ಪುತ್ತೂರು

ಡಿ.3: ವಿಟ್ಲ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ‘ಕ್ರೀಡೋತ್ಸವ’

ಬಂಟ್ವಾಳ: ಬಂಟ್ವಾಳ ತಾಲೂಕು ಗೌಡರ ಯುವ ವೇದಿಕೆ ವಿಟ್ಲದ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ಮಹಿಳಾ ಘಟಕದ ಸಹಕಾರದೊಂದಿಗೆ ತಾಲೂಕು ಮಟ್ಟದ ಗೌಡರ ಕ್ರೀಡೋತ್ಸವ ಡಿ.3 ಭಾನುವಾರ ವಿಟ್ಲ ವಿಠಲ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಆರಂಭಗೊಳ್ಳುವ ಕ್ರೀಡೋತ್ಸವದ ಅಂಗವಾಗಿ ಪುರುಷರಿಗೆ ಕಬಡ್ಡಿ, ಹಗ್ಗಜಗ್ಗಾಟ, ವಾಲಿಬಾಲ್, ಗುಂಡೆಸೆತ, ಹಿರಿಯರಿಗೆ ಲಕ್ಕಿ ಗೇಮ್, ವೇಗದ ನಡಿಗೆ, ಮಹಿಳೆಯರಿಗೆ ತ್ರೋಬಾಲ್, ಸಂಗೀತ ಕುರ್ಚಿ, ಲಕ್ಕಿ ಗೇಮ್, ಹಗ್ಗಜಗ್ಗಾಟ, 5ನೇ ತರಗತಿ […]

ಡಿ.3: ವಿಟ್ಲ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ‘ಕ್ರೀಡೋತ್ಸವ’ Read More »

ಬರೆಪ್ಪಾಡಿ ಕೇಪುಳೇಶ್ವರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ

ಬರೆಪ್ಪಾಡಿ: ಬರೆಪ್ಪಾಡಿ ಶ್ರೀ ಕೇಪುಳೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ ಕಾರ್ಯಕ್ರಮ ಶುಕ್ರವಾರ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಸ್‍.ಅಂಗಾರ, ಶಿಲ್ಪಿ ಪ್ರಸಾದ್ ಮುನಿಯಂಗಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಚ ವಿಠಲ ಗೌಡ ಬರೆಪ್ಪಾಡಿ, ಎಪಿಎಂಸಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್ ಉದನಡ್ಕ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಗಿರಿಶಂಕರ ಸುಲಾಯ, ಬೆಳಂದೂರು ಗ್ರಾಮ ಪಂಚಾಯಿತಿ ಮಾಜಿ

ಬರೆಪ್ಪಾಡಿ ಕೇಪುಳೇಶ್ವರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸುತ್ತುಪೌಳಿಗೆ ಶಿಲಾನ್ಯಾಸ Read More »

ಹ್ಯಾಮರ್ ತ್ರೋ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು: ಪದವಿಪೂರ್ವ ಬಾಲಕಿಯರ ವಿಭಾಗದ ರಾಜ್ಯ ಮಟ್ಟದ ಹ್ಯಾಮರ್ ತ್ರೋ ಸ್ಪರ್ಧೆಯಲ್ಲಿ ಪೃಥ್ವಿ ಕೆ. ದ್ವಿತೀಯ ಸ್ಥಾನ ಪಡೆದು, ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಪೃಥ್ವಿ ಕೆ. ಬೆಳ್ಳಿ ಪದಕ ಪಡೆದರು. ಅವರು ಪುತ್ತೂರು ಸಂತ ಫಿಲೋಮಿನ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಪರ್ಪಂಜ ಸೌಗಂಧಿಕಾ ನರ್ಸರಿ ಮಾಲಕ ಚಂದ್ರ ಸೌಗಂಧಿಕಾ ಮತ್ತು ವಿದ್ಯಾಲಕ್ಷ್ಮಿ ದಂಪತಿ ಪುತ್ರಿ.

ಹ್ಯಾಮರ್ ತ್ರೋ: ರಾಷ್ಟ್ರ ಮಟ್ಟಕ್ಕೆ ಆಯ್ಕೆ Read More »

ಡಿ.3: ‘ನಾರೀ ಶಕ್ತಿ ಸಂಗಮ’ ಮಹಿಳಾ ಸಮಾವೇಶ

ಪುತ್ತೂರು: ಪುತ್ತೂರು ಜಿಲ್ಲೆ ಮಹಿಳಾ ಸಮನ್ವಯ ಹಾಗೂ ಕೇಶವ ಸ್ಮೃತಿ ಸಂವರ್ಧನ ಸಮಿತಿ ಜಂಟಿ ಆಶ್ರಯದಲ್ಲಿ ಮಹಿಳೆ ಇಂದು ಮತ್ತು ನಾಳೆ ಕುರಿತು  ‘ನಾರಿ ಶಕ್ತಿ ಸಂಗಮ’ ಡಿ.3 ಭಾನುವಾರ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ ಎಂದು ಮಹಿಳಾ ಸಮನ್ವಯ ಪುತ್ತೂರು ಜಿಲ್ಲಾ ಸಂಚಾಲಕಿ ರೂಪಲೇಖ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2025ನೇ ಇಸವಿಗೆ ಆರ್‍ ಎಸ್‍ಎಸ್‍ ಗೆ 100 ವರ್ಷ ತುಂಬಲಿದ್ದು, ಈ ನಿಟ್ಟಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಹಿಳೆಯರಲ್ಲಿ ಜಾಗೃತಿ, ರಾಷ್ಟ್ರೀಯ

ಡಿ.3: ‘ನಾರೀ ಶಕ್ತಿ ಸಂಗಮ’ ಮಹಿಳಾ ಸಮಾವೇಶ Read More »

ಸುಬ್ರಹ್ಮಣ್ಯದಲ್ಲಿ ಒಕ್ಕಲಿಗ ಗೌಡ ಗ್ರಾಮ ಸಮಾವೇಶ

ಸುಬ್ರಹ್ಮಣ್ಯ: ಕಡಬ ಒಕ್ಕಲಿಗ ಗೌಡ ಸೇವಾ ಸಂಘ, ಸುಬ್ರಹ್ಮಣ್ಯ ಗ್ರಾಮ ಸಮಿತಿ ವತಿಯಿಂದ ಗ್ರಾಮ ಸಮಾವೇಶ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ಉಪನ್ಯಾಸಕ ಅಂಬೆಕಲ್ ಮುತ್ತಯ್ಯ ಗೌಡ ಸಮಾವೇಶವನ್ನು ಉದ್ಘಾಟಿಸಿ ಶುಭ ಹಾರೈಸಿದರು. ನಿವೃತ್ತ ಪ್ರಾಂಶುಪಾಲ ಅಶೋಕ್ ಕುಮಾರ್ ಮೂಲೆಮಜಲು ಒಕ್ಕಲಿಗ ಗೌಡರು ಹಿಂದಿನಿಂದ ನಡೆದುಕೊಂಡು ಬಂದ ರೀತಿ, ಹಿನ್ನೆಲೆ, ಇತಿಹಾಸ, ಆಚಾರ ವಿಚಾರಗಳು , ಸಂಸ್ಕಾರ, ಸಂಸ್ಕೃತಿಗಳ ಕುರಿತು ಮಾಹಿತಿಗಳನ್ನು ನೀಡಿದರು. ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಡಾl ಎ.ಎ.ತಿಲಕ್ ಅಧ್ಯಕ್ಷತೆ ವಹಿಸಿದ್ದರು

ಸುಬ್ರಹ್ಮಣ್ಯದಲ್ಲಿ ಒಕ್ಕಲಿಗ ಗೌಡ ಗ್ರಾಮ ಸಮಾವೇಶ Read More »

ಡಿ.3: ಕಸಾಪ ಪುತ್ತೂರು ತಾಲೂಕು ನೇತೃತ್ವದಲ್ಲಿ ದಿವ್ಯಾಂಗ ಪ್ರತಿಭೆಗಳ ಸಾಹಿತ್ಯ ಸಂಭ್ರಮ | ದಿವ್ಯಂಗ ಸಾಧಕ ಪ್ರಶಸ್ತಿಗೆ ಐದು ಮಂದಿ ಆಯ್ಕೆ

ಪುತ್ತೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಪುತ್ತೂರು ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ಪುತ್ತೂರು ತಾಲೂಕು ವಿವಿದೋದ್ದೇಶ, ಗ್ರಾಮೀಣ, ನಗರ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ ದಿವ್ಯಾಂಗ ಪ್ರತಿಭೆಗಳ ಸಾಹಿತ್ಯ ಸಂಭ್ರಮ ಎಂಬ ವಿನೂತನ ಕಾರ್ಯಕ್ರಮ ಡಿ.3ರಂದು ಪುತ್ತೂರಿನ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾಶ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಶ್ವ ವಿಕಲಚೇತನ ದಿನದಂದು ವಿಕಲಚೇತನರಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತಂದು ಸಮಾಜಕ್ಕೆ ಪರಿಚಯಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ಸೇರಿಸುವ ನಿಟ್ಟಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಿನ್ನ ಸಾಮರ್ಥ್ಯದ ಪ್ರತಿಭೆಗಳಿಗಾಗಿ ಕವಿಗೋಷ್ಠಿ,

ಡಿ.3: ಕಸಾಪ ಪುತ್ತೂರು ತಾಲೂಕು ನೇತೃತ್ವದಲ್ಲಿ ದಿವ್ಯಾಂಗ ಪ್ರತಿಭೆಗಳ ಸಾಹಿತ್ಯ ಸಂಭ್ರಮ | ದಿವ್ಯಂಗ ಸಾಧಕ ಪ್ರಶಸ್ತಿಗೆ ಐದು ಮಂದಿ ಆಯ್ಕೆ Read More »

ಶ್ರೀರಾಮನ ಕೈಂಕರ್ಯದಿಂದ ಪ್ರಾಣ ಪ್ರತಿಷ್ಠೆಗೆ ಅರ್ಥ| ಅಯೋಧ್ಯೆಯ ಮಂತ್ರಾಕ್ಷತೆ ಹಂಚಿಕೆ ಕಾರ್ಯಕ್ರಮದಲ್ಲಿ ಶ್ರೀ ಸಚ್ಚಿದಾನಂದ ಸ್ವಾಮೀಜಿ

ಪುತ್ತೂರು: ಹಿಂದೂ ಧರ್ಮದಲ್ಲಿ ಗೊಂದಲಗಳಿದ್ದು, ಸ್ವಧರ್ಮಿಯರಿಂದಲೇ ಚಿಂತೆ ಕಾಡುವಂತಾಗಿದೆ. ಈ ನಿಟ್ಟಿನಲ್ಲಿ ಧರ್ಮ- ಧಾರ್ಮಿಕ ಆಚರಣೆಯೊಂದಿಗೆ ಪ್ರತಿಯೊಬ್ಬ ಹಿಂದೂ ಬೆರೆಯಬೇಕಾದ ಅಗತ್ಯವಿದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ನುಡಿದರು. ಅವರು ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಸಭಾಮಂದಿರದಲ್ಲಿ ಅಯೋಧ್ಯೆ ರಾಮಜನ್ಮ ಭೂಮಿ ಮಂದಿರದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ.22 ರಂದು ಶ್ರೀರಾಮ ಪ್ರಾಣಪ್ರತಿಷ್ಠೆ ಅಂಗವಾಗಿ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ವಿವಿಧ ತಾಲೂಕುಗಳಿಗೆ ಕಳುಹಿಸಿಕೊಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಹಿಂದೂ ಧರ್ಮದಲ್ಲಿ

ಶ್ರೀರಾಮನ ಕೈಂಕರ್ಯದಿಂದ ಪ್ರಾಣ ಪ್ರತಿಷ್ಠೆಗೆ ಅರ್ಥ| ಅಯೋಧ್ಯೆಯ ಮಂತ್ರಾಕ್ಷತೆ ಹಂಚಿಕೆ ಕಾರ್ಯಕ್ರಮದಲ್ಲಿ ಶ್ರೀ ಸಚ್ಚಿದಾನಂದ ಸ್ವಾಮೀಜಿ Read More »

ರೈ ಚಾರಿಟೇಬಲ್ ಟ್ರಸ್ಟ್ ನಿಂದ ಕಾರ್ಮಿಕ ಕಾರ್ಡ್ ವಿತರಣೆ

ಪುತ್ತೂರು: ಬಡ ಜನರ ಸೇವೆಗೆಂದು ಕಳೆದ 11 ವರ್ಷಗಳಿಂದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ರಚನೆ ಮಾಡಲಾಗಿದ್ದು, ಮುಂದೆಯೂ ಟ್ರಸ್ಟ್ ನ ಸಮಾಜ ಸೇವೆ ಮುಂದುವರೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ, ಶಾಸಕ ಅಶೋಕ್ ರೈ ಹೇಳಿದರು. ಅವರು ಗುರುವಾರ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಮಿಕ ಕಾರ್ಡ್ ವಿತರಿಸಿ ಮಾತನಾಡಿದರು. ಒಟ್ಟು 5400 ಕಾರ್ಮಿಕ ಕಾರ್ಡುಗಳನ್ನು ವಿತರಿಸಲಾಗಿದೆ.‌ ಕಾರ್ಮಿಕರ ಕಾರ್ಡು ನೀಡುವ ಮೂಲಕ ಬಡವರ ಬದುಕಿನಲ್ಲಿ‌ಭರವಸೆ ಮೂಡಿಸುವ ಕೆಲಸ ಟ್ರಸ್ಟಿನಿಂದ ನಡೆಯುತ್ತಿದೆ. ಮುಂದಿನ‌ ದಿನಗಳಲ್ಲಿ‌ಇನ್ನಷ್ಟು

ರೈ ಚಾರಿಟೇಬಲ್ ಟ್ರಸ್ಟ್ ನಿಂದ ಕಾರ್ಮಿಕ ಕಾರ್ಡ್ ವಿತರಣೆ Read More »

ಜಿಲ್ಲಾ ಕೇಂದ್ರ ಸಹಕಾರಿ ಸಂಘಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ | ನವೋದಯ ಸ್ವಸಹಾಯ ಸಂಘದ ಸದಸ್ಯರಿಂದ ಆಕರ್ಷಕ ಪಥಸಂಚಲನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಗುರುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ರಾಜ್ಯ ಅಬಕಾರಿ ಸಚಿವ ಆರ್‍.ಬಿ.ತಿಮ್ಮಾಪುರ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಮಹಿಳೆಯರಲ್ಲಿ ಆರ್ಥಿಕ ಸಬಲೀಕರಣದ ಜತೆ ಸ್ವಾವಲಂಬಿ ಜೀವನ ನಡೆಸಲು ಸಹಕಾರಿ ಕ್ಷೇತ್ರದ ಮೂಲಕ ಅನುವು ಮಾಡಿ ಕೊಟ್ಟಿರುವುದು ಅದ್ಭುತ

ಜಿಲ್ಲಾ ಕೇಂದ್ರ ಸಹಕಾರಿ ಸಂಘಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ | ನವೋದಯ ಸ್ವಸಹಾಯ ಸಂಘದ ಸದಸ್ಯರಿಂದ ಆಕರ್ಷಕ ಪಥಸಂಚಲನ Read More »

ಡಿ.27 : ಅಯ್ಯಪ್ಪ ದೀಪೋತ್ಸವ : ವಿವಿಧ ಸಮಿತಿ ರಚನೆ

ಪುತ್ತೂರು: ಡಿ.27 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಅಯ್ಯಪ್ಪ ದೀಪೋತ್ಸವ ಅಚಾರಣೆಯ ಸಮಿತಿ ರಚಿಸಲಾಯಿತು. ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಕಾರ್ಯಾಧ್ಯಕ್ಷರಾಗಿ ಸುಧಾಕರ ಶೆಟ್ಟಿ, ಸಂಚಾಲಕರಾಗಿ ಮುರಳಿ ಕೃಷ್ಣ ಹಸಂತಡ್ಕ, ಪ್ರಧಾನ ಕಾರ್ಯದರ್ಶಿಯಾಗಿ  ರಾಧಾಕೃಷ್ಣ ಗೌಡ ನಂದಿಲ, ಮನೋಜ್ ಚಿಕ್ಕಪುತ್ತೂರು, ಜತೆ ಕಾರ್ಯದರ್ಶಿಯಾಗಿ ಮನ್ಮಥ ಶೆಟ್ಟಿ, ಉಪಧ್ಯಾಕ್ಷರಾಗಿ ರಾಮಣ್ಣ ಗುರುಸ್ವಾಮಿ, ಸತೀಶ್ ನಾಯಕ್, ದೇವನಂದ, ಗೌರವ ಅಧ್ಯಕ್ಷರಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರನ್ನು ಆಯ್ಕೆ ಮಾಡಲಾಯಿತು.

ಡಿ.27 : ಅಯ್ಯಪ್ಪ ದೀಪೋತ್ಸವ : ವಿವಿಧ ಸಮಿತಿ ರಚನೆ Read More »

error: Content is protected !!
Scroll to Top