ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ.ಜಿಲ್ಲಾ ರೈತ ಸಂಘ, ಹಸಿರುಸೇನೆಯಿಂದ ಮುಖ್ಯಮಂತ್ರಿಗೆ ಮನವಿ
ಪುತ್ತೂರು: ಬೆಳ್ತಂಗಡಿ ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಯನ್ನು ಕಂಡು ಹಿಡಿಯುವ ನಿಟ್ಟಿನಲ್ಲಿ ನಿವೃತ್ತ ನ್ಯಾಯಾಧೀಶರ ನೇತೃತ್ವದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಪುತ್ತೂರು ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಮಾತನಾಡಿ ಹನ್ನೊಂದು ವರ್ಷದ ಹಿಂದೆ ನಡೆದ ಅತ್ಯಾಚಾರ ಮತ್ತು ಕೊಲೆ […]









