ಪುತ್ತೂರು

ಕೊಡಗು-ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ, ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂ ಆಯ್ಕೆ

ಬೆಂಗಳೂರು: ಕೊಡಗು ಹಾಗೂ ದಕ್ಷಿಣ ಕನ್ನಡ ಗೌಡ ಸಮಾಜದ 2023-25 ನೇ ಸಾಲಿನ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ ಹಾಗೂ ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂನವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವ ಕಾರ್ಯದರ್ಶಿಗಳಾಗಿ ನಾಗೇಶ್ ಕುಮಾರ್ ಕಲ್ಲುಮುಟ್ಲು, ಖಜಾಂಜಿಯಾಗಿ ಕುಂಭಗೌಡನ ಸೋಮಣ್ಣ, ಜಂಟಿ ಕಾರ್ಯದರ್ಶಿಯಾಗಿ ನಾಗೇಶ್ ಬಂಟೋಡಿ ಉಳುವಾರನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೊಡಗು-ದಕ್ಷಿಣ ಕನ್ನಡ ಗೌಡ ಸಮಾಜದ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ, ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂ ಆಯ್ಕೆ Read More »

ವಿದ್ಯಾಭಾರತಿ ಕ್ರೀಡಾಕೂಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ವತಿಯಿಂದ ತೆಲಂಗಾಣ ಹೈದರಾಬಾದ್ ಶ್ರೀ ಸರಸ್ವತಿ ವಿದ್ಯಾ ಪೀಠಂ ಶಾರದಾ ಧಾಮದಲ್ಲಿ ನಡೆದ ದಕ್ಷಿಣ  ಮಧ್ಯ ಕ್ಷೇತ್ರೀಯ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ವಿದ್ಯಾರ್ಥಿಗಳಾದ ಕೀರ್ತಿ  ಎತ್ತರ ಜಿಗಿತ (ಪ್ರಥಮ) ಗುಣಶ್ರೀ 80ಮೀ ಹರ್ಡಲ್ಸ್ (ಪ್ರಥಮ), ವಿಕೃತಿ ಕುಮಾರಿ ನಡಿಗೆಯಲ್ಲಿ ದ್ವಿತೀಯ ಹಾಗೂ 14 ರ ವಯೋಮಾನದ ಬಾಲಕಿಯರ  4*100  ಮೀ ರಿಲೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್,

ವಿದ್ಯಾಭಾರತಿ ಕ್ರೀಡಾಕೂಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕಾಲೇಜು ವಿದ್ಯಾರ್ಥಿ ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಇಲ್ಲಿಯ ಕಾಲೇಜೊಂದರ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಖಾಸಗಿ ಕಾಲೋಜೊಂದರ ವಿದ್ಯಾರ್ಥಿ, ಕುರಿಯ ಪಡ್ಪು ನಿವಾಸಿ ವೀಕ್ಷಿತ್ (17) ಮೃತಪಟ್ಟ ವಿದ್ಯಾರ್ಥಿ. ಘಟನೆ ನಡೆಯುತ್ತಿದ್ದಂತೆ ಸ್ಥಳೀಯ ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ವೀಕ್ಷಿತ್ ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕಾಲೇಜು ವಿದ್ಯಾರ್ಥಿ ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ Read More »

ಸಾಧನೆಗೆ ಪ್ರಾಮಾಣೀಕತೆ, ಯೋಜನೆ, ಶ್ರಮವೇ ಬಂಡವಾಳ | ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯ ವಾರ್ಷಿಕ ಘಟಿಕೋತ್ಸವದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಟೆಕ್ನಿಕಲ್ ಕೋರ್ಸ್ ಪಾಸ್ ಆದ ಬಳಿಕ ಜೀವನದಲ್ಲಿ ಅಚ್ಯುವ್‌ಮೆಂಟ್ ಮಾಡಬೇಕು. ಇಂತಹ ಅಚ್ಯುವ್‌ಮೆಂಟ್‌ಗೆ ಪ್ರಾಮಾಣಿಕತೆ, ಯೋಜನೆ, ಶ್ರಮವಿದ್ದರೆ ಯಶಸ್ಸು ಖಂಡಿತಾ ಸಿಗುತ್ತದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಸೋಮವಾರ ನಡೆದ ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯ ವಾರ್ಷಿಕ ಘಟಿಕೋತ್ಸವದಲ್ಲಿ ಅವರು ಸಂಸ್ಥೆಯ ಕೌಶಲ್ಯ ಸಭಾವನದಲ್ಲಿನ ಡಿ.ವಿ ಸದಾನಂದ ಗೌಡ ಮತ್ತು ಸಂಜೀವ ಮಠಂದೂರು ವೇದಿಕೆಯಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದರು. ಇಂಜಿನಿಯರಿಂಗ್ ಮಾಡಿದವರು ತುಂಬಾ ಜನ ಕೆಲಸ

ಸಾಧನೆಗೆ ಪ್ರಾಮಾಣೀಕತೆ, ಯೋಜನೆ, ಶ್ರಮವೇ ಬಂಡವಾಳ | ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐಯ ವಾರ್ಷಿಕ ಘಟಿಕೋತ್ಸವದಲ್ಲಿ ಶಾಸಕ ಅಶೋಕ್ ರೈ Read More »

ಹರೀಶ್ ಪೂಂಜಾ ನೇತೃತ್ವದ ಪ್ರತಿಭಟನೆಯಲ್ಲಿ ಭಾಗಿಯಾದ ಅರುಣ್ ಕುಮಾರ್ ಪುತ್ತಿಲ

ಬೆಳ್ತಂಗಡಿ : ಬೆಳ್ತಂಗಡಿ ಕಳೆಂಜ ಗ್ರಾಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೋಮವಾರ ಸಂಜೆ ಭೇಟಿ ನೀಡಿದರು. ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು  ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ

ಹರೀಶ್ ಪೂಂಜಾ ನೇತೃತ್ವದ ಪ್ರತಿಭಟನೆಯಲ್ಲಿ ಭಾಗಿಯಾದ ಅರುಣ್ ಕುಮಾರ್ ಪುತ್ತಿಲ Read More »

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ವಿಜ್ಞಾನ ಮೇಳಕ್ಕೆ ಆಯ್ಕೆ

ಪುತ್ತೂರು: ವಿಜಯವಾಡದ ಗುಂಟೂರು – ನೂತಕ್ಕಿ ವಿಜ್ಞಾನ ವಿಹಾರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಜ್ಞಾನ ವಿಜ್ಞಾನ ಮೇಳದ ಸ್ಪರ್ಧೆಗಳಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 8ನೇ ತರಗತಿಯ ಶಮನ್ ಎನ್.  ತ್ಯಾಜ್ಯ ನಿರ್ವಹಣಾ ವಿಜ್ಞಾನ ಮಾದರಿಯಲ್ಲಿ ಪ್ರಥಮ, ಕುಮಾರಿ ಪ್ರೀತಿ ಪ್ರಭು ಗಣಿತ ಪ್ರಯೋಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ಪಂಜಾಬಿನ ಅಮೃತಸರ ಮತ್ತು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ವಿಜ್ಞಾನ ಮೇಳಕ್ಕೆ ಆಯ್ಕೆ Read More »

ಜ್ವರದಿಂದ ಬಳಲುತ್ತಿದ್ದ ಮಗು ಸಾನಿಧ್ಯ ಮೃತ್ಯು!

ಪುತ್ತೂರು: ಜ್ವರದಿಂದ ಬಳಲುತ್ತಿದ್ದ ಸುಮಾರು 8 ವರ್ಷದ ಮಗು ಸಾನಿಧ್ಯ ಸೋಮವಾರ ಬೆಳಿಗ್ಗೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುತ್ತೂರಿನ ಬೊಳುವಾರಿನಲ್ಲಿ ವಾಸ್ತವ್ಯ ಹೊಂದಿರುವ, ಮೂಲತಃ ಸುರತ್ಕಲ್ ಕೃಷ್ಣಾಪುರ ನಿವಾಸಿ ನಾಮ್’ದೇವ್ ಆಚಾರ್ಯ ಅವರ ಪುತ್ರಿ ಸಾನಿಧ್ಯ. ಜ್ವರದಿಂದ ಬಳಲುತ್ತಿದ್ದ ಮಗುವನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಮಗುವಿಗೆ ಡೆಂಗ್ಯೂ ಹಾಗೂ ನ್ಯೂಮೋನಿಯಾ ಆಗಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ. ಸಾನಿಧ್ಯ ಅವರು ತಂದೆ, ತಾಯಿಯನ್ನು ಅಗಲಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಮಗು ಸಾನಿಧ್ಯ ಮೃತ್ಯು! Read More »

ಪರಸ್ಪರ ಸೌಹಾರ್ಧತೆಯಿಂದ ಬಾಳಿದರೆ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ | ಇರ್ದೆ- ಪೇರಳ್ತಡ್ಕ ನವೀಕೃತ ಜುಮಾ ಮಸೀದಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ ಭಾರತ. ದೇಶದ ಸ್ವಾತಂತ್ರ್ಯಕ್ಕೆ ಇಲ್ಲಿರುವ ಎಲ್ಲಾ ಧರ್ಮಗಳ ನೇತಾರರು ಹೋರಾಟ ಮಾಡಿದ್ದಾರೆ. ಪ್ರಾಣತ್ಯಾಗವನ್ನೂ ಮಾಡಿದ್ದಾರೆ. ನಮ್ಮ ದೇಶಕ್ಕೆ ಸುಲಭದಲ್ಲಿ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬುದು ನಮಗೆಲ್ಲರಿಗೂ ಗೊತ್ತಿದೆ. ಆದರೆ ನಾವಿಂದು ದೇಶದ ಇತಿಹಾಸವನ್ನು ಮರೆತು ಧರ್ಮ, ಜಾತಿಯ ಹೆಸರಿನಲ್ಲಿ ಕಚ್ಚಾಟ ನಡೆಸಿ ಭಾರತದ ಸೌಂದರ್ಯವನ್ನೇ ಹಾಳುಮಾಡುತ್ತಿದ್ದೇವೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ಇರ್ದೆ ಪೇರಲ್ತಡ್ಕದಲ್ಲಿ ನವೀಕೃತಗೊಂಡ ಮಸೀದಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಲ್ಲಾ ಧರ್ಮಗಳು

ಪರಸ್ಪರ ಸೌಹಾರ್ಧತೆಯಿಂದ ಬಾಳಿದರೆ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ | ಇರ್ದೆ- ಪೇರಳ್ತಡ್ಕ ನವೀಕೃತ ಜುಮಾ ಮಸೀದಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ Read More »

ಇಂದು ರಾತ್ರಿ ಕುಕ್ಕೆ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ದೇವೆ ಗೌಡ ಅವರು ಇಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಬಂದು ಸಕಲೇಶಪುರದಲ್ಲಿ ಇಳಿದು ಶ್ರೀ ಕ್ಷೇತ್ರಕ್ಕೆ ಬರುವವರಿದ್ದರು. ಆದರೆ ಸಕಲೇಶಪುರ ಭಾಗದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದ್ದು, ಹೆಲಿಕಾಪ್ಟರ್ ಬರಲು ಅನಾನುಕೂಲ ವಾತಾವರಣ ಉಂಟಾಗಿದ್ಧ ಹಿನ್ನೆಲೆಯಲ್ಲಿ ಮಂಗಳೂರಿನವರೆಗೆ ವಿಮಾನದಲ್ಲಿ ಆಗಮಿಸಿ, ಅಲ್ಲಿಂದ ಸುಮಾರು ರಾತ್ರಿ 11:30ಕ್ಕೆ ಸುಬ್ರಹ್ಮಣ್ಯ ತಲುಪಲಿದ್ದಾರೆ.

ಇಂದು ರಾತ್ರಿ ಕುಕ್ಕೆ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ Read More »

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ವಿದ್ಯಾರ್ಥಿ ಸಾಧಕರು, ಕ್ರೀಡಾ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರ

ಪುತ್ತೂರು : ಡೊನ್ ಬೊಸ್ಕೊ ಕ್ಲಬ್ ವತಿಯಿಂದ ಪುತ್ತೂರಿನ ವಿದ್ಯಾರ್ಥಿ ಸಾಧಕರನ್ನು ಮತ್ತು ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ’ಪ್ರತಿಭಾ ಪುರಸ್ಕಾರ-೨೦೨೩’ ಕಾರ್ಯಕ್ರಮ ಭಾನುವಾರ ಮಾಯಿದೇ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನರ ಅಭಿವೃದ್ಧಿಗೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದೆ. ಜನರ ಕಣ್ಣೀರೊರೆಸುವ ಕಾರ್ಯ ನಮ್ಮಿಂದ ಹಾಗೂ ಸರಕಾರದಿಂದ ಆಗುತ್ತಿದೆ ಎಂದರು. ಮಾಯಿದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ವಂ|ಲಾರೆನ್ಸ್

ಪುತ್ತೂರು ಮಾಯಿದೆ ದೇವುಸ್ ಚರ್ಚ್ ನಲ್ಲಿ ವಿದ್ಯಾರ್ಥಿ ಸಾಧಕರು, ಕ್ರೀಡಾ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರ Read More »

error: Content is protected !!
Scroll to Top