ಶ್ರೀಕೃಷ್ಣನ ಪ್ರತಿಯೊಂದು ನಡೆಗಳಲ್ಲೂ ಸಂದೇಶಗಳಿವೆ : ತೇಜಶಂಕರ ಸೋಮಯಾಜಿ | ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
ಪುತ್ತೂರು : ಭಗವಾನ್ ಶ್ರೀಕೃಷ್ಣನನ್ನು ನಾನಾ ನೆಲೆಯಿಂದ ಗುರುತಿಸುತ್ತಾ ಸಾಗುವುದಕ್ಕೆ ಸಾಧ್ಯವಿದೆ. ದುಷ್ಟ ಶಿಕ್ಷಣ, ಶಿಷ್ಟ ರಕ್ಷಣದಿಂದ ತೊಡಗಿ ರಾಜತಾಂತ್ರಿಕ ವಿಚಾರಗಳವರೆಗೆ ಅಷ್ಟೂ ವಿಷಯಗಳಲ್ಲಿ ಶ್ರೀಕೃಷ್ಣ ನಮಗೆ ಮಾದರಿಯಾಗಿ ಕಾಣಿಸುತ್ತಾನೆ. ಆತನ ಒಂದೊಂದು ನಡೆಯ ಹಿಂದೆಯೂ ಒಂದೊಂದು ಸಂದೇಶಗಳನ್ನು ಅರ್ಥ ಮಾಡಿಕೊಳ್ಳಬಹುದು. ಆದರೆ ಆತ ಕೃತಿಯ ಮೂಲಕ ತೋರಿಸಿದ್ದನ್ನು ಅರ್ಥ ಮಾಡಿಕೊಳ್ಳುವುದಕ್ಕೆ ಅಸಾಧ್ಯರಾದವರು ಆತನನ್ನು ಹೀಗಳೆಯುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಅನಾವರಣಗೊಳಿಸುತ್ತಿರುವುದನ್ನು ಕಾಣಬಹುದು ಎಂದು ಅಂಬಿಕಾ ಮಹಾವಿದ್ಯಾಲಯದ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿದ್ವಾನ್ ತೇಜಶಂಕರ ಸೋಮಯಾಜಿ ಹೇಳಿದರು. […]










