್ತೂರು: ರಾಮನ ಕೆಲಸ ಮಾಡುವವರನ್ನು ಹತ್ತಿಕ್ಕುವ ಪ್ರಯತ್ನ ಸಿದ್ಧರಾಮಯ್ಯ ಸರಕಾರ ಮಾಡಿದರೆ ಲಂಕೆಯ ಉದಾಹರಣೆಯ ಮೂಲಕ ಸರಕಾರಕ್ಕೆ ಪ್ರತಿ ಉತ್ತರ ನೀಡಬೇಕಾಗಬಹುದು ಎಂದು ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ವಿರುದ್ಧ ಹಾಗೂ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ಬುಧವಾರ ಇಲ್ಲಿನ ದರ್ಬೆ ವೃತ್ತದಲ್ಲಿ ಹಿಂದೂ ಜಾಗರಣಾ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ನಡೆಸಿದ ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಏಜೆಂಟರ ಮೂಲಕ ಅಧಿಕಾರಿಗಳನ್ನು […]

ರಾಮನ ಕೆಲಸಕ್ಕೆ ಅಡ್ಡಿ ಮಾಡಿದರೆ, ಲಂಕೆಯ ಉತ್ತರ |  ಬೃಹತ್ ಪ್ರತಿಭಟನಾ ಸಭೆಯಲ್ಲಿ ಮುಖ್ಯಮಂತ್ರಿಗೆ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ Read More »

ಜ. 5ರಂದು ಸ್ವ- ನಿಧಿಯಿಂದ ಸಮೃದ್ಧಿ ಮೇಳ, ಮೈ ಬೀ ಡಿಜಿಟಲ್ ಶಿಬಿರ

ಪುತ್ತೂರು: ಸ್ವ- ನಿಧಿಯಿಂದ ಸಮೃದ್ಧಿ ಮೇಳ ಮತ್ತು ಮೈ ಬೀ ಡಿಜಿಟಲ್ ಶಿಬಿರ ಜ. 5ರಂದು ಬೆಳಿಗ್ಗೆ 11 ಗಂಟೆಯಿಂದ ನಗರಸಭಾ ಸಭಾಂಗಣದಲ್ಲಿ ನಡೆಯಲಿದೆ. ನಗರಸಭೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಸ್ವ-ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳ ಕಿರು ಸಾಲ ಸೌಲಭ್ಯ ಪಡೆದ ಎಲ್ಲಾ ಬೀದಿ ಬದಿ ವ್ಯಾಪಾರಿಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿ ಆಯ್ಕೆಯಾದ ಫಲಾನುಭವಿಗಳಿಗೆ ಮತ್ತು ಕುಟುಂಬದ ಸದಸ್ಯರಿಗೆ ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಪಿಎಂ ಸುರಕ್ಷಾ ವಿಮಾ ಯೋಜನೆ,

ಜ. 5ರಂದು ಸ್ವ- ನಿಧಿಯಿಂದ ಸಮೃದ್ಧಿ ಮೇಳ, ಮೈ ಬೀ ಡಿಜಿಟಲ್ ಶಿಬಿರ Read More »

ವಿಟ್ಲ ಸೀಮೆದೊಡೆಯನ ಜಾತ್ರೆಗೆ ಗೊನೆ ಮುಹೂರ್ತ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಬುಧವಾರ ನಡೆಯಿತು. ಬಸವನ ಗುಡಿ ರಾಮಣ್ಣ ಗೌಡರ ತೋಟದಲ್ಲಿ ದೇವಳದ ಅರ್ಚಕರು ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಸದಾಶಿವ ವಿ.ಆರ್., ಕೃಷ್ಣಯ್ಯ ಕೆ., ರಾಜಾರಾಮ ವರ್ಮ, ಜಯರಾಮ ಬಲ್ಲಾಳ, ಶ್ರೀಕಂಠ ವರ್ಮ ಮತ್ತು ಅರುಣ್ ಕುಮಾರ್ ವರ್ಮ, ದಿನೇಶ್ ರಾವ್, ಅನಂತ ಪ್ರಸಾದ್, ನಾಗರಾಜ್, ಕುಂಞಣ್ಣ ಗೌಡ ಬಸವನಗುಡಿ, ವಿ. ರಮಾನಾಥ ದೇವಾಡಿಗ, ಪದ್ಮನಾಭ ಮಂಜಲಾಡಿ, ಅಣ್ಣು ಗೌಡ, ರಾಮಣ್ಣ

ವಿಟ್ಲ ಸೀಮೆದೊಡೆಯನ ಜಾತ್ರೆಗೆ ಗೊನೆ ಮುಹೂರ್ತ Read More »

ಜ. 6ರಂದು ನಗರಸಭೆ ಆಯ-ವ್ಯಯ ತಯಾರಿಕೆ ಪೂರ್ವಭಾವಿ ಸಭೆ

ಪುತ್ತೂರು: ಪುತ್ತೂರು ನಗರಸಭೆಯ 2024-25ನೇ ಸಾಲಿನ ಆಯ – ವ್ಯಯ ತಯಾರಿಕೆ ಕುರಿತು ಪೂರ್ವಭಾವಿ ಸಭೆ ಜ. 6ರಂದು ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ನಗರಸಭಾ ಸಭಾಭವನದಲ್ಲಿ ಸಭೆ ಹಮ್ಮಿಕೊಳ‍್ಳಲಾಗಿದೆ. ಸಭೆಯಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಬೇಕೆಂದು ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.

ಜ. 6ರಂದು ನಗರಸಭೆ ಆಯ-ವ್ಯಯ ತಯಾರಿಕೆ ಪೂರ್ವಭಾವಿ ಸಭೆ Read More »

ನಾಳೆ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಕ್ರೀಡೋತ್ಸವ, ವಾರ್ಷಿಕೋತ್ಸವ

ಪುತ್ತೂರು: ನರಿಮೊಗರು ಗ್ರಾಮೀಣ ವಿದ್ಯಾಸಂಸ್ಥೆಗಳ ಹೊನಲು ಬೆಳಕಿನ ಕ್ರೀಡೋತ್ಸವ, ವಾರ್ಷಿಕೋತ್ಸವ ಸಮಾರಂಭ ಜ. 4ರಂದು ಗುರುವಾರ ಸಂಜೆ 5.10ಕ್ಕೆ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಶ್ರೀ ಸುಶೀಂದ್ರ ತೀರ್ಥ ಸ್ವಾಮೀಜಿಯವರು ಕೋಟಿ ಗೀತಾ ಲೇಖನ ಯಜ್ಞ ದೀಕ್ಷಾ ಪ್ರದಾನ ಮತ್ತು ಆಶೀರ್ವಚನ ನೀಡಲಿದ್ದಾರೆ. ವಿದ್ಯಾಸಂಸ್ಥೆಗಳ ಅಧ್ಯಕ್ಷ ಎಸ್.ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸುವರು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ, ಹಿಂದೂ

ನಾಳೆ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಕ್ರೀಡೋತ್ಸವ, ವಾರ್ಷಿಕೋತ್ಸವ Read More »

ಪರವಾನಿಗೆ ಇಲ್ಲದೆ ಮರಳು ಸಾಗಾಟ | ವಾಹನ ವಶ, ಪ್ರಕರಣ ದಾಖಲು

ಕಡಬ: ಪರವಾನಿಗೆ ಇಲ್ಲದೇ ಮರಳು ಸಾಗಾಟ ಪ್ರಕರಣವನ್ನು ಕಡಬ ಪೊಲೀಸರು ಕಳಾರ ಎಂಬಲ್ಲಿ ಪತ್ತೆ ಹಚ್ಚಿ ಸಾಗಾಟಕ್ಕೆ ಬಳಸುತ್ತಿದ್ದ ಪಿಕಪ್ ವಾಹನ ವಶಪಡಿಸಿಕೊಂಡ ಘಟನೆ ನಡೆದಿದೆ. ಕಡಬ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಅಭಿನಂದನ್ ಎಂ.ಎಸ್. ಹಾಗೂ ಸಿಬ್ಬಂದಿಗಳು ಮಂಗಳವಾರ ಸಂಜೆ ಕಡಬ ಗ್ರಾಮದ ಕಳಾರ ಎಂಬಲ್ಲಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡಬ ಕಡೆಗೆ ಬರುತ್ತಿದ್ದ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ ಅದರಲ್ಲಿ ಮರಳು ಕಂಡು ಬಂದಿದೆ. ಈ ಬಗ್ಗೆ ಚಾಲಕ ಕುಂತೂರು ನಿವಾಸಿ

ಪರವಾನಿಗೆ ಇಲ್ಲದೆ ಮರಳು ಸಾಗಾಟ | ವಾಹನ ವಶ, ಪ್ರಕರಣ ದಾಖಲು Read More »

ಬಡವರ ಪಾಲಿಗೆ ‘ಆಶೀರ್ವಾದ’ | ಮನೆ, ಕಾರು, ಬೈಕ್, ಚಿನ್ನ, ನಗದು ಸೇರಿದಂತೆ ಹತ್ತಾರು ಬಹುಮಾನಗಳ ಮಹಾಪೂರ | ಆಶೀರ್ವಾದ ಎಂಟರ್ ಪ್ರೈಸಸ್’ನಿಂದ ಗ್ರಾಹಕರಿಗೆ ಲಕ್ಕಿ ಸ್ಕೀಮ್

ಪುತ್ತೂರು: ಗ್ರಾಹಕರಿಗೆ ಅದೃಷ್ಟದ `ಆಶೀರ್ವಾದ’ ಸಿಕ್ಕಿದರೆ ಹೇಗಿರಬಹುದು!! ಇಂತಹ ಅಭೂತಪೂರ್ವ ಅವಕಾಶವೊಂದನ್ನು ಆಶೀರ್ವಾದ ಎಂಟರ್ ಪ್ರೈಸಸ್ ಗ್ರಾಹಕರ ಮುಂದಿಡುತ್ತಿದೆ. ಲಕ್ಕಿ ಸ್ಕೀಂ ನಡೆಸಿ ಅದನ್ನು ನೇರ ಪ್ರಸಾರದ ಮೂಲಕ ಡ್ರಾ ಮಾಡಿ ಜನರಿಗೆ ಅವಕಾಶಗಳ ಮಹಾಪೂರವನ್ನು ನೀಡುವ ಸದುದ್ದೇಶದ ಯೋಜನೆಯನ್ನು ಸಿದ್ಧಪಡಿಸಿದೆ. ಬಡವರ ಪಾಲಿಗೆ ಬೆಳಕಾಗಿ, ಗ್ರಾಹಕರ ಪಾಲಿಗೆ ಆಶೀರ್ವಾದವಾಗಿ ಲಕ್ಕಿ ಸ್ಕೀಂ ಅನ್ನು ಪ್ರಸ್ತುತ ಪಡಿಸುತ್ತಿರುವ ಆಶೀರ್ವಾದ ಎಂಟರ್ಪ್ರೈಸಸ್, ಸ್ಕೀಂ ಇತಿಹಾಸದಲ್ಲೇ ಅತೀ ದೊಡ್ಡ ಬಂಪರ್ ಡ್ರಾವನ್ನು ಜನರ ಮುಂದಿಡುತ್ತಿದೆ. ಪ್ರತೀ ತಿಂಗಳು ಕಾರು, ಬೈಕ್,

ಬಡವರ ಪಾಲಿಗೆ ‘ಆಶೀರ್ವಾದ’ | ಮನೆ, ಕಾರು, ಬೈಕ್, ಚಿನ್ನ, ನಗದು ಸೇರಿದಂತೆ ಹತ್ತಾರು ಬಹುಮಾನಗಳ ಮಹಾಪೂರ | ಆಶೀರ್ವಾದ ಎಂಟರ್ ಪ್ರೈಸಸ್’ನಿಂದ ಗ್ರಾಹಕರಿಗೆ ಲಕ್ಕಿ ಸ್ಕೀಮ್ Read More »

ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯ ದೇಹದಿಂದ ವಿಷ ತೆಗೆದು ಸಮಯಪ್ರಜ್ಞೆ ಮೆರೆದ ಆಂಬುಲೆನ್ಸ್ ಸಿಬ್ಬಂದಿ

ಉಪ್ಪಿನಂಗಡಿ: ವಿಷ ಸೇವಿಸಿ ಅಸ್ವಸ್ಥರಾದ ಗೃಹಿಣಿಯೋರ್ವರನ್ನು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿಗೆ ಕರೆದೊಯ್ಯುವ ಸಂದರ್ಭ ಮಹಿಳೆಯ ದೇಹದೊಳಗಿನ ವಿಷ ಹೊರ ತೆಗೆಯುವ ಮೂಲಕ 108 ಅಂಬುಲೆನ್ಸ್‌ನ ಸಿಬ್ಬಂದಿ ತೋರಿದ ಸಮಯ ಪ್ರಜ್ಞೆ ಮೆರೆದ ಘಟನೆ ನಡೆದಿದೆ. ಉಪ್ಪಿನಂಗಡಿಯ ಮಠ ಪರಿಸರದ ಮಹಿಳೆಯೋರ್ವರು ವಿಷ ಸೇವಿಸಿ ಅಸ್ವಸ್ಥರಾದ ಸ್ಥಿತಿಯಲ್ಲಿ ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಗೆ ಕರೆ ತರಲಾಗಿತ್ತು. ಗಂಭೀರ ಸ್ಥಿತಿಗೆ ತಲುಪಿದ್ದ ಮಹಿಳೆಯನ್ನು ಅಗತ್ಯ ಚಿಕಿತ್ಸೆಯೊಂದಿಗೆ ಮಂಗಳೂರಿಗೆ ಕರೆದೊಯ್ಯುವ ಅನಿವಾರ್ಯತೆ ಎದುರಾಗಿತ್ತು. ಈ ವೇಳೆ ಸ್ಥಳೀಯ ಟೀಮ್ ದಕ್ಷಿಣ ಕಾಶಿ ಅಂಬುಲೆನ್ಸ್‌

ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯ ದೇಹದಿಂದ ವಿಷ ತೆಗೆದು ಸಮಯಪ್ರಜ್ಞೆ ಮೆರೆದ ಆಂಬುಲೆನ್ಸ್ ಸಿಬ್ಬಂದಿ Read More »

ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ | ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಠಾಣೆಗೆ ದೂರು ನೀಡಿದ್ದಾರೆ. ಅವಧಿ ಮುಗಿದ ಬಾಡಿಗೆ ಕಟ್ಟಡಕ್ಕೆ ಏಲಂ ಪ್ರಕಟಣೆ ಅಂಟಿಸಿದ ನೋಟೀಸನ್ನು ಕಿತ್ತು ಹಾಕಿ, ಅಂಗಡಿ ಕೋಣೆ ಮೇಲೆ ಅಕ್ರಮ ಹಕ್ಕು ಸಾಧಿಸಿದ್ದಲ್ಲದೆ ತಾಲೂಕು ಪಂಚಾಯತ್ ಕಚೇರಿಗೆ ನುಗ್ಗಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪುತ್ತೂರು ನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ತಾಲೂಕು ಪಂಚಾಯಿತಿ ವಾಣಿಜ್ಯ ಸಂಕೀರ್ಣ-2

ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ | ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲು Read More »

ಪಿಕಪ್ – ಆಟೋ ರಿಕ್ಷಾ ಡಿಕ್ಕಿ!

ಪುತ್ತೂರು: ರಿಕ್ಷಾ ಹಾಗೂ ಪಿಕಪ್ ಮುಖಾಮುಖಿ ಡಿಕ್ಕಿಯಾದ ಘಟನೆ ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ಆಟೋ ರಿಕ್ಷಾ ಚಾಲಕ ರಝಾಕ್ ಜಿಡೆಕಲ್ ಹಾಗೂ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಉಪ್ಪಿನಂಗಡಿ ಕಡೆಯಿಂದ ಕೋಳಿ ಸಾಗಾಟ ಮಾಡುತ್ತಿದ್ದ ಪಿಕಪ್ ಹಾಗೂ ಪುತ್ತೂರು ಕಡೆಯಿಂದ ಬರುತ್ತಿದ್ದ ರಿಕ್ಷಾ ನಡುವೆ ಡಿಕ್ಕಿಯಾಗಿದೆ. ಪರಿಣಾಮ ರಿಕ್ಷಾದ ಮುಂಭಾಗ ಜಖಂಗೊಂಡಿದೆ.

ಪಿಕಪ್ – ಆಟೋ ರಿಕ್ಷಾ ಡಿಕ್ಕಿ! Read More »

error: Content is protected !!
Scroll to Top