ಪುತ್ತೂರು

ಪುತ್ತಿಲ ಪರಿವಾರದಿಂದ ಚಿಕಿತ್ಸೆಗೆ ಒಂದು ಲಕ್ಷ ರೂ. ಚೆಕ್ ಹಸ್ತಾಂತರ

ಪುತ್ತೂರು: ಪುತ್ತಿಲ ಪರಿವಾರದ ಕೆಮ್ಮಿಂಜೆ ವಾರ್ಡಿನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಅವರ ಮಗ ಮೆದುಳಿನ ಕಾಯಿಲೆಗೆ ತುತ್ತಾಗಿದ್ದು ಚಿಕಿತ್ಸೆಗೆ ಸುಮಾರು 10 ಲಕ್ಷದ ಅವಶ್ಯಕತೆಯಿದ್ದು, ಪುತ್ತಿಲ ಪರಿವಾರದಿಂದ ಒಂದು ಲಕ್ಷ ರೂ. ಧನಸಹಾಯ ನೀಡಲಾಯಿತು. ಪುತ್ತಿಲ ಪರಿವಾರದ ವತಿಯಿಂದ ಒಂದು ದಿನದಲ್ಲಿ ಸಂಗ್ರಹಿಸಿದ ಒಂದು ಲಕ್ಷ ರೂಪಾಯಿಯ ಚೆಕ್ಕನ್ನು ಬಾಲಕೃಷ್ಣ ಗೌಡರಿಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು.

ಪುತ್ತಿಲ ಪರಿವಾರದಿಂದ ಚಿಕಿತ್ಸೆಗೆ ಒಂದು ಲಕ್ಷ ರೂ. ಚೆಕ್ ಹಸ್ತಾಂತರ Read More »

ಸಂಸ್ಕಾರ ಭಾರತೀ ಪುತ್ತೂರು ಘಟಕದಿಂದ ವಾಲ್ಮೀಕಿ ನಮನ

ಪುತ್ತೂರು: ದರೋಡೆಕೋರನಾದ ರತ್ನಾಕರನೆಂಬ ಬೇಡನು ದೇವರ್ಷಿ ನಾರದರ ಉಪದೇಶದ ಮೇರೆಗೆ ರಾಮಾಯಣದಂತಹ ಬೃಹದ್ಗ್ರಂಥವನ್ನು ರಚಿಸಿ ಆದಿಕವಿ ವಾಲ್ಮೀಕಿ ಎನಿಸಿಕೊಂಡನು ಎಂದು ಸಾಹಿತಿ, ನಿವೃತ್ತ ಉಪನ್ಯಾಸಕ ಪ್ರೊ. ಹರಿನಾರಾಯಣ ಮಾಡಾವು ಹೇಳಿದರು. ಅವರು ಸಂಸ್ಕಾರ ಭಾರತೀ ಪುತ್ತೂರು ಘಟಕದ ವತಿಯಿಂದ ದರ್ಬೆ ಶಶಿಶಂಕರ ಸಭಾಂಗಣದಲ್ಲಿ ನಡೆದ ವಾಲ್ಮೀಕಿ ನಮನ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. 24,000 ಶ್ಲೋಕಗಳನ್ನೊಳಗೊಂಡ ರಾಮಾಯಣ ಗ್ರಂಥದ ಸಾರವು ಇಂದಿಗೂ ಪ್ರಸ್ತುತ ಎಂದ ಅವರು, ವಾಲ್ಮೀಕಿಯ ಪೂರ್ವೇತಿಹಾಸದ ಸವಿಸ್ತಾರವಾದ ವಿವರಗಳನ್ನು ನೀಡಿದರು. ಸದಸ್ಯೆ ಶಂಕರಿ

ಸಂಸ್ಕಾರ ಭಾರತೀ ಪುತ್ತೂರು ಘಟಕದಿಂದ ವಾಲ್ಮೀಕಿ ನಮನ Read More »

ರಸ್ತೆಗೆ ಉರುಳಿದ ಬೃಹತ್ ಗಾತ್ರದ ಮರ

ಪುತ್ತೂರು: ಪುತ್ತೂರು ನಗರದ ಕಲ್ಲಿಮಾರ್-ಪರ್ಲಡ್ಕ ಸಂಪರ್ಕ ರಸ್ತೆಯಲ್ಲಿ ಇಂದು ಬೆಳಿಗ್ಗೆ  ಬೃಹತ್ ಗಾತ್ರ ಮರ ಬಿದ್ದಿದೆ. ಬೆಳಿಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಮರ ಧರೆಗೆ ಉರುಳಿದ್ದು, ಬೆಳಗ್ಗಿನ ಹೊತ್ತು ಆಗಿರುವುದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಅಲ್ಲದೆ ರಸ್ತೆಯಲ್ಲಿ ಸಂಪರ್ಕ ಕಡಿತಗೊಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದು, ಇದೀಗ ಮರ ತೆರವು ಕಾರ್ಯ ನಡೆಯುತ್ತಿದೆ.

ರಸ್ತೆಗೆ ಉರುಳಿದ ಬೃಹತ್ ಗಾತ್ರದ ಮರ Read More »

ಅಕ್ಷಯ್ ಕಲ್ಲೇಗ ಹತ್ಯೆ ಖಂಡನೀಯ | ಘಟನೆ ಕುರಿತು ಪಾರದರ್ಶಕ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು | ಒಕ್ಕಲಿಗ ಗೌಡ ಸೇವಾ ಸಂಘದ ಸಭೆಯಲ್ಲಿ ಆಗ್ರಹ

ಪುತ್ತೂರು: ನಮ್ಮ ಸಮಾಜದ ಯುವಕ ಅಕ್ಷಯ್ ಕಲ್ಲೇಗ ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನೀಯ. ಘಟನೆಯ ಕುರಿತು ಪಾರದರ್ಶಕ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ವಿಧಿಸಬೇಕು ಮತ್ತು ಅಕ್ಷಯ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಪೊಲೀಸ್ ಇಲಾಖೆಯ ಮೂಲಕ ಸರಕಾರವನ್ನು ಒತ್ತಾಯಿಸುವಂತೆ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ತುರ್ತು ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆ ಅವರ ಅಧ್ಯಕ್ಷತೆಯಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿರುವ ಸಂಘದ

ಅಕ್ಷಯ್ ಕಲ್ಲೇಗ ಹತ್ಯೆ ಖಂಡನೀಯ | ಘಟನೆ ಕುರಿತು ಪಾರದರ್ಶಕ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು | ಒಕ್ಕಲಿಗ ಗೌಡ ಸೇವಾ ಸಂಘದ ಸಭೆಯಲ್ಲಿ ಆಗ್ರಹ Read More »

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ | ಪ್ರಕರಣದಲ್ಲಿ ಭಾಗಿಯಾದ ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ಪಕ್ಷದಿಂದ ಉಚ್ಛಾಟನೆ !

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ಬಂಧನಕ್ಕೊಳಗಾಗಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ವಲಯದಿಂದ ಕೇಳಿ ಬಂದಿದೆ. ಕೊಲೆ ಆರೋಪ ಎದುರಿಸುತ್ತಿರುವ ಕೇಶವ ಪಡೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಹುದ್ದೆಯಿಂದ ಉಚ್ಚಾಟನೆ ಮಾಡಲಾಗುವುದು. ಕೇಶವ ಪಡೀಲ್ ಅವರು ಕೊಲೆ ಪ್ರಕರಣದ ಆರೋಪದ ಮೇಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ | ಪ್ರಕರಣದಲ್ಲಿ ಭಾಗಿಯಾದ ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ಪಕ್ಷದಿಂದ ಉಚ್ಛಾಟನೆ ! Read More »

ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಡಿಕ್ಕಿ

ಕುಂಬ್ರ: ವಿದ್ಯಾರ್ಥಿನಿಯೋರ್ವಳು ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬುಧವಾರ ಕುಂಬ್ರದಲ್ಲಿ ನಡೆದಿದೆ. ಕುಂಬ್ರ ಮಗಿರೆ ನಿವಾಸಿ ಸಲೀಂ ಎಂಬವರ ಪುತ್ರಿ, ಕುಂಬ್ರ ಕೆಪಿಎಸ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಅನ್ನತ್ ಬೀಬಿ ಗಾಯಗೊಂಡ ವಿದ್ಯಾರ್ಥಿನಿ. ಬೆಳಿಗ್ಗೆ ಶಾಲೆಗೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಕುಂಬ್ರ ಕಡೆಯಿಂದ ಕೃಷ್ಣ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿಯಾಗಿದೆ. ಅಪಘಾತದಿಂದ ವಿದ್ಯಾರ್ಥಿನಿ ನೆಲಕ್ಕೆ ಬಿದ್ದು ಕೈ ಹಾಗೂ ಕಾಲಿಗೆ ಗಾಯಗಳಾಗಿವೆ. ತಕ್ಷಣ ಸ್ಥಳೀಯ ರಿಕ್ಷಾ

ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಬೈಕ್ ಡಿಕ್ಕಿ Read More »

ವಿದ್ಯಾರಶ್ಮಿಯಲ್ಲಿ ಎಸ್.ಆರ್.ಕೆ.ಯ ಕೇಶವರೊಂದಿಗೆ ಸಂವಾದ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್.ಆರ್.ಕೆ. ಲ್ಯಾಡರ್ಸ್‌ನ ಮ್ಹಾಲಕರಾದ ಕೇಶವ ಅಮೈ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ನ.8 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈಯವರು ಕೇಶವ ಅವರಿಗೆ ’ವಿದ್ಯಾರಶ್ಮಿ ಸನ್ಮಾನ’ ನೀಡಿ ಮಾತನಾಡಿ, ನಾವು ನಮ್ಮ ದೋಷಗಳನ್ನು ಮೀರಿ ಬೆಳೆಯಬೇಕಾಗಿದೆ. ಒಂದಷ್ಟು ನ್ಯೂನತೆಗಳಿದ್ದ ತಕ್ಷಣ ಧೈರ್ಯಗುಂದದೆ ಹೊಸ ಅವಕಾಶಗಳನ್ನು ಹುಡುಕಿಕೊಂಡು ಬೆಳೆಯಬೇಕು. ದೃಷ್ಟಿ ದೋಷವಿದ್ದರೂ ಛಲ ಬಿಡದೆ ಅದ್ಭುತವಾಗಿ ಸಾಧಿಸಿ ಎಸ್.ಆರ್.ಕೆ. ಲ್ಯಾಡರ್ಸ್ ಎಂಬ ಸಂಸ್ಥೆಯನ್ನು ಕಟ್ಟಿ ಸುಮಾರು 75 ಕುಟುಂಬಗಳಿಗೆ

ವಿದ್ಯಾರಶ್ಮಿಯಲ್ಲಿ ಎಸ್.ಆರ್.ಕೆ.ಯ ಕೇಶವರೊಂದಿಗೆ ಸಂವಾದ Read More »

ಹತ್ಯೆಯಾದ ಅಕ್ಷಯ್ ಕಲ್ಲೇಗ ಮನೆಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ

ಪುತ್ತೂರು: ಸೋಮವಾರ ತಡರಾತ್ರಿ ಹತ್ಯೆಯಾದ  ಕಲ್ಲೇಗ ಟೈಗರ್ಸ್ ಸ್ಥಾಪಕ ಅಕ್ಷಯ್ ಕಲ್ಲೇಗ  ಮನೆಗೆ ಅರುಣ್  ಪುತ್ತಿಲ ಭೇಟಿ  ನೀಡಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಅರುಣ್ ಕುಮಾರ್ ಪುತ್ತಿಲ ಇಂದು ಅಕ್ಷಯ್ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.  ಘಟನೆ ನಡೆದ ದಿನವೇ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿದ್ದೇನೆ, ಅಕ್ಷಯ್ ಕಲ್ಲೇಗ ಕೊಲೆ ಆರೋಪಿಗಳಿಗೆ ಕಾನೂನು ಪ್ರಕಾರ ಸೂಕ್ತ ಶಿಕ್ಷೆ ಆಗಬೇಕು ಎಂದ ಅವರು, ಮಾಧ್ಯಮಗಳಲ್ಲಿ ವರದಿಯಾದಂತೆ,  ಪುತ್ತೂರಿನಲ್ಲಿ ಠಾಣೆಯ ಹಿಡಿತದಲ್ಲಿರುವ ಸಿಸಿಟಿವಿಗಳು ಕಾರ್ಯ

ಹತ್ಯೆಯಾದ ಅಕ್ಷಯ್ ಕಲ್ಲೇಗ ಮನೆಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿ Read More »

ಹೃದಯಾಘಾತದಿಂದ ನವವಿವಾಹಿತೆ ಪುಷ್ಪಾ ಮೃತ್ಯು

ಪುತ್ತೂರು: ನವವಿವಾಹಿತೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಪಡುವನ್ನೂರು ಗ್ರಾಮದ ಪದಡ್ಕದಲ್ಲಿ ನಡೆದಿದೆ. ಪುಷ್ಪಾ (22) ಹೃದಯಾಘಾತದಿಂದ ಮೃತಪಟ್ಟವರು. ಅವರಿಗೆ ಬೆಳಗ್ಗೆ 4 ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆ ತಲುಪುವ ಮೊದಲೇ ಪುಷ್ಪಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪುಷ್ಪಾ ಅವರು ಕೇವಲ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಎನ್ನಲಾಗಿದೆ.

ಹೃದಯಾಘಾತದಿಂದ ನವವಿವಾಹಿತೆ ಪುಷ್ಪಾ ಮೃತ್ಯು Read More »

ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಸೇವಾ ನೌಕರರು ಆರೋಗ್ಯದತ್ತ ಗಮನಹರಿಸಿ | ವೈದ್ಯಕೀಯ ಶಿಬಿರದಲ್ಲಿ ನಗರಸಭೆ ಪೌರಾಯುಕ್ತ ಮಧು ಎನ್‍. ಮನೋಹರ್ | ನಗರಸಭೆ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ಪೌರಸೇವಾ ನೌಕರರ ಸಂಘ, ಸುಳ್ಯ ಕೆವಿಜಿ ಮೆಡಿಕಲ್, ಆಸ್ಪತ್ರೆ ಸಹಯೋಗದಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

ಪುತ್ತೂರು: ಪುತ್ತೂರು ನಗರಸಭೆ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ನಗರಸಭೆ ಪೌರಸೇವಾ ನೌಕರರ ಸಂಘ ಹಾಗೂ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸಹಯೋಗದೊಂದಿಗೆ ಪೌರ ಕಾರ್ಮಿಕರು ಹಾಗೂ ಪೌರ ಸೇವಾ ನೌಕರರಿಗೆ ವೈದ್ಯಕೀಯ ತಪಾಸಣಾ ಶಿಬಿರ ನ.8 ರಂದು ಪುತ್ತೂರು ನಗರಸಭೆ ಸಭಾಂಗಣದಲ್ಲಿ ನಡೆಯಿತು. ನಗರಸಭೆ ಪೌರಾಯುಕ್ತ ಮಧು ಎಸ್‍.ಮನೋಹರ್ ಗಿಡಕ್ಕೆ ನೀರು ಎರೆಯುವ ಮೂಲಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ನಗರಸಭೆ ಸಿಬ್ಬಂದಿಗಳು ಅದರಲ್ಲೂ ತ್ಯಾಜ್ಯ ವಿಲೇವಾರಿ, ನೀರು ಸರಬರಾಜು, ಬೀದಿ ದೀಪ ನಿರ್ವಹಣೆ ಸಿಬ್ಬಂದಿಗಳು

ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರಸೇವಾ ನೌಕರರು ಆರೋಗ್ಯದತ್ತ ಗಮನಹರಿಸಿ | ವೈದ್ಯಕೀಯ ಶಿಬಿರದಲ್ಲಿ ನಗರಸಭೆ ಪೌರಾಯುಕ್ತ ಮಧು ಎನ್‍. ಮನೋಹರ್ | ನಗರಸಭೆ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ಪೌರಸೇವಾ ನೌಕರರ ಸಂಘ, ಸುಳ್ಯ ಕೆವಿಜಿ ಮೆಡಿಕಲ್, ಆಸ್ಪತ್ರೆ ಸಹಯೋಗದಲ್ಲಿ ವೈದ್ಯಕೀಯ ತಪಾಸಣಾ ಶಿಬಿರ Read More »

error: Content is protected !!
Scroll to Top