ಪುತ್ತೂರು

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ

ಪುತ್ತೂರು:  ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 169ನೇ ಜನ್ಮ ದಿನಾಚರಣೆ ಗುರುವಾರ ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ದೀಪ ಪ್ರಜ್ವಲನೆ ಮಾಡಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ನಾರಾಯಣ ಗುರುಗಳ ಮುಖ್ಯ ಸಂದೇಶಗಳಲ್ಲಿ ಒಂದೇ ಜಾತಿ, ಒಂದೇ ಮತ, ಒಂದೇ ಕುಲ  ಸಾರುವ ಮೂಲಕ ಸಮಾಜದಲ್ಲಿನ ಸಾಮರಸ್ಯವನ್ನು ಹೋಗಲಾಡಿಸಿದವರು. ಅವರ ಸಂದೇಶ, ಆದರ್ಶಗಳ ಪಾಲನೆಯಾಗಬೇಕಾಗಿದೆ. ಅವರ ವ್ಯಕ್ತಿತ್ವವನ್ನು […]

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ Read More »

ಇಚ್ಲಂಪಾಡಿ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಇಚ್ಲಂಪಾಡಿ: ಇಚ್ಲಂಪಾಡಿ ಗ್ರಾಮದ ಅಲೆಕ್ಕಿ ನಿವಾಸಿ ಬಾಲಕೃಷ್ಣ ಗೌಡ (51) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಾಲಕೃಷ್ಣ ಗೌಡರು ಪುತ್ತೂರಿನ ಬಾರ್ ಒಂದರಲ್ಲಿ ಕಳೆದ 22 ವರ್ಷಗಳಿಂದ ಕೆಲಸ ಮಾಡಿ, ಪ್ರಸ್ತುತ ಎರಡು ವರ್ಷದಿಂ,ದ ಬೇರೆ ಬಾರ್ ನಲ್ಲಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯದ ಹಿನ್ನಲೆಯಲ್ಲಿ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲಿದ್ದರು. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಲೆ ಫ್ಯಾನ್‍ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರ ಎಂದು ತಿಳಿದು ಬಂದಿದೆ. ನೆಲ್ಯಾಡಿಗೆ ಹೋಗಿದ್ದ ಪತ್ನಿ

ಇಚ್ಲಂಪಾಡಿ ನಿವಾಸಿ ನೇಣು ಬಿಗಿದು ಆತ್ಮಹತ್ಯೆ Read More »

ಆಂತರಿಕ ಲೆಕ್ಕ ಪರಿಶೋಧನೆಗೆ ಚಾಲನೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವಿಟ್ಲ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದಲ್ಲಿ ಆರ್ಥಿಕ ವರ್ಷದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಆಂತರಿಕ ಲೆಕ್ಕಪರಿಶೋಧನೆಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ನಿಕಟ ಪೂರ್ವ ಅಧ್ಯಕ್ಷರ ಸಂಘಕ್ಕೆ ಗ್ರೆಡಿಂಗ್ ರಿಪೋರ್ಟನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ಕೆದಿಲ ಎ.ಬಿ  ಒಕ್ಕೂಟಗಳ ಅಧ್ಯಕ್ಷರುಗಳು, ನಿಕಟ ಪೂರ್ವ ಅಧ್ಯಕ್ಷರುಗಳು, ವಲಯ ಮೇಲ್ವಿಚಾರಕರು, ತಾಲೂಕಿನ ವಿಚಕ್ಷಣಾಧಿಕಾರಿಗಳು, ಸೇವಾ ಪ್ರತಿನಿಧಿಗಳು, ಹಾಗೂ ಪ್ರಗತಿ ಬಂದು   ಸ್ವಸಹಾಯ ಸಂಘಗಳ ಸದಸ್ಯರು

ಆಂತರಿಕ ಲೆಕ್ಕ ಪರಿಶೋಧನೆಗೆ ಚಾಲನೆ Read More »

ಕುಂಡಡ್ಕ : ಮೂರನೇ ವರ್ಷದ ರಕ್ಷಾಬಂಧನ ಆಚರಣೆ | ರಾಷ್ಟ್ರೀಯತೆಯ ವಿಚಾರದಲ್ಲಿ ನಾವೆಲ್ಲರೂ ಒಂದಾಗಬೇಕು : ರಜನೀಶ್ ಪಿ

ಮುಕ್ಕೂರು : ದೇಶ, ಧರ್ಮ, ರಾಷ್ಟ್ರೀಯತೆಯ ವಿಚಾರದಲ್ಲಿ ಪಕ್ಷ, ಜಾತಿ ಮೀರಿ ನಾವೆಲ್ಲರೂ ಒಂದಾಗಬೇಕು. ಹಿಂದೂ ಸಮಾಜವನ್ನು ವಿಭಜಿಸುವ ಹುನ್ನಾರಗಳಿಗೆ ಅವಕಾಶ ಕಲ್ಪಿಸದೆ, ನಾವು ಜಾಗೃತ ಸಮಾಜದ ಮೂಲಕ ಭಾರತೀಯ ಸಂಸ್ಕೃತಿ, ಸಂಸ್ಕಾರದ ರಕ್ಷಕರಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ರಜನೀಶ್ ಪಿ ಹೇಳಿದರು. ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ನೇಸರ ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಕುಂಡಡ್ಕ ಕಮಲ ಅವರ ನಿವಾಸದಲ್ಲಿ ನಡೆದ ಮೂರನೇ ವರ್ಷದ ರಕ್ಷಾಬಂಧನ ಆಚರಣೆಯಲ್ಲಿ ರಕ್ಷಾ

ಕುಂಡಡ್ಕ : ಮೂರನೇ ವರ್ಷದ ರಕ್ಷಾಬಂಧನ ಆಚರಣೆ | ರಾಷ್ಟ್ರೀಯತೆಯ ವಿಚಾರದಲ್ಲಿ ನಾವೆಲ್ಲರೂ ಒಂದಾಗಬೇಕು : ರಜನೀಶ್ ಪಿ Read More »

ಕಾರ್ಮಿಕರಿಗೆ ಕಾರು ಡಿಕ್ಕಿ : ಒರ್ವ ಮೃತ್ಯು, ಮೂವರು ಗಂಭೀರ ಗಾಯ

ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಕಾರಣ ಒಬ್ಬ ಮೃತಪಟ್ಟು 3 ಮಂದಿ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಡ್ಕಾರಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಒಬ್ಬರು ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡ್ಕಾರಿನ ಹೊಟೇಲ್ ಒಂದರ ಮುಂಭಾಗದಲ್ಲಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಒಬ್ಬರು ಮೃತಪಟ್ಟು 3

ಕಾರ್ಮಿಕರಿಗೆ ಕಾರು ಡಿಕ್ಕಿ : ಒರ್ವ ಮೃತ್ಯು, ಮೂವರು ಗಂಭೀರ ಗಾಯ Read More »

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. ಪ್ರಥಮ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ  ಜಿಲ್ಲಾ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್‍. 14 ವಯೋಮಿತಿಯ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಈಕೆ ಪುತ್ತೂರು ತಾಲೂಕಿನ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಹಾಗೂ ಸುಜಿತಾ ದಂಪತಿ ಪುತ್ರಿ. ಪ್ರಗತಿ ಶಾಲಾ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್. ಪ್ರಥಮ Read More »

ಪ್ರಜ್ಞಾ ಆಶ್ರಮದಲ್ಲಿ ರಕ್ಷಾ ಬಂಧನ ಆಚರಿಸಿದ ಪುತ್ತಿಲ ಪರಿವಾರ

ಪುತ್ತೂರು: ಪುತ್ತೂರಿನ  ವಿಕಲಚೇತನಾ ವೃತ್ತಿ ಮತ್ತು ಪುನರ್ವಸತಿ ಕೇಂದ್ರ ಪ್ರಜ್ಞಾ ಆಶ್ರಮದಲ್ಲಿ ಪುತ್ತಿಲ ಪರಿವಾರದ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ ಆ.30ರಂದು  ಜರಗಿತು. ಆಶ್ರಮದಲ್ಲಿ ರಕ್ಷಾ ಬಂಧನ ಆಚರಿಸಿ, ಸಿಹಿತಿಂಡಿ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತಾ,  ಪ್ರದಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಸಹಿತ ಪುತ್ತಿಲ ಪರಿವಾರದ ಪ್ರಮುಖರು ಉಪಸ್ಥಿತರಿದ್ದರು

ಪ್ರಜ್ಞಾ ಆಶ್ರಮದಲ್ಲಿ ರಕ್ಷಾ ಬಂಧನ ಆಚರಿಸಿದ ಪುತ್ತಿಲ ಪರಿವಾರ Read More »

ಪಾಪೆಮಜಲು ಹಿ ಪ್ರಾ ಶಾಲೆ ವಿವೇಕ ತರಗತಿ ಉದ್ಘಾಟನೆ, ಅಭಿನಂದನೆ | ಸರಕಾರಿ ಶಾಲೆಗಳಲ್ಲಿ ಕೊರತೆಗಳನ್ನು ನೀಗಿಸುವ ಕೆಲಸವನ್ನು ಸರಕಾರ ಮಾಡಲಿದೆ: ಅಶೋಕ್ ರೈ

ಪುತ್ತೂರು: ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಗುಣಮಟ್ಟದ ಶಿಕ್ಷಣದ ಕೊರತೆ ಇದೆ ಎಂದು ಕೆಲವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲಿಸುವ ಕೆಲಸವನ್ನು ಮಾಡುತ್ತಿದ್ದಾರೆ, ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಗಳಲ್ಲಿ ಮಾತ್ರ ದೊರೆಯಲು ಸಾಧ್ಯ, ಸರಕಾರಿ ಶಾಲೆಗಳಲ್ಲಿನ ಕೊರತೆಗಳನ್ನು ನೀಗಿಸುವ ಕೆಲಸವನ್ನು ಸರಕಾರ ಹಂತ ಹಂತವಾಗಿ ಮಾಡಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಪಾಪೆಮಜಲು ಸರಕಾರಿ ಹಿ ಪ್ರಾ ಶಾಲೆಯಲ್ಲಿ ನಡೆದ ವಿವೇಕ ಕೊಠಡಿ ಉದ್ಘಾಟನೆ ಮತ್ತು ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ

ಪಾಪೆಮಜಲು ಹಿ ಪ್ರಾ ಶಾಲೆ ವಿವೇಕ ತರಗತಿ ಉದ್ಘಾಟನೆ, ಅಭಿನಂದನೆ | ಸರಕಾರಿ ಶಾಲೆಗಳಲ್ಲಿ ಕೊರತೆಗಳನ್ನು ನೀಗಿಸುವ ಕೆಲಸವನ್ನು ಸರಕಾರ ಮಾಡಲಿದೆ: ಅಶೋಕ್ ರೈ Read More »

ಚೆಸ್ ಪಂದ್ಯಾಟವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಕಾರಿಯಾಗಿದೆ- ಶೇಷಪ್ಪ ಗೌಡ | ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಚೆಸ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ನೇತಾಜಿ ಸಭಾ ಭವನದಲ್ಲಿ ನಡೆಯಿತು. ವಿಟ್ಲ ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶೇಷಪ್ಪ ಗೌಡ ಪಂದ್ಯಾಟ ಉದ್ಘಾಟಿಸಿ ಮಾತನಾಡಿ, ಚದುರಂಗ ಅದೃಷ್ಟವನ್ನು ಅವಲಂಬಿಸಿದ ಆಟವಲ್ಲ. ಶುದ್ಧವಾಗಿ ಆಟಗಾರರ ಆಲೋಚನೆ, ಯೋಜನಾ ಸಾಮರ್ಥ್ಯ ಮತ್ತು ಮುಂದಾಲೋಚನೆಗಳನ್ನು ಅವಲಂಬಿಸಿದ ಆಟ. ಸ್ಪರ್ಧಾತ್ಮಕ ಯುಗದಲ್ಲಿ ಇಂತಹ ಕ್ರೀಡೆಗಳು

ಚೆಸ್ ಪಂದ್ಯಾಟವು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು ಸಹಕಾರಿಯಾಗಿದೆ- ಶೇಷಪ್ಪ ಗೌಡ | ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ Read More »

ಪುತ್ತೂರಿನ ಮಾಜಿ ಶಾಸಕರು ನೂತನ ಶಾಸಕರ ಬಗ್ಗೆ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿರುವುದು ಖಂಡನೀಯ : ಎಚ್‍.ಮಹಮ್ಮದಾಲಿ

ಪುತ್ತೂರು: ನೂತನ ಶಾಸಕರ ಕಚೇರಿಗೆ ಬರೋಬ್ಬರಿ 31 ಲಕ್ಷ ರೂ. ನಗರಸಭೆಯ ತೆರಿಗೆ ಹಣವನ್ನು ಬಳಕೆ ಮಾಡಿರುವ ಕುರಿತು ಶಾಸಕರ ಬಗ್ಗೆ ಆರೋಪ ಹೊರಿಸುತ್ತಿರುವ ಮಾಜಿ ಶಾಸಕರು ತಮ್ಮ ಅವಧಿಯಲ್ಲಿ ಮಾಡಿದ ದುರುಪಯೋಗವನ್ನು ಮೊದಲು ತಿಳಿಯಲಿ. ಅದನ್ನು ಬಿಟ್ಟು ನೂತನ ಶಾಸಕ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿರುವುದು ಖಂಡನೀಯ ಎಂದು ಪುತ್ತೂರು ಬ್ಲಾಕ್‍ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್‍ ಮಹಮ್ಮದಾಲಿ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಾಜಿ ಶಾಸಕರಿಗೆ

ಪುತ್ತೂರಿನ ಮಾಜಿ ಶಾಸಕರು ನೂತನ ಶಾಸಕರ ಬಗ್ಗೆ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿರುವುದು ಖಂಡನೀಯ : ಎಚ್‍.ಮಹಮ್ಮದಾಲಿ Read More »

error: Content is protected !!
Scroll to Top