ಪುತ್ತೂರು

ನ.18: ಭಗವದ್ಗೀತಾ ಸ್ಪರ್ಧೆ | ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ, ಶ್ರೀ ಸೊಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಹಾಗೂ ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆ ನ.18 ಶನಿವಾರ ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆಯಲಿದೆ. ಅಪರಾಹ್ನ 1.30 ರಿಂದ ಭಗವದ್ಗೀತೆಯ 10ನೇ ಅಧ್ಯಾಯದ ಕುರಿತು ಸ್ಪರ್ಧೆಗಳು ನಡೆಯಲಿದೆ. LKG-UKG, 1 ಮತ್ತು 2ನೇ ತರಗತಿ, 3 ಮತ್ತು 4ನೇ ತರಗತಿ, 5 ರಿಂದ 7ನೇ […]

ನ.18: ಭಗವದ್ಗೀತಾ ಸ್ಪರ್ಧೆ | ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆ Read More »

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ | ನಾಲ್ವರು ಆರೋಪಿಗಳಿಗೆ ನ.22 ರ ತನಕ ನ್ಯಾಯಾಂಗ ಕಸ್ಟಡಿ

ಪುತ್ತೂರು: ನೆಹರುನಗರದಲ್ಲಿ ಕಲ್ಲೇಗ ಟೈಗರ್‍ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ಬುಧವಾರ ನ್ಯಯಾಲಯಕ್ಕೆ ಹಾಜರುಪಡಿಸಲಾಯಿತು. ಮಂಗಳವಾರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರು ಪಡಿಸಲಾಗಿತ್ತು. ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನ.22ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ. ಸೋಮವಾರ ತಡರಾತ್ರಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರ ತಂಡ ತಲವಾರಿನಿಂದ ಹತ್ಯೆ ಮಾಡಿತ್ತು. ಅದಾದ ಬಳಿಕ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು.

ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ | ನಾಲ್ವರು ಆರೋಪಿಗಳಿಗೆ ನ.22 ರ ತನಕ ನ್ಯಾಯಾಂಗ ಕಸ್ಟಡಿ Read More »

ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ವಿದ್ಯಾರಶ್ಮಿಗೆ 16 ಪ್ರಶಸ್ತಿಗಳು

ಸವಣೂರು: ಸವಣೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸವಣೂರು ವಿದ್ಯಾರಶ್ಮಿಗೆ ಒಟ್ಟು 16 ಪ್ರಶಸ್ತಿಗಳ ಗರಿ ದೊರಕಿದೆ. ಕಿರಿಯರ ವಿಭಾಗದಲ್ಲಿ 4ನೆ ತರಗತಿಯ ಅನ್ವಿತ್ ಬಿ. ಕೆ. ಕ್ಲೇ ಮಾಡೆಲಿಂಗ್ ನಲ್ಲಿ ಪ್ರಥಮ, 3ನೆ ತರಗತಿಯ ಮುಹಮ್ಮದ್ ಜಾಸಿಂ ಇಂಗ್ಲೀಷ್ ಕಂಠಪಾಠದಲ್ಲಿ ಪ್ರಥಮ, 4ನೆ ತರಗತಿಯ ಪ್ರಣವ್ ಕೆ. ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ, 4ನೆ ತರಗತಿಯ ಫಾತಿಮತ್ ತನಿಶಾ ಅರೇಬಿಕ್ ಪಠಣದಲ್ಲಿ ಪ್ರಥಮ,

ಸವಣೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ವಿದ್ಯಾರಶ್ಮಿಗೆ 16 ಪ್ರಶಸ್ತಿಗಳು Read More »

ಗಂಡಿಬಾಗಿಲು ಶಾಲಾ ಮುಖ್ಯ ಶಿಕ್ಷಕ ಜನಾರ್ದನ ಗೌಡ ನಿಧನ

ರಾಮಕುಂಜ: ಕೊಯಿಲ ಗ್ರಾಮದ ಗಂಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ, ಅಲಂಕಾರು ಗ್ರಾಮದ ತೀರ್ಥಜಾಲು ನಿವಾಸಿ ಜನಾರ್ದನ ಗೌಡ (59) ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು. ಜನಾರ್ದನ ಗೌಡ ಅವರು ಮಂಗಳವಾರ ಮಧ್ಯಾಹ್ನದ ವರೆಗೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಹೋಗಿ ಸಂಜೆ ಮನೆಗೆ ಬಂದಿದ್ದರು. ರಾತ್ರಿ ಅವರಿಗೆ ಎದೆನೋವು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಮನೆಯವರು ತಕ್ಷಣ ಉಪ್ಪಿನಂಗಡಿಯ ಆಸ್ಪತ್ರೆಗೆ ಕರೆತಂದರಾದರು ಆ ವೇಳೆಗಾಗಲೇ ಜನಾರ್ದನಗೌಡರವರು ವೃತಪಟ್ಟಿದ್ದರು ಎನ್ನಲಾಗಿದೆ.

ಗಂಡಿಬಾಗಿಲು ಶಾಲಾ ಮುಖ್ಯ ಶಿಕ್ಷಕ ಜನಾರ್ದನ ಗೌಡ ನಿಧನ Read More »

ಅಳಿಕೆ ಗ್ರಾಪಂ ನೂತನ ಸಂಜೀವಿನಿ ಕಟ್ಟಡ ಉದ್ಘಾಟನೆ

ವಿಟ್ಲ: ಅಳಿಕೆ ಗ್ರಾಪಂ ವತಿಯಿಂದ ಉದ್ಯೊಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಸಂಜೀವಿನಿ ಕಟ್ಟಡದ ಉದ್ಘಾಟನಾ ಸಮಾರಂಭವು ಹಾಗೂ ಸ್ವಚ್ಚತಾ ವಾಹನದ ಚಾಲನಾ ಕಾರ್ಯಕ್ರಮ ನಡೆಯಿತು. ಶಾಸಕ ಅಶೋಕ್‍ ಕುಮಾರ್‍ ರೈ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕುಟುಂಬ ನಿರ್ಹವಣೆ ಜೊತೆ ಕುಟುಂಬದ ಹಿತಕ್ಕಾಗಿ ಕೆಲಸ ಮಾಡುವ ಮಹಿಳೆ ಕುಟುಂಬದ ಜೊತೆ ಈ ದೇಶದ ದೊಡ್ಡ ಸಂಪತ್ತಾಗಿದ್ದಾರೆ. ಪ್ರಸ್ತುತ ಮಹಿಳೆಯರು ಸಂಘಟನೆಯ ಮೂಲಕ ಸ್ವಾವಲಂಬಿ ಜೀವನ ನಡೆಸುವಂತಾಗಿದೆ. ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರು ಮುಂದೆ ಬರಬೇಕು . ಸಣ್ಣ ಉದ್ಯಮಗಳ ಕಡೆ

ಅಳಿಕೆ ಗ್ರಾಪಂ ನೂತನ ಸಂಜೀವಿನಿ ಕಟ್ಟಡ ಉದ್ಘಾಟನೆ Read More »

ನ.15 ರಿಂದ ವಿವೇಕಾನಂದ ಕಾಲೇಜು ಸಂಪರ್ಕ ರೈಲ್ವೇ ಮೇಲ್ಸೇತುವೆ ಬಂದ್ | ಪರ್ಯಾಯ ರಸ್ತೆ ಬಳಸುವಂತೆ ಪ್ರಕಟಣೆ

ಪುತ್ತೂರು: ಮುಖ್ಯ ರಸ್ತೆಯಿಂದ ವಿವೇಕಾನಂದ ಕಾಲೇಜ ಸಂಪರ್ಕಿಸುವ ನೆಹರುನಗರ ಬಳಿಯ ರೈಲ್ವೇ ಮೇಲ್ವೇತುವೆಯ ಅಗಲೀಕರಣ ಕಾಮಗಾರಿ ನಡೆಯುವ ಹಿನ್ನಲೆಯಲ್ಲಿ ನ.15 ರಿಂದ 2024ರ ಮೇ15 ರ ವರೆಗೆ ಬಂದ್ ಮಾಡಲಾಗುವುದು. ಕಾಮಗಾರಿಯ ಹಿನ್ನೆಲೆಯಯಲ್ಲಿ 6 ತಿಂಗಳ ಕಾಲ ಮುಚ್ಚಲಾಗುವುದು. ಈ ಅವಧಿಯಲ್ಲಿ ಪರ್ಯಾಯ ರಸ್ತೆಯನ್ನು ಬಳಸುವಂತೆ ಸೌತ್ ವೆಸ್ಟರ್ನ್ ರೈಲ್ವೆ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನ.15 ರಿಂದ ವಿವೇಕಾನಂದ ಕಾಲೇಜು ಸಂಪರ್ಕ ರೈಲ್ವೇ ಮೇಲ್ಸೇತುವೆ ಬಂದ್ | ಪರ್ಯಾಯ ರಸ್ತೆ ಬಳಸುವಂತೆ ಪ್ರಕಟಣೆ Read More »

ಧರ್ಮಸ್ಥಳದ ಧರ್ಮಾಧಿಕಾರಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ‘ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ 2023’ ಪ್ರಶಸ್ತಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ‘ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ 2023’ ಪ್ರಶಸ್ತಿ ಲಭಿಸಿದೆ.  ಕೇಂದ್ರ ಸರಕಾರದಿಂದ ಪರಿಗಣಿಸಲ್ಪಟ್ಟ ಇಂಟರಾಕ್ಟಿವ್ ಫೋರಮ್ ಆನ್ ಇಂಡಿಯನ್ ಎಕಾನಮಿ (IFIE) ಸಂಸ್ಥೆಯು ಹೆಗ್ಗಡೆ ಅವರ ಸಮಾಜ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿದೆ. ಬೆಂಗಳೂರಿನ ಮಾರತಹಳ್ಳಿಯ ರಾಡಿಸನ್ ಬ್ಲೂ ಹೋಟೆಲ್’ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಪ್ರಶಸ್ತಿ ಪ್ರದಾನ ಮಾಡಿದರು.

ಧರ್ಮಸ್ಥಳದ ಧರ್ಮಾಧಿಕಾರಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಪ್ರತಿಷ್ಠಿತ ‘ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ 2023’ ಪ್ರಶಸ್ತಿ Read More »

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಬೆಳ್ಳಿ ಮತ್ತು ಕಂಚಿನ ಪದಕ

ಪುತ್ತೂರು: ಬಿಹಾರದ ಸರಸ್ವತಿ ವಿದ್ಯಾಮಂದಿರ ಬೆಟ್ಟಯ್ಯದಲ್ಲಿ ನಡೆಯುತ್ತಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಶಾನ್ ಪ್ರಕಾಶ್ 400 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಅವರು ಆರ್ಯಾಪು ಗ್ರಾಮದ ರವಿಪ್ರಕಾಶ್ ಕೆ.ಸಿ ಮತ್ತು ಚಂದ್ರಕಲಾ ಕೆ ವಿ ದಂಪತಿ ಪುತ್ರ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ತನ್ವಿ ಎಸ್ 800 ಮೀಟರ್ ಓಟದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಅವರು ಈಕೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಬೆಳ್ಳಿ ಮತ್ತು ಕಂಚಿನ ಪದಕ Read More »

ಮಕ್ಕಳ ಹಕ್ಕುಗಳ ರಕ್ಷಣೆ ಸರಕಾರದ ಕರ್ತವ್ಯ | ಶಾಸಕರೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಬೇಡಿಕೆಯ ಸುರಿಮಳೆಗೈದ ವಿವಿಧ ಶಾಲಾ ವಿದ್ಯಾರ್ಥಿಗಳು

ಪುತ್ತೂರು: ಶಾಲಾ ಕೊಠಡಿ ಛಾವಣಿ ಸರಿಯಿಲ್ಲ, ಆವರಣ ಗೋಡೆ ಬೇಕು, ನಮಗೆ ಸ್ಮಾರ್ಟ್ ಕ್ಲಾಸ್ ಬೇಕು, ಸುಸಜ್ಜಿತ ಪ್ರಯೋಗ ಶಾಲೆ ಕೊಡಿ, ಶಿಕ್ಷಕರು ಬೇಕು, ಶಾಲೆಗೆ ಸುಣ್ಣ ಬಣ್ಣ ಬಳಿಯಬೇಕು, ಸರಿಯಾಗಿ ಶಾಲಾ ಸಮಯ ತಲುಪಲು ಬಸ್ಸಿನ ವ್ಯವಸ್ಥೆ ಮಾಡಿ ಹೀಗೆ ಬೇಡಿಕೆಯ ಸುರಿ ಮಳೆಯನ್ನೇ ಮುಂದಿಟ್ಟರು ತಾಲೂಕಿನ ವಿವಿಧ ಸರಕಾರಿ ಶಾಲಾ ಮಕ್ಕಳು. ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ, ಅಸಹಾಯಕರ ಸೇವಾ ಟ್ರಸ್ಟ್ ಹಾಗೂ ಪುತ್ತೂರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಮಕ್ಕಳ ಹಕ್ಕುಗಳ ರಕ್ಷಣೆ ಸರಕಾರದ ಕರ್ತವ್ಯ | ಶಾಸಕರೊಂದಿಗೆ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ | ಬೇಡಿಕೆಯ ಸುರಿಮಳೆಗೈದ ವಿವಿಧ ಶಾಲಾ ವಿದ್ಯಾರ್ಥಿಗಳು Read More »

ಹತ್ಯೇಗೀಡಾದ ಅಕ್ಷಯ್ ಕಲ್ಲೇಗ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ | ಮನೆ ಮಂದಿಗೆ ಸಾಂತ್ವನ ಹೇಳಿದ ಶಾಸಕರು | ರಾತ್ರಿ ಹೊತ್ತು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರುವುದಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆಗೆ ಸೂಚನೆಯ ಭರವಸೆ

ಪುತ್ತೂರು: ಸೋಮವಾರ ತಡರಾತ್ರಿ ಹತ್ಯೆಗೀಡಾದ ಅಕ್ಷಯ್ ಕಲ್ಲೇಗ ಅವರ ಶೇವಿರೆ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಮಂಗಳವಾರ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಅಕ್ಷಯ್ ಕಲ್ಲೇಗ ಕೊಲೆ ಅನಿರೀಕ್ಷಿತ, ಆ ಯುವಕ ತನ್ನ ಗೆಳೆಯರಿಂದಲೇ ಕೊಲೆಗೀಡಾಗಿರುವುದು ಖೇದಕರವಾಗಿದೆ. ಕಾನೂನು ಪ್ರಕಾರ ಯಾವ ರೀತಿ ಶಿಕ್ಷೆ ಆಗಬೇಕೋ ಅದು ಆಗಲೇ ಬೇಕು. ಜನತೆ ಭಯ ಪಡುವ ಅಗತ್ಯವಿಲ್ಲ. ವೈಮನಸ್ಸಿನಿಂದ ಮಾತಿಗೆ ಮಾತು ಬೆಳೆದು ನಡೆದ ಈ ಕೃತ್ಯ

ಹತ್ಯೇಗೀಡಾದ ಅಕ್ಷಯ್ ಕಲ್ಲೇಗ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ | ಮನೆ ಮಂದಿಗೆ ಸಾಂತ್ವನ ಹೇಳಿದ ಶಾಸಕರು | ರಾತ್ರಿ ಹೊತ್ತು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರುವುದಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆಗೆ ಸೂಚನೆಯ ಭರವಸೆ Read More »

error: Content is protected !!
Scroll to Top