ಪುತ್ತೂರು

ಪ್ರಾಣಾಯಾಮ, ಧ್ಯಾನಗಳ ಪರಿಣಾಮಕಾರಿ ಅಭ್ಯಾಸದಿಂದ ದೇಹ, ಮನಸ್ಸು ಸ್ವಸ್ಥ | ಯೋಗ, ಪ್ರಕೃತಿ ಚಿಕಿತ್ಸಾ ಮಾಹಿತಿ ಕಾರ್ಯಕ್ರಮದಲ್ಲಿ ಪ್ರತೀಕ್ಷಾ ಹೆಚ್.

ಪುತ್ತೂರು: ಯೋಗ ವಿಶ್ವವ್ಯಾಪಿಯಾಗಿರುವುದು ನಮ್ಮ ಹೆಮ್ಮೆ ಮತ್ತು ಸುಯೋಗ ಎಂದು ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವೈದ್ಯಕೀಯ ಪದವಿ ವಿದ್ಯಾರ್ಥಿನಿ ಪ್ರತೀಕ್ಷಾ ಹೆಚ್. ಹೇಳಿದರು. ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ವಿಜ್ಞಾನಕ್ಕೆ ಸಂಬಂಧಿಸಿದ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಆಯುಷ್ ಶಾಖೆಯಾದ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ವಿಧಾನದ ಮೂಲಕ ವಿವಿಧ ರೋಗಗಳಿಗೆ ಔಷಧ ಹಾಗೂ ಶಸ್ತ್ರಚಿಕಿತ್ಸೆ ರಹಿತ ಪರಿಹಾರವನ್ನು ಕಂಡುಕೊಳ್ಳಬಹುದಾದ ಅನೇಕ ವೈಶಿಷ್ಟ್ಯಗಳ ಬಗ್ಗೆ ಅವರು ಬೆಳಕು […]

ಪ್ರಾಣಾಯಾಮ, ಧ್ಯಾನಗಳ ಪರಿಣಾಮಕಾರಿ ಅಭ್ಯಾಸದಿಂದ ದೇಹ, ಮನಸ್ಸು ಸ್ವಸ್ಥ | ಯೋಗ, ಪ್ರಕೃತಿ ಚಿಕಿತ್ಸಾ ಮಾಹಿತಿ ಕಾರ್ಯಕ್ರಮದಲ್ಲಿ ಪ್ರತೀಕ್ಷಾ ಹೆಚ್. Read More »

ಉರ್ಲಾಂಡಿ ನಿವಾಸಿ ಮಹೇಶ್ ಅನಾರೋಗ್ಯದಿಂದ ನಿಧನ!

ಪುತ್ತೂರು : ಅನಾರೋಗ್ಯದಿಂದ ಉರ್ಲಾಂಡಿ ನಿವಾಸಿ ಮಹೇಶ್ (37) ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾದರು.ಈ ಮೊದಲು ಪುತ್ತೂರಿನ ಪ್ರತಿಷ್ಠಿತ ಬಟ್ಟೆ ಮಳಿಗೆಯಲ್ಲಿ ಕೆಲಸಕ್ಕಿದ್ದ ಮಹೇಶ್, ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದರು.ಅವಿವಾಹಿತರಾಗಿರುವ ಮಹೇಶ್ ತಾಯಿ ಜೊತೆ ಉರ್ಲಾಂಡಿ ಮನೆಯಲ್ಲಿ ವಾಸವಾಗಿದ್ದರು.ಇಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು ಎಂದು ವರದಿಯಾಗಿದೆ.

ಉರ್ಲಾಂಡಿ ನಿವಾಸಿ ಮಹೇಶ್ ಅನಾರೋಗ್ಯದಿಂದ ನಿಧನ! Read More »

ಮಹಾಲಿಂಗೇಶ್ವರ ದೇವರ ಉತ್ಸವ ಬಲಿಯೊಂದಿಗೆ ಕದಿರು ವಿನಿಯೋಗ – ವಿತರಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ-ವಿತರಣೆ ಕಾರ್ಯಕ್ರಮ ಸೋಮವಾರವೂ ಮುಂದುವರಿಯಿತು. ದೇವಸ್ಥಾನದ ಪುಷ್ಕರಣಿ ಬಳಿ ಇರುವ ಅಶ್ವತ್ಥ ಕಟ್ಟೆಯಲ್ಲಿ ಕದಿರಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದೇವರ ಉತ್ಸವ ಬಲಿಯೊಂದಿಗೆ ಕದಿರನ್ನು ದೇವಸ್ಥಾನದ ಒಳಾಂಗಣಕ್ಕೆ ತಂದು ಪೂಜೆ ಸಲ್ಲಿಸಲಾಯಿತು. ಬಳಿಕ ಕದಿರನ್ನು ಹೊರಾಂಗಣದಲ್ಲಿ ಸರತಿ ಸಾಲಿನಲ್ಲಿ ನಿಂತ ಭಕ್ತರಿಗೆ ವಿತರಿಸಲಾಯಿತು. ದೇವಸ್ಥಾನದ ಗರ್ಭಗುಡಿ, ಗೋಪುರ, ರಥ, ಕಟ್ಟೆಗಳಿಗೆ ಕದಿರು ಕಟ್ಟುವ ಸಂಪ್ರದಾಯ ನಡೆದ ಬಳಿಕ ಮಧ್ಯಾಹ್ನ ಶ್ರೀ ದೇವರಿಗೆ ಹೊಸ ಅಕ್ಕಿ

ಮಹಾಲಿಂಗೇಶ್ವರ ದೇವರ ಉತ್ಸವ ಬಲಿಯೊಂದಿಗೆ ಕದಿರು ವಿನಿಯೋಗ – ವಿತರಣೆ Read More »

ನ್ಯೂಸ್ ಪುತ್ತೂರು ಸ್ಟುಡಿಯೋದಲ್ಲಿ ವಿಠಲ್ ನಾಯಕ್ | ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಗೀತಾ ಸಾಹಿತ್ಯ ಸಂಭ್ರಮ ಕೆಲವೇ ಕ್ಷಣದಲ್ಲಿ ಪ್ರಸಾರ…

ಪುತ್ತೂರು: ಗೌರಿ ಗಣೇಶ (ಚೌತಿ) ಹಬ್ಬದ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ಸ್ಟುಡಿಯೋದಿಂದ ವಿಠಲ್ ನಾಯಕ್ ಅವರ ಗೀತಾ ಸಾಹಿತ್ಯ ಸಂಭ್ರಮ ವಿಶೇಷ ಕಾರ್ಯಕ್ರಮ ಇಂದು (ಸೆ. 18) ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ. ಗೀತಾ ಸಾಹಿತ್ಯ ಸಂಭ್ರಮದ ಮೂಲಕ ಮನೆಮಾತಾಗಿರುವ ವಿಠಲ್ ನಾಯಕ್ ಅವರು ನ್ಯೂಸ್ ಪುತ್ತೂರು ಸ್ಟುಡಿಯೋಗೆ ಭೇಟಿ ನೀಡಿ, ವಿಶೇಷ ಕಾರ್ಯಕ್ರಮವನ್ನು ನೀಡಿದ್ದಾರೆ. ಹಾಸ್ಯ ಮಿಶ್ರಿತ, ಸಂದೇಶ ನೀಡಿರುವ ವಿಠಲ್ ನಾಯಕ್ ಅವರು ಭಜನೆಯನ್ನು ಹಾಡಿ, ಗಣಪತಿಯ ವಿಶೇಷತೆಯನ್ನು ಕೊಂಡಾಡಿದ್ದಾರೆ.

ನ್ಯೂಸ್ ಪುತ್ತೂರು ಸ್ಟುಡಿಯೋದಲ್ಲಿ ವಿಠಲ್ ನಾಯಕ್ | ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಗೀತಾ ಸಾಹಿತ್ಯ ಸಂಭ್ರಮ ಕೆಲವೇ ಕ್ಷಣದಲ್ಲಿ ಪ್ರಸಾರ… Read More »

“ಯಾನ್ ಸೂಪರ್ ಸ್ಟಾರ್” ತುಳು ಸಿನಿಮಾ ಸೆ. 22ರಂದು ತೆರೆಗೆ | ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ್ರು ನಿರ್ದೇಶಕ ಸಂತೋಷ್ ಶೆಟ್ಟಿ

ಪುತ್ತೂರು: ಆನಂದ ಫಿಲಂಸ್ ಮತ್ತು ದ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣದ “ಯಾನ್ ಸೂಪರ್ ಸ್ಟಾರ್” ತುಳು ಚಲನಚಿತ್ರ ಸೆ. 22ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ನಿರ್ದೇಶಕ ಸಂತೋಷ್ ಶೆಟ್ಟಿ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾನ್ ಸೂಪರ್ ಸ್ಟಾರ್ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಉಡುಪಿಯಲ್ಲಿ ಕಲ್ಪನ, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್,

“ಯಾನ್ ಸೂಪರ್ ಸ್ಟಾರ್” ತುಳು ಸಿನಿಮಾ ಸೆ. 22ರಂದು ತೆರೆಗೆ | ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ್ರು ನಿರ್ದೇಶಕ ಸಂತೋಷ್ ಶೆಟ್ಟಿ Read More »

ವಿದ್ಯಾರಶ್ಮಿಯ ಶಿಕ್ಷಕಿ ಪರಿಮಳ ಎನ್.ಎಂ. ಅವರು ‘ಸಾವಿತ್ರಿಬಾಯಿ ಪುಲೆ’ ಪ್ರಶಸ್ತಿಗೆ ಆಯ್ಕೆ

ಸವಣೂರು: ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ಕನ್ನಡ ಭಾಷಾ ಶಿಕ್ಷಕಿ ಪರಿಮಳ ಎನ್.ಎಂ. ಅವರು ‘ಸಾವಿತ್ರಿಬಾಯಿ ಫುಲೆ ‘ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಿಕ್ಷಕರ ದಿನಾಚರಣೆ ಪ್ರಯುಕ್ತ ಸೆ. 24ರಂದು ಭಾನುವಾರ ಬೆಳಗಾವಿಯ ಗೋಕಾಕ ನಾಡಿನ ಸಮಾಚಾರ ಕನ್ನಡ ದೈನಿಕ ನೀಡಲಿರುವ ಈ ಪ್ರಶಸ್ತಿಗೆ, ಪರಿಮಳ ಎನ್.ಎಂ. ಅವರ ‘ಸಾಹಿತ್ಯ ಮತ್ತು ಶಿಕ್ಷಣ’ ವಿಭಾಗದ ಸಾಧನೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿದ್ಯಾರಶ್ಮಿಯ ಶಿಕ್ಷಕಿ ಪರಿಮಳ ಎನ್.ಎಂ. ಅವರು ‘ಸಾವಿತ್ರಿಬಾಯಿ ಪುಲೆ’ ಪ್ರಶಸ್ತಿಗೆ ಆಯ್ಕೆ Read More »

ಹ್ಯಾಮರ್, ಶಾಟ್‍ಪುಟ್ : ಸಿಂಚನಾ ಬಿ. ದಕ್ಷಿಣ ಕ್ಷೇತ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಮಂಡ್ಯದ ಕೆರೆಗೋಡುನಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಹ್ಯಾಮರ್ ತ್ರೋ ಮತ್ತು ಶಾಟ್‌ಪುಟ್ ಪಂದ್ಯಾಟದಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನಾ ಬಿ. ಪ್ರಥಮ ಸ್ಥಾನ ಪಡೆದು ಅಕ್ಟೋಬರ್‌ನಲ್ಲಿ ಹೈದರಾಬಾದ್ ನಲ್ಲಿ ನಡೆಯುವ ದಕ್ಷಿಣ ಕ್ಷೇತ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅವರು ಬೆಟ್ಟಂಪಾಡಿ ಬೈಲಾಡಿ ನಿವಾಸಿ ನಿತ್ಯಾನಂದ ಮತ್ತು ನಮಿತಾ ಕೆ.ಕೆ. ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

ಹ್ಯಾಮರ್, ಶಾಟ್‍ಪುಟ್ : ಸಿಂಚನಾ ಬಿ. ದಕ್ಷಿಣ ಕ್ಷೇತ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆ Read More »

ನಾಳೆ (ಸೆ.19): ಕುದ್ಮಾರು ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

ಪುತ್ತೂರು: ಕಡಬ ತಾಲೂಕಿನ ಕುದ್ಮಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.19 ಮಂಗಳವಾರ ಕುದ್ಮಾರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಪುರೋಹಿತ ನರಸಿಂಹ ಪ್ರಸಾದ್ ಪಾಂಗಣ್ಣಾಯ ಕೂವೆತ್ತೋಡಿ ವೈದಿಕ ಕಾರ್ಯಕ್ರಮ ನೆರವೇರಿಸುವರು ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜ್‍ ದೀಪಕ್ ಜೈನ್‍ ಕುದ್ಮಾರುಗುತ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಸೆ.19): ಕುದ್ಮಾರು ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಸೇವೆಯೇ ಎನ್‍.ಎಸ್‍.ಎಸ್‍ ಘಟಕದ ಧ್ಯೇಯ | ಮಾಹಿತಿ ಕಾರ್ಯಕ್ರಮದಲ್ಲಿ ವಂ.ಡಾ.ಆಂಟನಿ ಪ್ರಕಾಶ್ ಮೊಂತೆರೋ

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನಲ್ಲಿ ಎನ್.ಎಸ್.ಎಸ್. ವಿದ್ಯಾರ್ಥಿಗಳಿಗೆ 2023-24 ರ  ಶೈಕ್ಷಣಿಕ ವರ್ಷದ ಮಾಹಿತಿ ಕಾರ್ಯಕ್ರಮ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ವಂ|ಡಾ| ಅಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ ಮಾತನಾಡಿ, ಎನ್.ಎಸ್.ಎಸ್. ಘಟಕ ಬಹಳ ಪ್ರಮುಖ ಘಟಕವಾಗಿದ್ದು, ಸೇವೆ ನೀಡುವ ಘಟಕವಾಗಿದೆ. ಸೇವೆಯೇ ಅದರ ಧ್ಯೇಯವಾಗಿರುತ್ತದೆ.  “ನನಗಾಗಿ ಅಲ್ಲ ನಿನಗಾಗಿ” ಎಂಬ ಧ್ಯೇಯ ವಾಕ್ಯದಡಿ ಕಾರ್ಯನಿರ್ವಹಿಸುವ ಎನ್.ಎಸ್.ಎಸ್.ನಂತಹ ಘಟಕಗಳಲ್ಲಿ ಸ್ವಯಂಸೇವಕರಾಗಿರುವ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದರು. ಕಾಲೇಜಿನ ಎನ್.ಎಸ್.ಎಸ್. ಘಟಕದ ಕಾರ್ಯಕ್ರಮಾಧಿಕಾರಿ ವಾಸುದೇವ

ಸೇವೆಯೇ ಎನ್‍.ಎಸ್‍.ಎಸ್‍ ಘಟಕದ ಧ್ಯೇಯ | ಮಾಹಿತಿ ಕಾರ್ಯಕ್ರಮದಲ್ಲಿ ವಂ.ಡಾ.ಆಂಟನಿ ಪ್ರಕಾಶ್ ಮೊಂತೆರೋ Read More »

ಉಪ್ಪಿನಂಗಡಿ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಉಪ್ಪಿನಂಗಡಿ: ಸಂಪಾದನೆಯ ನಿರ್ದಿಷ್ಟ ಭಾಗವನ್ನು ಸಮಾಜ ಸೇವಾ ಕಾರ್ಯಗಳಿಗೆ ವಿನಿಯೋಗಿಸಿ ಸಮಸ್ಯೆಗಳಿಗೆ ಸ್ಪಂದಿಸುವುದರಿಂದ ಮಾನಸಿಕ ನೆಮ್ಮದಿ ಸಿಗುತ್ತದೆ ಎಂದು ನಿವೃತ್ತ ಬಿಎಸ್ಎಫ್ ಕಮಾಂಡೆಂಟ್ ಡಿ.ಚಂದಪ್ಪ ಮೂಲ್ಯ ಹೇಳಿದರು. ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾ ಮಂಟಪದಲ್ಲಿ ಜರಗಿದ ಮೆಲ್ಕಾರ್ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸೇನಾ ಪಡೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಕೆಲವು ರೋಚಕ ಘಟನೆಗಳ ಬಗ್ಗೆ ಮಾತನಾಡುತ್ತಾ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ

ಉಪ್ಪಿನಂಗಡಿ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »

error: Content is protected !!
Scroll to Top