ಪುತ್ತೂರು

ನರೇಂದ್ರ ಮೋದಿ ಆಯುಷ್ಯ, ಅರೋಗ್ಯ ವೃದ್ಧಿಗಾಗಿ ಪ್ರಾರ್ಥನೆ | ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮಾಡ್ನೂರು ಶಕ್ತಿಕೇಂದ್ರದ ಬಿಜೆಪಿ ಪ್ರಮುಖರು

ಕಾವು: ಬಿಜೆಪಿ ಮಾಡ್ನೂರು ಶಕ್ತಿ ಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 73 ನೇ ಜನ್ಮ ದಿನದ ಪ್ರಯುಕ್ತ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅವರ ಆರೋಗ್ಯ , ಆಯುಷ್ಯ ಹಾಗೂ ಮುಂದಿನ ಚುನಾವಣೆಯಲ್ಲೂ ದೇಶದ ಚುಕ್ಕಾಣಿ ಹಿಡಿಯುವ ಶಕ್ತಿ ಅವರಿಗೆ ಪಂಚಲಿಂಗೇಶ್ವರ ದೇವರು ಅನುಗ್ರಹಿಸಲಿ ಎಂದು ಪ್ರಾರ್ಥನೆ ಮಾಡಲಾಯಿತು. ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ ಪ್ರಾರ್ಥನೆ ಸಲ್ಲಿಸಿದರು. ಅರ್ಚಕ ಪ್ರಕಾಶ್ ಬಳ್ಳಕ್ಕುರಾಯ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ […]

ನರೇಂದ್ರ ಮೋದಿ ಆಯುಷ್ಯ, ಅರೋಗ್ಯ ವೃದ್ಧಿಗಾಗಿ ಪ್ರಾರ್ಥನೆ | ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಮಾಡ್ನೂರು ಶಕ್ತಿಕೇಂದ್ರದ ಬಿಜೆಪಿ ಪ್ರಮುಖರು Read More »

ಬರಪೀಡಿತ ಪಟ್ಟಿಯಲ್ಲಿರದ ದಕ್ಷಿಣ ಕನ್ನಡದ ತಾಲೂಕುಗಳ್ಯಾವುವು? ಯಾಕೆ? | ಬರಪೀಡಿತ ಜಿಲ್ಲೆಯೆಂದು ಘೋಷಿಸಲು ಮುಖ್ಯಮಂತ್ರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಒತ್ತಾಯ

ಪುತ್ತೂರು: ದ.ಕ. ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಕರಾವಳಿಯಲ್ಲಿ ಸರಾಸರಿ 4ರಿಂದ 5 ಸಾವಿರ ಮಿ.ಮೀ. ಮಳೆಯಾಗುತ್ತಿದೆ. ಈ ಬಾರಿ 3.100 ಮಿ.ಮೀ. ಮಾತ್ರ ಮಳೆಯಾಗಿದೆ. ಇದು ಕೃಷಿ ಕಾಯಕಕ್ಕೆ ಕಂಠಕವಾಗಿದ್ದು, ರೈತರು ಕೃಷಿ ಕಾರ್ಯ ಮಾಡದೆ ಕಂಗಾಲಾಗಿದ್ದಾರೆ. ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ, ಕುಡಿಯುವ ನೀರು ಸಹಿತ ಕೃಷಿಗೆ ನೀರಿನ ಅಭಾವ ಉಂಟಾಗಲಿದೆ. ಈಗಾಗಲೇ ಸರಕಾರ ಕೆಲವು ತಾಲೂಕುಗಳನ್ನು ಬರಪೀಡಿತ

ಬರಪೀಡಿತ ಪಟ್ಟಿಯಲ್ಲಿರದ ದಕ್ಷಿಣ ಕನ್ನಡದ ತಾಲೂಕುಗಳ್ಯಾವುವು? ಯಾಕೆ? | ಬರಪೀಡಿತ ಜಿಲ್ಲೆಯೆಂದು ಘೋಷಿಸಲು ಮುಖ್ಯಮಂತ್ರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಒತ್ತಾಯ Read More »

ಕಸಾಪ, ಉಪ್ಪಿನಂಗಡಿ ರೋಟರಿ ಕ್ಲಬ್ ನಿಂದ ಭಾಷಣ, ದೇಶಭಕ್ತಿ ಗೀತೆ ಸ್ಪರ್ಧೆ | ಸ್ಪರ್ಧಾ ವಿಷಯ, ಯಾರೆಲ್ಲಾ ಭಾಗವಹಿಸಬಹುದು ಇಲ್ಲಿದೆ ಡೀಟೈಲ್ಸ್…

ಪುತ್ತೂರು: ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಉಪ್ಪಿನಂಗಡಿ ರೋಟರಿ ಕ್ಲಬ್ ಸಂಚಾಲಕತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಅ. 1ರಂದು ತಾಲೂಕು ಮಟ್ಟದ ಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆ ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಎರಡೂ ಸ್ಪರ್ಧೆ ಪ್ರಾಥಮಿಕ ಶಾಲಾ ವಿಭಾಗ, ಪ್ರೌಢಶಾಲಾ ವಿಭಾಗ, ಕಾಲೇಜು ವಿಭಾಗ ಮತ್ತು ಸಾರ್ವಜನಿಕ ವಿಭಾಗದಲ್ಲಿ ನಡೆಯಲಿದೆ. ವಿಜೇತರಿಗೆ ಅದೇ ದಿನ ಮಧ್ಯಾಹ್ನ 3 ಗಂಟೆಗೆ ಬಹುಮಾನ ನೀಡಿ ಗೌರವಿಸಲಾಗುವುದು. ಮೂರು ನಿಮಿಷದ ಕಾಲಾವಕಾಶ, ಸ್ಪರ್ಧೆಯ ವಿಷಯ ಗಾಂಧಿ

ಕಸಾಪ, ಉಪ್ಪಿನಂಗಡಿ ರೋಟರಿ ಕ್ಲಬ್ ನಿಂದ ಭಾಷಣ, ದೇಶಭಕ್ತಿ ಗೀತೆ ಸ್ಪರ್ಧೆ | ಸ್ಪರ್ಧಾ ವಿಷಯ, ಯಾರೆಲ್ಲಾ ಭಾಗವಹಿಸಬಹುದು ಇಲ್ಲಿದೆ ಡೀಟೈಲ್ಸ್… Read More »

ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಅಗತ್ಯ | ಎಸಿಸಿಇ(ಐ) ಪುತ್ತೂರು ಸೆಂಟರ್ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಕಲ್ಬಾವಿ ರಾವ್ | ಜ್ಞಾನದ ಭಂಡಾರವಾಗಿರುವ ಎಸಿಸಿಇ(ಐ)ಯ ಸದ್ಭಳಕೆ ಅವಶ್ಯಕ: ಪ್ರಮೋದ್ ಕುಮಾರ್ ಕೆ.ಕೆ.

ಪುತ್ತೂರು: ಆಧುನಿಕ ತಂತ್ರಜ್ಞಾನ, 3ಡಿ ಪ್ರಿಂಟಿಂಗ್ ವ್ಯವಸ್ಥೆ ಇಂದಿನ ಅವಶ್ಯಕತೆ. ಇದರ ಬದಲಿಗೆ ಇಂಟೆಲಿಜೆನ್ಸ್ ತಂತ್ರಜ್ಞಾನ ಸಿವಿಲ್ ಇಂಜಿಇಯರ್ಸ್ ಜಾಗವನ್ನು ತುಂಬಲು ಮುಂದೆ ಬಂದರೆ, ಸಿವಿಲ್ ಇಂಜಿನಿಯರ್ಸ್ ಕ್ಷೇತ್ರಕ್ಕೆ ಕುತ್ತು ಉಂಟಾಗಬಹುದು. ಇದರಿಂದ ಜಾಗೃತವಾಗಬೇಕು ಎಂದು ಅಸೋಸಿಯೇಶನ್ ಆಫ್ ಕನ್ಸಲ್ಟಿಂಘ್ ಸಿವಿಲ್ ಇಂಜಿನಿಯರ್ಸ್’ನ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಕಲ್ಬಾವಿ ರಾವ್ ಹೇಳಿದರು. ಪಡೀಲು ಟ್ರಿನಿಟಿ ಸಭಾಂಗಣದಲ್ಲಿ ಸೆ. 17ರಂದು ರಾತ್ರಿ ನಡೆದ ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಕೇಂದ್ರದ ನೂತನ ಪದಾಧಿಕಾರಿಗಳಿಗೆ ಪದಪ್ರದಾನ ಮಾಡಿ,

ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಅಗತ್ಯ | ಎಸಿಸಿಇ(ಐ) ಪುತ್ತೂರು ಸೆಂಟರ್ ಪದಾಧಿಕಾರಿಗಳಿಗೆ ಪದಪ್ರಧಾನ ಮಾಡಿ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಕಲ್ಬಾವಿ ರಾವ್ | ಜ್ಞಾನದ ಭಂಡಾರವಾಗಿರುವ ಎಸಿಸಿಇ(ಐ)ಯ ಸದ್ಭಳಕೆ ಅವಶ್ಯಕ: ಪ್ರಮೋದ್ ಕುಮಾರ್ ಕೆ.ಕೆ. Read More »

ಸಂಪೂರ್ಣ ಸುರಕ್ಷಾ ಚೆಕ್ ಹಸ್ತಾಂತರ

ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ವಿಟ್ಲ ಪೆರ್ನೆ ವಲಯದ ಕೆದಿಲ  “ಬಿ”ಒಕ್ಕೂಟದ ವತಿಯಿಂದ ಸಂಪೂರ್ಣ ಸುರಕ್ಷಾ ಚೆಕ್ ಹಸ್ತಾಂತರಿಸಲಾಯಿತು. ಶ್ರೀಜನನಿ ಒಕ್ಕೂಟದ ಸದಸ್ಯೆ ಶೋಭಾ ಪೂಜಾರಿ ಅವರ  ಪತಿ  ಶೇಖರ ಪೂಜಾರಿಯವರು  ರಸ್ತೆ ಅಪಘಾತದಲ್ಲಿ ಮರಣಹೊಂದಿದ್ದು, ಸಂಪೂರ್ಣ ಸುರಕ್ಷಾದ 25 ಸಾವಿರ ರೂ. ಚೆಕ್ಕನ್ನು ಪೆರ್ನೆ ವಲಯ ಮೇಲ್ವಿಚಾರಕಿ ಶರದಾ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ  ಸೇವಾಪ್ರತಿನಿಧಿ  ಜಯಂತಿ, ಉಪಾಧ್ಯಕ್ಷ ಸುಂದರ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ  ಘಟಕದ  ಕೆದಿಲ ಸದಸ್ಯರಾದ ಜಗದೀಶ,

ಸಂಪೂರ್ಣ ಸುರಕ್ಷಾ ಚೆಕ್ ಹಸ್ತಾಂತರ Read More »

ದೇಶದ ಬೆನ್ನೆಲುಬಾದ ರೈತರಿಗೆ ಬೆನ್ನೆಲುಬು ವಿಶ್ವಕರ್ಮರು | ಬೊಳುವಾರಿನಲ್ಲಿ ನಡೆದ ವಿಶ್ವಕರ್ಮ ಮಹೋತ್ಸವದಲ್ಲಿ ಶಿವಾನಂದ ಆಚಾರ್ಯ | ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ

ಪುತ್ತೂರು: ಜಾತಿ ವಿಂಗಡಣೆಯಲ್ಲಿ 1216 ಜಾತಿಗಳನ್ನು ಗುರುತಿಸಲಾಗಿದೆ. ಅದರಲ್ಲಿ ದೇವರ ಹೆಸರಿನಿಂದ ಗುರುತಿಸುವ ಏಕೈಕ ಜಾತಿ ವಿಶ್ವಕರ್ಮ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ, ಉಪವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯ ಹೇಳಿದರು. ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಭಾನುವಾರ ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಆಶ್ರಯದಲ್ಲಿ ವಿಶ್ವಕರ್ಮ ಪೂಜೆ ಹಿನ್ನೆಲೆಯಲ್ಲಿ ನಡೆದ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ದೇವಾನುದೇವತೆಗಳಿಗೆ ಆಯುಧಗಳನ್ನು ಸೃಷ್ಟಿಸಿಕೊಟ್ಟವ ವಿಶ್ವಕರ್ಮ. ದೇವರ

ದೇಶದ ಬೆನ್ನೆಲುಬಾದ ರೈತರಿಗೆ ಬೆನ್ನೆಲುಬು ವಿಶ್ವಕರ್ಮರು | ಬೊಳುವಾರಿನಲ್ಲಿ ನಡೆದ ವಿಶ್ವಕರ್ಮ ಮಹೋತ್ಸವದಲ್ಲಿ ಶಿವಾನಂದ ಆಚಾರ್ಯ | ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ Read More »

ವಿಶ್ವಕರ್ಮ ಮಹೋತ್ಸವ, ವೈಭವದ ವಿಶ್ವಕರ್ಮ ವಾಹನ ಮೆರವಣಿಗೆ

ಪುತ್ತೂರು: ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಚಾಲನೆ ನೀಡಿದರು. ಬಳಿಕ ಪುತ್ತೂರು ಪೇಟೆಯ ಮುಖ್ಯರಸ್ತೆಯಿಂದಾಗಿ ಸಾಗಿದ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆ ಬೊಳುವಾರು ವಿಶ್ವಕರ್ಮ ಸಭಾಭವನದವರೆಗೆ ಸಾಗಿತು. ಮೆರವಣಿಗೆಯಲ್ಲಿ ಚೆಂಡೆ, ಕುಣಿತ ಭಜನೆ, ವಿಶ್ವಕರ್ಮ ದೇವರ ಸ್ತಬ್ದಚಿತ್ರ ಗಮನ ಸೆಳೆಯಿತು. ಇದನ್ನನುಸರಿಸಿ ವಿಶ್ವಕರ್ಮ ಸಮುದಾಯದವರು ಮೆರವಣಿಗೆಯಲ್ಲಿ

ವಿಶ್ವಕರ್ಮ ಮಹೋತ್ಸವ, ವೈಭವದ ವಿಶ್ವಕರ್ಮ ವಾಹನ ಮೆರವಣಿಗೆ Read More »

ಮುಂದಿನ ಬಾರಿಯೂ ಮೋದಿಯೇ ಪ್ರಧಾನಿಯಾಗಲಿ | ಹುಟ್ಟುಹಬ್ಬ ಪ್ರಯುಕ್ತ ಮೋದಿ ಹೆಸರಲ್ಲಿ ವಿಶೇಷ ಪ್ರಾರ್ಥನೆ, ಕುಂಕುಮಾರ್ಚನೆ

ಪುತ್ತೂರು: ಪ್ರಧಾನ ಮಂತ್ರಿ ನರೇಂದ್ರ ದಾಮೋದರದಾಸ್ ಮೋದಿ ಅವರ 73ನೇ ಜನ್ಮದಿನದ ಪ್ರಯುಕ್ತ ಹಿನ್ನೆಲೆಯಲ್ಲಿ ಅವರ ಆಯುಷ್ಯ,ಆರೋಗ್ಯ ವೃದ್ಧಿಗಾಗಿ ಮತ್ತು ಮುಂದಿನ ಚುನಾವಣೆಯಲ್ಲೂ ದೇಶದ ಚುಕ್ಕಾಣಿ ಹಿಡಿಯುವ ಶಕ್ತಿ ಅವರಿಗೆ ಮಹಾದೇವಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ, ಕಬಕ ಮಹಾದೇವಿ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಸೇವೆ ಸಲ್ಲಿಸಲಾಯಿತು. ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಎಸ್.ಟಿ ಮೋರ್ಚಾ ಪ್ರ.ಕಾರ್ಯದರ್ಶಿ ಹರೀಶ್ ಬಿಜತ್ರೆ, ಪುಣಚ

ಮುಂದಿನ ಬಾರಿಯೂ ಮೋದಿಯೇ ಪ್ರಧಾನಿಯಾಗಲಿ | ಹುಟ್ಟುಹಬ್ಬ ಪ್ರಯುಕ್ತ ಮೋದಿ ಹೆಸರಲ್ಲಿ ವಿಶೇಷ ಪ್ರಾರ್ಥನೆ, ಕುಂಕುಮಾರ್ಚನೆ Read More »

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗೆ ತೆಂಕಿಲ ವಿವೇಕಾನಂದದ ವಿಶಾಲ್ ಪಿ. ಆಯ್ಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ವಲಯದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 4 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಾಲಕರ ವಿಭಾಗದಲ್ಲಿ (17ರ ವಯೋಮಾನದ) ವಿಶಾಲ್ ಪಿ. 10ನೇ ತರಗತಿ [ವಿಠಲ.ಪಿ ಮತ್ತು ರೇಷ್ಮ ದಂಪತಿ ಪುತ್ರ] ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಮಥ ಎಮ್ ಭಟ್ 10ನೇ ತರಗತಿ [ರವಿನಾರಾಯಣ.ಎಮ್ ಮತ್ತು ಶರಾವತಿ ದಂಪತಿ ಪುತ್ರ] ದ್ವಿತೀಯ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗೆ ತೆಂಕಿಲ ವಿವೇಕಾನಂದದ ವಿಶಾಲ್ ಪಿ. ಆಯ್ಕೆ Read More »

ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ, ಸನ್ಮಾನ,

ಕಲ್ಲೇಗ: ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 11ನೇ ವರ್ಷದ ಮೊಸರು ಕುಡಿಕೆ ಉತ್ಸವ ಮಾಡತ್ತಾರು ಶ್ರೀ ಪುಣ್ಯಕುಮಾರ ದೈವಸ್ಥಾನದ ವಠಾರದಲ್ಲಿ ನಡೆಯಿತು. ತಿಮ್ಮಪ್ಪ ಗೌಡ ಪೋಳ್ಯ ಉದ್ಘಾಟಿಸಿದರು. ನಂತರ ಪುಟಾಣಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿವಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜೀವಂಧರ್ ಜೈನ್ ಕಲ್ಲೇಗ, ರಘುರಾಜ ಉಬರಡ್ಕ, ಹೇಮಚಂದ್ರ ಮುರ, ಉಮೇಶ್ ಆಚಾರ್ಯ ಕಲ್ಲೇಗ, ಎಲ್. ಅನಂತ ಪ್ರಸಾದ್ ಮಾಡತ್ತಾರು, ಅಣ್ಣು

ಮಾಡತ್ತಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ, ಸನ್ಮಾನ, Read More »

error: Content is protected !!
Scroll to Top