ಪುತ್ತೂರು

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಪುತ್ತೂರು : ವ್ಯಕ್ತಿಯೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಬೆಟ್ಟಂಪಾಡಿ ಗ್ರಾಮದ ಅಂಗರಾಜೆ ಎಂಬಲ್ಲಿ ಮಂಗಳವಾರ ಪತ್ತೆಯಾಗಿದೆ. ಬೆಟ್ಟಂಪಾಡಿ ಗ್ರಾಮದ ಅಂಗರಾಜೆ ಬಾಲ್ಯೊಟ್ಟು ಗುತ್ತು ಸಂಕಯ್ಯ ಆಳ್ವರವರ ಪುತ್ರ ರವೀಂದ್ರನಾಥ ಆಳ್ವ (55) ಈ ಕೃತ್ಯ ಎಸಗಿದವರು. ರವೀಂದ್ರನಾಥ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಪತ್ನಿ ದೀಕ್ಷಾ ಹಾಗೂ ಮಕ್ಕಳಿಬ್ಬರು ಬೆದ್ರಾಳದಲ್ಲಿರುವ ತವರು ಮನೆಯಲ್ಲಿ ವಾಸಿಸುತ್ತಿದ್ದರು. ರವೀಂದ್ರನಾಥ ಆಳ್ವರು ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಪಕ್ಕದ ಸಹೋದರನ ಮನೆಯಲ್ಲಿ ಊಟ ಮಾಡುತ್ತಿದ್ದ ಅವರು, ಸೆ.3 ರಂದು ರಾತ್ರಿ ಎಂದಿನಂತೆ ಊಟಕ್ಕೆ […]

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಸೆ 6 : ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ, ಮುದ್ದುಕೃಷ್ಣ ಸ್ಫರ್ಧೆ

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ ಹಾಗೂ ಕಾವು ಗೆಳೆಯರ ಬಳಗದ  ಪ್ರಾಯೋಜಕತ್ವದಲ್ಲಿ ಮುದ್ದು ಕೃಷ್ಣ ಸ್ಫರ್ಧೆ ಕಾವು  ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೆ 6  ರಂದು ನಡೆಯಲಿದೆ. ಕ್ರೀಡಾಕೂಟದ ಉದ್ಘಾಟನೆಯನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಚಾಲನೆ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ವಿವಿಧ ಅಟೋಟ ಕಾರ್ಯಕ್ರಮ ನಡೆಯಲಿದ್ದು ಪುರುಷರಿಗೆ ಕಬಡ್ಡಿ,ಹಗ್ಗ ಎಳೆಯುವುದು, ಚೆನ್ನಮಣೆ, ನಿಧಾನ ಬೈಕ್ ರೇಸ್, ಸೈಕಲ್ ರೇಸ್,

ಸೆ 6 : ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ, ಮುದ್ದುಕೃಷ್ಣ ಸ್ಫರ್ಧೆ Read More »

ಮಿತ್ತೂರು ದಾರುಲ್ ಇರ್ಷಾದ್ ನೂತನ ಪ್ರೌಢ ಶಾಲಾ ಕಟ್ಟಡ ಉದ್ಘಾಟನೆ

ಪುತ್ತೂರು : ಅಲ್ಪಸಂಖ್ಯಾತ ಮಕ್ಕಳು ವಿದ್ಯೆ ಕಲಿಯಬಾರದು, ಅವರು ವಿದ್ಯೆಯಿಂದ ವಂಚಿತರಾಗಬೇಕು ಎಂಬ ಏಕೈಕ ಉದ್ದೇಶದಿಂದ ಕಳೆದ ಅವಧಿಯ ಬಿಜೆಪಿ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡುತ್ತಿದ್ದ ಸ್ಕಾಲರ್ ಶಿಪ್ ರದ್ದು ಮಾಡಿದ್ದರು ಆ ಮೂಲಕ ವಿದ್ಯೆಯ ಹೆಸರಿನಲ್ಲೂ ಕೋಮುವಾದ ಮಾಡಿದ್ದರು ಎಂದು ರಾಜ್ಯ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್ ಹೇಳಿದರು. ಅವರು ಇಡ್ಕಿದು ಗ್ರಾಮದ ಮಿತ್ತೂರು ದಾರುಲ್ ಇರ್ಷಾದ್ ಸಂಸ್ಥೆಯಲ್ಲಿ ಪ್ರಧಾನಮಂತ್ರಿ ಜನವಿಕಾಶ ಯೋಜನೆಯಡಿ ನಿರ್ಮಿಸಲಾದ ಪ್ರೌಢ ಶಾಲಾ ಕಟ್ಟಡವನ್ನು

ಮಿತ್ತೂರು ದಾರುಲ್ ಇರ್ಷಾದ್ ನೂತನ ಪ್ರೌಢ ಶಾಲಾ ಕಟ್ಟಡ ಉದ್ಘಾಟನೆ Read More »

ಸೆ.10 :ಪುತ್ತೂರಿನ ಜೇಸಿ ಸಪ್ತಾಹದಲ್ಲಿ ವಿಶೇಷ ತಳಿಗಳ ಶ್ವಾನ, ಬೆಕ್ಕು ‘ಸಾಕುಪ್ರಾಣಿ’ಗಳ ಪ್ರದರ್ಶನ.

ಪುತ್ತೂರು: ಭಾರತಾದ್ಯಂತ ಒಂದು ವಾರಗಳ ಕಾಲ ನಡೆಯುವ ‘ಜೇಸಿ ಸಪ್ತಾಹ’ದ ಅಂಗವಾಗಿ ಪುತ್ತೂರು ಜೆಸಿಐ ಸಂಸ್ಥೆಯ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರು ಜೆಸಿಐ ಸೆ. 9 ರಿಂದ 15ರ ತನಕ ‘ಜೆಸಿಐ ಸಪ್ತಾಹ’ ದ ಅಂಗವಾಗಿ ಸೆ.10 ಭಾನುವಾರ, ಅಪರಾಹ್ನ ಗಂಟೆ 2 ರಿಂದ ಇಳಿ ಸಂಜೆ ತನಕ ಪುತ್ತೂರು ಕ್ಲಬ್ ಆವರಣದಲ್ಲಿ ವಿಶೇಷ ತಳಿಗಳ ಶ್ವಾನ, ಬೆಕ್ಕು ಮೊದಲಾದ ‘ಸಾಕುಪ್ರಾಣಿ’ಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಪುತ್ತೂರು ಕ್ಲಬ್ ಅಧ್ಯಕ್ಷ ಡಾ.

ಸೆ.10 :ಪುತ್ತೂರಿನ ಜೇಸಿ ಸಪ್ತಾಹದಲ್ಲಿ ವಿಶೇಷ ತಳಿಗಳ ಶ್ವಾನ, ಬೆಕ್ಕು ‘ಸಾಕುಪ್ರಾಣಿ’ಗಳ ಪ್ರದರ್ಶನ. Read More »

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್  ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ. ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ Read More »

ಕಬಡ್ಡಿ ಪಂದ್ಯಾಟ : ದರ್ಬೆ ಲಿಟ್ಲ್ ಫ್ಲವರ್ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಣಿಗೆ ಮುಡ್ನೂರು ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಲಿಟ್ಲ್ ಫ್ಲವರ್ ಶಾಲೆ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ ತಂಡವನ್ನು ಜೆನಿಟ ಸಿಂಧು ಪಸನ್ನ, ಜುವೆನ್ನ ಡ್ಯಾಜಲ್ ಕುಟಿನಾ, ಸನ್ನಿಧಿ, ಜಸ್ಮಿತಾ, ಫಾತಿಮತ್ ಶೈಮ, ನಿಶ್ಮಿತಾ ಕೆ, ಹಾರ್ದಿಕ, ಘನಶ್ರೀ, ಆರಾಧನ, ದ್ರಿಶಾ, ಫಾತಿಮತ್ ಅಫ್ರ, ರಶ್ಮಿತಾ, ವೈಷ್ಣವಿ ರೈ, ಸಾಕ್ಷಿ,

ಕಬಡ್ಡಿ ಪಂದ್ಯಾಟ : ದರ್ಬೆ ಲಿಟ್ಲ್ ಫ್ಲವರ್ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಪುತ್ತೂರು: ಪ್ರತೀ ವ್ಯಕ್ತಿಯು ತಮ್ಮ ಜೀವನದಲ್ಲಿ ತಂದೆ ತಾಯಿಯ ನಂತರದ ಸ್ಥಾನವನ್ನು ಗುರವಿಗೆ ನೀಡುತ್ತಾರೆ. ಶಿಕ್ಷಣದ ಮೂಲ ಅರ್ಥವನ್ನು ತಿಳಿಸಿ ವ್ಯಕ್ತಿಯ ಬದುಕನ್ನು ಬೆಳಗುವವರು ಶಿಕ್ಷಕರಾಗಿರುವುದರಿಂದ ಇಡೀ ಪ್ರಪಂಚವೇ ಇವರನ್ನು ಅಗ್ರಸ್ಥಾನದಲ್ಲಿಟ್ಟು ಪೂಜಿಸುತ್ತದೆ .ಎಂದು ನರೇಂದ್ರ ಪ.ಪೂ  ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ಅವರು ಮಾತನಾಡಿದರು. ಗುರುಕುಲ ಶಿಕ್ಷಣದಿಂದ ಹಿಡಿದು ಇಂದಿನ ಶಿಕ್ಷಣದವರೆಗೂ ಶಿಕ್ಷಕರು ಇತರರ ಜೀವನವನ್ನು ರೂಪಿಸಲು ತಮ್ಮನ್ನು ತಾವು ಅರ್ಪಿಸಿಕೊಳ್ಳುತ್ತಿದ್ದಾರೆ. ಜೀವನದ ಪ್ರತಿಯೊಂದು

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಎಸ್ ಎಸ್ ಎಫ್ ಸಮ್ಮೇಳನ ದಲ್ಲಿ ಸೌಜನ್ಯಳಿಗೆ ನ್ಯಾಯ ಒದಗಿಸಲು ಒತ್ತಾಯ; ಸಮ್ಮೇಳನವನ್ನು ಉದ್ಘಾಟಿಸಲಿರುವ ಸಿದ್ದರಾಮಯ್ಯ | ಸೌಜನ್ಯಳ ಅತ್ಯಾಚಾರ ಮಾಡಿದವರು ಯಾರೇ ಇರಲಿ, ಶಿಕ್ಷೆ ನೀಡಲೇಬೇಕು : ಎಸ್. ಎಸ್. ಎಫ್

ಬೆಳ್ತಂಗಡಿ : ಸೌಜನ್ಯ ಹೋರಾಟದ ಕಿಚ್ಚು ದೇಶಾದ್ಯಂತ ಕಾಡಿಚ್ಚಿನಂತೆ ಭೀಕರವಾಗಿ ಹಬ್ಬುತ್ತಿದ್ದಂತೆಯೇ ಅತ್ತ ಜಾಗತಿಕವಾಗಿಯೂ ಮುಗ್ಧ ಹೆಣ್ಣು ಮಗಳಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಹಲವು ಸಂಘಟನೆಗಳು ಹೋರಾಟದತ್ತ ಮುಖ ಮಾಡಿವೆ. ಹಿಂದೂ ಹುಲಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಈಗಾಗಲೇ ಬೃಹತ್ ಪ್ರತಿಭಟನೆಗಳು ನಡೆದಿವೆ. ನಿನ್ನೆಯಷ್ಟೇ ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಪರ ಬೃಹತ್ ಪ್ರತಿಭಟನಾ ಸಭೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ, ಸೌಜನ್ಯ ಹೋರಾಟದ ಅಧ್ಯಕ್ಷೆ ಪ್ರಸನ್ನ ರವಿ, ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣ್ಣವರ್, ಶ್ರೀ ರಾಮ ಸೇನೆ ಮುಖ್ಯಸ್ಥ

ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಎಸ್ ಎಸ್ ಎಫ್ ಸಮ್ಮೇಳನ ದಲ್ಲಿ ಸೌಜನ್ಯಳಿಗೆ ನ್ಯಾಯ ಒದಗಿಸಲು ಒತ್ತಾಯ; ಸಮ್ಮೇಳನವನ್ನು ಉದ್ಘಾಟಿಸಲಿರುವ ಸಿದ್ದರಾಮಯ್ಯ | ಸೌಜನ್ಯಳ ಅತ್ಯಾಚಾರ ಮಾಡಿದವರು ಯಾರೇ ಇರಲಿ, ಶಿಕ್ಷೆ ನೀಡಲೇಬೇಕು : ಎಸ್. ಎಸ್. ಎಫ್ Read More »

ಮೂರ್ತಿಕಲಾ ರಚನಾ ಸ್ಪರ್ಧೆ – ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಕಲಬುರಗಿ ಜಿಲ್ಲೆಯ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಮ್ ನಲ್ಲಿ ನಡೆದ ರಾಜ್ಯಮಟ್ಟದ ಗಣಿತ -ವಿಜ್ಞಾನ ಮೇಳದ  ಮೂರ್ತಿಕಲಾ ರಚನಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಕಿಶಾನ್ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಹರೀಶ್ ಗೌಡ ಮತ್ತು ಸವಿತಾ ದಂಪತಿ ಪುತ್ರ ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕ ರುಕ್ಮಯ ತರಬೇತಿ ನೀಡಿರುತ್ತಾರೆ.

ಮೂರ್ತಿಕಲಾ ರಚನಾ ಸ್ಪರ್ಧೆ – ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

ಪುತ್ತೂರು: ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘ, ರಾಮಕ್ಷತ್ರಿಯ ಮಹಿಳಾ ವೃಂದ, ರಾಮಕ್ಷತ್ರಿಯ ಯುವ ವೃಂದದ ವತಿಯಿಂದ ಕೆಮ್ಮಿಂಜೆ ಅತ್ತಾಳ ಗದ್ದೆಯಲ್ಲಿ ಕೆಸರುಗದ್ದೆ ಕ್ರೀಡಾಕೂಟ ನಡೆಯಿತು. ದ.ಕ. ರಾಮಕ್ಷತ್ರಿಯ ಒಕ್ಕೂಟದ ಅಧ್ಯಕ್ಷ ಪ್ರಮೋದ್ ನಾಯಕ್ ದೀಪ ಪ್ರಜ್ವಲನೆ ಮಾಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಮಕ್ಷತ್ರಿಯ ಸಮಾಜದ ಮೂಲಕ ಉತ್ತಮ ಕಾರ್ಯಕ್ರಮ ಆಯೋಜನೆಗೊಳ್ಳುತ್ತಿದೆ. ಯುವಕರು ನಮ್ಮ ಸಮಾಜದ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಇದರ ಮುಖಾಂತರ ನಮ್ಮ ಸಂಘದ ಅಭಿವೃದ್ಧಿ ಆಗುತ್ತದೆ. ರಾಮಕ್ಷತ್ರಿಯ ಸಂಘದ ವಾರ್ಷಿಕೋತ್ಸವದ ಮೂಲಕ ನಾವು ಸಮಾಜವನ್ನು ಒಗ್ಗೂಡಿಸುತ್ತೇವೆ

ಪುತ್ತೂರು ರಾಮಕ್ಷತ್ರಿಯ ಸೇವಾ ಸಂಘದ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ Read More »

error: Content is protected !!
Scroll to Top