ಕೊಂಬೆಟ್ಟು ನಿವಾಸಿ, ಎನ್.ಐ.ಟಿ.ಕೆ. ನಿವೃತ್ತ ರಿಜಿಸ್ಟ್ರಾರ್ ಬಿ.ಆರ್. ಕಡಂಬಳಿತ್ತಾಯ ನಿಧನ
ಮಂಗಳೂರು: ಕೊಂಬೆಟ್ಟು ವಿಷ್ಣು ನಿಲಯದ ನಿವಾಸಿ ಸುರತ್ಕಲ್ ಎನ್ಐಟಿಕೆಯ ನಿವೃತ್ತ ಆಡಳಿತಾಧಿಕಾರಿ, ರಿಜಿಸ್ಟಾರ್ ಬಿ.ರಾಧಾಕೃಷ್ಣ ಕಡಂಬಳಿತ್ತಾಯ (94 ವ.) ಗುರುವಾರ ಮಂಗಳೂರಿನ ಸ್ವಗೃಹದಲ್ಲಿ ನಿಧನರಾದರು. ಬಿ.ರಾಧಾಕೃಷ್ಣ ಕಡಂಬಳಿತ್ತಾಯ ಅವರು ಕೊಂಬೆಟ್ಟು ಸರಕಾರಿ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು. ಕಳೆದ ವರ್ಷ ಹಿರಿಯ ವಿದ್ಯಾರ್ಥಿಗಳಿಂದ ಜೀರ್ಣೋದ್ಧಾರವಾಗುವ ಸಂದರ್ಭದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕರೊಂದಿಗೆ ಪಾಲ್ಗೊಂಡಿದ್ದರು. ಮೃತರು ಪುತ್ರರಾದ ಬಿ.ಹರೇಕೃಷ್ಣ, ಬಿ.ರಾಜೇಶ್ವರ, ಬಿ.ಪುಂಡರೀಕಾಕ್ಷ, ಬಿ.ವೆಂಕಟಕೃಷ್ಣ, ಮಗಳು ಕಮಲಾಕ್ಷಿ ಹಾಗೂ ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಕೊಂಬೆಟ್ಟು ನಿವಾಸಿ, ಎನ್.ಐ.ಟಿ.ಕೆ. ನಿವೃತ್ತ ರಿಜಿಸ್ಟ್ರಾರ್ ಬಿ.ಆರ್. ಕಡಂಬಳಿತ್ತಾಯ ನಿಧನ Read More »










