ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಸ್ತ್ರ ವಿತರಣೆ, ಸಹಭೋಜನ | ಯಾವುದೇ ರಾಜಕೀಯ ಪಕ್ಷ, ಧರ್ಮ, ಜಾತಿ ಬೇಧವಿಲ್ಲ : ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷದಂತೆ ನಡೆಯುವ ವಸ್ತ್ರ ವಿತರಣಾ ಕಾರ್ಯಕ್ರಮ ಹಾಗೂ ಸಹಭೋಜನ ಕಾರ್ಯಕ್ರಮದ ಅಂಗವಾಗಿ ಈ ಬಾರಿ 50 ಸಾವಿರ ಮಂದಿಗೆ ವಸ್ತವಿತರಣೆ ಮಾಡಲಾಗುವುದು. ಅದಕ್ಕಾಗಿ ಪೂರ್ವ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ರೈ ರೈ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಅವರು ಸೋಮವಾರ ಶಾಸಕರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಬಾರಿ ವಸ್ತ್ರ ವಿತರಣೆ ಅಂಗವಾಗಿ ಮಹಿಳೆಯರಿಗೆ ಸೀರೆ ಹಾಗೂ ಪುರುಷರು ಮತ್ತು ಮಕ್ಕಳಿಗೆ […]









