ಪುತ್ತೂರು

ಗಾಂಧಿ ಕಟ್ಟೆ ಬಳಿಯ ಹೊಂಡ – ಗುಂಡಿ ರಸ್ತೆಯ ದುಸ್ಥಿತಿ | ತೇಪೆ ಹಾಕಿದ ಎರಡೇ ದಿನದಲ್ಲಿ ಮತ್ತೆ ಹೊಂಡ – ಗುಂಡಿ ಪ್ರತ್ಯಕ್ಷ | ರಸ್ತೆ ದುಸ್ಥಿತಿಗೆ ಯಾರನ್ನು ಹಳಿಯಲಿ ಎನ್ನುವಂತಿದೆ ಗಾಂಧಿ ತಾತನ ಮೌನ!!

ಪುತ್ತೂರು: ಅದೇಗೊ ಬಹಳ ಪ್ರಯಾಸಪಟ್ಟು ಐತಿಹಾಸಿಕ ಪ್ರಾಧಾನ್ಯತೆಯ ಗಾಂಧಿ ಕಟ್ಟೆ ಉತ್ತಮವಾಗಿ ಮೂಡಿಬಂತು. ಆದರೆ ಗಾಂಧಿಕಟ್ಟೆಯ ಬಳಿಯಲ್ಲೇ ಇರುವ ರಸ್ತೆ ಜಪ್ಪಯ್ಯ ಅಂದರೂ ಸರಿಯಾಗಲು ಕೇಳುತ್ತಿಲ್ಲ. ಇದು ಒಂದೆರಡು ದಿನದ ಕಥೆಯಲ್ಲ. ಕಳೆದ ಹಲವು ದಿನಗಳಿಂದ ವಾಹನ ಸವಾರರು, ಇದೇ ಹೊಂಡ – ಗುಂಡಿಯ ರಸ್ತೆಯಲ್ಲಿ ಸರ್ಕಸ್ ಮಾಡುತ್ತಾ ಸಾಗುತ್ತಿದ್ದಾರೆ. ಆದರೂ ಯಾರೊಬ್ಬರೂ ಈ ರಸ್ತೆ ದುಸ್ಥಿತಿಯ ಬಗ್ಗೆ ಚಕಾರ ಎತ್ತುವಂತೆ ಕಾಣಿಸುತ್ತಿಲ್ಲ. ಪುತ್ತೂರು ಪೇಟೆಯ ಸಂಚಾರ ದಟ್ಟಣೆಗೆ ಇದು ಒಂದು ಕಾರಣ. ವಾಹನಗಳು ಹೊಂಡ ಗುಂಡಿಯನ್ನು […]

ಗಾಂಧಿ ಕಟ್ಟೆ ಬಳಿಯ ಹೊಂಡ – ಗುಂಡಿ ರಸ್ತೆಯ ದುಸ್ಥಿತಿ | ತೇಪೆ ಹಾಕಿದ ಎರಡೇ ದಿನದಲ್ಲಿ ಮತ್ತೆ ಹೊಂಡ – ಗುಂಡಿ ಪ್ರತ್ಯಕ್ಷ | ರಸ್ತೆ ದುಸ್ಥಿತಿಗೆ ಯಾರನ್ನು ಹಳಿಯಲಿ ಎನ್ನುವಂತಿದೆ ಗಾಂಧಿ ತಾತನ ಮೌನ!! Read More »

ಶತಾಯುಷಿ ಗಂಗಮ್ಮ ನಿಧನ

ಪುತ್ತೂರು: ಸಂಪ್ಯ ಕೊಲ್ಯ ನಿವಾಸಿ ದಿ. ರಾಮಣ್ಣ ಆಚಾರ್ಯ ಅವರ ಪತ್ನಿ ಗಂಗಮ್ಮ (104 ವರ್ಷ) ವಯೋಸಹಜ ಅಸೌಖ್ಯದಿಂದ ಸೆ. 15ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳನ್ನು ಅಗಲಿದ್ದಾರೆ.

ಶತಾಯುಷಿ ಗಂಗಮ್ಮ ನಿಧನ Read More »

ವಾಲಿಬಾಲ್ ಪಂದ್ಯ: ಸವಣೂರು ವಿದ್ಯಾರಶ್ಮಿ ಪ.ಪೂ. ಕಾಲೇಜು ಪ್ರಥಮ

ಪುತ್ತೂರು: ಸುಬ್ರಹ್ಮಣ್ಯದಲ್ಲಿ ನಡೆದ ಕಡಬ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಹುಡುಗರ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರಶ್ಮಿ ಪ.ಪೂ. ಕಾಲೇಜಿನ ತಂಡವು ಪ್ರಥಮ ಸ್ಥಾನ ಗಳಿಸಿಕೊಂಡಿದೆ. ತಂಡವನ್ನು ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಆಳ್ವ ಅವರನ್ನು ಸಂಚಾಲಕ ಸವಣೂರು ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಅಭಿನಂದಿಸಿದ್ದಾರೆ ಎಂದು ಪ್ರಾಂಶುಪಾಲ ಸೀತಾರಾಮ ಕೇವಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾಲಿಬಾಲ್ ಪಂದ್ಯ: ಸವಣೂರು ವಿದ್ಯಾರಶ್ಮಿ ಪ.ಪೂ. ಕಾಲೇಜು ಪ್ರಥಮ Read More »

ವಿದ್ಯಾಭಾರತಿ ಕರ್ನಾಟಕ ಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕಲಬುರಗಿ ಸೇಡಂನಲ್ಲಿ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ವತಿಯಿಂದ ನಡೆದ ವಿದ್ಯಾಭಾರತಿ ಕರ್ನಾಟಕ ಪ್ರಾಂತೀಯ ಮಟ್ಟದ ಜ್ಞಾನ-ವಿಜ್ಞಾನ ಮೇಳದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜ್ಞಾನ ಮಾದರಿ ತಯಾರಿಯಲ್ಲಿ 8ನೇ ತರಗತಿಯ ಶಮನ್ ಎನ್ ಪ್ರಥಮ, ಪ್ರೀತಿ.ಪಿ.ಪ್ರಭು  ಗಣಿತ ಪ್ರಯೋಗದಲ್ಲಿ ಪ್ರಥಮ ಸ್ಥಾನ ಪಡೆದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆಯುವ ಕ್ಷೇತ್ರೀಯ ಮಟ್ಟದ ಸ್ಪರ್ಧೆಗೆ  ಆಯ್ಕೆಯಾಗಿರುತ್ತಾರೆ. ಬಾಲ ವರ್ಗದ ವೇದಗಣಿತ ರಸಪ್ರಶ್ನೆಯಲ್ಲಿ 8 ನೇ ತರಗತಿಯ ನಿರೀಕ್ಷಿತ್ ಹೆಗ್ಡೆ,

ವಿದ್ಯಾಭಾರತಿ ಕರ್ನಾಟಕ ಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ Read More »

ಸೆ. 19: ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಗಣೇಶೋತ್ಸವ

ಪುತ್ತೂರು: ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ. 19ರಂದು ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಲಿದೆ. ದೇವಸ್ಥಾನದ ಅರ್ಚಕ ವೇ.ಮೂ. ಶಿವಪ್ರಸಾದ್ ಕಡಮಣ್ಣಾಯ ಅವರ ಪೌರೋಹಿತ್ಯದಲ್ಲಿ ನಡೆಯಲಿರುವ ಉತ್ಸವದಲ್ಲಿ ಸೆ. 19ರಂದು ಬೆಳಿಗ್ಗೆ 7 ಗಂಟೆಗೆ ಶ್ರೀ ಗಣೇಶ ವಿಗ್ರಹ ಪ್ರತಿಷ್ಠೆ, 8ಕ್ಕೆ ಭಗವಧ್ವಜಾರೋಹಣ ನಡೆದು ಬಳಿಕ ಗಣಹೋಮ, ಭಜನ ಸೇವೆ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಸಾರ್ವಜನಿಕ

ಸೆ. 19: ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಗಣೇಶೋತ್ಸವ Read More »

ಶ್ರೀ ಕ್ಷೇತ್ರ ಶರವೂರಿನಲ್ಲಿ ಕದಿರು ಕಟ್ಟುವ ಕಾರ್ಯಕ್ರಮ

ಪುತ್ತೂರು: ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ ಶನಿವಾರ ನಡೆಯಿತು. ದೇವಸ್ಥಾನದ ಅರ್ಚಕರು ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯಸ್ಥಾಪನ ಸಮಿತಿ ಅಧ್ಯಕ್ಷ ದಾಮೋದರ ಗೌಡ ಕಕ್ವೆ ಹಾಗೂ ಸಮಿತಿಯ ಸದಸ್ಯರುಗಳು, ಅರ್ಚಕರು, ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಶರವೂರಿನಲ್ಲಿ ಕದಿರು ಕಟ್ಟುವ ಕಾರ್ಯಕ್ರಮ Read More »

ಪುಷ್ಟಿರಹಿತ ಆಹಾರ ಸೇವನೆಯಿಂದ ದೈಹಿಕ ದೃಢತೆ ಕ್ಷೀಣ | ಆಪ್ತಸಮಾಲೋಚನಾ ಕೇಂದ್ರದ ಚಟುವಟಿಕೆಗಳಿಗೆ ಚಾಲನೆ ನೀಡಿ ಡಾ.ಪ್ರದೀಪ್ ಕುಮಾರ್

ಪುತ್ತೂರು: ನಾವು ತಿನ್ನುವ ಆಹಾರ ನಮ್ಮ ಆರೋಗ್ಯದ ಮೇಲೆ ನಿರ್ಣಾಯಕ ಪರಿಣಾಮ ಬೀರುತಿದ್ದು, ಪ್ರಸ್ತುತ ಅನೇಕ ಕಲಬೆರಕೆ ವಸ್ತುಗಳೂ ಮಾರುಕಟ್ಟೆಯನ್ನು ಆವರಿಸಿಕೊಂಡಿರುವುದು ಇದಕ್ಕೆ ಕಾರಣ. ಈ ಬಗ್ಗೆ ಪ್ರತಿಯೊಬ್ಬರೂ ಜಾಗರೂಕತೆ ವಹಿಸುವುದು ಅತ್ಯಂತ ಅಗತ್ಯ ಎಂದು ಡಾ.ಪ್ರದೀಪ್ ಕುಮಾರ್‍ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ್ರ ವಿಭಾಗ ಮುನ್ನಡೆಸುತ್ತಿರುವ ಚಿತ್ತ ಚಿಕಿತ್ಸಾ ಎಂಬ ಆಪ್ತ ಸಮಾಲೋಚನಾ ಕೇಂದ್ರದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಆಧುನಿಕ ಜೀವನಶೈಲಿಯ ಮುಂದಿನ ಪರಿಣಾಮಗಳು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ವಾಟ್ಸಪ್

ಪುಷ್ಟಿರಹಿತ ಆಹಾರ ಸೇವನೆಯಿಂದ ದೈಹಿಕ ದೃಢತೆ ಕ್ಷೀಣ | ಆಪ್ತಸಮಾಲೋಚನಾ ಕೇಂದ್ರದ ಚಟುವಟಿಕೆಗಳಿಗೆ ಚಾಲನೆ ನೀಡಿ ಡಾ.ಪ್ರದೀಪ್ ಕುಮಾರ್ Read More »

ಪುತ್ತಿಲ ಪರಿವಾರದಿಂದ ಸಹಾಯಧನ ವಿತರಣೆ

ಪುತ್ತೂರು: ಪುತ್ತಿಲ ಪರಿವಾರದ ಸೇವಾ ಸಮರ್ಪಣೆಯ ಭಾಗವಾಗಿ ಅನಾರೋಗ್ಯದಿಂದ ಬಳಲುತ್ತಿರುವ ಪುತ್ತಿಲ ಪರಿವಾರದ ಸದಸ್ಯ  ಮುಂಡೂರು ಗ್ರಾಮದ ಪುತ್ತಿಲ ನಿವಾಸಿ ಸತೀಶ ಅವರಿಗೆ ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭ  ಅರುಣ್ ಕುಮಾರ್ ಪುತ್ತಿಲ, ಸುಧೀರ್ ಶೆಟ್ಟಿ ನೇಸರ, ಅನಿಲ್ ಕುಮಾರ್ ಕನ್ನಾರ್ನೂಜಿ, ಬಾಲಚಂದ್ರ ಸೊರಕೆ, ಅಶೋಕ್ ನಾಯ್ಕ್ ಪುತ್ತಿಲ, ಪ್ರಸಾದ್ ಪುತ್ತಿಲ, ಧನಂಜಯ ಕಲ್ಲಮ, ಜನಾರ್ದನ ಎ., ಮೋನಪ್ಪ ಗೌಡ, ಹರೀಶ್ ನಾಯ್ಕ್ ಪುತ್ತಿಲ, ಪುರಂದರ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಪುತ್ತಿಲ ಪರಿವಾರದಿಂದ ಸಹಾಯಧನ ವಿತರಣೆ Read More »

ವಿಜ್ಞಾನದ ಜತೆ ಭಾಷೆ ಬೆಳೆಯಬೇಕು | ಹಿಂದಿ ದಿನಾಚರಣೆಯಲ್ಲಿ ಪ್ರೊ. ಶ್ರೀಪತಿ ಕಲ್ಲೂರಾಯ

ಪುತ್ತೂರು: ಭಾವನೆಗಳನ್ನು ಅಭಿವ್ಯಕ್ತಗೊಳಿಸಲು ಭಾಷೆ ಮುಖ್ಯ. ಭಾಷೆ ಎಂಬುವುದು ಒಂದು ವಿಜ್ಞಾನ. ಅದರಲ್ಲಿರುವ ಅನೇಕ ವಿಸ್ಮಯಗಳನ್ನು ನಾವು ಕಲಿಯಬೇಕು. ಭಾರತ ಅನೇಕ ಭಾಷೆಗಳಿಂದ ಕೂಡಿರುವುದು ಮಾತ್ರವಲ್ಲದೆ ಅದರ ಹಿನ್ನಲೆಯಿಂದ ಹೆಚ್ಚು ಪ್ರಖ್ಯಾತವಾಗಿದೆ. ವಿಜ್ಞಾನದ ಜೊತೆಗೆ ಭಾಷೆ ಕೂಡಾ ಬೆಳೆಯಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ)ಹಿಂದಿ ಸಂಘ ಹಾಗೂ ಐಕ್ಯೂಏಸಿ ಜಂಟಿ ಸಹಯೋಗದಲ್ಲಿ   ಆಯೋಜಿಸಿದ  ಹಿಂದಿ ದಿನಾಚರಣೆ ಕಾರ್ಯಕ್ರಮದ

ವಿಜ್ಞಾನದ ಜತೆ ಭಾಷೆ ಬೆಳೆಯಬೇಕು | ಹಿಂದಿ ದಿನಾಚರಣೆಯಲ್ಲಿ ಪ್ರೊ. ಶ್ರೀಪತಿ ಕಲ್ಲೂರಾಯ Read More »

ದೂರದರ್ಶಿತ್ವವುಳ್ಳ ಯೋಚನೆಗಳು, ಯೋಜನೆಗಳು ಸರ್ ಎಂ.ವಿ.ಯವರ ಬುದ್ಧಿವಂತಿಕೆಗೆ ಸಾಕ್ಷಿಯಾಗಿವೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ಪೌರಾಯುಕ್ತ ಮಧು ಎಸ್‍.ಮನೋಹರ್

ಪುತ್ತೂರು: ನಮ್ಮ ನಾಡಿನ ಹೆಮ್ಮೆಯ ಪುತ್ರ, ದೇಶ ಕಂಡ ಅಪ್ರತಿಮ ವಿಜ್ಞಾನಿ ಸರ್ ಎಂ.ವಿಶ್ವೇಶ್ವರಯ್ಯನವರು ಕಲಿಸಿಕೊಟ್ಟ ಶ್ರಮ ಮತ್ತು ಪ್ರಾಮಾಣಿಕತೆಯ ಪಾಠವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ತನ್ಮೂಲಕ ದೇಶದ ಅಭಿವೃದ್ಧಿಯಲ್ಲಿ ತಮ್ಮ ಕೊಡುಗೆ ನೀಡಬೇಕು ಎಂದು ಪುತ್ತೂರು ನಗರಸಭೆಯ ಆಯುಕ್ತ ಮಧು.ಎಸ್.ಮನೋಹರ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್  ವಿಭಾಗ, ಐಎಸ್‌ಟಿಇ ಘಟಕ ಮತ್ತು ಕಾಲೇಜಿನ ಇನ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ನ ಸಂಯುಕ್ತ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ

ದೂರದರ್ಶಿತ್ವವುಳ್ಳ ಯೋಚನೆಗಳು, ಯೋಜನೆಗಳು ಸರ್ ಎಂ.ವಿ.ಯವರ ಬುದ್ಧಿವಂತಿಕೆಗೆ ಸಾಕ್ಷಿಯಾಗಿವೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ಪೌರಾಯುಕ್ತ ಮಧು ಎಸ್‍.ಮನೋಹರ್ Read More »

error: Content is protected !!
Scroll to Top