ಪುತ್ತೂರು

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ ಮತ್ತು 16 ಡಿಸ್ಟಿಂಕ್ಷನ್

ಸವಣೂರು: ವಿದ್ಯಾರಶ್ಮಿ ವಿದ್ಯಾಲಯ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾದ ವಿದ್ಯಾರಶ್ಮಿ ವಿದ್ಯಾಲಯದ 41 ವಿದ್ಯಾರ್ಥಿಗಳ ಪೈಕಿ 41 ವಿದ್ಯಾರ್ಥಿಗಳು ತೇರ್ಗಡೆಯಾಗಿ 100 ಶೇಕಡಾ ಫಲಿತಾಂಶ ಲಭಿಸಿದೆ. 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯ ಸಾಧಕರು: ಸೃಜನ್.ಕೆ-618 (ಸುಧೀರ್ ಕೆ ಮತ್ತು ಸುಪ್ರಿಯ ಇವರ ಪುತ್ರ),  ಹೆಚ್.ಎಸ್.ಶ್ರುತ ಜೈನ್-617 (ಹೆಚ್ ಶ್ರೇಯಾಂಸ ಕುಮಾರ್ ಇಂದ್ರ ಮತ್ತು ಶ್ವೇತ ಬಿ ಎಸ್ ಇವರ ಪುತ್ರಿ), ಎಂ.ವೈಷ್ಣವಿ-616 (ಲಕ್ಷ್ಮೀಶ ಮತ್ತು ರಾಧಿಕ […]

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ ಮತ್ತು 16 ಡಿಸ್ಟಿಂಕ್ಷನ್ Read More »

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಗೆ ನೂರು ಶೇಕಡಾ ಫಲಿತಾಂಶ

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು 2025 ಮಾರ್ಚ ನಲ್ಲಿ ಜರಗಿದ ಎಸ್. ಎಸ್. ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ 11 ವಿದ್ಯಾರ್ಥಿಗಳು  ಉತ್ತೀರ್ಣರಾಗಿ ನೂರು ಶೇಕಡ ಫಲಿತಾಂಶ ಬಂದಿರುತ್ತದೆ. ಸಂಸ್ಥೆಯ ಪರಮ ಪೋಷಕರಾದ ಪೂಜ್ಯ  ಶ್ರೀ ಶ್ರೀ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಮತ್ತು ಆಡಳಿತ ಮಂಡಳಿಯ ಅಧ್ಯಕ್ಷರಾದ ಸೂರ್ಯ ಕುಮಾರ್ ಹಳೆಯಂಗಡಿ, ಕಾರ್ಯದರ್ಶಿ ಗುರುರಾಜ ಕೆ ಮಂಗಳೂರು ಮತ್ತು ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ  ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಗೆ ನೂರು ಶೇಕಡಾ ಫಲಿತಾಂಶ Read More »

ಧರ್ಮ ಶಿಕ್ಷಣ ಉದ್ಘಾಟನೆಗೆ ಸಹಸ್ರಾರು ಮಂದಿ ಭಾಗಿಯಾಗಬೇಕು : ಬಾಲಕೃಷ್ಣ ಬೋರ್ಕರ್ | ತಾಲೂಕು ಧರ್ಮ ಶಿಕ್ಷಣ ಸಮಿತಿ ಸಭೆ

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ ಇಡಿಯ ದೇಶದಲ್ಲೇ ನಡೆಸಲು ಉದ್ದೇಶಿಸಲಾಗಿರುವ ಹಿಂದೂ ಧರ್ಮ ಶಿಕ್ಷಣ ವ್ಯವಸ್ಥೆ ಮೊದಲು ಪುತ್ತೂರಿನಲ್ಲಿ ಜಾರಿಗೊಳ್ಳುತ್ತಿರುವುದು ಹೆಮ್ಮೆಯ ವಿಚಾರ. ಇಂತಹ ಮಹೋನ್ನತ ಹಾಗೂ ಐತಿಹಾಸಿಕ ಘಟನೆಗೆ ಪುತ್ತೂರಿನ ನಾಗರಿಕ ಸಮಾಜ ಸಾಕ್ಷಿಯಾಗುತ್ತಿದೆ ಎಂದು ತಾಲೂಕು ಧರ್ಮ ಶಿಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಬೋರ್ಕರ್ ಹೇಳಿದರು. ಅವರು ನಗರದ ತೆಂಕಿಲದಲ್ಲಿರುವ ಸ್ವಾಮಿ ಕಲಾ ಮಂದಿರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ತಾಲೂಕು ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಧರ್ಮ ಶಿಕ್ಷಣ ಉದ್ಘಾಟನೆಗೆ ಸಹಸ್ರಾರು ಮಂದಿ ಭಾಗಿಯಾಗಬೇಕು : ಬಾಲಕೃಷ್ಣ ಬೋರ್ಕರ್ | ತಾಲೂಕು ಧರ್ಮ ಶಿಕ್ಷಣ ಸಮಿತಿ ಸಭೆ Read More »

ಪುತ್ತೂರಿನ ಬಂದ್ ಮಾಡದ ಅಂಗಡಿಗಳ ವಿರುದ್ಧ ಹಿಂದೂ ಸಂಘಟನೆಗಳಿಂದ ಆಕ್ರೋಶ | ಪುತ್ತೂರು ಬಸ್‍ ನಿಲ್ದಾಣದ ಬಳಿ ಜಮಾಯಿಸಿದ ಹಿಂದೂ ಸಂಘಟನೆಗಳು

ಪುತ್ತೂರು: ಸುಹಾಸ್‍ ಶೆಟ್ಟಿ ಹತ್ಯೆ  ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಂದ್ ಗೆ ಕರೆ ನೀಡಿದರೂ ಶುಕ್ರವಾರ ಪುತ್ತೂರಿನಲ್ಲಿ ಕೆಲವು ಅಂಗಡಿಗಳು ಬಂದ್‍ ಮಾಡದ ಕಾರಣ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ನಡೆದಿದೆ. 11 ಗಂಟೆ ಸುಮಾರಿಗೆ ಅರುಣ್ ಕುಮಾರ್ ಪುತ್ತಿಲ ಅವರು ಪೊಲೀಸರ ಜೊತೆ ಮಾತನಾಡಿ, ಅಂಗಡಿಗಳನ್ನು ಬಂದ್ ಮಾಡಿಸಿ, ಹಾಗೊಂದು ವೇಳೆ ಬಂದ್ ಮಾಡದೇ ಇದ್ದರೆ ಸವಾಲು ಎದುರಿಸಲು ಸಿದ್ಧ ಎಂದರು. ಮುರಳೀಕೃಷ್ಣ ಹಸಂತ್ತಡ್ಕ

ಪುತ್ತೂರಿನ ಬಂದ್ ಮಾಡದ ಅಂಗಡಿಗಳ ವಿರುದ್ಧ ಹಿಂದೂ ಸಂಘಟನೆಗಳಿಂದ ಆಕ್ರೋಶ | ಪುತ್ತೂರು ಬಸ್‍ ನಿಲ್ದಾಣದ ಬಳಿ ಜಮಾಯಿಸಿದ ಹಿಂದೂ ಸಂಘಟನೆಗಳು Read More »

ಸುಹಾಸ್‍ ಶೆಟ್ಟಿ ಹತ್ಯೆ ಹಿನ್ನಲೆ : ವಿಟ್ಲ ಸಂಪೂರ್ಣ ಬಂದ್

ವಿಟ್ಲ: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್‍ ನೀಡಿ ಬಂದ್‍ ಕರೆಗೆ ವಿಟ್ಲ, ಮಾಣಿ ಸೂರಿಕುಮೇರು ನೇರಳಕಟ್ಟೆ ಸಹಿತವ ಹೋಬಳಿ ವ್ಯಾಪ್ತಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಳಿಗ್ಗೆ ವಿಟ್ಲ ದಲ್ಲಿ ಕೇರಳ ರಾಜ್ಯದ ಮತ್ತು ಕರ್ನಾಟಕದ ಕೆಎಸ್ ಆರ್ ಟಿ ಸಿ ಬಸ್ ಗಳ ಸಂಚಾರ ಮಾಡಿತ್ತು. ಬಳಿಕ ಸಂಚಾರ ಸಂಚಾರ ಸ್ಥಗಿತಗೊಳಿಸಿದೆ. ಖಾಸಗಿ ಬಸ್ ಗಳು ಬೆಳಿಗ್ಗೆನಿಂದಲೇ ರಸ್ತೆಗೆ ಇಳಿಯಲಿಲ್ಲ. ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್, ಹಾಲಿನ ಅಂಗಡಿ ಹೊರತುಪಡಿಸಿ ಉಳಿದೆಲ್ಲ ಅಂಗಡಿ

ಸುಹಾಸ್‍ ಶೆಟ್ಟಿ ಹತ್ಯೆ ಹಿನ್ನಲೆ : ವಿಟ್ಲ ಸಂಪೂರ್ಣ ಬಂದ್ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ವಿಎಚ್‍ ಪಿ ಬಂದ್‍ ಕರೆಗೆ ಪುತ್ತೂರಿನಲ್ಲಿ ವ್ಯಾಪಕ ಬೆಂಬಲ

ಪುತ್ತೂರು: ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷದ್ ಕರೆ ನೀಡಿದ ಬಂದ್‍ ಗೆ ಪುತ್ತೂರಿನಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್‍ ಕರೆ ನೀಡಿದ ಬೆನ್ನಲ್ಲೇ ಪುತ್ತೂರಿನ ಎಲ್ಲಾ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ನ್ಯೂಸ್‍ ಪೇಪರ್‍ ಏಜೆನ್ಸಿ,ಹಾಲು, ಮೆಡಿಕಲ್‍, ಆಸ್ಪತ್ರೆ ಇನ್ನಿತರ ಪ್ರಮುಖ ಅಂಗಡಿಗಳು ತೆರೆದಿದ್ದವು. ಕೆಲವೆಡೆ ಹೊಟೇಲ್ ಗಳು ಅರ್ಧ ತೆರೆದಿದ್ದಿರುವುದು ಕಂಡು ಬಂದಿದೆ. ಆಟೋ, ಕಾರು ಮುಂತಾದ ಖಾಸಗಿ ವಾಹನಗಳ ಓಡಾಟ ನಡೆಸುತ್ತಿದ್ದವು.

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ವಿಎಚ್‍ ಪಿ ಬಂದ್‍ ಕರೆಗೆ ಪುತ್ತೂರಿನಲ್ಲಿ ವ್ಯಾಪಕ ಬೆಂಬಲ Read More »

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ಬಂಟ್ವಾಳದಲ್ಲಿ ಅಂತ್ಯಕ್ರಿಯೆಗೆ ತಯಾರಿ

ಮಂಗಳೂರು: ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ನಡೆದಿದ್ದು, ಅವರ ಅಂತ್ಯಕ್ರಿಯೆ ಬಂಟ್ವಾಳದಲ್ಲಿ ನಡೆಯಲಿದೆ. ಸುಹಾಸ್ ಶೆಟ್ಟಿ ಅವರ ಮೃತದೇಹ ಮೆರವಣಿಗೆ ಮೂಲಕ ತರಲಾಗುತ್ತಿದ್ದು, ಬಂಟ್ವಾಳ ದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಹತ್ಯೆ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಶುಕ್ರವಾರ ದ.ಕ.ಜಿಲ್ಲಾದ್ಯಂತ ಬಂದ್‍ ಗೆ ಕರೆ ನೀಡಿದೆ. ಇಂದು ಬೆಳಿಗ್ಗೆ ಬಂದ್‍ ಗೆ ಕರೆ ನೀಡುತ್ತಿದ್ದಂತೆ ಮಂಗಳೂರಿನಲ್ಲಿ ಕೆಲವು ಬಸ್‍ ಗಳಿಗೆ ಕಲ್ಲು ತೂರಾಟ ನಡೆದ ಘಟನೆಯೂ ನಡೆಯಿತು.

ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ಬಂಟ್ವಾಳದಲ್ಲಿ ಅಂತ್ಯಕ್ರಿಯೆಗೆ ತಯಾರಿ Read More »

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ದ.ಕ.ಜಿಲ್ಲಾದ್ಯಂತ ಬಂದ್‍ ಹಿನ್ನಲೆ |  ಪುತ್ತೂರು-ಮಂಗಳೂರು ಕೆಎಸ್‍ ಆರ್ ಟಿಸಿ ಬಸ್‍ ಗಳ ಪುತ್ತೂರು-ಮಂಗಳೂರು ಓಡಾಟ ಸ್ಥಗಿತ

ಪುತ್ತೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್‍ ದ.ಕ. ಜಿಲ್ಲಾ ಬಂದ್‍ ಗೆ ಕರೆ ನೀಡಿದ್ದು, ಈ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಬಹುತೇಕ ಬಸ್‍ ಗಳ ಓಡಾಟ ಕಡಿಮೆಯಾಗಿದೆ. ಬಂದ್‍ ಕರೆ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಬಂದ್‍ ಮಾಡಲಾಗಿದೆ. ಕೆಲಸಕ್ಕೆ ತೆರಳುತ್ತಿದ್ದ ಹಲವಾರು ಮಂದಿ ನಗರಕ್ಕೆ ಬಂದು ಹಿಂದಕ್ಕೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಪುಣಚ, ಬೆಟ್ಟಂಪಾಡಿ ಮುಂತಾದ ಗ್ರಾಮಾಂತರ ಕಡೆಗಳಿಂದ ನಗರಕ್ಕೆ ಬರುವ ಹಲವಾರು ಬಸ್‍ ಗಳು ಸಾಲುಸಾಲಾಗಿ ಪೆಟ್ರೋಲ್‍

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆ | ದ.ಕ.ಜಿಲ್ಲಾದ್ಯಂತ ಬಂದ್‍ ಹಿನ್ನಲೆ |  ಪುತ್ತೂರು-ಮಂಗಳೂರು ಕೆಎಸ್‍ ಆರ್ ಟಿಸಿ ಬಸ್‍ ಗಳ ಪುತ್ತೂರು-ಮಂಗಳೂರು ಓಡಾಟ ಸ್ಥಗಿತ Read More »

ಪುತ್ತೂರು ಭರತ್ ವಿಧಿವಶ

ಪುತ್ತೂರು: ಪಡ್ನೂರು ಗ್ರಾಮದ ಮತಾವು ಮನೆಯ ದಿ. ಹರೀಶ ಗೌಡ ಮತ್ತು ಜಯಂತಿ ದಂಪತಿಯ ಹಿರಿಯ ಪುತ್ರ ಭರತ್ ಮತಾವು ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದರು. ಭರತ್ ಅವರಿಗೆ ಸುಮಾರು 46 ವರ್ಷ ವಯಸ್ಸಾಗಿದ್ದು ಬೆಂಗಳೂರಿನಲ್ಲಿ ಸಿವಿಲ್ ಬಿಲ್ದರ್ ಆಗಿ ಸ್ವಯಂವೃತ್ತಿ ನಿರತರಾಗಿದ್ದರು. ಮೇಲೊಬ್ಬ ಮಾಯಾವಿ – ಪುತ್ತೂರು ಭರತ್ ಸಿನಿಮಾ ರಂಗದಲ್ಲೂ ಸಕ್ರಿಯರಾಗಿದ್ದ ಅವರು ‘ಮೇಲೊಬ್ಬ ಮಾಯಾವಿ’ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿ ಹೆಸರು ಮಾಡಿದ್ದರು. ಅಲ್ಲಿ ‘ಪುತ್ತೂರು ಭರತ್’ ಎಂದೇ ಜನಪ್ರಿಯರಾಗಿದ್ದರು. ಪುತ್ತೂರಿನ

ಪುತ್ತೂರು ಭರತ್ ವಿಧಿವಶ Read More »

ಪುತ್ತೂರು: ವಿದ್ಯುತ್‍ ತಗುಲಿ ಮಹಿಳೆ ಮೃತ್ಯು

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಮಹಿಳೆಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಬೇಂಗತ್ತಡ್ಕದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ದೇವಪ್ಪ ನಾಯ್ಕ ಅವರ ಪತ್ನಿ ಭಾಗೀರಥಿ (59) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಮನೆಯ ಟೇರಸ್ ಮೇಲೆ ತೆರಳಿದ ಸಂದರ್ಭದಲ್ಲಿ ಪಂಪ್‌ಗೆ ಸೇರಿಸಲಾಗಿದ್ದ ವಯರ್ ಮೇಲೆ ಕಾಲಿಟ್ಟಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಪುತ್ತೂರು: ವಿದ್ಯುತ್‍ ತಗುಲಿ ಮಹಿಳೆ ಮೃತ್ಯು Read More »

error: Content is protected !!
Scroll to Top