ಪುತ್ತೂರು

ಸ್ಕೂಟರ್ ಡಿಕ್ಕಿ : ಪಾದಚಾರಿಗೆ ಗಾಯ

ಕೌಡಿಚ್ಚಾರ್: ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಗಾಯಗೊಂಡ ಘಟನೆ ಕೌಡಿಚ್ಚಾರ್ ನಲ್ಲಿ ನಡೆದಿದೆ. ಪಡುವನ್ನೂರು ಗ್ರಾಮದ ನಾರಾಯಣ ರೈ (67) ಗಾಯಗೊಂಡವರು. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಹೈಲ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ಡಿಕ್ಕಿಯಾಗಿದೆ. ಪರಿಣಾಮ ನಾರಾಯಣ ರೈ ಅವರು ಗಂಭೀರ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಕೂಟರ್ ಡಿಕ್ಕಿ : ಪಾದಚಾರಿಗೆ ಗಾಯ Read More »

ನಾಳೆ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ | 10 ಮಂದಿ ಸಾಧಕರಿಗೆ ಸನ್ಮಾನ

ಪುತ್ತೂರು: ನಾಳೆ ನಡೆಯಲಿರುವ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ 10 ಮಂದಿ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು. ಸನ್ಮಾನಿತರ ಆಯ್ಕೆ ಪ್ರಕ್ರಿಯೆ ಶಾಸಕ ಅಶೋಕ್ ಕುಮಾರ್ ರೈ ಅವರ ಮಾರ್ಗದರ್ಶನದಲ್ಲಿ 5 ಮಂದಿಯ ಆಯ್ಕೆ ಸಮಿತಿಯಿಂದ ಈಗಾಗಲೇ ನಡೆದಿದೆ. ಹಿರಿಯ ಪ್ರಸೂತಿ ತಜ್ಞ ಡಾ.ಸುಬ್ರಾಯ ಭಟ್ (ವೈದ್ಯಕೀಯ), ಎ.ಪಿ.ನಾರಾಯಣ ಮರಿಕೆ (ಕೃಷಿ), ನಿರ್ಮಲಾ ಸುರತ್ಕಲ್ (ಸಾಹಿತ್ಯ), ನಾರಾಯಣ ಕೆ. (ಶಿಕ್ಷಣ), ದಯಾನಂದ ರೈ ಕೋರ್ಮಂಡ (ಕ್ರೀಡೆ), ಸುಂದರ ರೈ ಮಂದಾರ (ರಂಗಭೂಮಿ), ರೆ.ವಿಜಯ ಹಾರ್ವಿನ್

ನಾಳೆ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ | 10 ಮಂದಿ ಸಾಧಕರಿಗೆ ಸನ್ಮಾನ Read More »

ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ಪ್ರಶಾಂತ್ ಪಲ್ಲತ್ತಡ್ಕ ನಿಧನ

ಪುತ್ತೂರು : ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ (32) ಅಲ್ಪಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು, ಸುಳ್ಯ ಸಹಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸಮಾರಂಭಕ್ಕೆ ಎಲ್‌ಇಡಿ ಹಾಗೂ ನೇರಪ್ರಸಾರಕ್ಕೆ ಬೇಕಾಗುವ ಪರಿಕರಗಳನ್ನು ಒದಗಿಸುವ ಜತೆ ತಾವೇ ಎಲ್‌ಇಡಿಗಳನ್ನು ಅಳವಡಿಸುವ ಪಿಕ್ಸೆಲ್ ಕ್ರಿಯೇಟಿವ್ಸ್ ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದರು. ಮೃತರು ಪತ್ನಿ, ತಂದೆ ತಾಯಿ ಅಕ್ಕಂದಿರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ಪ್ರಶಾಂತ್ ಪಲ್ಲತ್ತಡ್ಕ ನಿಧನ Read More »

ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ವರದಕ್ಷಿಣೆ ಕಿರುಕುಳ ಆರೋಪ

ಬಂಟ್ವಾಳ: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆಯೋರ್ವರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಈ ಕೃತ್ಯ ಎಸಗಿದವರು. ಉಳ್ಳಾಲದ ಆಜ್ಮಾನ್ ಜತೆ ನೌಸೀನ್ ಅವರ ವಿವಾಹ ಮೂರು ತಿಂಗಳ ಹಿಂದೆ ನಡೆದಿತ್ತು. ಈ ಸಂದರ್ಭದಲ್ಲಿ ವರನಿಗೆ 18 ಪವನ್ ಚಿನ್ನ ವರದಕ್ಷಿಣೆ ರೂಪದಲ್ಲಿ ನೀಡಿದ್ದರು ಎನ್ನಲಾಗಿದೆ. ತಂಗಿಯ ಸಾವಿಗೆ ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ಕಾರಣ ಎಂದು

ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ವರದಕ್ಷಿಣೆ ಕಿರುಕುಳ ಆರೋಪ Read More »

ಮಾಯ್‌ ದೆ ದೇವುಸ್‌  ಸಮೂಹ ಶಿಕ್ಷಣ ಸಂಸ್ಥೆಗಳಿಂದ ಮಾದಕ ದ್ರವ್ಯ ಸೇವನೆಯ ವಿರುದ್ಧ  ಜನ ಜಾಗೃತಿ ನಡಿಗೆ ಜಾಥಾ | ನಗರದಲ್ಲಿ ಸಂಚರಿಸಿದ ಜಾಥಾ

ಪುತ್ತೂರು: ಪುತ್ತೂರಿನ ಕ್ಯಾಥೊಲಿಕ್‌ ಶಿಕ್ಷಣ ಸಂಸ್ಥೆಗಳ ವತಿಯಿಂದ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬೃಹತ್‌ ನಡಿಗೆ ಜಾಥಾ ಸೋಮವಾರ ಆಯೋಜಿಸಲಾಯಿತು. ಸಂತ ಫಿಲೋಮಿನಾ ಕಾಲೇಜು ಪ್ರಾಂಗಣದಲ್ಲಿ ಕಾರ್ಯಕ್ರಮ ರೂವಾರಿ, ಮಾಯ್‌ ದೆ ದೇವುಸ್‌ ಶಿಕ್ಷಣ ಸಂಸ್ಥೆಗಳ ಸಂಚಾಲಕ ಅತಿ ವಂದನೀಯ ಲಾರೆನ್ಸ್‌ ಮಸ್ಕರೇಞಸ್‌ ಚಾಲನೆ ನೀಡಿ, ಮಾದಕ ದ್ರವ್ಯ ಸೇವನೆಯ ವಿದುದ್ಧ ಹೋರಾಡಲು ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ನಡಿಗೆ ಜಾಥಾ ಮುಖ್ಯ ರಸ್ತೆಯಲ್ಲಿ ಸಾಗಿ ಮಹಮ್ಮಾಯಿ ದೇವಸ್ಥಾನ ರಸ್ತೆಯ ಮೂಲಕ ಸಂಚರಿಸಿ ಪುತ್ತೂರು

ಮಾಯ್‌ ದೆ ದೇವುಸ್‌  ಸಮೂಹ ಶಿಕ್ಷಣ ಸಂಸ್ಥೆಗಳಿಂದ ಮಾದಕ ದ್ರವ್ಯ ಸೇವನೆಯ ವಿರುದ್ಧ  ಜನ ಜಾಗೃತಿ ನಡಿಗೆ ಜಾಥಾ | ನಗರದಲ್ಲಿ ಸಂಚರಿಸಿದ ಜಾಥಾ Read More »

ಬಸ್‍ ಗೆ ಟಿಪ್ಪರ್ ಡಿಕ್ಕಿ

ಪುತ್ತೂರು: ಟಿಪ್ಪರೊಂದು ಕೆ.ಎಸ್.ಆರ್.ಟಿ.ಸಿ ಬಸ್ ಗೆ ಹಿಂದಿನಿಂದ ಡಿಕ್ಕಿಯಾದ ಘಟನೆ ನಡೆದಿದೆ. ಅರುಣಾ ಥಿಯೇಟರ್ ಬಳಿ ಅಪಘಾತ ಸಂಭವಿಸಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಡಿಕ್ಕಿಯ ಪರಿಣಾಮ ಬಸ್ ನ ಹಿಂಭಾಗಕ್ಕೆ ಹಾನಿಯಾಗಿದೆ. ಅಪಘಾತದಿಂದಾಗಿ ಕೆಲ ಕಾಲ ರಸ್ತೆ ಬ್ಲಾಕ್ ಆಗಿದ್ದು, ಪುತ್ತೂರು ಸಂಚಾರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಸ್‍ ಗೆ ಟಿಪ್ಪರ್ ಡಿಕ್ಕಿ Read More »

ಒಕ್ಕಲಿಗ ಸಮುದಾಯಪತ್ತಿನ ಸಹಕಾರ ಸಂಘದಿಂದ ಸಿಬ್ಬಂದಿಗಳ ‘ಸಮ್ಮಿಲನ-ಮಾಹಿತಿ ಕಾರ್ಯಾಗಾರ’

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವತಿಯಿಂದ ಸಿಬ್ಬಂದಿಗಳ ಸಮ್ಮಿಲನ-ಮಾಹಿತಿ ಕಾರ್ಯಾಗಾರ ಬಲ್ನಾಡು ಗ್ರಾಮದ ಉಜಿರುಪಾದೆ ಬೈಲಾಡಿ ನಿವಾಸದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಚಿದಾನಂದ ಬೈಲಾಡಿ ಹಾಗೂ ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ ಮಾತನಾಡಿ, ಸಿಬ್ಬಂದಿಗಳು ಪ್ರಾಮಾಣಿಕ ಹಾಗೂ ಪಾರದರ್ಶಕತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿ, ಸಂಘ ಬೆಳೆದು ಬಂದ ರೀತಿಯನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಬಲ್ನಾಡು ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಗೌಡ, ಬೈಲಾಡಿ ಕುಟುಂಬದ ಯಜಮಾನ ದೇವಪ್ಪ ಗೌಡ ಹಾಗೂ ತರಬೇತಿ

ಒಕ್ಕಲಿಗ ಸಮುದಾಯಪತ್ತಿನ ಸಹಕಾರ ಸಂಘದಿಂದ ಸಿಬ್ಬಂದಿಗಳ ‘ಸಮ್ಮಿಲನ-ಮಾಹಿತಿ ಕಾರ್ಯಾಗಾರ’ Read More »

‘ನ್ಯೂಸ್ ಪುತ್ತೂರು’ ಜನಮನದ ಪ್ರತಿಧ್ವನಿ ವರದಿ ಇಂಪ್ಯಾಕ್ಟ್ | ಏಳ್ಮುಡಿ ಸೇತುವೆ ಗಿಡಗಂಟಿಗಳ ತೆರವು

ಪುತ್ತೂರು: ನಗರದ ಸಮಸ್ಯೆಯೊಂದರ ಕುರಿತು ‘ನ್ಯೂಸ್ ಪುತ್ತೂರು’ ಜನಮನದ ಪ್ರತಿಧ್ವನಿ ಪ್ರಕಟಿಸಿದ ವರದಿಗೆ ಪುತ್ತೂರು ನಗರಸಭೆ ಸ್ಪಂದನೆ ನೀಡಿದೆ. ‘ಏಳ್ಮುಡಿ ಸೇತುವೆ ದಾಟಲು ಏಳು ಮುಡಿ ಹೊತ್ತ ಅನುಭವ!!’ ಎಂಬ ತಲೆಬರಹದಡಿ ವರದಿಯೊಂದನ್ನು ನ್ಯೂಸ್ ಪುತ್ತೂರು ವರದಿ ಪ್ರಕಟಿಸಿತ್ತು. ಇದೀಗ ವರದಿಗೆ ಸ್ಪಂದಿಸಿದ ನಗರಸಭೆ ಗಿಡಗಂಟಿಗಳ ತೆರವು ಕಾರ್ಯ ಕೈಗೊಂಡಿದೆ. ಬಸ್ ನಿಲ್ದಾಣ – ದರ್ಬೆ ಸಂಪರ್ಕ ರಸ್ತೆಯ ಮಧ್ಯ ಭಾಗದ ಏಳ್ಮುಡಿ ಸೇತುವೆಯ ಎರಡೂ ಬದಿಯಲ್ಲಿ ಗಿಡಗಂಟಿಗಳು ಬೆಳೆದಿದ್ದು, ಪಾದಚಾರಿಗಳು ನಡೆದಾಡಲು ಹರಸಾಹಸ ಪಡುವಂತಾಗಿತ್ತು. ಈ

‘ನ್ಯೂಸ್ ಪುತ್ತೂರು’ ಜನಮನದ ಪ್ರತಿಧ್ವನಿ ವರದಿ ಇಂಪ್ಯಾಕ್ಟ್ | ಏಳ್ಮುಡಿ ಸೇತುವೆ ಗಿಡಗಂಟಿಗಳ ತೆರವು Read More »

ಶ್ರೀಧರ ಆಚಾರ್ಯ ನಿಧನ

ಪುತ್ತೂರು: ಮಂಜುಶ್ರೀ ಜ್ಯುವೆಲ್ಲರಿ ಮಾಲಕ ಶ್ರೀಧರ ಆಚಾರ್ಯ (63) ಹೃದಯಾಘಾತದಿಂದ ನಿಧನರಾದರು. ಮುಂಡೂರಿನ ಕಲ್ಲಗುಡ್ಡೆಯಲ್ಲಿ ಮಂಜುಶ್ರೀ ಜ್ಯುವೆಲ್ಲರಿ ಶಾಪ್ ನಡೆಸಿಕೊಂಡಿದ್ದ ಅವರಿಗೆ ಭಾನುವಾರ ರಾತ್ರಿ ಹಠಾತ್ತನೆ ಹೃದಯಾಘಾತವಾಗಿ ನಿಧನರಾದರು. ಮೃತರು ಪತ್ನಿ ಲತಾ, ಪುತ್ರ ಶಿವಕುಮಾರ್ ಹಾಗೂ ಪುತ್ರಿ ಶ್ರುತಿಕಾ ಅವರನ್ನು ಅಗಲಿದ್ದಾರೆ.

ಶ್ರೀಧರ ಆಚಾರ್ಯ ನಿಧನ Read More »

ದಲಿತ ಕುಟುಂಬವನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಆಗಿದೆ | ಪುತ್ತೂರು ಬ್ಲಾಕ್ ಎಸ್ ಟಿ ಘಟಕದ ಮಾಸಿಕ ಸಭೆಯಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಪರಿಶಿಷ್ಡ ಪಂಗಡದ ಕುಟುಂಬಗಳ ಅಭಿವೃದ್ದಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು ಮಾಹಿತಿ ಕೊರತೆಯ ಕಾರಣಕ್ಕೆ ಹಲವರು ಸೌಲಭ್ಯ ವಂಚಿತರಾಗುತ್ತಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಹೇಳಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ಲಾಕ್ ಎಸ್ ಟಿ ಘಟಕದ ಮಾಸಿಕ ಸಭೆಯಲ್ಲಿ ಮಾತನಾಡಿದರು. ದಲಿತ ಕುಟುಂಬಗಳನ್ನು ಮೇಲಕ್ಕೆತ್ತಲು ಕಾಂಗ್ರೆಸ್ ಸರಕಾರ ಸ್ವಾತಂತ್ರ್ಯ ನಂತರ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ತರುವ ಕೆಲಸವನ್ನು ಮಾಡಿದೆ. ಪ್ರತೀಯೊಂದು

ದಲಿತ ಕುಟುಂಬವನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಆಗಿದೆ | ಪುತ್ತೂರು ಬ್ಲಾಕ್ ಎಸ್ ಟಿ ಘಟಕದ ಮಾಸಿಕ ಸಭೆಯಲ್ಲಿ ಶಾಸಕ ಅಶೋಕ್ ರೈ Read More »

error: Content is protected !!
Scroll to Top