ಪುತ್ತೂರು

ನಾಪತ್ತೆಯಾಗಿದ್ದ ವ್ಯಕ್ತಿ ಅಸ್ವಸ್ಥರಾಗಿ ಪತ್ತೆ; ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು

ಕಡಬ: ನಾಪತ್ತೆಯಾಗಿದ್ದ ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ಆರಾಟಿಗೆ ನಿವಾಸಿ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ(65) ಅ.4ರಂದು ಮಧ್ಯಾಹ್ನ ಬಿ.ಸಿ.ರೋಡ್‌ನ ಬಸ್‌ನಿಲ್ದಾಣದಲ್ಲಿ ಅಸ್ವಸ್ಥರಾಗಿ ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹಳೆನೇರೆಂಕಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅ.3ರಂದು ಮಧ್ಯಾಹ್ನ ಮೊಬೈಲ್ ಅಂಗಡಿಯಲ್ಲೇ ಬಿಟ್ಟು ತೆರಳಿದ್ದ ಅವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಹಾಗೂ ಇತರೆಡೆ ಹುಡುಕಾಟ […]

ನಾಪತ್ತೆಯಾಗಿದ್ದ ವ್ಯಕ್ತಿ ಅಸ್ವಸ್ಥರಾಗಿ ಪತ್ತೆ; ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು Read More »

ಹಾರಾಡಿ-ರೈಲ್ವೇ ನಿಲ್ದಾಣದ ರಸ್ತೆ ಪ್ರವೇಶಿಸುವಲ್ಲಿ ಬಾಯ್ದೆರೆದು ನಿಂತ ಚರಂಡಿ | ಅಪಾಯ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳಿ!!!

ಪುತ್ತೂರು: ಬಹು ದಿನಗಳ ಬೇಡಿಕೆಯಾದ ಹಾರಾಡಿ-ರೈಲ್ವೇ ನಿಲ್ದಾಣ ರಸ್ತೆ ಇದೀಗ ಅಭಿವೃದ್ಧಿ ಕಂಡಿದೆ. ಆದರೆ ಮುಖ್ಯರಸ್ತೆಯಿಂದ ರೈಲ್ವೇ ರಸ್ತೆಯನ್ನು ಸಂಪರ್ಕಿಸುವ ಬಳಿಯೇ ಅಪಾಯವೊಂದು ಕಾದಿದೆ. ಪುತ್ತೂರಿನ ಬೊಳುವಾರು ಸಮೀಪ ಹಾರಾಡಿ ರೈಲ್ವೇ ಸೆತುವೆ ಬಳಿ  ಕೋಟಿ ರೂಪಾಯಿ ಅನುದಾನದಲ್ಲಿ ರಚಿಸಿದ ರೈಲು ನಿಲ್ದಾಣ ಸಂಪರ್ಕ ರಸ್ತೆ ಪ್ರವೇಶಿಸುವಲ್ಲಿ ಚರಂಡಿಯೊಂದು ಬಾಯ್ದೆರೆದು ನಿಂತಿದ್ದು, ಅಪಾಯದ ಸ್ಥಿತಿಯಲ್ಲಿದೆ. ಇದು ಲೋಕೋಪಯೋಗಿ ಇಲಾಖೆಯ ರಸ್ತೆಗೆ ಸಂಬಂದಿಸಿದ್ದೆಂದು ನಗರಸಭೆ ತಿಳಿಸಿದ್ದು, ತಕ್ಷಣ ಲೋಕೋಪಯೋಗಿ ಇಲಾಖೆ ಸರಿಪಡಿಸುವ ಮೂಲಕ ಸಂಭಾವ್ಯ ಅಪಘಾತ ವಾಗದಂತೆ ಸೂಕ್ತ

ಹಾರಾಡಿ-ರೈಲ್ವೇ ನಿಲ್ದಾಣದ ರಸ್ತೆ ಪ್ರವೇಶಿಸುವಲ್ಲಿ ಬಾಯ್ದೆರೆದು ನಿಂತ ಚರಂಡಿ | ಅಪಾಯ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳಿ!!! Read More »

ತೆಲಂಗಾಣ ರಾಜ್ಯದಲ್ಲಿ ನಡೆಯಲಿದೆ ‘ಸರಸ್ ಮೇಳ’ | ಆರ್ಯಾಪು ಗ್ರಾಪಂನ ಸಂಜೀವಿನಿ ಒಕ್ಕೂಟದ ಅಂಬಿಕಾ ರಮೇಶ್ ಪಾಲ್ಗೊಳ್ಳುವಿಕೆ

ಪುತ್ತೂರು: ತೆಲಂಗಾಣ ರಾಜ್ಯದ ಮಾರುಕಟ್ಟೆಯಲ್ಲಿ ನಡೆಯುವ ‘ಸರಸ್ ಮೇಳ’ ದಲ್ಲಿ ಪಾಲ್ಗೊಳ್ಳಲು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯಿತಿಯ ಸರೋವರ ಸಂಜೀವಿ ಒಕ್ಕೂಟ ಸ್ವಸಹಾಯ ಸಂಘದ ಸದಸ್ಯೆ ಅಂಬಿಕಾ ರಮೇಶ್ ತೆರಳಲಿದ್ದಾರೆ. ಹೈದರಾಬಾದಿನ ಎಚ್‍.ಎಂ.ಡಿ.ಎ. ಗ್ರೌಂಡ್ ಬಿಸೈಡ್ಸ್ ಪ್ರಸಾದ್ ಐಮ್ಯಾಕ್ಸ್ ಥಿಯೇಟರ್ ನಲ್ಲಿ 15 ದಿನಗಳ ಕಾಲ ಆಯೋಜಿಸಲಾಗಿರುವ ಸರಸ್ ಮೇಳಕ್ಕೆ ಅ.4 ರಂದು ತೆರಳಲಿದ್ದಾರೆ. ಅಂಬಿಕಾ ರಮೇಶ್ ಅವರು ಆರ್ಯಾಪು ಗ್ರಾಮ ಪಂಚಾಯಿತಿಯ ಸರೋವರ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾಗಿದ್ದು, ಪ್ರಸ್ತುತ ಬಿ.ಸಿ.ಸಖಿ ಹಾಗೂ ಸಂಜೀವಿನಿ 5ನೇ

ತೆಲಂಗಾಣ ರಾಜ್ಯದಲ್ಲಿ ನಡೆಯಲಿದೆ ‘ಸರಸ್ ಮೇಳ’ | ಆರ್ಯಾಪು ಗ್ರಾಪಂನ ಸಂಜೀವಿನಿ ಒಕ್ಕೂಟದ ಅಂಬಿಕಾ ರಮೇಶ್ ಪಾಲ್ಗೊಳ್ಳುವಿಕೆ Read More »

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ

ಪುತ್ತೂರು: ಗ್ರಾಮೀಣ ಅಂಚೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮೀಣ ಅಂಚೆ ಸೇವಕರ ಜಂಟಿ ಕ್ರಿಯಾ ಸಮಿತಿಯಿಂದ ಪುತ್ತೂರು ವಿಭಾಗೀಯ ಕಚೇರಿ ಎದುರು ಬುಧವಾರ ಒಂದು ದಿನದ ಮುಷ್ಕರ ನಡೆಯಿತು. ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ಸಮಿತಿಯ ವಿಭಾಗೀಯ ಕಾರ್ಯದರ್ಶಿ ಸುನಿಲ್ ದೇವಾಡಿಗ, ಪುತ್ತೂರು ವಿಭಾಗ ವ್ಯಾಪ್ತಿಯಲ್ಲಿ ಸುಮಾರು 750 ಮಂದಿ ಗ್ರಾಮೀಣ ಅಂಚೆ ನೌಕರರಿದ್ದಾರೆ. 7ನೇ ವೇತನ ಆಯೋಗದ ಶಿಫಾರಸ್ಸು ಇನ್ನೂ ಅನುಷ್ಠಾನ ಆಗಿಲ್ಲ ಎಂದರು. ಗ್ರಾಮೀಣ ಭಾಗದಲ್ಲಿ ಅಂಚೆ ಇಲಾಖೆಗೆ ಆದಾಯ ಮಾಡಿಕೊಡುವ ನೌಕರರನ್ನು

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ Read More »

ಶಿವಮೊಗ್ಗ ಗಲಭೆ ಪ್ರಕರಣವನ್ನು ಎನ್.ಐ.ಎ.ಗೆ ವಹಿಸಲು ವಿಹಿಂಪ, ಭಜರಂಗದಳ ಆಗ್ರಹ

ಪುತ್ತೂರು: ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ಹಿಂದೂಗಳ ಟಾರ್ಗೆಟ್ ಮಾಡಿ ನಡೆಸಿದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗದಳ ಖಂಡನೆ ವ್ಯಕ್ತಪಡಿಸಿದ್ದು, ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದೆ. ಬಜರಂಗಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಿಲಾದ್ ಮೆರವಣಿಗೆ ವೇಳೆ ಅಳವಡಿಸಿದ ಬೃಹತ್ ಕಟೌಟ್ಗಳನ್ನು ಪೊಲೀಸರು ತೆಗೆಸಿದ್ದಾರೆ. ಇದನ್ನು ನೆಪವಾಗಿಟ್ಟುಕೊಂಡು ಜಾಥಾ ವೇಳೆ ತಲವಾರು ಹಿಡಿದ ಸುಮಾರು 400ಕ್ಕೂ ಅಧಿಕ ಮಂದಿ ಗ್ರಾಮವೊಂದರ

ಶಿವಮೊಗ್ಗ ಗಲಭೆ ಪ್ರಕರಣವನ್ನು ಎನ್.ಐ.ಎ.ಗೆ ವಹಿಸಲು ವಿಹಿಂಪ, ಭಜರಂಗದಳ ಆಗ್ರಹ Read More »

60ರ ಹೊಸ್ತಿಲಲ್ಲಿ ವಿಶ್ವ ಹಿಂದೂ ಪರಿಷತ್ | ಷಷ್ಠ್ಯಬ್ದದ ಅಂಗವಾಗಿ ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ | ಎಲ್ಲಿ? ಯಾವಾಗ? ಹೇಗೆ? ಮುರಳೀಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ರು ಮಾಹಿತಿ

ಪುತ್ತೂರು: ವಿಶ್ವ ಹಿಂದೂ ಪರಿಷತಿನ 60ನೇ ವರ್ಷದ ಸ್ಥಾಪನಾ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಜಾಗರಣಾ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ ಅ. 7ರಂದು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಬಜರಂಗದಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಹಿಂದೂ ಧರ್ಮವನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. 60ನೇ

60ರ ಹೊಸ್ತಿಲಲ್ಲಿ ವಿಶ್ವ ಹಿಂದೂ ಪರಿಷತ್ | ಷಷ್ಠ್ಯಬ್ದದ ಅಂಗವಾಗಿ ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ | ಎಲ್ಲಿ? ಯಾವಾಗ? ಹೇಗೆ? ಮುರಳೀಕೃಷ್ಣ ಹಸಂತಡ್ಕ ಪತ್ರಿಕಾಗೋಷ್ಠಿಯಲ್ಲಿ ನೀಡಿದ್ರು ಮಾಹಿತಿ Read More »

ಡಿವೈನ್ ಪಾರ್ಕ್ ಅಂಗಸಂಸ್ಥೆ ಸವಣೂರು ವಿವೇಕ ಜಾಗೃತಿ ಬಳಗದಿಂದ ‘ವಾತ್ಸಲ್ಯ ಶ್ರೀ’ ವಿಶೇಷ ಸತ್ಸಂಗ

ಕಾಣಿಯೂರು: ಸಾಲಿಗ್ರಾಮದ ಡಿವೈನ್ ಪಾರ್ಕ್  ಅಂಗಸಂಸ್ಥೆಯಾದ ಚಾರ್ವಾಕ, ಸವಣೂರು ವಿವೇಕ ಜಾಗೃತಿ ಬಳಗದ ವತಿಯಿಂದ ವಾತ್ಸಲ್ಯ ಶ್ರೀ ವಿಶೇಷ ಸತ್ಸಂಗ ಕಾರ್ಯಕ್ರಮ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ gold man saches company ಯ ಉಪಾಧ್ಯಕ್ಷ ಪ್ರದೀಪ್ ಆರ್. ಗೌಡ ಆರುವಗುತ್ತು ಮಾತನಾಡಿ, ಸ್ವಾಮಿ ವಿವೇಕಾನಂದರು ಜಗತ್ತಿಗೆ ಸನಾತನ ಹಿಂದೂ ಧರ್ಮದ ಶ್ರೇಷ್ಟತೆಯನ್ನು ಸಾರಿದ ಮಹಾನ್ ಚೇತನ. ಅವರ ಆದರ್ಶದ ನೆರಳಿನಲ್ಲಿ ಸಾಗುವ ವಿವೇಕ ಜಾಗೃತ ಬಳಗದ ಇಂತಹ ಕಾರ್ಯಕ್ರಮ ಅಪ್ರತಿಮ

ಡಿವೈನ್ ಪಾರ್ಕ್ ಅಂಗಸಂಸ್ಥೆ ಸವಣೂರು ವಿವೇಕ ಜಾಗೃತಿ ಬಳಗದಿಂದ ‘ವಾತ್ಸಲ್ಯ ಶ್ರೀ’ ವಿಶೇಷ ಸತ್ಸಂಗ Read More »

ಒಳಮೊಗ್ರು: ಶಿಥಿಲಗೊಂಡ ಕಿರು ಸೇತುವೆ!! | ಹೊಸ ಸೇತುವೆ ನಿರ್ಮಾಣದ ಭರವಸೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಒಳಮೊಗ್ರು ಗ್ರಾಮದ ಕುಟಿನೋಪ್ಪಿನಡ್ಕ ಸಮೀಪದ ಮುಳಿಯಡ್ಕ ಎಂಬಲ್ಲಿರುವ ಕಿರು ಸೇತುವೆ ಶಿಥಿಲಗೊಂಡಿದ್ದು ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಸೇತುವೆಯನ್ನು ಪರಿಶೀಲನೆ ಮಾಡಿದರು. ಗ್ರಾಮದ ಪರ್ಪುಂಜದಿಂದ ಕುಟನೋಪ್ಪಿನಡ್ಕ ಮೂಲಕ ದರ್ಬೆತ್ತಡ್ಕಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಈ ಸೇತುವೆಯು ಸುಮಾರು 30 ವರ್ಷಗಳ ಹಿಂದೆ ಜನಾರ್ಧನ ಪೂಜಾರಿಯವರು ಲೋಕಸಭಾ ಸದಸ್ಯರಾಗಿರುವ ಕಾಲದಲ್ಲಿ ನಿರ್ಮಾಣವಾಗಿತ್ತು. ಸೇತುವೆ ಅಗಲ ಕಿರಿದಾಗಿದ್ದು ಘನ ವಾಹನಗಳು ಇದರಲ್ಲಿ ಸಂಚರಿಸಲು ಸಾಧ್ಯವಿಲ್ಲ. ಸೇತವೆಯು ಶಿಥಿಲಗೊಂಡಿದ್ದು ಲಘು ವಾಹನ ಸಂಚಾರಕ್ಕೂ ಅಯೋಗ್ಯವಾಗಿದೆ. ಸೇತುವೆಯನ್ನು

ಒಳಮೊಗ್ರು: ಶಿಥಿಲಗೊಂಡ ಕಿರು ಸೇತುವೆ!! | ಹೊಸ ಸೇತುವೆ ನಿರ್ಮಾಣದ ಭರವಸೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ Read More »

ಜಾತಿ, ಮತ, ಬೇಧವಿಲ್ಲದೆ ಎಲ್ಲರನ್ನೂ ಒಟ್ಟಾಗಿ ಸೇರಿಸುವುದೇ ಕಾಂಗ್ರೆಸ್ ಪಕ್ಷದ ಧ್ಯೇಯ: ಅಶೋಕ್ ರೈ | ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆ

ಪುತ್ತೂರು: ಜಾತಿ, ಧರ್ಮ ಭೇದವಿಲ್ಲದೆ ಎಲ್ಲರನ್ನೂ ಒಟ್ಟಿಗೇ ಸೇರಿಸುವುದೇ ಕಾಂಗ್ರೆಸ್ ಪಕ್ಷದ ಧ್ಯೇಯವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಎಲ್ಲಾ ಧರ್ಮದವರ ಪ್ರೀತಿ ವಿಶ್ವಾಸದಿಂದ ನಾನು ಇಂದು ಶಾಸಕನಾಗಿದ್ದೇನೆ. ವಿದೇಶದಿಂದ ಬಂದು ಮತ ಹಾಕಿದವರೂ ಇದ್ದಾರೆ. ಇಲ್ಲಿ ನನ್ನ ಪರ ಪ್ರಚಾರ ಮಾಡಿದವರೂ ಇದ್ದಾರೆ. ಅವರನ್ನೆಲ್ಲ ಮರೆಯಲು ಸಾಧ್ಯವೇ ಇಲ್ಲ ಎಂದು ಹೇಳಿದ ಅವರು,

ಜಾತಿ, ಮತ, ಬೇಧವಿಲ್ಲದೆ ಎಲ್ಲರನ್ನೂ ಒಟ್ಟಾಗಿ ಸೇರಿಸುವುದೇ ಕಾಂಗ್ರೆಸ್ ಪಕ್ಷದ ಧ್ಯೇಯ: ಅಶೋಕ್ ರೈ | ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆ Read More »

ವಿದ್ಯಾರ್ಥಿಗಳು ದುರ್ವ್ಯಸನಗಳ ದಾಸರಾಗುತ್ತಿರುವುದು ದುರಂತ! | ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಗಣೇಶ್ ಕೈಕುರೆ

ಬಿಳಿನೆಲೆ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ವ್ಯಸನಗಳಿಗೆ ಬಲಿಯಾಗಿ ತಮ್ಮ ಸುಂದರ ಜೀವಿತಾವಧಿಯನ್ನು ಕೊನೆಗೊಳಿಸುತ್ತಿರುವುದು ಕಂಡು ಬರುತ್ತಿದೆ. ಶೈಕ್ಷಣಿಕ ಸಾಧನೆಗಳನ್ನು ಮಾಡಬೇಕಾದ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ಸೇವನೆ, ಧೂಮಪಾನ ಮುಂತಾದ ಚಟಗಳಿಗೆ ದಾಸರಾಗುತ್ತಿರುವುದು ದುರಂತದ ವಿಚಾರ ಎಂದು  ಜನಜಾಗೃತಿ ವೇದಿಕೆ ಬಿಳಿನೆಲೆ ವಲಯದ ನಿಕಟಪೂರ್ವ ವಲಯಾಧ್ಯಕ್ಷ ಗಣೇಶ್ ಕೈಕುರೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿಳಿನೆಲೆ ವಲಯದ  ಆಶ್ರಯದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ  ನಡೆದ ‘ಸ್ವಾಸ್ಥ್ಯ ಸಂಕಲ್ಪ’

ವಿದ್ಯಾರ್ಥಿಗಳು ದುರ್ವ್ಯಸನಗಳ ದಾಸರಾಗುತ್ತಿರುವುದು ದುರಂತ! | ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಗಣೇಶ್ ಕೈಕುರೆ Read More »

error: Content is protected !!
Scroll to Top