ಕೃಷಿಕ ಸಮಸ್ಯೆ ಪರಿಹರಿಸಲು ಎಐ ಟೆಕ್ನಾಲಜಿ! | ಮರಹತ್ತುವ ಯಂತ್ರ ಅಭಿವೃದ್ಧಿಪಡಿಸಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು
ಪುತ್ತೂರು: ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆಯ ಮೂಲಕ ಮರಹತ್ತುವ ಯಂತ್ರವನ್ನು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯನ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ. ಆಧುನಿಕ ಜೀವನ ಪದ್ದತಿಗೆ ಮಾರುಹೋಗಿರುವ ಯುವ ಜನತೆ ಕೃಷಿ ಕ್ಷೇತ್ರವನ್ನು ಕಡೆಗಣಿಸಿದೆ. ಇದರಿಂದಾಗಿ ಕೆಲವು ವಿಷಯಗಳಲ್ಲಿ ನುರಿತ ಕೆಲಸಗಾರರೇ ಸಿಗುತ್ತಿಲ್ಲ. ಅಡಿಕೆಗೆ ಔಷದ ಸಿಂಪಡಣೆ ಅಡಿಕೆ ಕೊಯ್ಲು, ತೆಂಗಿನಕಾಯಿ ಕೊಯ್ಲು ಮುಂತಾದ ನಾಜೂಕಿನ ಕೆಲಸಗಳನ್ನು ಬೆರಳೆಣಿಯಷ್ಟು ಮಂದಿಯಷ್ಟೇ ಮಾಡುತ್ತಿದ್ದಾರೆ. ಈ ಸಮಸ್ಯೆಗಳನ್ನು ಮನಗಂಡು ಪುತ್ತೂರಿನ […]










