ಪುತ್ತೂರು

ಹೊಳೆಗೆ ಸ್ನಾನಕ್ಕಿಳಿದ ಯುವಕ ಹೃದಯಾಘಾತದಿಂದ ಮೃತ್ಯು

ಪುತ್ತೂರು: ಇರ್ದೆ ಬೆಂದ್ರ ತೀರ್ಥದ ಬಳಿ ಹೊಳೆಗೆ ಸ್ನಾನಕ್ಕೆಂದು ಇಳಿದ ಯುವಕ ಹೃದಯಘಾತದಿಂಂದ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಸ್ಥಳೀಯ ನೆಂಟರೊಬ್ಬರ ಮನೆಗೆ ಬಂದಿದ್ದ ಬೊಳುವಾರಿನ ಗ್ಯಾರೇಜೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಜಿತ್ (27.ವ) ಎಂಬ ಯುವಕ ಸ್ನಾನಕ್ಕೆಂದು ಹೊಳೆಗೆ ಇಳಿದ ವೇಳೆಯಲ್ಲಿ ಹೃದಯಘಾತವಾಗಿದೆ. .ನೀರಿನಲ್ಲಿ ತೇಲುತ್ತಿದ್ದ ಯುವಕನನ್ನು ತಕ್ಷಣ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಗಾಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಯನ್ನು ತಿಳಿದುಬಂದಿಲ್ಲ.

ಹೊಳೆಗೆ ಸ್ನಾನಕ್ಕಿಳಿದ ಯುವಕ ಹೃದಯಾಘಾತದಿಂದ ಮೃತ್ಯು Read More »

ನ.19: ಉಚಿತ ನೇತ್ರ ತಪಾಸಣಾ ಶಿಬಿರ

ಪುತ್ತೂರು: ರೋಟರಿ ಕ್ಲಬ್‍ ಪುತ್ತೂರು ಕಣ್ಣಿನ ಆಸ್ಪತ್ರೆ ಹಾಗೂ ಪ್ರಸಾದ್ ನೇತ್ರಾಲಯದ ಜಂಟಿ ಆಶ್ರಯದಲ್ಲಿ ‘ಉಚಿತ ನೇತ್ರ ತಪಾಸಣಾ ಶಿಬಿರ’ ನ.19 ರಂದು ಪುತ್ತೂರು ಜೈನಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಶಿಬಿರವನ್ನು ರೋಟರಿ ಕ್ಲಬ್‍ ಜಿಲ್ಲಾ 3150 ರ ಆರ್‍ಐ ಉದಯ್ ಪಿಲಾನಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲಾ 3181 ರ ಜಿಲ್ಲಾ ಗವರ್ನರ್ ಎಚ್‍.ಆರ್‍.ಕೇಶವ್, ಜಿಲ್ಲಾ 3150 ರ ಪಿಡಿಜಿ ಆರ್‍.ಐ ರಮೇಶ್ ವಂಗಾಲ, ಜಿಲ್ಲಾ

ನ.19: ಉಚಿತ ನೇತ್ರ ತಪಾಸಣಾ ಶಿಬಿರ Read More »

ನ.16: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16 ಗುರುವಾರ ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಬಳಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಪರಮಪೂಜ್ಯ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ದೀಪ ಪ್ರಜ್ವಲನೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ರಾಜ್ಯ ಸರಕಾರ ಸಭಾಪತಿ ಯು.ಟಿ.ಖಾದರ್ ಕಚೇರಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ

ನ.16: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆಯ ಪ್ರಾದೇಶಿಕ ಕಚೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ Read More »

ಅಪ್ರಾಪ್ತೆಯ ಮಾನಭಂಗ ಯತ್ನ | ಆರೋಪಿ ಬಂಧನ

ಪುತ್ತೂರು: ಮಾನಭಂಗ ಯತ್ನ ಪ್ರಕರಣ ಸಂಬಂಧಿಸಿದಂತೆ ಯುವನೋರ್ವನನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಅಪ್ರಾಪ್ತೆ ಯುವತಿಯ ಮಾನಭಂಗ ಯತ್ನದಲ್ಲಿ ಆರೋಪಿ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತು ಡಿವೈಎಸ್‍ಪಿ ಡಾ.ಗಾನ ಪಿ.ಕುಮಾರ್, ಇನ್‍ಸ್ಪೆಕ್ಟರ್ ಎಂ.ಎನ್.ರಾವ್ ಅವರ ಮಾರ್ಗದರ್ಶನದಂತೆ ಪುತ್ತೂರು ಮಹಿಳಾ ಠಾಣೆಯ ಎಸ್‍.ಐ. ಭವಾನಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕುಮಾರಸ್ವಾಮಿ ಹಾಗೂ ಸುಚಿನ್ ಅವರು ಆರೋಪಿಯನ್ನು ಕೇರಳದ ಕೊಚ್ಚಿ ಸಮೀಪದ ರೈಲ್ವೇ ನಿಲ್ದಾಣವೊಂದರಲ್ಲಿ ಬಂಧಿಸಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಅಪ್ರಾಪ್ತೆಯ ಮಾನಭಂಗ ಯತ್ನ | ಆರೋಪಿ ಬಂಧನ Read More »

ದೇಶೀ ತಳಿ ಗೋವಿನ ಸಾಕಾಣೆ ಹೆಚ್ಚಿಸುವ ಯೋಜನೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಗೋಪೂಜೆಯಲ್ಲಿ ಕೇಶವ ಪ್ರಸಾದ್ ಮುಳಿಯ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಬಲಿಪಾಡ್ಯಮ ದಿನವಾದ ಸೋಮವಾರ ಗೋಧೋಳಿ ಸಮಯದಲ್ಲಿ ಸಾಮೂಹಿಕ ಗೋಪೂಜೆ ದೇವಸ್ಥಾನದ ಗೋಶಾಲೆಯಲ್ಲಿ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್‍. ಭಟ್ ಹಾಗೂ ವಸಂತ ಕೆದಿಲಾಯ ಗೋಶಾಲೆ ಆವರಣದಲ್ಲಿ ಗೋಪೂಜೆಯ ವಿಧಿ ವಿಧಾನಗಳನ್ನು ನಡೆಸಿದರು. ಪ್ರಶಾಂತ್ ಭಟ್ ಸಹಕರಿಸಿದರು. ಮಹಿಳೆಯರಿಂದ ಗೋಪೂಜೆ ಸೇವೆ ನಡೆಯಿತು. ಬಳಿಕ ಗೋವುಗಳಿಗೆ ಹೂವಿನ ಹಾರ ಹಾಕಿ ಅವಲಕ್ಕಿ, ದೋಸೆಯನ್ನು ತಿನ್ನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ

ದೇಶೀ ತಳಿ ಗೋವಿನ ಸಾಕಾಣೆ ಹೆಚ್ಚಿಸುವ ಯೋಜನೆ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಗೋಪೂಜೆಯಲ್ಲಿ ಕೇಶವ ಪ್ರಸಾದ್ ಮುಳಿಯ Read More »

ಅಕ್ಷಯ್ ಕಲ್ಲೇಗ ಹತ್ಯೆಯನ್ನು ನಾವು ಖಂಡಿಸುತ್ತೇವೆ | ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು | ಹತ್ಯೆಯಾದ ಟೈಗರ್ಸ್ ಕಲ್ಲೇಗ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಮನೆಗೆ ಸಭಾಪತಿ ಯು.ಟಿ. ಖಾದರ್ ಭೇಟಿ  

ಪುತ್ತೂರು: ಇತ್ತೀಚೆಗೆ ಹತ್ಯೆಯಾದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಮನೆಗೆ ರಾಜ್ಯ ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಸೋಮವಾರ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಭಾಪತಿ ಯು.ಟಿ. ಖಾದರ್, ಸಾಮಾಜಿಕ ಮತ್ತು ಧಾರ್ಮಿಕವಾಗಿ ಸೇವೆ ಸಮರ್ಪಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಅಕ್ಷಯ್ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಪ್ರತಿಯೊಂದು ಪ್ರಾಣಕ್ಕೆ ಅದರದ್ದೇ ಆದ ಮಹತ್ವವಿದೆ. ಈ ನಿಟ್ಟಿನಲ್ಲಿ  ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಪೊಲೀಸರು ಪ್ರಯತ್ನಿಸಬೇಕು ಹಾಗೂ ಸವಾಲಾಗಿ ಸ್ವೀಕರಿಸಬೇಕು.

ಅಕ್ಷಯ್ ಕಲ್ಲೇಗ ಹತ್ಯೆಯನ್ನು ನಾವು ಖಂಡಿಸುತ್ತೇವೆ | ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು | ಹತ್ಯೆಯಾದ ಟೈಗರ್ಸ್ ಕಲ್ಲೇಗ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಮನೆಗೆ ಸಭಾಪತಿ ಯು.ಟಿ. ಖಾದರ್ ಭೇಟಿ   Read More »

ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನಿಂದ ‘ಸೇವಾ ಸೌರಭ’ | 50 ಸಾವಿರಕ್ಕೂ ಅಧಿಕ ಮಂದಿಗೆ ವಸ್ತ್ರ ವಿತರಣೆ | ಅತಿಥಿ ದೇವೋಭವದ ಅರ್ಥ ಇಲ್ಲಿ ಸಂಪನ್ನಗೊಂಡಿದೆ ಎಂದ ಒಡಿಯೂರು ಶ್ರೀ

ಪುತ್ತೂರು: ಸಂಪತ್ತಿನ ಮೌಲ್ಯವರ್ಧನೆ ಹಾಗೂ ಮಾನವೀಯತೆ ಇವೆರಡೂ ಸೇವಾ ಸೌರಭ ಕಾರ್ಯಕ್ರಮದಲ್ಲಿ ಮೇಳೈಸಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ರೈ ಎಸ್ಟೇಟ್ ಎಜ್ಯುಕೇಶಬಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಸೋಮವಾರ ನಡೆದ ವಸ್ತ್ರ ವಿತರಣೆ, ಸಹಭೋಜನ ಕಾರ್ಯಕ್ರಮ ‘ಸೇವಾ ಸೌರಭ’ವನ್ನು ಕಲ್ಪವೃಕ್ಷದ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಸಂಪತ್ತು ಮೌಲ್ಯವರ್ಧನೆ ಆಗುವುದು ದಾನ ಮಾಡಿದಾಗ ಮಾತ್ರ. ಇದರೊಂದಿಗೆ ಮಾನವೀಯತೆ ಅಗತ್ಯ. ಮಾನವೀಯತೆ

ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನಿಂದ ‘ಸೇವಾ ಸೌರಭ’ | 50 ಸಾವಿರಕ್ಕೂ ಅಧಿಕ ಮಂದಿಗೆ ವಸ್ತ್ರ ವಿತರಣೆ | ಅತಿಥಿ ದೇವೋಭವದ ಅರ್ಥ ಇಲ್ಲಿ ಸಂಪನ್ನಗೊಂಡಿದೆ ಎಂದ ಒಡಿಯೂರು ಶ್ರೀ Read More »

ಬೆಟ್ಟಂಪಾಡಿಯಲ್ಲಿ ಯಕ್ಷಗಾನ ಉಚಿತ ತರಬೇತಿ ತರಗತಿ ಉದ್ಘಾಟನೆ

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಉಚಿತ ಯಕ್ಷಗಾನ ತರಬೇತಿ ತರಗತಿ ನ. 12ರಂದು ಆರಂಭಗೊಂಡಿತು. ಯಕ್ಷಗಾನ ಗುರು ಶಶಿಕಿರಣ್ ಕಾವು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಿವಾಜಿ ಗೆಳೆಯರ ಬಳಗದ ಅಧ್ಯಕ್ಷ ರಾಧಕೃಷ್ಣ ನಾಯಕ್, ಕಾರ್ಯದರ್ಶಿ ಭಾಸ್ಕರ್ ಎಂ.ಎಸ್, ಮಂಜುನಾಥೇಶ್ವರ ಭಜನಾ ಮಂಡಳಿ ಗೌರವಾಧ್ಯಕ್ಷ ನಾರಾಯಣ ಬೆಟ್ಟಂಪಾಡಿ, ಭಜನಾ ಮಂಡಳಿಯ ಅಧ್ಯಕ್ಷ ಅವಿನ್ ಬೆಟ್ಟಂಪಾಡಿ, ಸನತ್ ಬರಮೇಲು ಉಪಸ್ಥಿತರಿದ್ದರು. ಬಳಿಕ ಯಕ್ಷಗಾನ ಗುರು ಶಶಿಕುಮಾರ್ ಕಾವು ಅವರು ತರಬೇತಿ ಕಾರ್ಯಾಗಾರ ನಡೆಸಿದರು.

ಬೆಟ್ಟಂಪಾಡಿಯಲ್ಲಿ ಯಕ್ಷಗಾನ ಉಚಿತ ತರಬೇತಿ ತರಗತಿ ಉದ್ಘಾಟನೆ Read More »

ವಿಷ ಸೇವಿಸಿ ಆತ್ಮಹತ್ಯೆ | ಸಾವಿಗೆ ಶರಣಾದ ಲೋಕಯ್ಯ

ಕಾಣಿಯೂರು: ವ್ಯಕ್ತಿಯೊಬ್ಬರು ವಿಪರೀತ ಮದ್ಯ ಸೇವನೆಯಿಂದ ಮೃತಪಟ್ಟ ಘಟನೆ ಕಾಣಿಯೂರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಅಬ್ಬಡದ ಲೋಕಯ್ಯ (43 ವರ್ಷ) ಮೃತಪಟ್ಟವರು. ಕಳೆದ 20 ವರ್ಷಗಳ ಹಿಂದೆ ಅವರು ಶೋಭಾ ಎಂಬವರ ಜೊತೆ ವಿವಾಹವಾಗಿದ್ದರು. ಆದರೆ ಸಂತಾನ ಭಾಗ್ಯ ಒಲಿದು ಬಂದಿರಲಿಲ್ಲ. ಇದರಿಂದ ನೊಂದು ಮದ್ಯ ಸೇವನೆ ಮಾಡಲು ಶುರು ಮಾಡಿಕೊಂಡಿದ್ದರು. ಇತ್ತೀಚೆಗೆ ಸುಮಾರು 4 ವರ್ಷಗಳಿಂದ ಲೋಕಯ್ಯ ಗೌಡರು ಕೂಲಿ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು, ಮದ್ಯ ಸೇವನೆ ಅಧಿಕವಾಗಿ ಸಮಯಕ್ಕೆ ಸರಿಯಾಗಿ

ವಿಷ ಸೇವಿಸಿ ಆತ್ಮಹತ್ಯೆ | ಸಾವಿಗೆ ಶರಣಾದ ಲೋಕಯ್ಯ Read More »

ಬೆಟ್ಟಂಪಾಡಿ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಯಕ್ಷಗಾನ ತರಬೇತಿ ತರಗತಿ ಆರಂಭ

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ, ಹಳೆಗೇಟು ಶಿವಾಜಿ ಯುವ ವೃಂದ ಹಾಗೂ ಶಿವಾಜಿ ಗೆಳೆಯರ ಬಳಗದ ಸಂಯುಕ್ತ ಆಶ್ರಯದಲ್ಲಿ ಉಚಿತ ಯಕ್ಷಗಾನ ತರಬೇತಿ ಶಿಬಿರ ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಆರಂಭಗೊಂಡಿತು. ಮುಖೇಶ್ ಬೆಟ್ಟಂಪಾಡಿ ಅವರ ಸಂಯೋಜನೆಯಲ್ಲಿ ಉಚಿತ ಯಕ್ಷಗಾನ ತರಬೇತಿ ಶಿಬಿರವನ್ನು ಯಕ್ಷಗಾನ ಗುರು ಶಶಿಕಿರಣ್ ಕಾವು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಿವಾಜಿ ಗೆಳೆಯರ ಬಳಗದ ಅಧ್ಯಕ್ಷ ರಾಧಕೃಷ್ಣ ನಾಯಕ್, ಕಾರ್ಯದರ್ಶಿ ಭಾಸ್ಕರ್ ಎಂ.ಎಸ್,ಮಂಜುನಾಥೇಶ್ವರ ಭಜನಾ ಮಂಡಳಿಯ

ಬೆಟ್ಟಂಪಾಡಿ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಯಕ್ಷಗಾನ ತರಬೇತಿ ತರಗತಿ ಆರಂಭ Read More »

error: Content is protected !!
Scroll to Top