ಪುತ್ತೂರು

ಕುಡಿತ ಬಿಡುವ ಬಗ್ಗೆ ಸ್ವಯಂ ಮೂಗುದಾರ ಹಾಕುವ ಅಗತ್ಯವಿದೆ : 1777ನೇ ಮದ್ಯ ವರ್ಜನ ಶಿಬಿರದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ

ಪುತ್ತೂರು: ಮದ್ಯಪಾನಕ್ಕೆ ಪಂಚೇದ್ರಿಯಗಳು ಆಕರ್ಷಣೆಯಾಗದಂತೆ ದೂರವಿರುವುದರ ಜೊತೆಗೆ ಕುಡಿತ ನಿಲ್ಲಿಸುವ ವಿಚಾರದಲ್ಲಿ ಗಟ್ಟಿ ಮತ್ತು ದೃಡವಾದ ಮನಸ್ಸು, ಚಂಚಲತೆ ಇಲ್ಲದ ಹತೋಟಿ ಬೇಕಾಗಿದೆ. ಮದ್ಯವರ್ಜನ ಶಿಬಿರದಲ್ಲಿ ಭಾಗವಿಸಿದ ಎಲ್ಲರೂ ಕುಡಿತ ಬಿಡುವ ಬಗ್ಗೆ ಸ್ವಯಂ ಮೂಗುದಾರ ಹಾಕಿಕೊಂಡು ಹತೋಟಿಯಲ್ಲಿರಬೇಕು ಎಂದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ನುಡಿದರು. ಅವರು ಮಂಗಳವಾರ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಕಳೆದ ಆರು ದಿನಗಳಿಂದ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಬೆಳ್ತಂಗಡಿ […]

ಕುಡಿತ ಬಿಡುವ ಬಗ್ಗೆ ಸ್ವಯಂ ಮೂಗುದಾರ ಹಾಕುವ ಅಗತ್ಯವಿದೆ : 1777ನೇ ಮದ್ಯ ವರ್ಜನ ಶಿಬಿರದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ Read More »

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ಕೃಷ್ಭ ಭಟ್‍ ಕುಕ್ಕುಜೆ, ಉಪಾಧ್ಯಕ್ಷರಾಗಿ ಆಶಾ ರೈ ಕಲಾಯಿ

ಪುತ್ತೂರು: ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರುಷಗಳ ಅವಧಿಗೆ ಅಧ್ಯಕ್ಷರಾಗಿ ಕೃಷ್ಣ ಭಟ್ ಕುಕ್ಕುಜೆ ಹಾಗೂ ಉಪಾಧ್ಯಕ್ಷರಾಗಿ ಆಶಾ ರೈ ಕಲಾಯಿ ಅವಿರೋಧವಾಗಿ ಆಯ್ಕೆಯಾದರು. ಡಿ.26 ರಂದು ಸಂಘದ ಕಚೇರಿಯಲ್ಲಿ ಆಯ್ಕೆ ನಡೆಯಿತು. ಚುನಾವಣಾಧಿಕಾರಿ ಶೋಭಾ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು ನಿರ್ದೇಶಕರುಗಳಾದ ಜಯರಾಮ ರೈ ಸೊಂಪಾಡಿ, ಪ್ರೇಮಚಂದ್ರ ಮೆದು, ಪ್ರಶಾಂತ್ ಕುಮಾರ್, ಮಮತಾ ಕೆ.ಬಿ ದೇವಸ್ಯ, ಗೋಪಾಲಕೃಷ್ಣ ಗೌಡ, ಪದ್ಮಯ್ಯ ಗೌಡ ಪರಣೆ, ಗಂಗಾಧರ ಸುಣ್ಣಾಜೆ, ಆಶಾಲತಾ, ಗೀತಾ, ಸೂರಪ್ಪ ಗೌಡರವರು ಉಪಸ್ಥಿತರಿದ್ದರು

ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ | ಅಧ್ಯಕ್ಷರಾಗಿ ಕೃಷ್ಭ ಭಟ್‍ ಕುಕ್ಕುಜೆ, ಉಪಾಧ್ಯಕ್ಷರಾಗಿ ಆಶಾ ರೈ ಕಲಾಯಿ Read More »

ವಿದ್ಯೆಯಿಂದ ಸಮಾಜ ಕಟ್ಟುವ ಛಲ, ಧೈರ್ಯ ಸಹಜವಾಗಿ ಬರುತ್ತದೆ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ನೂತನ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಕಡಬ: ಸಮಾಜ ಕಟ್ಟುವ ನಿಟ್ಟಿನಲ್ಲಿ ಒಕ್ಕಲಿಗ ಸಮುದಾಯದವರು ತಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯೆ ನೀಡಿ. ಆಗ ಹೂವಿಗೆ ಹೇಗೆ ಸಹಜವಾಗಿ ಪರಿಮಳೆ ಬರುತ್ತದೋ ಹಾಗೆಯೇ ಸಮಾಜ ಕಟ್ಟುವ ಛಲ, ಧೈರ್ಯ ಸಹಜವಾಗಿ ಬರುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಅವರು ಮಂಗಳವಾರ ಕಡಬ ತಾಲೂಕು ಗೌಡ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ, ನೂತನ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಶಿಲಾನ್ಯಾಸ

ವಿದ್ಯೆಯಿಂದ ಸಮಾಜ ಕಟ್ಟುವ ಛಲ, ಧೈರ್ಯ ಸಹಜವಾಗಿ ಬರುತ್ತದೆ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ನೂತನ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ Read More »

ಗೋಧೋಳಿ ಲಗ್ನದಲ್ಲಿ ನಡೆಯಿತು. ಶ್ರೀನಿವಾಸ ಕಲ್ಯಾಣೋತ್ಸವ | ಸಹಸ್ರಾರು ಭಕ್ತಾದಿಗಳ ಗೋವಿಂದ ಉದ್ಘೋಷದೊಂದಿಗೆ ಮಾಂಗಲ್ಯ ಧಾರಣೆ, ಮಹಾಮಂಗಳಾರತಿ, ಪೂಜೆ, ಪ್ರಸಾದ ವಿನಿಯೋಗದ ಮೂಲಕ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ | ರಾತ್ರಿ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ

ಪುತ್ತೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮೂಲಕ ಶತಮಾನಗಳ ಹೋರಾಟದ ಫಲವಾಗಿ ಕನಸು ನನಸಾಗುತ್ತಿದೆ. ಈ ನಿಟ್ಟಿನಲ್ಲಿ ವಿಶೇಷ ಜವಾಬ್ದಾರಿ ಇಂದಿನಿಂದ ಆರಂಭವಾಗುತ್ತಿದೆ. ಮುಂದೆ ಆಚಂದ್ರಾರ್ಕವಾಗಿ ರಾಮಮಂದಿರ ಉಳಿಯಬೇಕು. ಮತ್ತೊಮ್ಮೆ ಪರಕೀಯರ ಪಾಲಾಗಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಎರಡು ದಿನಗಳ ಕಾಲ ನಡೆದ ಶ್ರೀನಿವಾಸ ಕಲ್ಯಾಣೋತ್ಸವದ ಅಂಗವಾಗಿ ಸೋಮವಾರ ರಾತ್ರಿ ವೈಭವದಿಂದ

ಗೋಧೋಳಿ ಲಗ್ನದಲ್ಲಿ ನಡೆಯಿತು. ಶ್ರೀನಿವಾಸ ಕಲ್ಯಾಣೋತ್ಸವ | ಸಹಸ್ರಾರು ಭಕ್ತಾದಿಗಳ ಗೋವಿಂದ ಉದ್ಘೋಷದೊಂದಿಗೆ ಮಾಂಗಲ್ಯ ಧಾರಣೆ, ಮಹಾಮಂಗಳಾರತಿ, ಪೂಜೆ, ಪ್ರಸಾದ ವಿನಿಯೋಗದ ಮೂಲಕ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ | ರಾತ್ರಿ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ Read More »

ಡಿ.31: “ಶ್ರೀಮ ಹಿಲ್ಸ್ “ ವಸತಿ ಬಡಾವಣೆ ಉದ್ಘಾಟನೆ

ಪುತ್ತೂರು: “ಶ್ರೀಮ ಹಿಲ್ಸ್” ವಸತಿ ಬಡಾವಣೆಯ ಉದ್ಘಾಟನಾ ಸಮಾರಂಭ ಡಿ.31 ಭಾನುವಾರ ಪುತ್ತೂರು ಬಪ್ಪಳಿಗೆಯಲ್ಲಿ ನಡೆಯಲಿದೆ. ಸಂಜೆ 5 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ್ ಭಟ್ ಉದ್ಘಾಟಿಸಲಿದ್ದು, ಶಾಸಕ ಅಶೋಕ್ ಕುಮಾರ್ ರೈ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭಾ ಸದಸ್ಯ ಭಾಮಿ ಅಶೋಕ್ ಶೆಣೈ, ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ಕ್ಯಾಂಪ್ಕೋ ಮಾಜಿ ಅಧ್ಯಕ್ಷ

ಡಿ.31: “ಶ್ರೀಮ ಹಿಲ್ಸ್ “ ವಸತಿ ಬಡಾವಣೆ ಉದ್ಘಾಟನೆ Read More »

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಠ ಸಮಾಜ ನಿರ್ಮಾಣ‌ ಮಾಡಬೇಕಿದೆ | ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಶಾಸಕ ಅಶೋಕ್ ರೈ

ಪುತ್ತೂರು: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಡ ಸಮಾಜದ ನಿರ್ಮಾಣಕ್ಕೆ ಶ್ರಮ ಪಡಬೇಕಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಆರ್ಯಾಪು ಗ್ರಾಮದ ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿಗಳಿಗೆ ಮಕ್ಕಳನ್ನು ದಾಖಲಿಸುವ ಮೂಲಕ ನಾವು ಪುಟ್ಟ ಹೃದಯಗಳಿಗೂ ಸಂಸ್ಕಾರದ ಶಿಕ್ಷಣ ಎಳೆಯದರಲ್ಲೇ ನೀಡಬೇಕು ಎಂದು ಹೇಳಿದರು. ವೇದಿಕೆಯಲ್ಲಿ ಆರ್ಯಾಪು  ಗ್ರಾಪಂ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷೆ ಅಶೋಕ ನಾಯ್ಕ, ಅಂಗನವಾಡಿ ಮೇಲ್ವಿಚಾರಕಿ ಜಲಜಾಕ್ಷಿ, ಗ್ರಾಪಂ ಪಿಡಿಒ ನಾಗೇಶ್, ಗ್ರಾಪಂ ಸದಸ್ಯರುಗಳಾದ ಪೂರ್ಣಿಮಾ, ರತ್ನಾವತಿ,

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಬಲಿಷ್ಠ ಸಮಾಜ ನಿರ್ಮಾಣ‌ ಮಾಡಬೇಕಿದೆ | ಕಂಬಲದಡ್ಡ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಶಾಸಕ ಅಶೋಕ್ ರೈ Read More »

ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಯಶವಂತ ಎನ್. ಆಯ್ಕೆ

ವಿಟ್ಲ: ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಯಶವಂತ ಎನ್‍. ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಶವಂತ ಎನ್. ಅವರು ವಿಟ್ಲ ಘಟಕದ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಯುವವಾಹಿನಿ ವಿಟ್ಲ ಘಟಕ ಅವರನ್ನು ಅಭಿನಂದಿಸಿದೆ.

ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ ಯಶವಂತ ಎನ್. ಆಯ್ಕೆ Read More »

ಸ್ಕೂಟರ್ ಮೇಲೆ ಜಿಗಿದ ಕಡವೆ | ಇಬ್ಬರಿಗೆ ಗಾಯ

ಪುತ್ತೂರು: ಕಡವೆ ಜಿಗಿದ ಪರಿಣಾಮ ಚಲಿಸುತ್ತಿದ್ದ ಸ್ಕೂಟರ್ ಸವಾರರಿಬ್ಬರು ಗಾಯಗೊಂಡ ಘಟನೆ ಕಡಬ ತಾಲೂಕಿನ ಪಂಜ ಸಮೀಪ ನಡೆದಿದೆ. ಐವತ್ತೊಕ್ಲು ಗ್ರಾಮದ ನೇರಳ ಸುದರ್ಶನ ಹಾಗೂ ಪತ್ನಿ ಅಕ್ಷತಾ ಗಾಯಗೊಂಡವರು. ಸುಬ್ರಹ್ಮಣ್ಯದಿಂದ ತನ್ನ ಸ್ಕೂಟರ್‍ನಲ್ಲಿ ಪಂಜ ಕಡೆಗೆ ಬರುತ್ತಿದ್ದಾಗ ಎಡೋಣಿ ಎಂಬಲ್ಲಿ ಸ್ಕೂಟರ್ ಮೇಲೆ ಕಡವೆ ಜಿಗಿಯಿತು. ಪರಿಣಾಮ ಬಿದ್ದು ಸವಾರರಿಬ್ಬರು ಗಾಯಗೊಂಡರು ಎನ್ನಲಾಗಿದೆ. ಅಕ್ಷತಾ ಅವರ ತಲೆಗೆ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಸುದರ್ಶನ್‍ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ಸ್ಥಳಕ್ಕೆ ಪಂಜ ಅರಣ್ಯ

ಸ್ಕೂಟರ್ ಮೇಲೆ ಜಿಗಿದ ಕಡವೆ | ಇಬ್ಬರಿಗೆ ಗಾಯ Read More »

ಸವಣೂರು ಯುವಕ ಮಂಡಲದ ಜಿತಾಕ್ಷ ಜಿ. ರಾಜ್ಯ ಯುವ ಪ್ರಶಸ್ತಿಗೆ ಆಯ್ಕೆ

ಸವಣೂರು: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕದಿಂದ ಕೊಡಮಾಡುವ 2023-24ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ.ಜಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಡಿ.30ರಂದು ಚಿಕ್ಕಮಗಳೂರಿನ ತರಿಕೆರೆಯಲ್ಲಿ ನಡೆಯಲಿದೆ. ಅವರನ್ನು ಯುವಕ ಮಂಡಲದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ

ಸವಣೂರು ಯುವಕ ಮಂಡಲದ ಜಿತಾಕ್ಷ ಜಿ. ರಾಜ್ಯ ಯುವ ಪ್ರಶಸ್ತಿಗೆ ಆಯ್ಕೆ Read More »

ಶ್ರೀನಿವಾಸ ಕಲ್ಯಾಣೋತ್ಸವ : ಮಧ್ಯಾಹ್ನ ಹದಿನೈದು ಸಾವಿರ ಭಕ್ತರಿಗೆ ಅನ್ನದಾನ | ರಾತ್ರಿ ಐವತ್ತು ಸಾವಿರ ಭಕ್ತಾದಿಗಳಿಗೆ ಅಡುಗೆ ತಯಾರಿ

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ಪ್ರಪ್ರಥಮ ಬಾರಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣೋತ್ಸವ ಭಾನುವಾರದಿಂದ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಜರಗುತ್ತಿದ್ದು, ಮಧ್ಯಾಹ್ನ ಬರೋಬ್ಬರಿ 15 ಸಾವಿರ ಭಕ್ತಾದಿಗಳಿಗೆ ಅನ್ನದಾನ ನಡೆಯಿತು. ಬೆಳಿಗ್ಗೆ 6.30 ಕ್ಕೆ ಸುಪ್ರಭಾತ ಪೂಜೆಯಿಂದ ಡಿ.25 ರ ಕಾರ್ಯಕ್ರಮ ಪ್ರಾರಂಭವಾಯಿತು. ಮಂಗಳೂರಿನ ರಾಗ ಲಾಸ್ಯ ತಂಡದಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಪದ್ಮಾವತಿ ಮಹಾಲಕ್ಷ್ಮೀ ಸಹಿತ ಶ್ರೀನಿವಾಸ ದೇವರಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ಜರಗಿತು.

ಶ್ರೀನಿವಾಸ ಕಲ್ಯಾಣೋತ್ಸವ : ಮಧ್ಯಾಹ್ನ ಹದಿನೈದು ಸಾವಿರ ಭಕ್ತರಿಗೆ ಅನ್ನದಾನ | ರಾತ್ರಿ ಐವತ್ತು ಸಾವಿರ ಭಕ್ತಾದಿಗಳಿಗೆ ಅಡುಗೆ ತಯಾರಿ Read More »

error: Content is protected !!
Scroll to Top