ಪುತ್ತೂರು

ಪುತ್ತೂರು : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಪುತ್ತೂರು: ಕೌಡಿಚಾರ್ – ರೆಂಜ ರಸ್ತೆಯ ಪಾಪೆಮಜಲು ಎಂಬಲ್ಲಿ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಪಾಪೆಮಜಲು ನಿವಾಸಿ ಸುಭಾಷ್ (50) ಮೃತಪಟ್ಟವರು. ಅವರು ಶುಕ್ರವಾರ ರಾತ್ರಿ ವೇಳೆ ರಸ್ತೆ ದಾಟುತ್ತಿದ್ದಾಗ ಅವರಿಗೆ ರಿಕ್ಷಾ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪುತ್ತೂರು : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು Read More »

ಪುತ್ತೂರು : ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಪುತ್ತೂರು : ನ್ಯಾಯಾಲಯದಿಂದ ಜಾಮೀನು ಪಡೆದ ಬಳಿಕ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿರುವ ಪುತ್ತೂರು ಪೊಲೀಸರು ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಮಹಮ್ಮದ್ ಹನೀಫ್ (55) ಎಂದು ಗುರುತಿಸಲಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 35/2001 ಕಲಂ: 379 ಜೊತೆಗೆ 34 ಭಾ.ದಂ.ಸಂ ನೇ ಪ್ರಕರಣದಲ್ಲಿ ಆರೋಪಿ 2018 ರಲ್ಲಿ ಜಾಮೀನು ಪಡೆದ ನಂತರ, ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ

ಪುತ್ತೂರು : ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಪುತ್ತೂರು: ಪೋಕ್ಸೋ ಕೇಸ್‌ ಅಪರಾಧಿಗೆ ಕಠಿಣ ಜೈಲು ಶಿಕ್ಷೆ, ದಂಡ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ರಿಯಲ್ಲಿ 7 ವರ್ಷದ ಹಿಂದೆ ನಡೆದಿದ್ದ ಪ್ರಕರಣ ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಏಳು ವರ್ಷಗಳ ಹಿಂದೆ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಮೈಂದನಡ್ಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗದಗ ಜಿಲ್ಲೆಯ ರೋಣ ತಾಲೂಕಿನ ಅಪರಾಧಿ ಪೀರೇಶ್ ಪೀರಪ್ಪ ಸಂಗಪ್ಪ ಮಾಲೋತ್ತರ ಎಂಬಾತನಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಕಾರಾಗೃಹ ವಾಸದ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದೆ. 2007ರ ಅಗಸ್ಟ್ ತಿಂಗಳಲ್ಲಿ

ಪುತ್ತೂರು: ಪೋಕ್ಸೋ ಕೇಸ್‌ ಅಪರಾಧಿಗೆ ಕಠಿಣ ಜೈಲು ಶಿಕ್ಷೆ, ದಂಡ Read More »

ಅಕ್ಷಯ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ “ಅನ್ವೇಷಣಾ -2” ಪ್ರತಿಭಾನ್ವೇಷಣ ಕಾರ್ಯಕ್ರಮ

ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಲಲಿತ ಕಲಾ ಸಂಘ ಮತ್ತು ಐಕ್ಯೂ ಎಸಿ ಸಹಭಾಗಿತ್ವದಲ್ಲಿ “ಅನ್ವೇಷಣಾ 2” ಇದರ ಉದ್ಘಾಟನೆ ಮತ್ತು ಸಮಾರೋಪ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್, ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ಇಂತಹ ಕಾರ್ಯಕ್ರಮಗಳು ಬಹಳ ಪ್ರಾಮುಖ್ಯತೆಯನ್ನು ಪಡೆಯುತ್ತದೆ ಹಾಗೂ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಹಾರೈಸಿದರು. ಅಧ್ಯಕ್ಷೀಯ ನೆಲೆಯಲ್ಲಿ

ಅಕ್ಷಯ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ “ಅನ್ವೇಷಣಾ -2” ಪ್ರತಿಭಾನ್ವೇಷಣ ಕಾರ್ಯಕ್ರಮ Read More »

ಅನ್ಯಾಡಿ ಗ್ರಾಮ ಚಾವಡಿ ಯಲ್ಲಿ ಸಂಭ್ರಮದ ನಾಗರಪಂಚಮಿ

ಕುದ್ಮಾರು: ಅನ್ಯಾಡಿ ಗ್ರಾಮ ಚಾವಡಿ ಯಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಮಂಗಳವಾರ ಆಚರಿಸಲಾಯಿತು.  ಬೆಳಗ್ಗಿನಿಂದಲೇ ಭಕ್ತದಿಗಳು ಸರತಿಸಾಲಿನಲ್ಲಿ ನಿಂತು ಶ್ರೀ ದೇವರಿಗೆ ಹಾಲು, ಸೀಯಾಳ ,ಹಣ್ಣುಕಾಯಿಯನ್ನು ಅರ್ಪಿಸಿದರು. ಬಳಿಕ ಶ್ರೀ ನಾಗದೇವರಿಗೆ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಊರ ಭಕ್ತದಿಗಳು ಭಾಗವಹಿಸಿದರು.

ಅನ್ಯಾಡಿ ಗ್ರಾಮ ಚಾವಡಿ ಯಲ್ಲಿ ಸಂಭ್ರಮದ ನಾಗರಪಂಚಮಿ Read More »

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಆಟಿದ ಕೂಟ

ಪುತ್ತೂರು: ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯದ ಪುತ್ತೂರು ಶಾಖೆಯಲ್ಲಿ ಇಂದು ವಿಶೇಷ ಕಾರ್ಯಕ್ರಮ ‘ಆಟಿದ ಕೂಟ’ ನಡೆಯಿತು. ಆಟಿ ತಿಂಗಳು ಮತ್ತು ನಾಗರ ಪಂಚಮಿ ಹಬ್ಬದ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿ.ಎಲ್. ಆಚಾರ್ಯ ಚಿನ್ನಾಭರಣ ಮಳಿಗೆಯ ಸಿಬ್ಬಂದಿ ಮತ್ತು ಗ್ರಾಹಕರಿಗೆ ಆಟಿ ತಿಂಗಳ ವಿಶೇಷ ತಿನಿಸುಗಳಾದ ಪತ್ರೊಡೆ, ಗೆಣಸೆಲೆ, ಕಷಾಯಗಳನ್ನೊಳಗೊಂಡ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಆಟಿದ ಕೂಟ Read More »

50 ಅಡಿಗಳ ಕೇಸರಿ ಧ್ವಜ ಅಳವಡಿಸಿ 44 ನೇ ವರ್ಷದ ಗಣೇಶೋತ್ಸವಕ್ಕೆ ಪೂರ್ವತಯಾರಿ ಆರಂಭಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ 44 ನೇ ವರ್ಷದ ಗಣೇಶ ಚತುರ್ಥಿಯ ಪೂರ್ವಸಿದ್ಧತೆಯ ಹಿನ್ನೆಲೆಯಲ್ಲಿ ವಿವೇಕಾನಂದ ಪ್ರತಿಮೆಯ ಬಳಿ 50 ಅಡಿ ಇರುವ ಭಗವಾಧ್ವಜವನ್ನು ಅಳವಡಿಸಲಾಯಿತು. RSS ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ರವೀಂದ್ರ ಪಿ, ಯುವ ನಾಯಕ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಪುತ್ತೂರು ನಗರ ಮಂಡಲದ ಅಧ್ಯಕ್ಷ ನಿತೇಶ್ ಕಲ್ಲೇಗ ತೆಂಗಿನಕಾಯಿ ಒಡೆಯುವ ಮೂಲಕ ಗಣೇಶೋತ್ಸವದ ಪೂರ್ವ ತಯಾರಿಗೆ ಚಾಲನೆ

50 ಅಡಿಗಳ ಕೇಸರಿ ಧ್ವಜ ಅಳವಡಿಸಿ 44 ನೇ ವರ್ಷದ ಗಣೇಶೋತ್ಸವಕ್ಕೆ ಪೂರ್ವತಯಾರಿ ಆರಂಭಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ Read More »

ಪುತ್ತೂರು : ಭಾರಿ ಮಳೆ ಕಾರಣ ಇಂದು ಶಾಲೆಗಳಿಗೆ ರಜೆ

ಪುತ್ತೂರು : ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನಲ್ಲೂ ಇಂದು (ಜು.24) ಶಾಲೆಗಳಿಗೆ ರಜೆ ಸಾರಲಾಗಿದ್ದು, ಇದರೊಂದಿಗೆ ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ಶಾಲೆಗಳಿಗೆ ರಜೆ ನೀಡಿದಂತಾಗಿದೆ. ಪುತ್ತೂರು ತಾಲೂಕಿನ ಎಲ್ಲ ಅಂಗನವಾಡಿ, ಕೇಂದ್ರಗಳು, ಪ್ರಾಥಮಿಕ ಶಾಳೆಗಳು, ಪ್ರೌಢಾಲೆಗಳು, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ನೀಡಲಾಗಿದೆ. ನೀರು ಹರಿಯುವ ತಗ್ಗು ಪ್ರದೇಶಗಳು, ಕೆರೆಮ ನದಿತೀರಗಳಿಗೆ ಮಕ್ಕಳು ಹೋಗದಂತೆ ನೋಡಿಕೊಳ್ಳಬೇಕು ಎಂದು ತಹಶೀಲ್ದಾರ್‌ ಸೂಚನೆ ನೀಡಿದ್ದಾರೆ.

ಪುತ್ತೂರು : ಭಾರಿ ಮಳೆ ಕಾರಣ ಇಂದು ಶಾಲೆಗಳಿಗೆ ರಜೆ Read More »

ಲಂಡನ್ ಯೂನಿವರ್ಸಿಟಿ ಮುಂಭಾಗ ತುಳು ಧ್ವಜ ಹಿಡಿದು ತನ್ನ ಶೈಕ್ಷಣಿಕ ಸಾಧನೆ ಸಂಭ್ರಮಿಸಿದ ಪುತ್ತೂರಿನ ಗಾಯಕ್

ಪುತ್ತೂರು: ಲಂಡನ್‌ ಯೂನಿವರ್ಸಿಟಿಯಲ್ಲಿ ಕನ್ಸ್ಟ್ರಕ್ಷನ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಗಾಯಕ್ ಜಿ. ಎನ್. ಅವರು ಯೂನಿವರ್ಸಿಟಿ ಮುಂಭಾಗದಲ್ಲಿ ತುಳುನಾಡಿನ ಧ್ವಜವನ್ನು ಪ್ರದರ್ಶಿಸುವ ಮೂಲಕ ನಾಡಿಗೆ ಹಿರಿಮೆ ತಂದು ಕೊಟ್ಟಿದ್ದಾರೆ. ಗಾಯಕ್ ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಂಸ್ಥೆಗಳಲ್ಲಿ ಹೈಸ್ಕೂಲ್, ಪಿಯುಸಿ ವಿದ್ಯಾಭ್ಯಾಸ ಮಾಡಿದ್ದು, ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ಇಂಜಿನಿಯರಿಂಗ್ ಪದವಿ ಪಡೆದುಕೊಂಡಿರುತ್ತಾರೆ. ಗಾಯಕ್ ಅವರು ಹಾರಾಡಿಯ ಗಣೇಶ್ ನಂದಿಲ ಮತ್ತು ನಗರಸಭಾ ಸದಸ್ಯೆ ಪ್ರೇಮಲತಾ ನಂದಿಲ ಅವರ ಪುತ್ರ. ಇವರ ತಮ್ಮ

ಲಂಡನ್ ಯೂನಿವರ್ಸಿಟಿ ಮುಂಭಾಗ ತುಳು ಧ್ವಜ ಹಿಡಿದು ತನ್ನ ಶೈಕ್ಷಣಿಕ ಸಾಧನೆ ಸಂಭ್ರಮಿಸಿದ ಪುತ್ತೂರಿನ ಗಾಯಕ್ Read More »

ಜಿ.ಎಲ್. ಆಚಾರ್ಯದಲ್ಲಿ ಆಟಿ ಸೇಲ್: ಇನ್ನು ಮೂರೇ ದಿನ

ಪುತ್ತೂರು: ನಗರದ ಪ್ರತಿಷ್ಠಿತ ಆಭರಣ ಮಳಿಗೆ ಜಿ. ಎಲ್. ಆಚಾರ್ಯದಲ್ಲಿ ಆಟಿ ಸೇಲ್ ನಡೆಯುತ್ತಿದ್ದು, ಇದಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ಈ ಆರ್ ಇರಲಿದ್ದು ಚಿನ್ನ, ಬೆಳ್ಳಿ, ವಜ್ರಾಭರಣಗಳಿಗೆ ಆಕರ್ಷಕ ಉಡುಗೊರೆ ಪ್ರಕಟಿಸಲಾಗಿದೆ. ಚಿನ್ನಾಭರಣ ಖರೀದಿಗೆ ನೇರ 300/- ರೂ. ರಿಯಾಯಿತಿ, 1 ಕ್ಯಾರಟ್ ಗ್ಲೋ ವಜ್ರಾಭರಣ ಖರೀದಿಯ ಮೇಲೆ ರೂ. 5000/- ನೇರ ರಿಯಾಯಿತಿ ಇದೆ. ಬೆಳ್ಳಿ ಆಭರಣಗಳಿಗೆ ಸಂಬಂಧಿಸಿದ ಹಾಗೆ ಕೆ.ಜಿ. ಗೆ 3000/- ರೂ. ರಿಯಾಯಿತಿ

ಜಿ.ಎಲ್. ಆಚಾರ್ಯದಲ್ಲಿ ಆಟಿ ಸೇಲ್: ಇನ್ನು ಮೂರೇ ದಿನ Read More »

error: Content is protected !!
Scroll to Top