ಪುತ್ತೂರು

ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೊರಿಯಲ್ ಅವಾರ್ಡ್ ಗೆ ಯಕ್ಷಗಾನ ಕಲಾವಿದ ದಾಸಪ್ಪ ರೈ ಆಯ್ಕೆ

ಪುತ್ತೂರು: ಬೆಂಗಳೂರು ಆತ್ಮಾಲಯ ಅಕಾಡಮಿ ಮುಖ್ಯಸ್ಥೆ ಡಾ.ಪದ್ಮಜ ಸುರೇಶ್ ನೇತೃತ್ವದಲ್ಲಿ ಪ್ರತಿ ವರ್ಷ ನೀಡುವ 2023 ರ ಶ್ರೀಶಾಂತ ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಅವಾರ್ಡ್‍ಗೆ ತೆಂಕು ತಿಟ್ಟು ಯಕ್ಷಗಾನದ ಖ್ಯಾತ ಕಲಾವಿದ, ಸಂಘಟಕ ಯಚ್.ದಾಸಪ್ಪ ರೈ ಆಯ್ಕೆಯಾಗಿದ್ದಾರೆ.    ವಿದ್ವಾನ್ ಗಾನ ಕೇಸರಿ ಕುದುಮಾರ್ ವೆಂಕಟ್ರಮಣ , ಖ್ಯಾತ ಯಕ್ಷಗಾನ ಹಾಸ್ಯಗಾರ ಪೆರುವೋಡಿ ನಾರಾಯಣ ಭಟ್ , ಪೂಕಳ ಲಕ್ಷ್ಮೀನಾರಾಯಣ ಭಟ್, ಕುಂಬ್ಳೆ ಶ್ರೀಧರ ರಾವ್ ಸಂಗೀತ ಮತ್ತು ಯಕ್ಷಗಾನ ಕ್ಷೇತ್ರಗಳ ಸಾಧನೆಗಾಗಿ ಈ ಪ್ರಶಸ್ತಿ ಪುರಸ್ಕೃತರಾಗಿದ್ದರು. […]

ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೊರಿಯಲ್ ಅವಾರ್ಡ್ ಗೆ ಯಕ್ಷಗಾನ ಕಲಾವಿದ ದಾಸಪ್ಪ ರೈ ಆಯ್ಕೆ Read More »

ತ್ರೋಬಾಲ್ ಪಂದ್ಯಾಟ | ಬೆಥನಿ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಾಸನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಆಯಿಷತ್ ಹಿಬಾ, ನಿರೀಕ್ಷಾ ಎಚ್. ಶೆಟ್ಟಿ, ವೈಗಾ ಎಂ. ರಾಜ್ಯಮಟ್ಟವನ್ನು ಪ್ರತಿನಿಧಿಸಲಿದ್ದು, ಹನ ನಫೀಸ, ಫಾತಿಮಾತ್ ಅಲ್ ಶಿಫಾ, ನದ ಆಯಿಷಾ, ಶಾನ್ವಿ  ಪ್ರೀಷ್ಮ ಮೊಂತೆರೊ, ಪೂರ್ವಿಕ, ಸಿಂಚನ, ಅಲಂಕ್ರಿತ ಮುಂತಾದವರು ಸ್ಪರ್ಧಾಕೂಟದಲ್ಲಿ ಭಾಗವಹಿಸಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ

ತ್ರೋಬಾಲ್ ಪಂದ್ಯಾಟ | ಬೆಥನಿ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಭಯೋತ್ಪಾದಕ ನಂಟಿನ ವ್ಯಕ್ತಿಯ ಜತೆ ವೇದಿಕೆ ಹಂಚಿಕೆ | ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಳೆ ರಾಜ್ಯ ಪಾಲರಿಗೆ ಮನವಿ

ಪುತ್ತೂರು: ಕರ್ನಾಟಕದ ಜವಾಬ್ದಾರಿಯುತ ಮುಖ್ಯಮಂತ್ರಿ ಸಿದ್ಧರಾಮಯ್ಯ  ಅಂತರಾಷ್ಟ್ರೀಯ ಭಯೋತ್ಪಾದನೆ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಜೊತೆ ವೇದಿಕೆ ಹಂಚಿಕೊಂಡ ವಿಚಾರವನ್ನು ಬಜರಂಗದಳ ತೀವ್ರವಾಗಿ ಖಂಡಿಸಿದೆ. ಈ ಕುರಿತು ಕರ್ನಾಟಕ ವಿಶ್ವಹಿಂದು ಪರಿಷದ್ ಬಜರಂಗದಳ ಸಂಫಟನೆ ಡಿ.8 ಶುಕ್ರವಾರ ರಾಜ್ಯಪಾಲರಿಗೆ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ  ಮನವಿ ನೀಡಿ ಕ್ರಮಕೈಗೊಳ್ಳಲು ಆಗ್ರಹಿಸಲಾಗುವುದು ಎಂದು ಬಜರಂಗದಳ ಪ್ರಾಂತ ಸಂಯೋಜಕ್ ಸುನೀಲ್ ಕೆ.ಅರ್, ಪ್ರಾಂತ ಸಹ ಸಂಯೋಜಕರಾದ  ಮುರಳೀಕೃಷ್ಣ ಹಸಂತ್ತಡ್ಕ, ಪ್ರಭಂಜನ್ ಚಿತ್ರದುರ್ಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂತರಾಷ್ಟ್ರೀಯ

ಭಯೋತ್ಪಾದಕ ನಂಟಿನ ವ್ಯಕ್ತಿಯ ಜತೆ ವೇದಿಕೆ ಹಂಚಿಕೆ | ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾಳೆ ರಾಜ್ಯ ಪಾಲರಿಗೆ ಮನವಿ Read More »

ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರ

ಪುತ್ತೂರು: ಆರಿಯಡ್ಕ ಗ್ರಾಮ ಪಂಚಾಯಿತಿ, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಪುತ್ತೂರು ಅವನಿ ಫೌಂಡೇಶನ್, ಹಾಗೂ ಕಂಪನಿಯೋ ನೆಮ್ಮದಿ ವೇಲ್ ನೆಸ್ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರ ಕಾವು ಕೃಷಿ ಪತ್ತಿನ ಸಹಕಾರಿ ಸಂಘದ ಪಂಚಾಮೃತ ಸಭಾಭವನದಲ್ಲಿ ನಡೆಯಿತು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡಿತ್ತಾಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ನೆಮ್ಮದಿ ವೆಲ್ ಸೆಂಟರ್ ನ  ಪ್ರಭಾಕರ್ ಸಾಲ್ಯಾನ್ ಕಾರ್ಯಕ್ರಮದ

ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರ Read More »

ಬೆಳಗಾವಿ ಸುವರ್ಣ ಸೌಧದ ಎದುರು ಗಿಡ ನೆಟ್ಟ ಶಾಸಕ ಅಶೋಕ್ ರೈ

ಪುತ್ತೂರು: ವಿಧಾನ ಸಭಾ ಅಧಿವೇಶನ ನಡೆಯುತ್ತಿರುವ ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗಿಡ ನೆಡುವ ಮೂಲಕ ಬೆಳಗಾವಿಯ ಅಧಿವೇಶನದ ಸವಿನೆನಪಿನ ಗುರುತು ಮಾಡಿದರು. ಹಲಸಿನ ಗಿಡವನ್ನು ಶಾಸಕರು ನೆಡುವ ಮೂಲಕ ತನ್ನ ಪರಿಸರ  ಪ್ರೇಮ ಮೆರೆದರು. ಪುತ್ತೂರಿನ ರಸ್ತೆ ಬದಿಗಳಲ್ಲಿ ಕಾಟು ಮಾವಿನ ಗಿಡ ನೆಡುವ ಮೂಲಕ ಸುದ್ದಿಯಾಗಿದ್ದ ಶಾಸಕರು ಬೆಳಗಾವಿಯಲ್ಲಿ ಹಲಸಿನ ಗಿಡ ನೆಡುವ ಮೂಲಕ ಎರಡನೇ ಬಾರಿಗೆ ಸುದ್ದಿಯಾದರು.

ಬೆಳಗಾವಿ ಸುವರ್ಣ ಸೌಧದ ಎದುರು ಗಿಡ ನೆಟ್ಟ ಶಾಸಕ ಅಶೋಕ್ ರೈ Read More »

ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು

ನೆಲ್ಯಾಡಿ: ಇನ್ನೋವಾ ಕಾರೊಂದು ರಸ್ತೆ ಮಧ್ಯ ಭಾಗದ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ  ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಚಾಲಕನ ನಿದ್ರೆಯ ಮಂಪರಿನಿಂದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕ ಪೈಕಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಶಿರಾಡಿ 108 ಅಂಬುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು Read More »

ನೇಣು ಬಿಗಿದು ವೃದ್ಧ ಆತ್ಮಹತ್ಯೆ !

ಪುತ್ತೂರು : ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಳಿಮಾರಡ್ಕದಲ್ಲಿ 80 ವರ್ಷದ ವೃದ್ಧರೊಬ್ಬರು ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಪುಳಿಮಾರಡ್ಕ ನಿವಾಸಿ ಮಾಲಿಂಗ ನಾಯ್ಕ(80) ಆತ್ಮಹತ್ಯೆ ಮಾಡಿಕೊಂಡವರು. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಡಿ.5 ರಂದು ಅವರು ಮನೆಯ ಸಮೀಪದ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಕುರಿತು ಮೃತರ ಪುತ್ರಿ ಭಾಗಿ ಅವರು ನೀಡಿದ ದೂರಿನಂತೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೇಣು ಬಿಗಿದು ವೃದ್ಧ ಆತ್ಮಹತ್ಯೆ ! Read More »

ರಮಾನಾಥ ಬೈಲಾಡಿ ನಿಧನ

ಪುತ್ತೂರು: ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಸಿಬ್ಬಂದಿ, ಸಂಪ್ಯದ ಬೈಲಾಡಿ ನಿವಾಸಿ ರಮಾನಾಥ ಬೈಲಾಡಿ (61) ಬುಧವಾರ ವಿಷ ಪದಾರ್ಥ ಸೇವಿಸಿ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾದವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ರಮಾನಾಥ ಬೈಲಾಡಿ ನಿಧನ Read More »

ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು !

ವಿಟ್ಲ: ಅಡಿಕೆ ಮರ ಮುರಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸಾಲೆತ್ತೂರಿನಲ್ಲಿ ಬುಧವಾರ ನಡೆದಿದೆ. ಗುಲಾಬಿ (48) ಮೃತಪಟ್ಟವರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಮರ ಮುರಿದು ಗುಲಾಬಿ ಅವರ ಮೇಲೆ ಬಿದ್ದಿದೆ. ಪರಿಣಾಮ ತಲೆಗೆ ತೀವ್ರ ಗಾಯವಾಗಿದ್ದು, ತಕ್ಷಣ ಅವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಅಡಿಕೆ ಮರ ಬಿದ್ದು ಮಹಿಳೆ ಮೃತ್ಯು ! Read More »

ಫಿಲೋಮಿನಾ ಪ. ಪೂ ಕಾಲೇಜಿನ ವಿಂಧ್ಯಾಶ್ರೀ ರೈ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯ ಕೊಮ್ಮೇರಹಳ್ಳಿ ವಿಶ್ವಮಾನವ ಪ. ಪೂ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ  ಪುತ್ತೂರು ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಂಧ್ಯಾಶ್ರೀ ರೈ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯವರು ಶ್ರೀ ಮದ್ ಭಗವದ್ಗೀತಾ ಜಯಂತಿ ಪ್ರಯುಕ್ತ ನಡೆಸಿದ ಜಿಲ್ಲಾ ಮಟ್ಟದ

ಫಿಲೋಮಿನಾ ಪ. ಪೂ ಕಾಲೇಜಿನ ವಿಂಧ್ಯಾಶ್ರೀ ರೈ ರಾಜ್ಯಮಟ್ಟಕ್ಕೆ ಆಯ್ಕೆ Read More »

error: Content is protected !!
Scroll to Top