ಪುತ್ತೂರು

ಪ್ಲಾಸ್ಟರ್ ಓಫ್ ಪ್ಯಾರಿಸ್ , ಬಣ್ಣ ಲೇಪಿತ ಗೌರಿ -ಗಣೇಶ ವಿಗ್ರಹಗಳನ್ನು ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ನಿಷೇಧ | ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಧಿಸೂಚನೆ

ಪುತ್ತೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ( ನಿವಾರಣೆ ಮತ್ತು ನಿಯಂತ್ರಣ ) ಕಾಯಿದೆ 1974ರ ಕಲಂ 33 ಅ ರಂತೆ ಪ್ರದತ್ತವಾದ ಅಧಿಕಾರ ಚಲಾಯಿಸಿ, ಪ್ಲಾಸ್ಟರ್ ಓಫ್ ಪ್ಯಾರಿಸ್ ನಿಂದ ತಯಾರಿಸಿರುವ ಹಾಗೂ ಬಣ್ಣ ಲೇಪಿತ ಗೌರಿ -ಗಣೇಶ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದನ್ನು ನಿಷೇಧಿಸಿ ಅಧಿಸೂಚನೆಯನ್ನು ಹೋರಾಡಿಸಿರುತ್ತದೆ. ಅದರಂತೆ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಮನೆಗಳಲ್ಲಿ, ಸಂಘ – ಸಂಸ್ಥೆಗಳ ವತಿಯಿಂದ […]

ಪ್ಲಾಸ್ಟರ್ ಓಫ್ ಪ್ಯಾರಿಸ್ , ಬಣ್ಣ ಲೇಪಿತ ಗೌರಿ -ಗಣೇಶ ವಿಗ್ರಹಗಳನ್ನು ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ನಿಷೇಧ | ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಧಿಸೂಚನೆ Read More »

ಕ.ಸಾ.ಪ- ಪುತ್ತೂರು ವೆಬ್ಸೈಟ್ ಅನಾವರಣ : ಕನ್ನಡ ಸಂಸ್ಕೃತಿ ಇಲಾಖೆ ಸಚಿವರಿಂದ  ಲೋಕಾರ್ಪಣೆ

ಮೈಸೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೂತನ ವೆಬ್ಸೈಟ್  www.kasapaputturu.in ಇದರ ಲೋಕಾರ್ಪಣೆಯನ್ನು  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಮೈಸೂರಿನ ಜಲದರ್ಶಿನಿ ಅತಿಥಿಗೃಹ ದಲ್ಲಿ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಾಹಿತ್ಯಕ್ಕೆ  ಪುತ್ತೂರಿನ ಸಾಹಿತಿಗಳ ಕೊಡುಗೆಗಳ ವಿವರವನ್ನು  ಪುತ್ತೂರು ಉಮೇಶ್ ನಾಯಕ್ ಅವರು ಮಾನ್ಯ  ಸಚಿವರಿಗೆ ತಿಳಿಸಿದರು. ಸಾಹಿತ್ಯ ಪರಿಷತ್ತಿನ ವೆಬ್ಸೈಟಿನ ವಿವರವನ್ನು  ಡಾ. ಹರ್ಷ ಕುಮಾರ್ ರೈ ಸಚಿವರಿಗೆ ವಿವರಿಸಿದರು.

ಕ.ಸಾ.ಪ- ಪುತ್ತೂರು ವೆಬ್ಸೈಟ್ ಅನಾವರಣ : ಕನ್ನಡ ಸಂಸ್ಕೃತಿ ಇಲಾಖೆ ಸಚಿವರಿಂದ  ಲೋಕಾರ್ಪಣೆ Read More »

ಗ್ರಾಪಂ ಮಾಜಿ ಸದಸ್ಯನ ಮನೆ ದರೋಡೆ | ಚಿನ್ನ, ನಗದು ದರೋಡೆ

ಪುತ್ತೂರು: ಮಾಜಿ ಸದಸ್ಯರೊಬ್ಬರ ಮನೆಗೆ ರಾತ್ರಿ ನುಗ್ಗಿ ದರೋಡೆ ಮಾಡಿದ ಘಟನೆ ಬಡಗನ್ನೂರಿನಲ್ಲಿ ನಡೆದಿದೆ. ಬಡಗನ್ನೂರು ಗ್ರಾಪಂ ಮಾಜಿ ಸದಸ್ಯ ಗುರುಪ್ರಸಾದ್ ಅವರ ಮನೆಯಲ್ಲಿ ದರೋಡೆ ನಡೆದಿದೆ. ಗುರುಪ್ರಸಾದ್, ಅವರ ತಾಯಿ, ಮನೆ ಕೆಲಸದವರು ಇರುವ ಸಂದರ್ಭ ರಾತ್ರಿ ಸುಮಾರು 2 ಗಂಟೆ ವೇಳೆಗೆ ಸುಮಾರು 10 ಮಂದಿ ದರೋಡೆಕೋರರು ಇದ್ದರು ಎನ್ನಲಾಗಿದೆ. 25 ಪವನ್ ಚಿನ್ನ, 30 ಸಾವಿರ ನಗದು ಕಳವಾಗಿದೆ ಎನ್ನಲಾಗಿದೆ. ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗ್ರಾಪಂ ಮಾಜಿ ಸದಸ್ಯನ ಮನೆ ದರೋಡೆ | ಚಿನ್ನ, ನಗದು ದರೋಡೆ Read More »

ಸುಳ್ಯ ಎನ್ ಎಂ ಸಿಯಲ್ಲಿ ಎನ್ ಸಿ ಸಿ  ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಸಾಧಕ ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಮೈಸೂರು ಮುಕ್ತ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಮಮತಾ ಕೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್  ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕ ಯುಗದಲ್ಲಿ ಶಿಕ್ಷಕರು ದಿನದಿಂದ ದಿನಕ್ಕೆ ಹೊಸತನಕ್ಕೆ ತೆರೆದುಕೊಳ್ಳಬೇಕು. ಶಿಕ್ಷಕರು

ಸುಳ್ಯ ಎನ್ ಎಂ ಸಿಯಲ್ಲಿ ಎನ್ ಸಿ ಸಿ  ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ Read More »

ಹಿರಿಯ ರಂಗಕರ್ಮಿ ಮಂಜು ವಿಟ್ಲ ನಿಧನ

ವಿಟ್ಲ : ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿಯ ಮನೆಯಲ್ಲಿ ಸೆ.6 ರಂದು ನಿಧನರಾಗಿದ್ದಾರೆ. ಮಂಜು ವಿಟ್ಲರವರು ಧಾರ್ಮಿಕ,ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಿರಿಯ ತರಬೇತುದಾರರಾಗಿ, ಚಿತ್ರಕಲಾವಿದರಾಗಿ, ಕಾರ್ಯಕ್ರಮ ನಿರೂಪಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಅಪಾರ ಜನಮನ್ನಣೆ ಗಳಿಸಿದ್ದರು. ಮೃತರು ಪುತ್ರಿ, ಸಹೋದರ, ಸಹೋದರಿಯರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಹಿರಿಯ ರಂಗಕರ್ಮಿ ಮಂಜು ವಿಟ್ಲ ನಿಧನ Read More »

ಸೆ.10 : ವೀರಮಂಗಲ  ಶ್ರೀಕೃಷ್ಣ ಕಲಾಕೇಂದ್ರದಿಂದ “ಶ್ರೀಕೃಷ್ಣ ಲೀಲೋತ್ಸವ”

ಪುತ್ತೂರು : ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀಕೃಷ್ಣ ಕಲಾ ಕೇಂದ್ರದ ವತಿಯಿಂದ 3ನೇ ವರ್ಷದ ಶ್ರೀಕೃಷ್ಣ ಲೀಲೋತ್ಸವ ಸೆ.10 ಭಾನುವಾರ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ. ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ವಿಷ್ಣು ಸಹಸ್ರನಾಮಾರ್ಚನೆ, 9.30 ಕ್ಕೆ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ, 10 ಕ್ಕೆ ನಡೆಯುವ ಮನರಂಜನಾ ಕಾರ್ಯಕ್ರಮವನ್ನು ವೀರಮಂಗಲ ಸ.ಹಿ.ಪ್ರಾ.ಶಾಲಾ ಸಹಶಿಕ್ಷಕಿ ಹರಿಣಾಕ್ಷಿ ಎಂ. ಉದ್ಘಾಟಿಸುವರು. 3.30 ಕ್ಕೆ ಗೋಪೂಜೆ, ಮುದ್ದುಕೃಷ್ಣ

ಸೆ.10 : ವೀರಮಂಗಲ  ಶ್ರೀಕೃಷ್ಣ ಕಲಾಕೇಂದ್ರದಿಂದ “ಶ್ರೀಕೃಷ್ಣ ಲೀಲೋತ್ಸವ” Read More »

ಕಬಡ್ಡಿ : ಫಿಲೋಮಿನಾ ಪ್ರೌಢಶಾಲೆಯ ದೀಕ್ಷಾ ಎಸ್‍., ವಿಜೇತಾ ಜಿಲ್ಲಾಮಟ್ಟಕ್ಕೆ ಆಯ್ಕೆ

ಪುತ್ತೂರು : ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ್ರೌಢಶಾಲೆಯ ಕು. ದೀಕ್ಷಾ ಎಸ್ ಹಾಗೂ ಕು. ವಿಜೇತ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ನರೇಶ್ ಲೋಬೋ ತರಬೇತಿ ನೀಡಿರುತ್ತಾರೆ. ಅವರರನ್ನ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಕಬಡ್ಡಿ : ಫಿಲೋಮಿನಾ ಪ್ರೌಢಶಾಲೆಯ ದೀಕ್ಷಾ ಎಸ್‍., ವಿಜೇತಾ ಜಿಲ್ಲಾಮಟ್ಟಕ್ಕೆ ಆಯ್ಕೆ Read More »

ಶ್ರೀಕೃಷ್ಣನ ಪ್ರತಿಯೊಂದು ನಡೆಗಳಲ್ಲೂ ಸಂದೇಶಗಳಿವೆ : ತೇಜಶಂಕರ ಸೋಮಯಾಜಿ | ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಪುತ್ತೂರು : ಭಗವಾನ್ ಶ್ರೀಕೃಷ್ಣನನ್ನು ನಾನಾ ನೆಲೆಯಿಂದ ಗುರುತಿಸುತ್ತಾ ಸಾಗುವುದಕ್ಕೆ ಸಾಧ್ಯವಿದೆ. ದುಷ್ಟ ಶಿಕ್ಷಣ, ಶಿಷ್ಟ ರಕ್ಷಣದಿಂದ ತೊಡಗಿ ರಾಜತಾಂತ್ರಿಕ ವಿಚಾರಗಳವರೆಗೆ ಅಷ್ಟೂ ವಿಷಯಗಳಲ್ಲಿ ಶ್ರೀಕೃಷ್ಣ ನಮಗೆ ಮಾದರಿಯಾಗಿ ಕಾಣಿಸುತ್ತಾನೆ. ಆತನ ಒಂದೊಂದು ನಡೆಯ ಹಿಂದೆಯೂ ಒಂದೊಂದು ಸಂದೇಶಗಳನ್ನು ಅರ್ಥ ಮಾಡಿಕೊಳ್ಳಬಹುದು. ಆದರೆ ಆತ ಕೃತಿಯ ಮೂಲಕ ತೋರಿಸಿದ್ದನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಅಸಾಧ್ಯರಾದವರು ಆತನನ್ನು ಹೀಗಳೆಯುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಅನಾವರಣಗೊಳಿಸುತ್ತಿರುವುದನ್ನು ಕಾಣಬಹುದು ಎಂದು ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು.

ಶ್ರೀಕೃಷ್ಣನ ಪ್ರತಿಯೊಂದು ನಡೆಗಳಲ್ಲೂ ಸಂದೇಶಗಳಿವೆ : ತೇಜಶಂಕರ ಸೋಮಯಾಜಿ | ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿ ಐವತ್ತೊಕ್ಲು ಬಳಿ ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ  ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ನಡೆದಿದ. ದ್ವಿಚಕ್ರ ವಾಹನ ಸವಾರ ಆಸ್ತಿಕ್ ಗಾಯಗೊಂಡವರು. ಐವತ್ತೊಕ್ಲು ಗ್ರಾಮದ ನೆಲ್ಲಿಕಟ್ಟೆ ತಿರುವು ರಸ್ತೆ ಬಳಿ ಪಂಜ ಕಡೆಯಿಂದ ಬರುತ್ತಿದ್ದ ಗೂಡ್ಸ್ ವಾಹನ ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಆಸ್ತಿಕ್ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಗೊಂಡ ಆಸ್ತಿಕ್ ರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು

ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಗೂಡ್ಸ್ ವಾಹನ | ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »

ಸುನಾದ ಸಂಗೀತ ಕಲಾ ಶಾಲೆ ಅರ್ಪಿಸುವ ಸುನಾದ ಯುವದನಿ- ವಿಂಶತಿ ಸಂಭ್ರಮ

ಪುತ್ತೂರು: ವಿದ್ವಾನ್‌ ಕಾಂಚನ ಎ ಈಶ್ವರ ಭಟ್‌ ಇವರ ನೇತೃತ್ವದಲ್ಲಿ ನಡೆದುಕೊಂಡು ಬರುತ್ತಿರುವ ಸುನಾದ ಯುವದನಿ ಸರಣಿ ಕಾರ್ಯಕ್ರಮ ತನ್ನ 20ನೇ ವರ್ಷದ “ಸುನಾದ ಯುವದನಿ- ವಿಂಶತಿ ಸಂಭ್ರಮ”ವನ್ನು ಪುತ್ತೂರಿನ ಸುನಾದ ಸಭಾಂಗಣದಲ್ಲಿ ಆಚರಿಸಿಕೊಂಡಿತು. ಸಂಭ್ರಮದ ಅಂಗವಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯನ್ನು ವಿದ್ವಾನ್‌ ಶ್ರೀಹರಿ ಭಟ್‌ ಎನ್‌ ಎಚ್‌ ಅವರು ನಡೆಸಿಕೊಟ್ಟರು. ವಯಲಿನ್‌ ನಲ್ಲಿ ವಿದ್ವಾನ್‌ ವೇಣುಗೋಪಾಲ್‌ ಶ್ಯಾನುಭೋಗ್‌, ಮೃದಂಗದಲ್ಲಿ ಡಾ.ಅಕ್ಷಯ ನಾರಾಯಣ ಕಾಂಚನ ಸಹಕರಿಸಿದರು. ಕಛೇರಿಯ ಬಳಿಕ ಸುನಾದದ ಶಿಷ್ಯವೃಂದ ದೃಶ್ಯಕಾವ್ಯ, ಗಾನಕಲಾಕುಂಚ ಹಾಗು

ಸುನಾದ ಸಂಗೀತ ಕಲಾ ಶಾಲೆ ಅರ್ಪಿಸುವ ಸುನಾದ ಯುವದನಿ- ವಿಂಶತಿ ಸಂಭ್ರಮ Read More »

error: Content is protected !!
Scroll to Top