ಪುತ್ತೂರು

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಕಂಪೆನಿ ಕನೆಕ್ಟ್” ಕಾರ್ಯಕ್ರಮ

ಪುತ್ತೂರು: ತಂತ್ರಜ್ಞಾನ ಎಷ್ಟು ಮುಂದುವರಿದರೂ ಕಂಪೆನಿಗಳು ಬಯಸುವ ರೀತಿಯಲ್ಲಿ ನುರಿತ ತಂತ್ರಜ್ಞರು ಸಿಗುತ್ತಿಲ್ಲ ಇದಕ್ಕೆ ಶಿಕ್ಷಣ ವ್ಯವಸ್ಥೆಯ ಪಠ್ಯಕ್ರಮ ಹಾಗೂ ಕಂಪೆನಿಯ ಆವಶ್ಯಕತೆಗಳ ಮಧ್ಯೆ ಇರುವ ಅಂತರವೇ ಕಾರಣ ಎಂದು ಕಾಕುಂಜೆ ಸಾಫ್ಟ್‌ವೇರ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತರಬೇತಿ ಮತ್ತು ನೇಮಕಾತಿ ವಿಭಾಗದ ಆಶ್ರಯದಲ್ಲಿ ನಡೆದ ಕಂಪೆನಿ ಕನೆಕ್ಟ್-2023ಕ್ಕೆ ಚಾಲನೆ ನೀಡಿ […]

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಕಂಪೆನಿ ಕನೆಕ್ಟ್” ಕಾರ್ಯಕ್ರಮ Read More »

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ: ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್.ಕೆ. ಸೀನಿಯರ್ ವಿಭಾಗದಲ್ಲಿ ಮಾಳವಿಕಗೆ ಪ್ರಶಸ್ತಿ

ಪುತ್ತೂರು: ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್‌ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್‌ ಫಿನಾಲೆಯು ಇನ್ನರ್‌ವೀಲ್‌ ಕ್ಲಬ್‌ನ ಸಹಯೋಗದಲ್ಲಿ ನಡೆಯಿತು. ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್ (ಪ್ರಥಮ), ಮೃನಾಲ್ (ದ್ವಿತೀಯ), ವಿಭಾಶ್ರೀ (ತೃತೀಯ ಹಾಗೂ ಸೀನಿಯರ್ ವಿಭಾಗದಲ್ಲಿ ಮಾಳವಿಕ (ಪ್ರಥಮ), ವಿನೋದ್ ಜಾಲ್ಸೂರ್ (ದ್ವಿತೀಯ) ಹಾಗೂ ಪವಿತ್ರ ಆರ್ (ತೃತೀಯ) ಬಹುಮಾನಗಳನ್ನು ಪಡೆದರು. ಪ್ರಥಮ ಬಹುಮಾನ ಪಡೆದವರಿಗೆ ಗಾನ ಕೋಗಿಲೆ, ಚಿನ್ನದ ನಾಣ್ಯ ಹಾಗೂ

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ: ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್.ಕೆ. ಸೀನಿಯರ್ ವಿಭಾಗದಲ್ಲಿ ಮಾಳವಿಕಗೆ ಪ್ರಶಸ್ತಿ Read More »

ದಿಲ್ದೀಪ್ ರೈ ನಿಧನ

ಪುತ್ತೂರು: ಬಡಗನ್ನೂರು ಗ್ರಾಮದ ಪೇರಾಲು ನಿವಾಸಿ ದಿಲ್ದೀಪ್‍ ರೈ ಪೆರಾಲು (60) ನಿಧನರಾಗಿದ್ದಾರೆ. ಅಲ್ಪ ಕಾಲದ ಅಸೌಖ್ಯದಿಂದಿದ್ದ ಅವರು ಸ್ವಗೃಹದಲ್ಲಿನಿಧನರಾದರು. ಮೃತರು ಸಹೋದರರು, ಕುಟುಂಬಸ್ಥರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ದಿಲ್ದೀಪ್ ರೈ ನಿಧನ Read More »

ನ್ಯಾಯಾಂಗ ಹುದ್ದೆ ಅತ್ಯಂತ ಶ್ರೇಷ್ಠವಾದದ್ದು: ನ್ಯಾ. ವಿಶ್ವಜಿತ್ ಶೆಟ್ಟಿ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ 35ನೇ ವಾರ್ಷಿಕೋತ್ಸವ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ 35ನೇ ವಾರ್ಷಿಕೋತ್ಸವ ನಡೆಯಿತು.  ಮುಖ್ಯ ಅತಿಥಿಯಾಗಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸವಣೂರು ವಿಶ್ವಜಿತ್ ಶೆಟ್ಟಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಮಾಡಿ ಮಾತನಾಡಿ, ಭಾರತೀಯ ಸಂವಿಧಾನದಲ್ಲಿನ್ಯಾಯಾಂಗಕ್ಕೆ ಅತ್ಯಮೂಲ್ಯ ಸ್ಥಾನವಿದೆ. ದೇಶದ ಅಭಿವೃದ್ಧಿಯಲ್ಲಿನ್ಯಾಯಾಂಗ ವ್ಯವಸ್ಥೆ ಪರಿಣಾಮಕಾರಿಯಾಗಿದ್ದು, ಇಡೀ ವಿಶ್ವದಲ್ಲಿಯೇ ಭಾರತೀಯ ನ್ಯಾಯಾಂಗ ವ್ಯವಸ್ಥೆ ಸರ್ವ ಶ್ರೇಷ್ಠ ಹಾಗೂ ಸದೃಢವಾಗಿದೆ. ಕಾನೂನು ವಿದ್ಯಾರ್ಥಿಗಳಿಗೆ ಇದನ್ನು ಅರ್ಥ ಮಾಡಿಕೊಂಡು ಆ ವ್ಯವಸ್ಥೆಯೊಳಗೆ ಜ್ಞಾನವಂತರಾಗಿ ಬರಬೇಕು ಎಂದರು. ವಿವಿಧ ಹಂತಗಳ ನ್ಯಾಯಾಲಯದ ಕಾರ್ಯಕಲಾಪಗಳನ್ನು

ನ್ಯಾಯಾಂಗ ಹುದ್ದೆ ಅತ್ಯಂತ ಶ್ರೇಷ್ಠವಾದದ್ದು: ನ್ಯಾ. ವಿಶ್ವಜಿತ್ ಶೆಟ್ಟಿ | ವಿವೇಕಾನಂದ ಕಾನೂನು ಮಹಾವಿದ್ಯಾಲಯದ 35ನೇ ವಾರ್ಷಿಕೋತ್ಸವ Read More »

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

ಪುತ್ತೂರು: ಮಕ್ಕಳ ಶಿಸ್ತು ಬದ್ಧ ನಡವಳಿಕೆಯಲ್ಲಿ ಪೋಷಕರ ಪಾತ್ರ ಹಿರಿದಾದುದು. ತಪ್ಪಾದಾಗ ತಿದ್ದುವ ,ಸೋತಾಗ ಸ್ಪೂರ್ತಿಯಾಗುವ ಆತ್ಮೀಯ ಗೆಳೆಯರು ನಾವಾಗಬೇಕು. ಆಡಳಿತ ಮಂಡಳಿ ,ಶಿಕ್ಷಕ ವರ್ಗದೊಂದಿಗೆ ನಿಕಟ ಸಂಪರ್ಕವನ್ನಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ ಪ್ರಾಂಶುಪಾಲೆ  ಶೋಭಿತಾ ಸತೀಶ್ ಹೇಳಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯಲ್ಲಿ ಅವರು ಮಾತನಾಡಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತ್ಯನಾರಾಯಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ Read More »

ಆ.30 : ಸಂಪ್ಯದಲ್ಲಿ ಇಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆ “ಆದರ್ಶ ಇಲೆಕ್ಟ್ರಾನಿಕ್ಸ್ & ಫರ್ನಿಚರ್” ಶುಭಾರಂಭ

ಪುತ್ತೂರು: ನೂತನ ಇಲೆಕ್ಟ್ರಾನಿಕ್ಸ್ ಮತ್ತು ಪೀಠೋಪಕರಣಗಳ ಮಳಿಗೆ “ಆದರ್ಶ ಇಲೆಕ್ಟ್ರಾನಿಕ್ಸ್ & ಫರ್ನಿಚರ್” ಆ.30 ಬುಧವಾರ ಸಂಜೆ 5 ಗಂಟೆಗೆ ಸಂಪ್ಯ ಫಡಿಲ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಕರ್ನಾಟಕ ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ನೂತನ ಸಂಸ್ಥೆಯನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ ಪಾಲ್ಗೊಳ್ಳುವರು. ಅತಿಥಿಗಳಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಗ್ರಾಮಾಂತರ ಠಾಣಾ ಉಪನಿರೀಕ್ಷಕ ಧನಂಜಯ ಬಿ.ಸಿ., ಸಂಪ್ಯ ಅಕ್ಷಯ ಕಾಲೇಜಿನ ನಿರ್ದೇಶಕ ಜಯಂತ ನಡುಬೈಲು, ಪದ್ಮಶ್ರೀ ಸೋಲಾರ್ ನ ಮಾಲಕ ಸೀತಾರಾಮ್

ಆ.30 : ಸಂಪ್ಯದಲ್ಲಿ ಇಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆ “ಆದರ್ಶ ಇಲೆಕ್ಟ್ರಾನಿಕ್ಸ್ & ಫರ್ನಿಚರ್” ಶುಭಾರಂಭ Read More »

ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ

ಪುತ್ತೂರು: ನೆಹರೂನಗರದ ವಿವೇಕಾನಂದ ಸಿ ಬಿ ಎಸ್ ಸಿ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದೆ. ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಯಶಸ್ ಎಸ್, ವಿನೋಭ ಭಾವೆ,  ಅನುಷ್ ಕೆ. ಎನ್, ಅರ್ಜುನ್ ಕೆ.ಎಚ್, ವಾಣಿಜ್ಯ ವಿಭಾಗದ ಶಶಿಕಾಂತ್, ರಂಜಿತ್ ಬಿ ಎಂ, ಜೀತೆಶ್  ಜೆ ಎಸ್ , ಪ್ರಥಮ ಪಿಯುಸಿ ವಿಜ್ಞಾನ  ವಿಭಾಗದ ಸತೀರ್ಥ್,ಅತೀಥ್, ವಿಶ್ರುತ್ ಎನ್, ಪ್ರವೀಣ್

ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ದ್ವಿತೀಯ Read More »

ಅಕ್ಷಯ ಕಾಲೇಜಿನಲ್ಲಿ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ, ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ಇಲ್ಲಿನ ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಕಾಲೇಜಿನ ಶಿಕ್ಷಕ ಹಾಗೂ ಹೆತ್ತವರ ಸಂಘದ ವತಿಯಿಂದ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ನಡುಬೈಲು ದೀಪ ಪ್ರಜ್ವಲಿಸಿ, ನಮ್ಮ ಕಾಲೇಜನ್ನು ಆಯ್ಕೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ, ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು. ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾಲೇಜಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ

ಅಕ್ಷಯ ಕಾಲೇಜಿನಲ್ಲಿ ನೂತನವಾಗಿ ದಾಖಲಾದ ವಿದ್ಯಾರ್ಥಿಗಳಿಗೆ, ಹೆತ್ತವರಿಗೆ ಮಾಹಿತಿ ಕಾರ್ಯಾಗಾರ Read More »

ಸೌಜನ್ಯ ಕೊಲೆ ನೈಜ ಆರೋಪಿಗಳನ್ನು ಪತ್ತೆಹಚ್ಚುವಂತೆ ಆಗ್ರಹಿಸಿ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹ | ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಪತ್ರಿಕಾಗೋಷ್ಠಿ

ಪುತ್ತೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಪತ್ತೆಹಚ್ಚುವಂತೆ ಆಗ್ರಹಿಸಿ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹವನ್ನು ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಸಲಾಗುವುದು ಎಂದು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ತಿಳಿಸಿದ್ದಾರೆ. ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತು ಸಭೆಯೊಂದನ್ನು ಏರ್ಪಡಿಸಿ ದಿನ ನಿಗದಿ ಮಾಡಲಾಗುವುದು. ಅಲ್ಲದೆ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳ ಗೌಡ ಸಮಿತಿಗಳ ಜಿಲ್ಲಾ ಒಕ್ಕೂಟವನ್ನು ರಚನೆ ಮಾಡಲಾಗಿದೆ. ಈ

ಸೌಜನ್ಯ ಕೊಲೆ ನೈಜ ಆರೋಪಿಗಳನ್ನು ಪತ್ತೆಹಚ್ಚುವಂತೆ ಆಗ್ರಹಿಸಿ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹ | ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಪತ್ರಿಕಾಗೋಷ್ಠಿ Read More »

ಮಹಿಳೆ ನಾಪತ್ತೆ : ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

ಕಡಬ: ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದ ಮಹಿಳೆಯೊಬ್ಬರು ನಾಪತ್ತೆಯಾದ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐತ್ತೂರು ಗ್ರಾಮದ ಓಟೆಕಜೆ ಸಿ.ಆರ್.ಸಿ. ಕಾಲೋನಿ ನಿವಾಸಿ ಮಂಜುಳಾ ನಾಪತ್ತೆಯಾದ ಮಹಿಳೆ. ಬಿಳಿನೆಲೆಯಲ್ಲಿರುವ ಅಂಗಡಿಯೊಂದರಲ್ಲಿ ವಾಹನ ಇನ್ಸೂರೆನ್ಸ್‍  ಏಜೆನ್ಸಿಯಾಗಿ ಕೆಲ ಮಾಡಿಕೊಂಡಿದ್ದರು. ಕೆಲಸಕ್ಕೆಂದು ಮನೆಯಿಂದ ಹೊರ ಹೋದೆ ಮಹಿಳೆ ಬಳಿಕ ನಾಪತ್ತೆಯಾಗಿದ್ದರು. ಆಕೆಯ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ಈ ಕುರಿತು ಪತಿ ಶಿವಕುಮಾರ್ ಕಡಬ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಮಹಿಳೆ ನಾಪತ್ತೆ : ಕಡಬ ಠಾಣೆಯಲ್ಲಿ ಪ್ರಕರಣ ದಾಖಲು Read More »

error: Content is protected !!
Scroll to Top