ಪುತ್ತೂರು

ಅನುಮತಿ ಪಡೆದಿದ್ದರೂ ಸೌಜನ್ಯ ಪ್ರಕರಣದ ಫ್ಲೆಕ್ಸ್ ತೆರವು!! | ಸುಳ್ಯದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಜಿಲ್ಲಾ ಹೋರಾಟ ಸಮಿತಿಯಿಂದ ಆಗ್ರಹ

ಸುಳ್ಯ: ಸೌಜನ್ಯ ಪ್ರಕರಣದ ಫ್ಲೆಕ್ಸನ್ನು ಅನುಮತಿ ಪಡೆದೇ ಸುಳ್ಯ ಪೇಟೆಯಲ್ಲಿ ಅಳವಡಿಸಿದ್ದರೂ, ಪೊಲೀಸರೇ ಮುಂದೆ ಬಂದು ಫ್ಲೆಕ್ಸ್ ತೆರವುಗೊಳಿಸಿದ್ದಾರೆ. ಇದು ಸೌಜನ್ಯ ಹೋರಾಟವನ್ನು ಹತ್ತಿಕ್ಕುವ ಷಡ್ಯಂತ್ರ ಎಂದು ಆರೋಪಿಸಿರುವ ಸೌಜನ್ಯ ಪ್ರಕರಣ ಒಕ್ಕಲಿಗರ ಜಿಲ್ಲಾ ಹೋರಾಟ ಸಮಿತಿ, ಫ್ಲೆಕ್ಸ್ ತೆರವಿಗೆ ಕಾರಣವಾದ ಅಧಿಕಾರಿಯನ್ನು ತಕ್ಷಣ ಅಮಾನತು ಮಾಡಬೇಕು ಎಂದು ಎಸ್.ಪಿ. ರಿಷ್ಯಂತ್ ಸಿ.ಬಿ. ಅವರನ್ನು ಒತ್ತಾಯಿಸಿದೆ. ಸುಳ್ಯ ಪೇಟೆಯಲ್ಲಿ ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಫ್ಲೆಕ್ಸ್ ನ್ನು ಅನುಮತಿ ಪಡೆದು ಅಳವಡಿಸಲಾಗಿತ್ತು. ಆದರೆ ಇಂದು ಸುಳ್ಯಕ್ಕೆ ಕಾರ್ಯಕ್ರಮ ನಿಮಿತ್ತ […]

ಅನುಮತಿ ಪಡೆದಿದ್ದರೂ ಸೌಜನ್ಯ ಪ್ರಕರಣದ ಫ್ಲೆಕ್ಸ್ ತೆರವು!! | ಸುಳ್ಯದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಜಿಲ್ಲಾ ಹೋರಾಟ ಸಮಿತಿಯಿಂದ ಆಗ್ರಹ Read More »

ಅಕ್ಷಯ ಕಾಲೇಜಿನಲ್ಲಿ ‘ಏಕ್ ತಾರೀಕ್, ಏಕ್ ಘಂಟಾ’ ಸ್ವಚ್ಛತಾ ಅಭಿಯಾನ

ಪುತ್ತೂರು: ಇಲ್ಲಿನ ಸಂಪ್ಯ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ  ಏಕ್ ತಾರಿಕ್, ಏಕ್ ಘಂಟಾ ಎಂಬ ಶಿರೋನಾಮೆಯಲ್ಲಿ ಸ್ವಚ್ಛತಾ ಅಭಿಯಾನ ಸಂಪ್ಯ ವಠಾರದಲ್ಲಿ ನಡೆಯಿತು. ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಕಿಶೋರ್ ರೈ, ಮೇಘಶ್ರೀ, ಕಾಲೇಜಿನ ಉಪನ್ಯಾಸಕ ವೃಂದ, ಸ್ವಯಂ ಸೇವಕ ಸೇವಕಿಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.

ಅಕ್ಷಯ ಕಾಲೇಜಿನಲ್ಲಿ ‘ಏಕ್ ತಾರೀಕ್, ಏಕ್ ಘಂಟಾ’ ಸ್ವಚ್ಛತಾ ಅಭಿಯಾನ Read More »

ಎಸ್.ಕೆ.ಪಿ.ಎ.ಯಿಂದ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

ಉಪ್ಪಿನಂಗಡಿ: ಸೌತ್ ಕೆನರಾ ಫೊಟೋಗ್ರಾಫರ್ ಅಸೋಸಿಯೇಶನ್ (ಎಸ್.ಕೆ.ಪಿ.ಎ.)ನ ಪುತ್ತೂರು ವಲಯದ ವತಿಯಿಂದ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಉಪ್ಪಿನಂಗಡಿಯ ಪೌರ ಸೈನಿಕರಿಗೆ ಸನ್ಮಾನ ಹಾಗೂ ಮಾಜಿ ಸೈನಿಕರಾದ ಉಪ್ಪಿನಂಗಡಿಯ ಕೊಯಿಲ ಚೆನ್ನಪ್ಪ ಗೌಡ ಅವರನ್ನು ಸನ್ಮಾನಿಸಲಾಯಿತು. ಪೌರ ಸೈನಿಕರಿಗೆ ಸಮಾರಂಭದಲ್ಲಿ ಸನ್ಮಾನ ನೆರವೇರಿಸಿದ್ದು, ಮಾಜಿ ಸೈನಿಕ ಚೆನ್ನಪ್ಪ ಗೌಡ ಅವರಿಗೆ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.

ಎಸ್.ಕೆ.ಪಿ.ಎ.ಯಿಂದ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ Read More »

ಪರ್ಪುಂಜ ಸ.ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ, ಸನ್ಮಾನ | ಶಾಲೆಗಳನ್ನು ವಿಲೀನಗೊಳಿಸುವುದರಿಂದ ಗುಣಮಟ್ಟದ ಶಿಕ್ಷಣ ಸಾಧ್ಯ: ಅಶೋಕ್ ರೈ

ಪುತ್ತೂರು: ತಮ್ಮ ಪ್ರತಿಷ್ಠೆಗೋಸ್ಕರ ಅಲ್ಲೊಂದು ಶಾಲೆ, ಇಲ್ಲೊಂದು ಶಾಲೆ ಕಟ್ಟುವುದರಿಂದ ಯಾವುದೇ ಪ್ರಯೋಜನವಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಸಾಧ್ಯವಿಲ್ಲ. ಇರುವ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಕೆಲಸ ಆಗಬೇಕಾಗಿದೆ. ಆದಕ್ಕಾಗಿ ಈಗ ಇರುವ ಶಾಲೆಗಳನ್ನು ವಿಲೀನ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರಕಾರ ಕೂಡ ಚಿಂತನೆ ಮಾಡುತ್ತಿದೆ. ಇದಲ್ಲದೆ ವಿದ್ಯಾರ್ಥಿಗಳನ್ನು ಸರಕಾರಿ ಶಾಲೆಗಳಿಗೆ ಕರೆದುಕೊಂಡು ಹೋಗಲು ಬಸ್ಸಿನ ವ್ಯವಸ್ಥೆಯನ್ನು ಮಾಡುವ ಬಗ್ಗೆಯೂ ಸರಕಾರ ಚಿಂತನೆ ನಡೆಸಿದೆ ಎಂದು ಶಾಸಕ ಅಶೋಕ್

ಪರ್ಪುಂಜ ಸ.ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ, ಸನ್ಮಾನ | ಶಾಲೆಗಳನ್ನು ವಿಲೀನಗೊಳಿಸುವುದರಿಂದ ಗುಣಮಟ್ಟದ ಶಿಕ್ಷಣ ಸಾಧ್ಯ: ಅಶೋಕ್ ರೈ Read More »

ನೆಕ್ಕಿಲಾಡಿ: ತ್ಯಾಜ್ಯ ಎಸೆದವರಿಗೆ ತಕ್ಕ ಶಾಸ್ತಿ!!

ಉಪ್ಪಿನಂಗಡಿ: ರಸ್ತೆ ಬದಿ ತ್ಯಾಜ್ಯ ಎಸೆದು ಹೋಗಿದ್ದವನ್ನು ಪತ್ತೆಹಚ್ಚಿ, ದಂಡ ವಿಧಿಸಿದ ಘಟನೆ ಬೇರಿಕೆ ಎಂಬಲ್ಲಿ ನಡೆದಿದೆ. ತ್ಯಾಜ್ಯ ಎಸೆದವರನ್ನು ಪತ್ತೆ ಹಚ್ಚಿರುವ 34 ನೆಕ್ಕಿಲಾಡಿ ಗ್ರಾಪಂ, 5050 ರೂ. ದಂಡ ವಿಧಿಸಿದೆ. ಮನೆಯೊಂದರ ತ್ಯಾಜ್ಯವನ್ನು ಸಂಗ್ರಹಿಸಿ ತಂದು, ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗಿದ್ದರು. ಇಂತಹ ಘಟನೆ ಅಲ್ಲಲ್ಲಿ ನಡೆಯುತ್ತಿದ್ದು, ಸ್ಥಳೀಯಾಡಳಿತ ಅರಿವು ಕಾರ್ಯಕ್ರಮ ನಡೆಸುತ್ತಿದೆ. ಮಾತ್ರವಲ್ಲ, ತ್ಯಾಜ್ಯ ಎಸೆಯುವ ಬಗ್ಗೆ ಮಾಹಿತಿ ನೀಡಿ, ಇಂತಹ ತಪ್ಪು ಪುನರಾವರ್ತನೆ ಆಗದಂತೆ ತಿಳಿ ಹೇಳುವ ಕೆಲಸವನ್ನು ಮಾಡಿತ್ತು. ಆದರೂ

ನೆಕ್ಕಿಲಾಡಿ: ತ್ಯಾಜ್ಯ ಎಸೆದವರಿಗೆ ತಕ್ಕ ಶಾಸ್ತಿ!! Read More »

ಮುರ: 13 ತಿಂಗಳ ಮಗು ನಿಧನ

ಪುತ್ತೂರು: ಮೂಲತಃ ಮಂಜೇಶ್ವರದವರಾದ ಪುತ್ತೂರಿನ ಮುರದಲ್ಲಿ ವಾಸವಾಗಿದ್ದ ಹನೀಫ್ ಎಂಬವರ ಪುತ್ರಿ, 13 ತಿಂಗಳ ಮಗು ಆಯಿಷತ್ ಹಝಾ ಅನಾರೋಗ್ಯದಿಂದ ನಿಧನವಾಗಿದ್ದಾಳೆ. ಕಳೆದ ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಗು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿಧನವಾಗಿದೆ. ಕಲ್ಲೇಗ ಖಾದರ್‌ ಅವರ ಹಿರಿಯ ಮಗಳ ಪುತ್ರಿಯಾಗಿರುವ ಆಯಿಷತ್‌ ಹಝಾ ತಂದೆ, ತಾಯಿಯನ್ನು ಅಗಲಿದ್ದಾರೆ.

ಮುರ: 13 ತಿಂಗಳ ಮಗು ನಿಧನ Read More »

ಟ್ರಿಪಲ್ ಜಂಪ್: ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಹಾಲ್ ರಾಜ್‌ಗೆ ಬೆಳ್ಳಿ ಪದಕ

ಪುತ್ತೂರು: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನಿಹಾಲ್ ರಾಜ್ ಬೆಳ್ಳಿಯ ಪದಕ ಪಡೆದುಕೊಂಡಿದ್ದಾರೆ. ಇವರು ಪುತ್ತೂರು ತಾಲೂಕನ್ನು ಪ್ರತಿನಿಧಿಸಿ, ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ನಿಹಾಲ್ ರಾಜ್ ಅವರು ಕಬಕದ ಬಿ. ನಾಗರಾಜ್ ಹೆಗ್ಡೆ ಮತ್ತು ಭಾನುಮತಿ ದಂಪತಿ ಪುತ್ರ. ನಿಹಾಲ್ ರಾಜ್ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಟ್ರಿಪಲ್ ಜಂಪ್: ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಹಾಲ್ ರಾಜ್‌ಗೆ ಬೆಳ್ಳಿ ಪದಕ Read More »

ಮಹಾಲಿಂಗ ಅಂದರೆ ತ್ರಿಮೂರ್ತಿಗಳ ಸಂಗಮ: ಪಿ.ಜಿ. ಜಗನ್ನಿವಾಸ ರಾವ್ | ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ಪದಗ್ರಹಣ

ಪುತ್ತೂರು: ಅರ್ಚಕನ ಪ್ರಭಾವ ಮತ್ತು ಸಂಸ್ಕಾರದಿಂದ ಶಿಲೆಯಾದ ಮೂರ್ತಿ ಶಂಕರನಾಗುತ್ತದೆ. ದೇವರ ಸ್ವರೂಪ ಪಡೆಯುತ್ತದೆ. ಇಲ್ಲಿ ಅರ್ಚಕನೆಂದರೆ ಯಾರೆಲ್ಲಾ ತ್ರಿಕರಣ ಪೂರ್ವಕವಾಗಿ ಶಿಲೆಯಲ್ಲಿ ದೇವರನ್ನು ಏಕನಿಷ್ಠೆಯಿಂದ ಕಾಣುತ್ತಾರೋ ಆ ಭಕ್ತರೆಲ್ಲರೂ ಒಂದು ರೀತಿಯಿಂದ ಅರ್ಚಕರೇ ಆಗುತ್ತಾರೆ. ಭಗವಂತನನ್ನು ತ್ರಿಕರಣಪೂರ್ವಕವಾಗಿ ಭಜಿಸಿದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಪುತ್ತೂರು ನಗರಸಭಾ ಸದಸ್ಯ, ಪಿ.ಜಿ. ಜಗನ್ನಿವಾಸ ರಾವ್ ಹೇಳಿದರು. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಹಾಲಿಂಗ ಅಂದರೆ

ಮಹಾಲಿಂಗ ಅಂದರೆ ತ್ರಿಮೂರ್ತಿಗಳ ಸಂಗಮ: ಪಿ.ಜಿ. ಜಗನ್ನಿವಾಸ ರಾವ್ | ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ ಪದಗ್ರಹಣ Read More »

ಎನ್ ಎಸ್ ಎಸ್ ಸೇವಾಸಂಗಮದಿಂದ ಕಾವು ಸರಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

ಪುತ್ತೂರು: ಸುಳ್ಯ ಕುರಂಜಿ ವೆಂಕಟರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ ವತಿಯಿಂದ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ ನೀಡಲಾಯಿತು. ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಕಾವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಾಡಿದರು. ನಿವೃತ್ತ ಜಿಲ್ಲಾ ನ್ಯಾಯಾಧೀಶ

ಎನ್ ಎಸ್ ಎಸ್ ಸೇವಾಸಂಗಮದಿಂದ ಕಾವು ಸರಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ Read More »

ನೆಲ್ಲಿಕಟ್ಟೆ ಮಿತ್ರಮಂಡಲ, ನೆಲ್ಲಿಕಟ್ಟೆ ಈಶ ವಿದ್ಯಾಲಯದಿಂದ ಸ್ವಚ್ಛತಾ ಆಂದೋಲನ

ಪುತ್ತೂರು: ನೆಲ್ಲಿಕಟ್ಟೆ ಮಿತ್ರಮಂಡಲ ಹಾಗೂ ನೆಲ್ಲಿಕಟ್ಟೆ ಈಶ ವಿದ್ಯಾಲಯದ ಆಶ್ರಯದಲ್ಲಿ ಸ್ವಚ್ಛತಾ ಆಂದೋಲನ ಸೋಮವಾರ ನಡೆಯಿತು. ಮಹಾತ್ಮ ಗಾಂಧೀ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನದ ಪ್ರಯುಕ್ತ ನಡೆದ ಸ್ವಚ್ಛತಾ ಕಾರ್ಯ ನೆಲ್ಲಿಕಟ್ಟೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ರಸ್ತೆ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ, ನಾಗನ ಕಟ್ಟೆ, ನೆಲ್ಲಿಕಟ್ಟೆ ಬಳಿಯಲ್ಲಿ ನಡೆಯಿತು. ನೆಲಿಕಟ್ಟೆ ಮಿತ್ರ ಮಂಡಲದ ಸ್ಥಾಪಕಾಧ್ಯಕ್ಷ ಜಗನ್ನಾಥ ರೈ ಸೂತ್ರಬೆಟ್ಟು ದೀಪ ಬೆಳಗಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನೆಲ್ಲಿಕಟ್ಟೆ ಮಿತ್ರ ಮಂಡಲದ

ನೆಲ್ಲಿಕಟ್ಟೆ ಮಿತ್ರಮಂಡಲ, ನೆಲ್ಲಿಕಟ್ಟೆ ಈಶ ವಿದ್ಯಾಲಯದಿಂದ ಸ್ವಚ್ಛತಾ ಆಂದೋಲನ Read More »

error: Content is protected !!
Scroll to Top