ಪುತ್ತೂರು

ತೀಯಾ ಸಮಾಜ ಸೇವಾ ಸಮಿತಿಯಿಂದ ರಕ್ತದಾನ, ನೇತ್ರದಾನ ಶಿಬಿರ

ಪುತ್ತೂರು: ತೀಯಾ ಸಮಾಜ ಸೇವಾ ಸಮಿತಿ ಪುತ್ತೂರು ಹಾಗೂ ತೀಯಾ ಸಮಾಜ ಸೇವಾ ಸಮಿತಿ ಎಣ್ಮೂರು ನಿಂತಿಕಲ್ಲು ಇದರ ಆಶ್ರಯದಲ್ಲಿ ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್‌ನಲ್ಲಿ ರಕ್ತದಾನ ಶಿಬಿರ ಹಾಗೂ ನೇತ್ರದಾನ ಶಿಬಿರ ನಡೆಯಿತು. ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್‌ನ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ಅವರು ಉದ್ಘಾಟಿಸಿ ಮಾತನಾಡಿ, ರಕ್ತದಾನ ಪುಣ್ಯ ಕಾರ್ಯ. 5 ತಾಲೂಕಿಗೆ ಪುತ್ತೂರು ಬ್ಲಡ್ ಸೆಂಟರ್‌ನಿಂದ ರಕ್ತ ಪೂರೈಕೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ವಯಂಪ್ರೇರಿತವಾಗಿ ಎಲ್ಲರೂ ರಕ್ತದಾನ ಮಾಡಬೇಕು. ವರ್ಷದ 365 […]

ತೀಯಾ ಸಮಾಜ ಸೇವಾ ಸಮಿತಿಯಿಂದ ರಕ್ತದಾನ, ನೇತ್ರದಾನ ಶಿಬಿರ Read More »

ಸೌಜನ್ಯ ಕೊಲೆ ಪ್ರಕರಣದ ಸೂಕ್ತ ತನಿಖೆಗೆ ಸಿಎಂಗೆ ಮನವಿ | ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ನೇತೃತ್ವದ ಸಭೆ ತೀರ್ಮಾನ | ಪುತ್ತೂರು, ಕಡಬ, ಸುಳ್ಯ, ಬೆಳ್ತಂಗಡಿ ಭಾಗದ ಪ್ರಮುಖರು ಸಭೆಯಲ್ಲಿ ಭಾಗಿ

ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಸೂಕ್ತ ತನಿಖೆ ನಡೆಸಲು ಆಗ್ರಹಿಸಲಾಗುವುದು ಎಂದು ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ಭಾಗದ ಪ್ರಮುಖರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಸಂದರ್ಭ ಸಭೆ ನಡೆಸಿದ ಮಹಾಸ್ವಾಮೀಜಿ ಅವರು, ಈ ತೀರ್ಮಾನ ಪ್ರಕಟಿಸಿದರು. ಯಾವುದೇ ಕಾರಣಕ್ಕೂ ಪ್ರಕರಣವನ್ನು ಕಡೆಗಣಿಸದಂತೆ ಎಚ್ಚರ ವಹಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ಸರಿಯಾದ ತನಿಖೆ ನಡೆಸಬೇಕು.

ಸೌಜನ್ಯ ಕೊಲೆ ಪ್ರಕರಣದ ಸೂಕ್ತ ತನಿಖೆಗೆ ಸಿಎಂಗೆ ಮನವಿ | ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ನೇತೃತ್ವದ ಸಭೆ ತೀರ್ಮಾನ | ಪುತ್ತೂರು, ಕಡಬ, ಸುಳ್ಯ, ಬೆಳ್ತಂಗಡಿ ಭಾಗದ ಪ್ರಮುಖರು ಸಭೆಯಲ್ಲಿ ಭಾಗಿ Read More »

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ನರಿಮೊಗರು ಸರಸ್ವತಿ ವಿದ್ಯಾಮಂದಿರಕ್ಕೆ ಪ್ರಶಸ್ತಿ

ಪುತ್ತೂರು: ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ 10ನೇ ತರಗತಿಯ ವಿದ್ಯಾರ್ಥಿಗಳಾದ ಮೋಕ್ಷಿತ್ ದ್ವಿತೀಯ ಸ್ಥಾನ ಮತ್ತು ವಿಸ್ಮಯ್ ತೃತೀಯ ಸ್ಥಾನ ಪಡೆದಿದ್ದಾರೆ.ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ದೇರಳಕಟ್ಟೆಯಲ್ಲಿ ಸ್ಪರ್ಧೆ ನಡೆದಿತ್ತು.ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ನರಿಮೊಗರು ಸರಸ್ವತಿ ವಿದ್ಯಾಮಂದಿರಕ್ಕೆ ಪ್ರಶಸ್ತಿ Read More »

ನಾಳೆ (ಸೆ.11) : ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ಸೆ. 11 ಸೋಮವಾರ ನಡೆಯಲಿದೆ.ಬೆಳಿಗ್ಗೆ 10 ಗಂಟೆಗೆ ಸಂಪ್ಯ ಸಹಕಾರಿ ಸಂಘದ ಪ್ರಧಾನ ಕಚೇರಿ ಸಭಾಭವನದಲ್ಲಿ ಮಹಾಸಭೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.

ನಾಳೆ (ಸೆ.11) : ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ Read More »

ಪುತ್ತೂರು ನಗರ ಠಾಣಾ ಪಿಎಸ್‍ಐ ಆಗಿ ಆಂಜನೇಯ ರೆಡ್ಡಿ

ಪುತ್ತೂರು: ಪುತ್ತೂರು ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿ ನೇಮಕಗೊಂಡಿದ್ದಾರೆ. ಈ ಹಿಂದೆ ಪಿಎಸ್‍ಐ ಆಗಿ ಕರ್ತವ್ಯದಲ್ಲಿದ್ದ ಶ್ರೀಕಾಂತ್ ರಾಥೋಡ್ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಆಂಜನೇಯ ರೆಡ್ಡಿಯವರನ್ನು ನೇಮಕ ಮಾಡಲಾಗಿದೆ. ಆಂಜನೇಯ ರೆಡ್ಡಿ ಈ ಮೊದಲು ಕಡಬ, ಬೆಳ್ಳಾರೆ ಸಹಿತ ಜಿಲ್ಲೆಯ ಕೆಲವು ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಾಮಾಣಿಕ ಸೇವೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಪುತ್ತೂರು ನಗರ ಠಾಣಾ ಪಿಎಸ್‍ಐ ಆಗಿ ಆಂಜನೇಯ ರೆಡ್ಡಿ Read More »

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಪುಣಚ ಶ್ರೀದೇವಿ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಸಂಯೋಜಿತ ಶಾಲೆಗಳ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡು,  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ (17ರ ವಯೋಮಾನದ) – ಪ್ರಮಥ ಎಂ. ಭಟ್ (10ನೇ ತರಗತಿ) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮಹಮ್ಮದ್ ರಿಹಾನ್ (10ನೇ ತರಗತಿ) ತೃತೀಯ ಸ್ಥಾನ ಪಡೆದಿರುತ್ತಾರೆ. ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ (14ರ ವಯೋಮಾನದ) ವರ್ಷಿ ರೈ (7ನೇ ತರಗತಿ)

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಕಾಮಗಾರಿಯ ಅನುದಾನಕ್ಕೆ ನಿಮ್ಮದೇ ತೆರಿಗೆ ಹಣ | ಶಾಂತಿಗೋಡು ಸ.ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ನಿಮ್ಮ ಊರಿನ ಕಾಮಗಾರಿಗೆ ಸರಕಾರದಿಂದ ಅನುದಾನ ಬಂದಿದ್ದರೆ ಅದು ನಿಮ್ಮದೇ ಹಣ. ನೀವು ಕಟ್ಟಿದ ಟ್ಯಾಕ್ಸ್ ಸೇರಿದಂತೆ ವಿವಿಧ ಮೂಲಗಳಿಂದ ನಿಮ್ಮಿಂದಲೇ ಸಂಗ್ರಹಿಸಿದ ಹಣವನ್ನು ಯಾವುದೇ ಕಾಮಗಾರಿಗೆ ಬಳಕೆ ಮಾಡುತ್ತಾರೆ. ಯಾವ ಜನಪ್ರತಿನಿಧಿಯೂ ಸ್ವಂತ ಹಣವನ್ನು ಕಾಮಗಾರಿಗೆ ನೀಡುತ್ತಿಲ್ಲ, ನೀಡುವುದೂ ಇಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು. ಶಾಂತಿಗೋಡು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಿಮ್ಮ ಊರಿನ ಬೇಡಿಕೆ, ಸಮಸ್ಯೆಗಳು ಏನೆಂಬುದು ನಿಮಗೆ ಗೊತ್ತಿರುತ್ತದೆ. ಸಾರ್ವಜನಿಕರು ಬೇಡಿಕೆ ಮತ್ತು

ಕಾಮಗಾರಿಯ ಅನುದಾನಕ್ಕೆ ನಿಮ್ಮದೇ ತೆರಿಗೆ ಹಣ | ಶಾಂತಿಗೋಡು ಸ.ಹಿ.ಪ್ರಾ. ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟಿಸಿ ಶಾಸಕ ಅಶೋಕ್ ಕುಮಾರ್ ರೈ Read More »

ಪುತ್ತೂರು ಪೇಟೆಯಲ್ಲಿ ಅಟ್ಟಿಮಡಕೆಯ ವೈಭವ

ಪುತ್ತೂರು : ವಿಶ್ವ ಹಿಂದೂ ಪರಿಷತ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ವೈಭವದ ಶೋಭಾಯಾತ್ರೆಗೆ ಶನಿವಾರ ಸಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಲಾಯಿತು. ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ವೈದ್ಯ ಡಾ.ಎಂ.ಕೆ.ಪ್ರಸಾದ್ ಚಾಲನೆ ನೀಡಿದರು. ನಗರದ ಪ್ರಮುಖ ಕಡೆಗಳಲ್ಲಿ ಅಟ್ಟಿ ಮಡಿಕೆಗಳನ್ನು ಅಳವಡಿಸಲಾಗಿದ್ದು, ವೀರ ಹಿಂದೂ ಯುವಕರಿಂದ ಅಟ್ಟಿ ಮಡಿಕೆ ಒಡೆಯುವ

ಪುತ್ತೂರು ಪೇಟೆಯಲ್ಲಿ ಅಟ್ಟಿಮಡಕೆಯ ವೈಭವ Read More »

ನೆಲ್ಲಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾಜ್ಯೋತಿ ಎಲ್‍.ಕೆ.ಜಿ., ಯುಕೆಜಿ ತರಗತಿ ಉದ್ಘಾಟನೆ

ಪುತ್ತೂರು : ನೆಲ್ಲಿಕಟ್ಟೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ರೋಟರಿ‌ಕ್ಲಬ್ ಪುತ್ತೂರು ಸಿಟಿ ,ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ವಿದ್ಯಾ ಜ್ಯೋತಿ ಎಲ್ ಕೆ ಜಿ ಮತ್ತು ಯುಕೆಜಿ ಹಾಗೂ ಅಂಗನವಾಡಿ ಪುನಶ್ಚೇತನ ರೋಟರಿ ಜಿಲ್ಲಾ ಯೋಜನೆಯನ್ನು ಶನಿವಾರ ಉದ್ಘಾಟಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿ ಮಾತನಾಡಿ, ಸರಕಾರ ಮಾಡಬೇಕಾದ ಕೆಲಸವನ್ನು ರೋಟರಿ ಕ್ಲಬ್ ಮಾಡುತ್ತಿರುವುದು ಶ್ಲಾಘನೀಯ. ಮುಂದಿನ ಒಂದು ವರ್ಷದೊಳಗೆ ಎಲ್ಲಾ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಎಲ್ ಕೆ

ನೆಲ್ಲಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾಜ್ಯೋತಿ ಎಲ್‍.ಕೆ.ಜಿ., ಯುಕೆಜಿ ತರಗತಿ ಉದ್ಘಾಟನೆ Read More »

ಸಮರ್ಪಣಾ ಚಾರಿಟೇಬಲ್ ಟ್ರಸ್ಟ್’ನ “ನ್ಯೂಸ್ ಪುತ್ತೂರು” ನೂತನ ಕಚೇರಿಗೆ ವಿದ್ಯುಕ್ತ ಚಾಲನೆ

ಪುತ್ತೂರಿನ ಹೆಸರನ್ನು ನ್ಯೂಸ್ ಪುತ್ತೂರು ಹತ್ತೂರಿಗೆ ಪಸರಿಸಲಿ: ಶಾಸಕ ಅಶೋಕ್ ರೈ ಪುತ್ತೂರು ಬೆಳೆಯುತ್ತಿರುವ ನಗರ. ಒಂದಷ್ಟು ಉದ್ಯಮಗಳು ಬರುತ್ತಿವೆ. ಜನಸಂಖ್ಯೆ ಹೆಚ್ಚಾಗ್ತಾ ಇದೆ. ಪುತ್ತೂರಿಗೆ ಎಲ್ಲಾ ಉದ್ಯಮಗಳು ಬರಬೇಕು ಎನ್ನುವ ಆಶೆ ನಮ್ಮದು. ಇದರೊಂದಿಗೆ ಉತ್ತಮ ವಿಚಾರ ಎಂಬಂತೆ ನ್ಯೂಸ್ ಪುತ್ತೂರು ಎನ್ನುವ ಮಾಧ್ಯಮ ಪುತ್ತೂರಿಗೆ ಪರಿಚಯಗೊಂಡಿದೆ. ಎಲ್ಲಿ ಹೋದರೂ ಭ್ರಷ್ಟಾಚಾರ ಎದ್ದು ಕಾಣುವ ಇಂದಿನ ದಿನದಲ್ಲಿ, ಬಡವರಿಗೆ ನ್ಯಾಯ ಸಿಗುವ ಕೆಲಸ ಆಗಬೇಕು. ಮಾಧ್ಯಮದ ಮೂಲಕ ಬಡವರಿಗೆ ಆಗುತ್ತಿರುವ ಅನ್ಯಾಯವನ್ನು ಎತ್ತಿ ತೋರಿಸುವ ಅಗತ್ಯವಿದೆ.

ಸಮರ್ಪಣಾ ಚಾರಿಟೇಬಲ್ ಟ್ರಸ್ಟ್’ನ “ನ್ಯೂಸ್ ಪುತ್ತೂರು” ನೂತನ ಕಚೇರಿಗೆ ವಿದ್ಯುಕ್ತ ಚಾಲನೆ Read More »

error: Content is protected !!
Scroll to Top