ಪುತ್ತೂರು

ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ: ಆಮಂತ್ರಣ ಬಿಡುಗಡೆ

ಕಾಣಿಯೂರು: ಇಲ್ಲಿನ ಯಕ್ಷಮಿತ್ರ ಬಳಗದ ವತಿಯಿಂದ ನಡೆಯಲಿರುವ ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಜ. 2ರ ಮಂಗಳವಾರ ಸಂಜೆ 6.30ರಿಂದ ಕಾಣಿಯೂರು ಜಾತ್ರಾ ಗದ್ದೆಯಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಹನುಮಗಿರಿ ಮೇಳದಿಂದ `ಶ್ರೀ ದೇವಿ ಲಲಿತೋಪಖ್ಯಾನ’ ಯಕ್ಷಗಾನ ಬಯಲಾಟ ನಡೆಯಲಿದೆ. ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕಾಣಿಯೂರು ಮಠದ ಮೆನೇಜರ್ ನಿರಂಜನ ಆಚಾರ್ಯ ಅವರು ಆಮಂತ್ರಣವನ್ನು ಬಿಡುಗಡೆಗೊಳಿಸಿದರು. ಯಕ್ಷಮಿತ್ರ […]

ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ: ಆಮಂತ್ರಣ ಬಿಡುಗಡೆ Read More »

ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ

ಪುತ್ತೂರು: ಪುರುಷರಕಟ್ಟೆ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ಹಾಗೂ ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂದಿರದ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಂದಿಕೇಶ್ವರ ಭಜನಾ ಮಂದಿರದ ವಠಾರದಲ್ಲಿ ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಅರುಣ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಶ್ರೀ ಉದಯ ತಂತ್ರಿ ಮಾತನಾಡಿ, ಆರೋಗ್ಯದ ವಿಚಾರವನ್ನು ಯಾರೂ ಕಡೆಗಣಿಸಬಾರದು. ಇಂತಹ ಶಿಬಿರದ ಮುಖಾಂತರ ಇಸಿಜಿ, ರಕ್ತದ ಒತ್ತಡ, ಮಧುಮೇಹ ತಪಾಸಣೆ

ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರ Read More »

ನಾಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಲಕ್ಷ ದೀಪೋತ್ಸವ | ಬೆಳಗಲಿದೆ ಭಕ್ತರಿಂದ ಲಕ್ಷಾಂತರ ದೀಪ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಲಕ್ಷ ದೀಪೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿದೆ. ಡಿ.12 ಮಂಗಳವಾರ ಲಕ್ಷದೀಪೋತ್ಸವ ನಡೆಯಲಿದ್ದು, ಈಗಾಗಲೇ ಒಂದು ಸುತ್ತಿನ ಸ್ವಚ್ಛತಾ ಕಾರ್ಯ ನಡೆದಿದೆ. ಸ್ವಚ್ಛತೆಯ ಹಿನ್ನಲೆಯಲ್ಲಿ ಭಾನುವಾರ ಸಂಜೆಯಿಂದಲೇ ರಥಬೀದಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ದೀಪೋತ್ಸವದ ಅಂಗವಾಗಿ ಬೆಳಿಗ್ಗೆ ಲಕ್ಷ ಬಿಲ್ವಾರ್ಚನೆ ಸೇವೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಕ್ತಾದಿಗಳಿಂದ ಭಜನಾ ಸೇವೆ, ಸಂಜೆ 6.30 ರಿಂದ ದೀಪ ಪ್ರಜ್ವಲನ, ರಂಗೋಲಿ, 7.30 ರ ಪೂಜೆ ಬಳಿಕ ಶ್ರೀ ದೇವರ

ನಾಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವೈಭವದ ಲಕ್ಷ ದೀಪೋತ್ಸವ | ಬೆಳಗಲಿದೆ ಭಕ್ತರಿಂದ ಲಕ್ಷಾಂತರ ದೀಪ Read More »

ವಿದ್ಯಾರ್ಥಿಯ ಅತಿರೇಕ ವರ್ತನೆ : ಮಕ್ಕಳ ಪೋಷಕರಿಂದ ವಿದ್ಯಾರ್ಥಿಯ ವಿರುದ್ಧ ಪ್ರತಿಭಟನೆ

ಪುತ್ತೂರು: ವಿದ್ಯಾರ್ಥಿಯೊಬ್ಬನ ಕಿರುಕುಳ ಸಹಿಸದೆ ವಿದ್ಯಾರ್ಥಿಗಳ ಪೋಷಕರು ಶಾಲೆಯ 6ನೇ ತರಗತಿ ವಿದ್ಯಾರ್ಥಿಯೊಬ್ಬನ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಮೇನಾಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದಿದೆ. ಶಾಲೆಯ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬನ ವಿರುದ್ದ ಮಕ್ಕಳ ಪೋಷಕರು ಒಂದಾಗಿ ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಕ್ಕಳಿಗೆ ಹೊಡೆಯುವ ಅಧ್ಯಾಪಕರ ವಿರುದ್ಧ ಪೋಷಕರು ಪ್ರತಿಭಟನೆ ಮಾಡುವುದನ್ನು ಕೇಳಿದ್ದೇವೆ. ಆದರೆ ಇದು ಹಾಗಲ್ಲ ಬದಲಾಗಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬನ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ತುಂಟಾಟ, ಕೀಟಲೆ, ಪೋಕರಿತನದಿಂದ ಶಾಲೆಯಲ್ಲಿ

ವಿದ್ಯಾರ್ಥಿಯ ಅತಿರೇಕ ವರ್ತನೆ : ಮಕ್ಕಳ ಪೋಷಕರಿಂದ ವಿದ್ಯಾರ್ಥಿಯ ವಿರುದ್ಧ ಪ್ರತಿಭಟನೆ Read More »

ನುಳಿಯಾಲು ಸೀತಾರಾಮ ರೈ ತೋಟದಮೂಲೆ ನಿಧನ

ಬೆಟ್ಟಂಪಾಡಿ: ನಿಡ್ಪಳ್ಳಿ ಗ್ರಾಮದ ನುಳಿಯಾಲು ತರವಾಡು ಕುಟುಂಬದ ಹಿರಿಯರಾದ ನುಳಿಯಾಲು ಸೀತಾರಾಮ ರೈ ತೋಟದ ಮೂಲೆ (80) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಮಿತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ, ಭಾರತೀಯ ಜನತಾ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷರಾಗಿ, ವಿನಾಯಕ ನಗರ ಶ್ರೀ ಸಿದ್ಧಿವಿನಾಯಕ ಮಂದಿರ ಸ್ಥಾಪಕಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಪುತ್ರಿ ಹಾಗೂ ಪುತ್ರರನ್ನು ಅಗಲಿದ್ದಾರೆ.

ನುಳಿಯಾಲು ಸೀತಾರಾಮ ರೈ ತೋಟದಮೂಲೆ ನಿಧನ Read More »

ಡಿ.16-19 : ಕೆಮ್ಮಿಂಜೆ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ | ನೆರವೇರಿತು ಗೊನೆಮುಹೂರ್ತ

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಡಿ.16 ರಿಂದ 19 ರ ತನಕ ನಡೆಯಲಿರುವ ವರ್ಷಾವಧಿ ಷಷ್ಠಿ ಮಹೋತ್ಸವದ ಅಂಗವಾಗಿ ಗೊನೆ ಮುಹೂರ್ತ ಸೋಮವಾರ ನಡೆಯಿತು. ಅರ್ಚಕ ಯೋಗೀಶ್ ಭಟ್‍ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನೆರವೇರಿಸಿದರು. ಬಳಿಕ ನಾಗೇಶ್ ತಂತ್ರಿಗಳ ತೋಟದಲ್ಲಿ ಹಿರಿಯರಾದ ಸದಾಶಿವ ಮೂಡಂಬಡಿತ್ತಾಯ ಗೊನೆ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಉಪತಹಶೀಲ್ದಾರ್ ಸುಲೋಚನಾ ಪಿ.ಕೆ., ಉತ್ಸವ ಸಮಿತಿ ಅಧ್ಯಕ್ಷ ತಂತ್ರಿ ಕೆ.ಸುಬ್ರಹ್ಮಣ್ಯ ಬಳ್ಳಕ್ಕುರಾಯ,

ಡಿ.16-19 : ಕೆಮ್ಮಿಂಜೆ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ | ನೆರವೇರಿತು ಗೊನೆಮುಹೂರ್ತ Read More »

ಸಹಕಾರ ರಂಗಕ್ಕೂ ಪುತ್ತಿಲ ಪರಿವಾರ ಎಂಟ್ರಿ | ಸಹಕಾರ ಸಂಘದ ಚುನಾವಣೆಯಲ್ಲಿ 4 ಸ್ಥಾನ

ಪುತ್ತೂರು: ಪುತ್ತಿಲ ಪರಿವಾರ ಇದೀಗ ಸಹಕಾರ ರಂಗಕ್ಕೂ ಕಾಲಿಟ್ಟಿದ್ದು, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಾಲ್ಕು ಸ್ಥಾನದಲ್ಲಿ ಗೆಲುವು ಸಾಧಿಸಿದೆ. ಇದೇ ಮೊದಲ ಬಾರಿ ಸಹಕಾರ ರಂಗಕ್ಕೆ ಪ್ರವೇಶ ಮಾಡಿದ್ದರೂ, ಪುತ್ತಿಲ ಪರಿವಾರ ಯಶ ಕಂಡಿದೆ. ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಡಿ. 10ರಂದು ನಡೆದ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಮೂಲಕ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ ವಿಶ್ವನಾಥ ಬಲ್ಯಾಯ, ನವೀನ್ ಡಿ. ಹಾಗೂ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ

ಸಹಕಾರ ರಂಗಕ್ಕೂ ಪುತ್ತಿಲ ಪರಿವಾರ ಎಂಟ್ರಿ | ಸಹಕಾರ ಸಂಘದ ಚುನಾವಣೆಯಲ್ಲಿ 4 ಸ್ಥಾನ Read More »

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆ | ಬಿಜೆಪಿ ಬೆಂಬಲಿತರಿಗೆ ಭರ್ಜರಿ ಗೆಲುವು

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ 12 ಸ್ಥಾನಗಳಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಒಟ್ಟು 24 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದರು. ಚುನಾವಣೆ ನಡೆದು ಫಲಿತಾಂಶ ಘೋಷಣೆಯಾದಾಗ 9 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮತ್ತು 3 ಮಂದಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆಲುವು

ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆ | ಬಿಜೆಪಿ ಬೆಂಬಲಿತರಿಗೆ ಭರ್ಜರಿ ಗೆಲುವು Read More »

ಶ್ರೀರಾಮ ತಾರಕ ಮಂತ್ರದ ಮೂಲಕ ತನ್ನ ಮನೆಯನ್ನೇ ರಾಮಮಂದಿರ ಮಾಡಿಕೊಳ್ಳಬೇಕು | ಪವಿತ್ರ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮದಲ್ಲಿ ಶ್ರೀ ರಾಜಶೇಖರಾನಂದ ಸ್ವಾಮೀಜಿ

ಪುತ್ತೂರು: ನಿತ್ಯ ಶ್ರೀರಾಮ ತಾರಕ ಮಂತ್ರ ಜಪದ ಮೂಲಕ ಪ್ರತಿಯೊಬ್ಬ ಹಿಂದೂ ತನ್ನ ಮನೆಯನ್ನೇ ರಾಮಮಂದಿರ ಮಾಡಿಕೊಳ್ಳುವ ಮೂಲಕ ಹಿಂದೂ ಸಮಾಜದ ಉದ್ಧಾರಕ್ಕೆ ಪಣತೊಡಬೇಕಾದ ಅಗತ್ಯವಿದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನುಡಿದರು. ಅವರು ಭಾನುವಾರ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಅಯೋಧ್ಯೆ ರಾಮಜನ್ಮಭೂಮಿಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಪುತ್ತೂರು ನಗರದಿಂದ ಉಪವಸತಿ ಕೇಂದ್ರಕ್ಕೆ ವಿತರಿಸುವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.  ಶ್ರೀ ರಾಮ ತಾರಕ ಮಂತ್ರದ ಜತೆಗೆ ಧ್ಯಾನ ಮಾಡುವ ಮೂಲಕ

ಶ್ರೀರಾಮ ತಾರಕ ಮಂತ್ರದ ಮೂಲಕ ತನ್ನ ಮನೆಯನ್ನೇ ರಾಮಮಂದಿರ ಮಾಡಿಕೊಳ್ಳಬೇಕು | ಪವಿತ್ರ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮದಲ್ಲಿ ಶ್ರೀ ರಾಜಶೇಖರಾನಂದ ಸ್ವಾಮೀಜಿ Read More »

ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಜೋಡಿ ಮೇಲೆ ಹಲ್ಲೆ !

ಉಪ್ಪಿನಂಗಡಿ: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಜೋಡಿಯನ್ನು ತಡೆದು ಹಲ್ಲೆಗೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಸಮೀಪದ ಬಾಜಾರು ಎಂಬಲ್ಲಿ ಭಾನುವಾರ ನಡೆದಿದೆ. ಘಟನೆ ಕುರಿತು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮುಸ್ಲಿಂ ಜೋಡಿಯನ್ನು ಮುಸ್ಲಿಂ ಸಮುದಾಯವೇ ತಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆ ನಡೆಸಿದ ಮೂವರು ಆರೋಪಿಗಳು ಪರಾರಿಯಾಗಿದ್ದು, ಈ ಕುರಿತು ವಿದ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳ ಜೋಡಿ ಮೇಲೆ ಹಲ್ಲೆ ! Read More »

error: Content is protected !!
Scroll to Top