ಪುತ್ತೂರು

ಅಸೌಖ್ಯದಿಂದ ಮಹಿಳೆ ಸಾವು

ಪುತ್ತೂರು: ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ‌ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರನ್ನು ದೇವಚಳ್ಳ ಗ್ರಾಮದ ಕಲ್ಲುಪಣೆ ಕೃಷ್ಣಪ್ಪ ನಾಯ್ಕ ಎಂಬವರ ಪುತ್ರಿ ಉಷಾಲತಾ(31) ಎಂದು ಗುರುತಿಸಲಾಗಿದೆ. ಉಷಾ ಅವರು ಮಾವಿನಕಟ್ಟೆಯ ಅರ್ಣ ಗ್ಯಾಸ್‌ನಲ್ಲಿ ಉದ್ಯೋಗಿಯಾಗಿದ್ದರು. ಕಳೆದ ಎರಡು ವರ್ಷದ ಹಿಂದಷ್ಟೇ ಅಲೆಟ್ಟಿಯ ಸೂರಜ್ ಎಂಬವರ ಜೊತೆ ಇವರ ವಿವಾಹ ನಡೆದಿತ್ತು. ಮೃತರು ಪತಿ, ತಂದೆ, ತಾಯಿ, ಸಹೋದರಿಯರನ್ನು ಅಗಲಿದ್ದಾರೆ.

ಅಸೌಖ್ಯದಿಂದ ಮಹಿಳೆ ಸಾವು Read More »

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀರಾಮನವಮಿ ಆಚರಣೆ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ. ಕರ್ನಾಟಕ, ಕೇಂದ್ರ ಕಚೇರಿ ತುಮಕೂರು, ಮಂಗಳೂರು ವಿಭಾಗ ಪುತ್ತೂರು ತಾಲೂಕು ಕಳಿಯ ಶಾಖೆಯಲ್ಲಿ ಶ್ರೀರಾಮ ರಾಮನವಮಿ ಆಚರಣೆ ಮಾಡಲಾಯಿತು. ಗೇರುಕಟ್ಟೆ ಕ್ಷೀರ ಸಂಗಮ ಸಭಾಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಶ್ರೀರಾಮ ಭಜನೆ, ಸ್ತೋತ್ರ ಪಾರಾಯಣವನ್ನು ಯೋಗ ಬಂಧುಗಳು ನಡೆಸಿಕೊಟ್ಟರು. ಭಾರತಿ ಎಂ. ಎಲ್., ಅರುಣಾ, ಪದ್ಮಲತಾ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಹಿರಿಯ ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ, ಶ್ರೀ ರಾಮಚಂದ್ರನ ಆದರ್ಶಗುಣಗಳ ಬಗ್ಗೆ ಬೌದ್ಧಿಕ ನೀಡಿ ಮರ್ಯಾದ

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀರಾಮನವಮಿ ಆಚರಣೆ Read More »

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಉಚಿತ CET ತರಬೇತಿ ಆರಂಭ

ಪುತ್ತೂರು: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳನ್ನು ಮುಂದಿನ ಹಂತಕ್ಕೆ ತಲುಪಿಸುವ ನಿಟ್ಟಿನಲ್ಲಿ ಸಂಪ್ಯದಲ್ಲಿರುವ ಅಕ್ಷಯ ಪಿಯು ಕಾಲೇಜು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಕಾಲೇಜು ವತಿಯಿಂದ ಉಚಿತ ಕ್ರ್ಯಾಶ್ ಕೋರ್ಸ್ಗಳನ್ನು ಆರಂಭಿಸಲಾಗಿದ್ದು, ಇದು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಉತ್ತಮ ಶಿಕ್ಷಣ ವ್ಯವಸ್ಥೆಯನ್ನು ಹೊಂದಿರುವ ಈ ಸಂಸ್ಥೆ, ಸ್ಪರ್ಧಾತ್ಮಕ ಪರೀಕ್ಷೆಗಳಾದ CET, NEET ಹಾಗೂ IIT-JEEಗೆ ವಿಶೇಷ ತರಬೇತಿ ನೀಡುತ್ತಿದೆ. ಶ್ರೀ ಚೈತನ್ಯ ಇನ್‌ಸ್ಟಿಟ್ಯೂಷನ್

ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಉಚಿತ CET ತರಬೇತಿ ಆರಂಭ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ, ಪುತ್ತೂರು ಘಟಕದ ಸಭೆ

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರು ಬಂಟ್ವಾಳ ಇದರ ಪುತ್ತೂರು ಘಟಕದ ಸಭೆ ಸ್ವಾಗತ ಹೋಟೆಲ್ ಸಭಾಂಗಣದಲ್ಲಿ ಜರಗಿತು. ಸಭೆಯಲ್ಲಿ ಪುತ್ತೂರು ಆನಂದಾಶ್ರಮಕ್ಕೆ ಭೇಟಿ, ಜಿಲ್ಲಾ ಸಂಚಾಲಕರ ಭಾಸ್ಕರ್ ಬಾರ್ಯ ಅಗಸ್ತ್ಯ ಅವರ ಮನೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆ ಪೂಜೆಯಲ್ಲಿ ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವುದು, ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನದ ವಾರ್ಷಿಕ ಪ್ರಶಸ್ತಿ ಸಮಾರಂಭ, ಎಪ್ರಿಲ್ 14ರಂದು ಬಾರ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರಗಲಿರುವ ಶ್ರೀ ಮಹಾವಿಷ್ಣು ಯಾಗದಲ್ಲಿ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ, ಪುತ್ತೂರು ಘಟಕದ ಸಭೆ Read More »

ಮಾ. 27 ರಿಂದ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಡೈಮಂಡ್ ಫೆಸ್ಟ್

50,000 ರೂ. ಗಿಂತ ಹೆಚ್ಚಿನ ಖರೀದಿಗೆ ಗ್ಯಾರಂಟಿ ಗಿಫ್ಟ್ ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆ ಮುಳಿಯ ಗೋಲ್ಡ್ & ಡೈಮಂಡ್ಸ್‌ ತನ್ನ ಗ್ರಾಹಕರಿಗೆ ‘ಡೈಮಂಡ್ ಫೆಸ್ಟ್’ ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸುತ್ತಿದೆ. ‘ವೈಡೆಸ್ಟ್ ರೇಂಜ್, ಎಂಡ್‌ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾವರಣ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ. ಫೆಸ್ಟ್‌ನ ಅಂಗವಾಗಿ ಗ್ರಾಹಕರು ₹50,000 ಹೆಚ್ಚಿನ ಖರೀದಿಗೆ ಖಚಿತ ಉಡುಗೊರೆ ಪಡೆಯಬಹುದಾಗಿದೆ. ಜೊತೆಗೆ ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ ಎಲೆಕ್ಟ್ರಿಕ್ ಸ್ಕೂಟರ್ ಗೆಲ್ಲುವ

ಮಾ. 27 ರಿಂದ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಡೈಮಂಡ್ ಫೆಸ್ಟ್ Read More »

ಅಕ್ಷಯ ಪದವಿ ಕಾಲೇಜಿನಲ್ಲಿ ಅದ್ವಯ ಕನ್ನಡ ಸಾಹಿತ್ಯ ಸಂಘದಿಂದ ಅಂಕುರ ಭಿತ್ತಿಪತ್ರ ಅನಾವರಣ

ಪುತ್ತೂರು: ಅಕ್ಷಯ ಪದವಿ ಕಾಲೇಜಿನಲ್ಲಿ ಅದ್ವಯ ಕನ್ನಡ ಸಾಹಿತ್ಯ ಸಂಘದಿಂದ ಅಂಕುರ ಭಿತ್ತಿಪತ್ರ ಅನಾವರಣ ಕಾರ್ಯಕ್ರಮವು ನಡೆಯಿತು. ಕರ್ನಾಟಕ ಸಂಘ, ಪುತ್ತೂರು ಇದರ ಅಧ್ಯಕ್ಷಪುರಂಧರ ಭಟ್ ಬಿ. ಇವರು ಅಂಕುರ ಭಿತ್ತಿಪತ್ರಿಕೆಯ ಅನಾವರಣ ಮಾಡಿ, ದೀಪ ಪ್ರಜ್ವಲನೆಗೈದರು. ಬಳಿಕ ಮಾತನಾಡಿದ ಅವರು, ತಮ್ಮ ಬಾಲ್ಯದ ದಿನಗಳಲ್ಲಿನ ನೆನಪನ್ನು ಬಿತ್ತರಿಸಿ ಮುಂದಿನ ದಿನಗಳಲ್ಲಿ ಅಂಕುರ ಹೆಮ್ಮರವಾಗುವಂತೆ ನಿಮ್ಮ ಭವಿಷ್ಯವು ಉಜ್ವಲವಾಗಲಿ ಎಂದು ಹಾರೈಸಿದರು. ಮುಖ್ಯ ಅತಿಥಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷ ಉಮೇಶ್ ನಾಯಕ್

ಅಕ್ಷಯ ಪದವಿ ಕಾಲೇಜಿನಲ್ಲಿ ಅದ್ವಯ ಕನ್ನಡ ಸಾಹಿತ್ಯ ಸಂಘದಿಂದ ಅಂಕುರ ಭಿತ್ತಿಪತ್ರ ಅನಾವರಣ Read More »

ಸಾಹಿತ್ಯ–ಶಿಕ್ಷಣ–ಸಾಮಾಜಿಕ ಸೇವೆಯ ಸಮನ್ವಯ ಸಾಧಕ ಪುತ್ತೂರು ಉಮೇಶ್ ನಾಯಕ್ ಅವರಿಗೆ ‘ಸುವರ್ಣ ಕನ್ನಡಿಗ’ ಪ್ರಶಸ್ತಿ

ಪುತ್ತೂರು: ಸಾಹಿತ್ಯ, ಶಿಕ್ಷಣ ಹಾಗೂ ಸಾಮಾಜಿಕ ಸೇವೆಯ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದು ಸಮಾಜದ ವಿವಿಧ ಹಂತಗಳ ಮೇಲೆ ಸ್ಪಷ್ಟ ಹಾಗೂ ಸಕಾರಾತ್ಮಕ ಪ್ರಭಾವ ಬೀರಿರುವ ಬಹುಮುಖ ವ್ಯಕ್ತಿತ್ವದ ಚಿಂತನೆ ಕ್ರಿಯಾಶೀಲತೆ ಮತ್ತು ಮಾನವೀಯತೆಗಳ ಭಾವದ ಮೂಲಕ ಪುತ್ತೂರು ತಾಲೂಕಿನಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತನ್ನದೇ ಆದ ವಿಶಿಷ್ಟ ಗುರುತನ್ನ ನಿರ್ಮಿಸಿರುವ ನಿರ್ಗತಿಕರ ಆಪತ್ಬಾಂಧವ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು, 2026ನೇ ಸಾಲಿನ ಪ್ರತಿಷ್ಠಿತ ‘ಸುವರ್ಣ ಕನ್ನಡಿಗ’ ಪ್ರಶಸ್ತಿಗೆ

ಸಾಹಿತ್ಯ–ಶಿಕ್ಷಣ–ಸಾಮಾಜಿಕ ಸೇವೆಯ ಸಮನ್ವಯ ಸಾಧಕ ಪುತ್ತೂರು ಉಮೇಶ್ ನಾಯಕ್ ಅವರಿಗೆ ‘ಸುವರ್ಣ ಕನ್ನಡಿಗ’ ಪ್ರಶಸ್ತಿ Read More »

ಕಲ್ಲೇಗ ಅಕ್ಷಯ್ ಕೊಲೆ ಆರೋಪಿಗಳಲ್ಲಿ ಇಬ್ಬರಿಗೆ ‌ಷರತ್ತುಬದ್ಧ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ 3 ಮತ್ತು 4 ನೇ ಆರೋಪಿಗಳಿಗೆ ಪುತ್ತೂರಿನ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆರೋಪಿಗಳಾದ ಮಂಜುನಾಥ ಶೆಣೈ ಮತ್ತು ಕೇಶವ್ ಪರವಾಗಿ ವಾದ ಮಂಡನೆ ಮಾಡಿರುವ ವಕೀಲ ನರಸಿಂಹ ಪ್ರಸಾದ್ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿಕೊಡುವಲ್ಲಿ ಸಫಲರಾಗಿದ್ದಾರೆ. ವಾದವನ್ನು ಆಲಿಸಿದ ನ್ಯಾಯಾಧೀಶೆ ಸರಿತಾ ಡಿ. ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದಾಗಿದೆ.

ಕಲ್ಲೇಗ ಅಕ್ಷಯ್ ಕೊಲೆ ಆರೋಪಿಗಳಲ್ಲಿ ಇಬ್ಬರಿಗೆ ‌ಷರತ್ತುಬದ್ಧ ಜಾಮೀನು Read More »

ಮಾ.25-28:ನೈತಾಡಿ ಬಂಗೇರ ಕುಟುಂಬದ ಸಾವಿರದ ಒಂದು ದೈವಗಳ ತರವಾಡು ಮನೆಯಲ್ಲಿ ನೇಮೋತ್ಸವ

ಪುತ್ತೂರು: ಸುಮಾರು 56 ವರ್ಷಗಳ ಇತಿಹಾಸವಿರುವ ಕೆಮ್ಮಿಂಜೆ ಗ್ರಾಮದ ನೈತಾಡಿ ಬಂಗೇರ ಕುಟುಂಬಸ್ಥರ ಸಾವಿರದ ಒಂದು ದೈವಗಳ ತರವಾಡು ಮನೆಯಲ್ಲಿ ದೈವಗಳ‌ ನೇಮೋತ್ಸವ ಕಾರ್ಯಕ್ರಮ ಮಾ.25 ರಿಂದ 28ರ ವರೆಗೆ ಜರಗಲಿದೆ. ಮಾ. 25 ರಂದು ಬೆಳಿಗ್ಗೆ ಗಣಹೋಮ, ನಾಗತಂಬಿಲ, ಮುಡಿಪು ಶುದ್ಧ, ಉಳ್ಳಾಕುಲು ದೈವದ ಭಂಡಾರ ತೆಗೆಯುವುದು, ಜಾಗದ ಕಲ್ಲುರ್ಟಿ ನೇಮ, ಮಾ. 26 ರಂದು ಬೆಳಿಗ್ಗೆ ಉಳ್ಳಾಕುಲು ದೈವದ ನೇಮೋತ್ಸವ, ಮಧ್ಯಾಹ್ನ ಅನ್ನಪ್ರಸಾದ, ಸಂಜೆ ರಕ್ತೇಶ್ವರಿ, ಪಿಲಿಚಾಮುಂಡಿ ಧರ್ಮದೈವ ವರ್ಣರ ಪಂಜುರ್ಲಿ, ಜಾವತೆ ದೈವಗಳ

ಮಾ.25-28:ನೈತಾಡಿ ಬಂಗೇರ ಕುಟುಂಬದ ಸಾವಿರದ ಒಂದು ದೈವಗಳ ತರವಾಡು ಮನೆಯಲ್ಲಿ ನೇಮೋತ್ಸವ Read More »

ದರ್ಬೆಯಲ್ಲಿ ರಿಕ್ಷಾ – ದ್ವಿಚಕ್ರ ವಾಹನದ ನಡುವೆ ಅಪಘಾತ

ಪುತ್ತೂರು: ದರ್ಬೆಯ ಹರ್ಷ ಮಳಿಗೆಯ ಸಮೀಪ ಇಂದು ಮಧ್ಯಾಹ್ನ ಅಟೋ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಸವಾರ ಗಾಯಗೊಂಡಿದ್ದಾರೆ. ಸ್ಕೂಟಿ ಸವಾರ ಒಳ ರಸ್ತೆಯಿಂದ ಮುಖ್ಯರಸ್ತೆಗೆ ‌ಸಂಪರ್ಕಿಸುತ್ತಿದ್ದು, ಆಟೋ ರಿಕ್ಷಾ ದರ್ಬೆಯಿಂದ ಪುತ್ತೂರಿಗೆ ‌ಹೋಗುತ್ತಿತ್ತು. ಅಪಘಾತದ ರಭಸಕ್ಕೆ ಸ್ಕೂಟಿ ರಸ್ತೆಗೆ ಬಿದ್ದು ಸವಾರ ಮತ್ತು ಹಿಂಬದಿ ಸವಾರೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಪರಿಣಾಮ ಇವರಿಗೆ ತರಚು ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನೆಯ ‌ಬಳಿಕ ರಿಕ್ಷಾ ಚಾಲಕ ಮತ್ತು ಸ್ಕೂಟಿಯಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ.

ದರ್ಬೆಯಲ್ಲಿ ರಿಕ್ಷಾ – ದ್ವಿಚಕ್ರ ವಾಹನದ ನಡುವೆ ಅಪಘಾತ Read More »

error: Content is protected !!
Scroll to Top