ಪುತ್ತೂರು

ಅಜಿತ್ ಮಡಿಕೇರಿಯನ್ನು ಪುತ್ತೂರಿನಲ್ಲಿ ಒಂದು ಗಂಟೆ ಮೆರವಣಿಗೆ ಮಾಡುತ್ತೇವೆ | ತಾಕತ್ತಿದ್ದರೆ ಶಾಸಕರು ತಡೆಯಲಿ | ಪ್ರತಿಭಟನೆಯಲ್ಲಿ ಸವಾಲೆಸೆದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ಅಜಿತ್ ಮಡಿಕೇರಿಯನ್ನು ಪುತ್ತೂರಿನಲ್ಲಿ ಒಂದು ಗಂಟೆ ಮೆರವಣಿಗೆ ಮಾಡುತ್ತೇವೆ. ಪುತ್ತೂರು ಶಾಸಕರಿಗೆ ತಾಕತ್ತಿದ್ದರೆ ಬಂದು ತಡೆಯಲಿ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಸವಾಲೆಸೆದಿದ್ದಾರೆ. ಪುತ್ತೂರಿನಲ್ಲಿ ಸೋಮವಾರ ನಡೆದ ಮರಳು, ಕೆಂಪುಕಲ್ಲು ಅಭಾವದ ಕುರಿತು ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಪುತ್ತೂರು ಶಾಸಕರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಬಿಜೆಪಿ ಕಾರ್ಯಕರ್ತರು ಬಳೆಯಿಟ್ಟು ರಾಜಕೀಯ ಮಾಡಿದವರಲ್ಲ. ಬಿಜೆಪಿ ಕಾರ್ಯಕರ್ತರು ಸ್ವಾಭಿಮಾನಿಗಳು, ಹಣ, ಅಮಿಷಗಳಿಗೆ ಮರುಳಾಗುವವರು ಬಿಜೆಪಿಗರಲ್ಲ ಇಂದು ಯಾವುದಾದರೂ ಕೆಲಸಕ್ಕೆ ಶಾಸಕರ ಬಳಿ ಹೋದಲ್ಲಿ ಅವರಿಗೆ […]

ಅಜಿತ್ ಮಡಿಕೇರಿಯನ್ನು ಪುತ್ತೂರಿನಲ್ಲಿ ಒಂದು ಗಂಟೆ ಮೆರವಣಿಗೆ ಮಾಡುತ್ತೇವೆ | ತಾಕತ್ತಿದ್ದರೆ ಶಾಸಕರು ತಡೆಯಲಿ | ಪ್ರತಿಭಟನೆಯಲ್ಲಿ ಸವಾಲೆಸೆದ ಮಾಜಿ ಶಾಸಕ ಸಂಜೀವ ಮಠಂದೂರು Read More »

ಮರಳು, ಕೆಂಪುಕಲ್ಲು ಸಮಸ್ಯೆ | ಪುತ್ತೂರು ಬಿಜೆಪಿ ಗ್ರಾಮಾಂತರ, ನಗರ ಮಂಡಲದಿಂದ ಪ್ರತಿಭಟನೆ

ಪುತ್ತೂರು:  ರಾಜ್ಯ ಸರಕಾರ ಗ್ಯಾರೆಂಟಿ ಯೋಜನೆಗಳಿಗೆ ಸೋರಿಕೆಯ 40 ಶೇಕಡಾ ಹಣವನ್ನು ಬಳಸುತ್ತೇವೆ ಎಂದಿತ್ತು, ಆದರೆ ಇಂದು ಸರಕಾರದ ಬಳಿ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲದೆ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ‌ ಪ್ರತಾಪ್‌ಸಿಂಹ ನಾಯಕ್‌ ಹೇಳಿದ್ದಾರೆ. ಕೆಂಪುಕಲ್ಲು ಮತ್ರು ಮರಳು ಅಭಾವದ ವಿರುದ್ಧ ಪುತ್ತೂರಿನ ಅಮರ್‍ ಜವಾನ್‍ ಸ್ಮಾರಕದ ಬಳಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಉಳಿಸಿದ 40% ಶೇಕಡಾ ಹಣವನ್ನೂ ಬಳಸುತ್ತಿಲ್ಲ, ನಾವು ಚುನಾವಣೆಯ ಸಂದರ್ಭದಲ್ಲಿ ಒಂದು ಮಾತು ಹೇಳಿದ್ದೆವು. ಕಾಂಗ್ರೇಸ್

ಮರಳು, ಕೆಂಪುಕಲ್ಲು ಸಮಸ್ಯೆ | ಪುತ್ತೂರು ಬಿಜೆಪಿ ಗ್ರಾಮಾಂತರ, ನಗರ ಮಂಡಲದಿಂದ ಪ್ರತಿಭಟನೆ Read More »

ದ.ಕ. ತೆಂಗು ರೈತ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಸಂಸ್ಥೆಯ ಕಚೇರಿ ಸ್ಥಳಾಂತರಗೊಂಡು, ಧನ್ವಂತರಿ ಆಸ್ಪತ್ರೆಯ ಬಳಿಯ ಎಂ.ಆರ್. ಕಾಂಪ್ಲೆಕ್ಸ್‌ನಲ್ಲಿ ಸೋಮವಾರ ಶುಭಾರಂಭಗೊಂಡಿತು. ಸಂಸ್ಥೆಯ ನೂತನ ಕಚೇರಿಯನ್ನು ಸಂಸ್ಥೆಯ ಗೌರವಾಧ್ಯಕ್ಷ, ಕೃಷಿಕ ಕಡಮಜಲು ಸುಭಾಷ್ ರೈ ಹಾಗೂ ಅಧ್ಯಕ್ಷ ಕುಸುಮಾಧರ್ ಎಸ್.ಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಲಹಾ ಸಮಿತಿಯ ಸದಸ್ಯ ಕುಮಾರ್ ಪೆರ್ನಾಜೆ, ನಿರ್ದೇಶಕರಾದ ವರ್ಧಮಾನ್ ಶೆಟ್ಟಿ, ಲತಾ, ಮುಖ್ಯ ಸಲಹೆಗಾರ ಯತೀಶ್ ಕೆ.ಎಸ್., ಹಾಗೂ ಲಹರಿ ಡ್ರೈಫ್ರೂಟ್ಸ್ ಸಂಸ್ಥೆಯ ಮಾಲಕಿ ಲಿಖಿತ ಕುಸುಮ್ ಉಪಸ್ಥಿತರಿದ್ದರು. ಸಿಬ್ಬಂದಿ ನಿರ್ಮಲಾ

ದ.ಕ. ತೆಂಗು ರೈತ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ Read More »

ಜು.16 : ಕರ್ನಾಟಕ ಸುನ್ನೀ ಯುವಜನ ಸಂಘದಿಂದ ಪುತ್ತೂರಿನಲ್ಲಿ ಸೌಹಾರ್ದ ಸಂಚಾರ | ಸರ್ವ ಧರ್ಮಿಯರು ಕೈ ಕೈ ಹಿಡಿದು ಕಾಲ್ನಡಿಗೆಯಲ್ಲಿ ಸಾಗುವ ವಿಶೇಷ ಜಾಥಾ

ಪುತ್ತೂರು: ಕರ್ನಾಟಕ ಸುನ್ನೀ ಯುವಜನ ಸಂಘದ (ಎಸ್‍ ವೈಎಸ್‍) ವತಿಯಿಂದ ಪುತ್ತೂರಿನಲ್ಲಿ ಸೌಹಾರ್ದ ಸಂಚಾರ ಜು.16 ಬುಧವಾರ ಬೆಳಿಗ್ಗೆ 8.30 ಕ್ಕೆ ಏಳ್ಮುಡಿಯಿಂದ ಕಿಲ್ಲೆ ಮೈದಾನದ ತನಕ ನಡೆಯಲಿದೆ ಎಂದು ಸಂಚಾರ ಸ್ವಾಗತ ಸಮಿತಿ ಚೇರ್ಮೆನ್ ಗೌಸಿಯ ಯೂಸುಫ್‍ ಸಾಜ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸರ್ವ ಧರ್ಮಿಯರು ಕೈ ಕೈ ಹಿಡಿದು ಕಾಲ್ನಡಿಗೆಯಲ್ಲಿ ಸಾಗುವ ಈ ವಿಶೇಷ ಜಾಥಾದಲ್ಲಿ ಡಾ.ಹಝ್ರತ್ ಮುಹಮ್ಮದ್ ಫಾಝಿಲ್‍ ರಝ್ವಿ ಕಾವಲ್‍ಕಟ್ಟೆ, ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲೇಶ್ವರ

ಜು.16 : ಕರ್ನಾಟಕ ಸುನ್ನೀ ಯುವಜನ ಸಂಘದಿಂದ ಪುತ್ತೂರಿನಲ್ಲಿ ಸೌಹಾರ್ದ ಸಂಚಾರ | ಸರ್ವ ಧರ್ಮಿಯರು ಕೈ ಕೈ ಹಿಡಿದು ಕಾಲ್ನಡಿಗೆಯಲ್ಲಿ ಸಾಗುವ ವಿಶೇಷ ಜಾಥಾ Read More »

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ  ವಾರ್ಷಿಕೋತ್ಸವ

ವಿಟ್ಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಆಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಭಾನುವಾರ ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ದಕ್ಷಿಣ ಕನ್ನಡ -2 ಜಿಲ್ಲೆಯ ನಿರ್ದೇಶಕ ಬಾಬು ನಾಯ್ಕ್ ಸಮಾರಂಭ ಉದ್ಘಾಟಿಸಿ, ಸಂಘ ಬೆಳೆದು ಬಂದ ದಾರಿ, ಸಂಘದಲ್ಲಿ ಉತ್ತಮವಾಗಿ ಗ್ರೇಡ್ ಬರಬೇಕೆಂದರೆ ಏನು ಮಾಡಬೇಕು,ಯೋಜನೆಯಲ್ಲಿ 46000 ಕಾರ್ಯಕರ್ತರಿದ್ದು. ಬೇರೆ ಯಾವುದೇ ಸಂಸ್ಥೆಯಲ್ಲಿ ಇಷ್ಟು ಕಾರ್ಯಕರ್ತರಿಲ್ಲ. ಈ ನಿಟ್ಟಿನಲ್ಲಿ ಸ್ವಾವಲಂಬನೆಯಾಗಿ ಬದುಕಲು ದಾರಿ ಮಾಡಿಕೊಟ್ಟಿದ್ದಾರೆ ನಮ್ಮ ಪೂಜ್ಯರು ಎಂದರು. ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಅಲಂಗಾರು ಒಕ್ಕೂಟದ  ವಾರ್ಷಿಕೋತ್ಸವ Read More »

ಆ.3 : ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ | ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ 2024-25ನೇ ಸಾಲಿನಲ್ಲಿ ಎಸ್‌ ಎಸ್‌ ಎಲ್‌ ಸಿ ಮತ್ತು ಪಿಯುಸಿಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಪಡೆದ ಪುತ್ತೂರು ತಾಲೂಕಿನ ಸಮಾಜ ಬಾಂಧವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಂಘದ ವಾರ್ಷಿಕ ಮಹಾಸಭೆ ಆ.3ರಂದು ನಡೆಯಲಿದ್ದು, 2024-25ನೇ ಸಾಲಿನಲ್ಲಿ ಎಸ್‌ ಎಸ್‌ ಎಲ್‌ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.95 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜಬಾಂಧವ ಪುತ್ತೂರು ತಾಲೂಕಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಆ.3 : ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ | ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಶಾಂತಿಗೋಡು ಗ್ರಾಮ ಸಮಿತಿಗೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ದಾಮೋದರ ಸುವರ್ಣ, ಉಪಾಧ್ಯಕ್ಷರಾಗಿ ಜಗದೀಶ್‍ ಪೂಜಾರಿ

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಮಿತಿ ಶಾಂತಿಗೋಡು ಗ್ರಾಮ ಸಮಿತಿಯ 2024-25ನೆ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ದಾಮೋದರ ಸುವರ್ಣ ಕರ್ಪುತಮೂಲೆ, ಉಪಾಧ್ಯಕ್ಷರಾಗಿ ಜಗದೀಶ್ ಪೂಜಾರಿ ಪುಣ್ಯಕೋಟಿ, ಪರಕಮೆ, ಕಾರ್ಯದರ್ಶಿಯಾಗಿ ಗಣೇಶ್ ಪೂಜಾರಿ ಕೈಂದಾಡಿ, ಜೊತೆ ಕಾಯದರ್ಶಿಯಾಗಿ ರಮೇಶ್ ಪೂಜಾರಿ ಪರಕಮೆ, ಕೋಶಾಧಿಕಾರಿಯಾಗಿ ಕೊರಗಪ್ಪ ಸಾಲ್ಯಾನ್ ಕುಕ್ಯಾನ, ಸಂಘಟನಾ ಕಾಯದರ್ಶಿಯಾಗಿ ಪ್ರದೀಪ್ ಕೈಂದಾಡಿ, ಬಿಲ್ಲವ ಮಹಿಳಾ ಘಟಕದ ಅಧಕ್ಷೆಯಾಗಿ ಅಮಿತಾ

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಶಾಂತಿಗೋಡು ಗ್ರಾಮ ಸಮಿತಿಗೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ದಾಮೋದರ ಸುವರ್ಣ, ಉಪಾಧ್ಯಕ್ಷರಾಗಿ ಜಗದೀಶ್‍ ಪೂಜಾರಿ Read More »

ಆರ್.ಎಸ್‍.ಎಸ್‍ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ನಿಧನ

ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಪುತ್ತೂರು ಬೆದ್ರಾಳ ನಿವಾಸಿ ಧನಂಜಯ ವಾಗ್ಲೆ (75) ಅವರು ಸ್ವಗೃಹದಲ್ಲಿ ಭಾನುವಾರ ನಿಧನರಾದರು. ಮೂಲತಃ ಸುಳ್ಯದ ಕೋಡಿಯಾಲಬೈಲಿನ ಸ್ವಯಂಸೇವಕರಾಗಿದ್ದರು. ಸುಳ್ಯ ತಾಲೂಕಿನಲ್ಲಿ ಜನಸಂಘ ಹಾಗು ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಸುಮಾರು 20 ವರ್ಷಗಳ ಕಾಲ ಬಿಜೆಪಿಯ ಪೂರ್ಣಾವಧಿ ಕಾರ್ಯಕರ್ತರಂತೆ ಕಾರ್ಯ ನಿರ್ವಹಿಸಿದ್ದರು. ತುರ್ತು ಪರಿಸ್ಥಿತಿ, ಅಯೋಧ್ಯೆಯ ರಾಮ ಜನ್ಮಭೂಮಿ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ವಾಗ್ಲೆಯವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ

ಆರ್.ಎಸ್‍.ಎಸ್‍ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ನಿಧನ Read More »

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ವೃಕ್ಷಾರೋಪಣ

ಪುತ್ತೂರು: ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಪ್ರಖಂಡದ ವತಿಯಿಂದ ದೇಶಾದ್ಯಂತ ನಡೆಯುತ್ತಿರುವ ಬಜರಂಗದಳದ ಸೇವಾ ಸಪ್ತಾಹ ಹಿನ್ನಲೆ ವೃಕ್ಷಾರೋಪಣ ಕಾರ್ಯಕ್ರಮ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು. ಸ್ಥಳೀಯ ನಗರಸಭೆ ಸದಸ್ಯೆ ಪೂರ್ಣಿಮಾ ಚೆನ್ನಪ್ಪ ಗೌಡ ಗಿಡ ನಾಟಿ ಮಾಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ ಪುತ್ತೂರು ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ,ವಿಶ್ವ ಹಿಂದೂ ಪರಿಷದ್‌ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಬಜರಂಗದಳ ಜಿಲ್ಲಾ ಸಹ

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ವೃಕ್ಷಾರೋಪಣ Read More »

ಪುತ್ತೂರಿನಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ | ಉತ್ತಮ ಪ್ರತಿಕ್ರಿಯೆ | 986 ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ

ಪುತ್ತೂರು: ಪುತ್ತೂರು ನ್ಯಾಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾದ `ರಾಷ್ಟ್ರೀಯ ಲೋಕ್ ಅದಾಲತ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 6 ಕೋರ್ಟ್ ಗಳಲ್ಲಿ ಬಾಕಿ ಇದ್ದ ಒಟ್ಟು 6967 ಪ್ರಕರಣಗಳಲ್ಲಿ ಅದಾಲತ್‌ ನಲ್ಲಿ 1512 ಪ್ರಕರಣಗಳನ್ನು ರಾಜೀ ಸಂಧಾನಕ್ಕೆ ಪ್ರಯತ್ನಿಸಲಾಗಿತ್ತು. 986 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಒಟ್ಟು ಫಲಾನುಭವಿಗಳಿಗೆ ರೂ. 2,13,05,097 ಪರಿಹಾರ ಮೊತ್ತವನ್ನು ವಿತರಿಸಲು ಆದೇಶಿಸಲಾಗಿದೆ.   ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ

ಪುತ್ತೂರಿನಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ | ಉತ್ತಮ ಪ್ರತಿಕ್ರಿಯೆ | 986 ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ Read More »

error: Content is protected !!
Scroll to Top