ಪುತ್ತೂರು

ತಾಲೂಕು ಮಟ್ಟದ ಕ್ರೀಡಾಕೂಟ : ಸಾತ್ವಿಕ್ ಆರ್. ವೈಯಕ್ತಿಕ ಚಾಂಪಿಯನ್

ಪುತ್ತೂರು: ಹಿರೇಬಂಡಾಡಿಯಲ್ಲಿ ಜರಗಿದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ, ಫ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ವಿವೇಕಾನಂದ ಅಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಸಾತ್ವಿಕ್ ಆರ್ ೩ ಚಿನ್ನದ ಪದಕದೊಂದಿಗೆ ೧೭ ವರ್ಷ ಕೆಳಗಿನ ವಯೋಮಾನದ ವೈಯುಕ್ತಿಕ ಚಾಂಪಿಯನ್‌ಶಿಪ್ ಪಡೆದುಕೊಂಡಿದ್ದಾರೆ. ಲಾಂಗ್ ಜಂಪ್, ಟ್ರಿಪಲ್ ಜಂಪ್, ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಹಾಗೂ ೪*೧೦೦ ಮೀ. ರಿಲೇಯಲ್ಲಿ ಚಿನ್ನದ ಪದಕ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ. ಅವರು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ. ನಾರಾಯಣ ರೆಂಜ […]

ತಾಲೂಕು ಮಟ್ಟದ ಕ್ರೀಡಾಕೂಟ : ಸಾತ್ವಿಕ್ ಆರ್. ವೈಯಕ್ತಿಕ ಚಾಂಪಿಯನ್ Read More »

ವಿಟ್ಲ ಸಮುದಾಯ ಆಸ್ಪತ್ರೆಗೆ ಶಾಸಕರ ಭೇಟಿ: ಪರಿಶೀಲನೆ

ವಿಟ್ಲ: ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯ ಬಗ್ಹೆ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಹೆರಿಗೆ ತಜ್ಞರ ಕೊರತೆ ಇರುವ ಕಾರಣ‌ ವಿಟ್ಲ ಭಾಗದ ಜನತೆಗೆ ಸಮಸ್ಯೆಯಾಗಿದೆ.‌ ಹಲವು ವರ್ಷಗಳಿಂದ ಇಲ್ಲಿ ಹೆರಿಗೆ ತಜ್ಞರನ್ನು ನೇಮಕ ಮಾಡಿಲ್ಲ. ಗ್ರಾಮೀಣ ಭಾಗದ ಜನತೆಗೆ ಇದರಿಂದ ತುಂಬಾ ಸಮಸ್ಯೆ ಉಂಟಾಗಿದೆ ಎಂದು ಮಾಹಿತಿ ನೀಡಲಾಯಿತು.  ಜನತೆಗೆ ಡಯಾಲಿಸಿಸ್ ಕೇಂದ್ರ ಪ್ರಾರಂಭ ಮಾಡುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಸಮುದಾಯ ಕೇಂದ್ರದ ವೈದ್ಯೆ ಡಾ.ವೇದಾವತಿ,

ವಿಟ್ಲ ಸಮುದಾಯ ಆಸ್ಪತ್ರೆಗೆ ಶಾಸಕರ ಭೇಟಿ: ಪರಿಶೀಲನೆ Read More »

ಹೆರಿಗೆ ವೇಳೆ ಮಾಡಾವಿನ ಮಹಿಳೆ ಮೃತ್ಯು

ಪುತ್ತೂರು: ಪುತ್ತೂರು ತಾಲೂಕಿನ ಮಾಡಾವಿನ ಎರಡು ಮಕ್ಕಳ ತಾಯಿಯೊಬ್ಬರು ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಸಮಸ್ತ ಕೇರಳ ಇಸ್ಲಾಮಿಕ್ ಮತ ವಿದ್ಯಾಭ್ಯಾಸ ಬೋರ್ಡ್ ನ ಸದಸ್ಯೆ, ಪರ್ಲಡ್ಕ ಅಬ್ದುಲ್ ರಶೀದ್ ಹಾಜಿಯವರ ಪುತ್ರಿ ಮರಿಯಮ್ ರಮೀಝಾ ಮೃತಪಟ್ಟ ಮಹಿಳೆ ಪುತ್ತೂರಿನ ಸಂಪ್ಯ ನಿವಾಸಿ ಮರ್ಹೂಮ್ ಅಬೂಬಕ್ಕರ್ ಪಟ್ಲಮೂಲೆ ಅವರ ಮಗ ಮಡಾವು ನಿವಾಸಿ ಗಲ್ಫ್ ನ ಒಮಾನ್‍ ನಲ್ಲಿ ಉದ್ಯೋಗಿಯಾಗಿರುವ ಮುಹಮ್ಮದ್ ರಫೀಖ್ ಅವರ ಪತ್ನಿಯಾಗಿದ್ದು, ಮೂರನೇ ಹೆರಿಗೆಗಾಗಿ ಆಸ್ಪತ್ರೆಗೆ

ಹೆರಿಗೆ ವೇಳೆ ಮಾಡಾವಿನ ಮಹಿಳೆ ಮೃತ್ಯು Read More »

ಸಾಧನೆಗೆ ಕೌಶಲ್ಯದ ಜತೆಗೆ ಶಕ್ತಿ ಮುಖ್ಯ | ಜಿಲ್ಲಾ ಮಟ್ಟದ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಯಾವುದೇ ಸಾಧನೆಗೆ ಕೌಶಲ್ಯ, ಟ್ಯಾಲೆಂಟ್ ಜತೆಗೆ ಶಕ್ತಿ ಮುಖ್ಯ. ಈ ನಿಟ್ಟಿನಲ್ಲಿ ನಾಳೆ ನಡೆಯಲಿರುವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪುತ್ತೂರಿನ ಕ್ರೀಡಾಪಟುಗಳು ಪುತ್ತೂರಿನ ಕೀರ್ತಿಗೆ ಹಿರಿಮೆ ತರುವಂತಾಗಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಭಾನುವಾರ ಪುತ್ತೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ವತಿಯಿಂದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು. ಕ್ರೀಡಾಕೂಟ ಸೇರಿದಂತೆ ಇನ್ನಿತರ ಯಾವುದೇ ಕಾರ್ಯಕ್ರಮವಿರಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ ಗೌರವ

ಸಾಧನೆಗೆ ಕೌಶಲ್ಯದ ಜತೆಗೆ ಶಕ್ತಿ ಮುಖ್ಯ | ಜಿಲ್ಲಾ ಮಟ್ಟದ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಿಸಿ ಶಾಸಕ ಅಶೋಕ್ ಕುಮಾರ್ ರೈ Read More »

ಕುಡಿಯುವ ನೀರಿನ ಪೈಪ್‍ಗೆ ಹಾನಿ : ಸ್ಥಳೀಯರಿಂದ ಹೆದ್ದಾರಿ ಕಾಮಗಾರಿಗೆ ತಡೆ

ಉಪ್ಪಿನಂಗಡಿ : ಹೆದ್ದಾರಿ ಅಗಲೀಕರಣದ ಕಾಮಗಾರಿ ನಡೆಯುತ್ತಿರುವ ವೇಳೆ ಕುಡಿಯುವ ನೀರಿನ ಪೈಪುಗಳನ್ನು ಹಾನಿಗೊಳಿಸಿದ ಪರಿಣಾಮ ಕಳೆದ ನಾಲ್ಕು ದಿನಗಳಿಂದ ನೀರಿಲ್ಲದೆ ಸಂಕಷ್ಠಗೀಡಾದವರು ಆಕ್ರೋಶಗೊಂಡು ಕಾಮಗಾರಿಗೆ ತಡೆಯೊಡ್ಡಿದ ಘಟನೆ ನಡೆದಿದೆ. ಉಪ್ಪಿನಂಗಡಿಯ ಕುಡಿಯುವ ನೀರು ಶುದ್ದೀಕರಣ ಘಟಕದಿಂದ ಹಲವೆಡೆಗೆ ಸರಬರಾಜಾಗುವ ನೀರಿನ ಪೈಪುಗಳು ಕಾಮಗಾರಿಯ ವೇಳೆ ಒಡೆದು ಹೋಗಿತ್ತು. ಪೈಪ್ ಸರಿಪಡಿಸಬೇಕೆಂದು ಪಂಚಾಯಿತಿ ಆಡಳಿತ ಕಾಮಗಾರಿ ನಿರತ ಸಂಸ್ಥೆಯ ಅಧಿಕಾರಿಗಳನ್ನು ಒತ್ತಾಯಿಸಿತ್ತು. ಸ್ಪಂದಿಸುವ ಭರವಸೆ ನೀಡಿದ್ದ ಸಂಸ್ಥೆಯ ಅಧಿಕಾರಿಗಳು ಬಳಿಕ ಮೌನವಹಿಸಿದ್ದರಿಂದಾಗಿ ಸತತ ನಾಲ್ಕು ದಿನಗಳ ಕಾಲ

ಕುಡಿಯುವ ನೀರಿನ ಪೈಪ್‍ಗೆ ಹಾನಿ : ಸ್ಥಳೀಯರಿಂದ ಹೆದ್ದಾರಿ ಕಾಮಗಾರಿಗೆ ತಡೆ Read More »

ತೋಡಿಗೆ ಬಿದ್ದ ಕಾರು : ಚಾಲಕ ಅಪಾಯದಿಂದ ಪಾರು

ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಘಟನೆ  ಭಾನುವಾರ ಬೆಳಿಗ್ಗೆ ಬೊಳುವಾರಿನಲ್ಲಿ ನಡೆದಿದೆ. ಅಪಘಾತದ ಪರಿಣಾಮ ತೋಡಿನ ಪಕ್ಕದ ಸ್ಲ್ಯಾಬ್‍ ಗೆ ಕಾರು ಡಿಕ್ಕಿಯಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ತೋಡಿಗೆ ಬಿದ್ದ ಕಾರು : ಚಾಲಕ ಅಪಾಯದಿಂದ ಪಾರು Read More »

ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ | ಪೋಕ್ಸೋ ಪ್ರಕರಣ ದಾಖಲು

ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ. ಉದಯ (40) ಬಂಧಿತ ವ್ಯಕ್ತಿ. ಕಿರುಕುಳ ನೀಡಿದ ವಿಚಾರವನ್ನು ಆಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು. ಬಳಿಕ ಬಸ್ ನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು ಎಂದು

ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ | ಪೋಕ್ಸೋ ಪ್ರಕರಣ ದಾಖಲು Read More »

ಇಂದು ಚಂದ್ರ ಗ್ರಹಣ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾತ್ರಿ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ

ಪುತ್ತೂರು: ಅಶ್ವಿಜ ಮಾಸವನ್ನು ಹಬ್ಬಗಳ ಮಾಸ ಎಂದು ಕರೆಯಲಾಗುತ್ತಿದ್ದು, ಜ್ಯೋತಿಷ್ಯ ಮೂಲಗಳ ಪ್ರಕಾರ ಇಂದು ನಡೆಯುವ ಚಂದ್ರ ಗ್ರಹಣ ಎಲ್ಲಾ ರಾಶಿಗಳ ಜನರ ಜೀವನದ ಮೇಲೆ ಪ್ರಭಾವ ಬೀರಲಿದೆ. ಗ್ರಹಣದ ಅವಧಿ ಮಧ್ಯರಾತ್ರಿ 1.04  ರಿಂದ 2.24  ವರಗೆ ಇರಲಿದೆ. ಹಿಂದೂ ಧರ್ಮದ ನಂಬಿಕೆ ಪ್ರಕಾರ ಗ್ರಹಣದ 9 ಗಂಟೆ ಮೊದಲು ಚಂದ್ರಗ್ರಹಣದ ಸೂತಕ ಅವಧಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯವಾಗಿ ಗರ್ಭಿಣಿಯರು ಹೊರಗಡೆ ಹೋಗುವುದನ್ನು ಕಡ್ಡಾಯವಾಗಿ ತಪ್ಪಿಸುವ ಮೂಲಕ ವಿಶೇಷ ಕಾಳಜಿ ವಹಿಸಬೇಕು. ಗ್ರಹಣದ ಸಂದರ್ಭದಲ್ಲಿ

ಇಂದು ಚಂದ್ರ ಗ್ರಹಣ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾತ್ರಿ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ Read More »

‘ನನ್ನ ಮಣ್ಣು ನನ್ನ ದೇಶ’ ಅಭಿಯಾನ : ಪುತ್ತೂರಿನಿಂದ ದೆಹಲಿಗೆ ಪ್ರಯಾಣ

ಪುತ್ತೂರು: ಕೇಂದ್ರ ಸರ್ಕಾರದ ‘ನನ್ನ ಮಣ್ಣು ನನ್ನ ದೇಶ ಅಭಿಯಾನದಡಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಗ್ರಹಿಸಿದ ಮೃತ್ತಿಕೆಯ ಅಮೃತ ಕಲಶವನ್ನು ದೇಶಕ್ಕಾಗಿ ಹುತಾತ್ಮರಾದವರ ಸ್ಮರಣಾರ್ಥ ದೆಹಲಿಯಲ್ಲಿ ನಿರ್ಮಾಣವಾಗಲಿರುವ ಅಮೃತ ವನಕ್ಕೆ ಸಮರ್ಪಿಸಲು ದೆಹಲಿಗೆ ಪ್ರಯಾಣಿಸಲಾಯಿತು. ಪುತ್ತೂರು ಮಾಜಿ ಶಾಸಕ ಸಂಜೀವ ಮಠದೂರು ದೆಹಲಿಗೆ ತೆರಳಲಿರುವವರನ್ನು ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಉಪಸ್ಥಿತರಿದ್ದರು. ಅಭಿಯಾನ ಸಂಚಾಲಕ, ಪುತ್ತೂರು ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಹರೀಶ್

‘ನನ್ನ ಮಣ್ಣು ನನ್ನ ದೇಶ’ ಅಭಿಯಾನ : ಪುತ್ತೂರಿನಿಂದ ದೆಹಲಿಗೆ ಪ್ರಯಾಣ Read More »

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ-2023 ಶನಿವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ಜೆ.ಶಿವಶಂಕರ ದೀಪ ಪ್ರಜ್ವಲನೆ ಮಾಡಿ ಮಾತನಾಡಿ, ಜಗತ್ತಿನ ಅತ್ಯಂತ ದೊಡ್ಡ ಕೃತಿ ರಾಮಾಯಣವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶದ ಹಾದಿಯಲ್ಲಿ ನಾವೆಲ್ಲರೂ ನಡೆಯುವ ಅಗತ್ಯವಿದೆ ಎಂದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಂಚಾಲಕ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್‍.ಆರ್‍. ಮಾತನಾಡಿ, ಮನುಷ್ಯ ಸುಖ, ಶಾಂತಿ, ಸಂತೋಷದಿಂದ ಬದುಕಲು, ಎಲ್ಲರಿಗೂ ಸಮಬಾಳು, ಸಮಪಾಲು

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ Read More »

error: Content is protected !!
Scroll to Top