ಪುತ್ತೂರು

ಕಲ್ಲಾರೆ ಮಠದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ವತಿಯಿಂದ 49ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ನಗರದ ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಸಭಾಭವನದಲ್ಲಿ ನಡೆಯಿತು. ಶ್ರೀ ಗುರುರಾಘವೇಂದ್ರ ಮಠದ ಪ್ರಧಾನ ಅರ್ಚಕ ರಾಘವೇಂದ್ರ ಉಡುಪ ಪೂಜಾ ವಿಧಿ ವಿಧಾನ ನೆರವೇರಿಸಿದರು. ಸುಮಾರು 500 ಕ್ಕೂ ಮಿಕ್ಕಿ ಭಕ್ತಾದಿಗಳು ಪೂಜಾ ಸೇವೆ ಮಾಡಿಸಿದ್ದು, ಪ್ರಸಾದ ಸ್ವೀಕರಿಸಿದರು. ಬಳಿಕ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಕಲ್ಲಾರೆ ಮಠದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ Read More »

ನಾಳೆ (ಆ.26) : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ “ಸಮಾವರ್ತನ”

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ “ಸಮಾವರ್ತನ” ಸಮಾರಂಭ ಆ.26 ಶನಿವಾರ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. 2022-23ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ. ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದಲ್ಲಿ 4ನೇ ರ್‍ಯಾಂಕ್ ಗಳಿಸಿರುವ ಜಾಗೃತಿ.ಜೆ.ನಾಯಕ್ ಹಾಗೂ ಏಳನೇ ರ್‍ಯಾಂಕ್ ಗಳಿಸಿರುವ ದಿವ್ಯಶ್ರೀ.ಎಸ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ನಾಳೆ (ಆ.26) : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ “ಸಮಾವರ್ತನ” Read More »

ಆ.27 : ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘದಿಂದ ಕೆಸರುಗದ್ದೆ ಕ್ರೀಡಾಕೂಟ

ಪುತ್ತೂರು: ಪುತ್ತೂರು ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘದ ವತಿಯಿಂದ 4ನೇ ವರ್ಷದ ಕೆಸರುಗದ್ದೆ ಕ್ರೀಡೋತ್ಸವ ಆ.27 ಭಾನುವಾರ ಮುಗೇರಡ್ಕ ಲೀಲಾವತಿ ವಿಶ್ವನಾಥ ಜೋಗಿ ಅವರ ಕೆಸರುಗದ್ದೆಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಮೋನಪ್ಪ ಪುರುಷ ಮುಗೇರಡ್ಕ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ಸಂಘ ವ್ಯಾಪ್ತಿಗೆ ಪುತ್ತೂರು, ಕಡಬ, ಬೆಳ್ತಂಗಡಿ, ಸುಳ್ಯ ಬರುತ್ತಿದ್ದು, ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಂತೆ ಕಾಸರಗೋಡು, ಮಂಗಳೂರು, ಬಂಟ್ವಾಳ, ವಿಟ್ಲ ಮುಡಿಪು, ಉಡುಪಿ, ಕುಂದಾಪುರ ಹಾಗೂ ಕರ್ನಾಟಕದ ಇತರ ಜಿಲ್ಲೆಗಳ ತಂಡಗಳಿಗೆ

ಆ.27 : ನಾಥಪಂಥೀಯ ಜೋಗಿ ಸಮಾಜ ಸುಧಾರಕ ಸಂಘದಿಂದ ಕೆಸರುಗದ್ದೆ ಕ್ರೀಡಾಕೂಟ Read More »

ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಸವಣೂರು : ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ ಆರಂಭಗೊಂಡಿದೆ. ದೇವಸ್ಥಾನದ ಪವಿತ್ರಪಾಣಿ ರತ್ನಾಕರ ಕುಂಜತ್ತಾಯರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅರ್ಚಕ ಪದ್ಮನಾಭ ಕುಂಜತ್ತಾಯ ,ದೇವಸ್ಥಾನದ ವ್ಯವಸ್ಥಾಪನ ಸಮಿತಿ , ಭಕ್ತಾದಿಗಳು ಉಪಸ್ಥಿತರಿದ್ದಾರೆ.

ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ Read More »

ಮರದಿಂದು ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಸೋಮನಾಥ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ನೆಲ್ಯಾಡಿ: ಮರದಿಂದ ಬಿದ್ದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಚ್ಲಂಪಾಡಿಯ ಕೂಲಿ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಚ್ಲಂಪಾಡಿ ಗ್ರಾಮದ ಮೊಂಟೆತ್ತಡ್ಕ ನಿವಾಸಿ ಸೋಮನಾಥ (47) ಮೃತಪಟ್ಟವರು. 15 ದಿನಗಳ ಹಿಂದೆ ಇಚ್ಲಂಪಾಡಿ ಗ್ರಾಮದ ಮಾನಡ್ಕ ಎಂಬಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದ ಸಂದರ್ಭ ಮರ ಏರಿ ಗೆಲ್ಲುಗಳನ್ನು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಅವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮರದಿಂದು ಬಿದ್ದು ಚಿಕಿತ್ಸೆ ಪಡೆಯುತ್ತಿದ್ದ ಸೋಮನಾಥ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಸೆ.3 : ಮಂಚಿಯಲ್ಲಿ ಜನಜಾಗೃತಿ ಸಮಾವೇಶ | ಕರಪತ್ರ ಬಿಡುಗಡೆ

ಪುತ್ತೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಂಚಿ ಘಟಕದ ವತಿಯಿಂದ ಸೆ.3 ರಂದು ನಡೆಯುವ ಹಿಂದೂ ಜಗಜಾಗೃತಿ ಸಮಾವೇಶದ ಕರಪತ್ರ ಬಿಡುಗಡೆ ಮಾಡಲಾಯಿತು. ಮಂಚಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಲಿದ್ದು, ಸಮಾವೇಶದ ಕರಪತ್ರ ಹಾಗೂ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಸ್ಟಿಕ್ಕ ರ್ ನ್ನು ಮಂಚಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಜರಂಗದಳ ಪ್ರಮುಖ ಮಿಥುನ್ ಕಲ್ಲಡ್ಕ, ವಿಹಿಂಪ ಬಜರಂಗದಳ ಮಂಚಿ ಘಟಕದ ಕಾರ್ಯಕರ್ತರು ಉಪಸ್ಥಿತರಿದ್ದರು.

ಸೆ.3 : ಮಂಚಿಯಲ್ಲಿ ಜನಜಾಗೃತಿ ಸಮಾವೇಶ | ಕರಪತ್ರ ಬಿಡುಗಡೆ Read More »

ಪುತ್ತೂರು ಕೊಲೆ ಪ್ರಕರಣ ಖಂಡನೀಯ | ಆರೋಪಿಗೆ ಕಠಿಣ ಶಿಕ್ಷೆಗೆ ಒಳಪಡಿಸಲು ಆಗ್ರಹ : ವಿಶ್ವ ಹಿಂದೂ ಪರಿಷದ್ ದುರ್ಗಾವಾಹಿನಿ

ಪುತ್ತೂರು: ಪುತ್ತೂರಿನಲ್ಲಿ ಹಾಡುಹಗಲೇ ಯುವತಿಯನ್ನು ಅಮಾನವೀಯವಾಗಿ ಕೊಲೆ ಮಾಡಿದ ಘಟನೆ ಖಂಡನೀಯ, ಈ ಕೃತ್ಯವನ್ನು ವಿಶ್ವ ಹಿಂದೂ ಪರಿಷದ್ ದುರ್ಗಾವಾಹಿನಿ ಬಲವಾಗಿ ಖಂಡಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಯುವತಿಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಕೊಲೆಯತ್ನ, ಕೊಲೆ  ಪ್ರಕರಣಗಳು ದಿನನಿತ್ಯ ಹೆಚ್ಚಾಗುತ್ತಿದೆ, ಪೊಲೀಸ್ ಇಲಾಖೆ ಇಂತಹ ಘಟನೆ ನಡೆಯದಂತೆ ಕ್ರಮಕೈಗೊಳಬೇಕು. ಈ ಕೃತ್ಯ ನಡೆಸಿದವನಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ದುರ್ಗಾವಾಹಿನಿ ಪುತ್ತೂರು ಜಿಲ್ಲಾ ಸಂಯೋಜಕಿ ಹೇಮಾ ಶುಭಾಷಿಣಿ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಪುತ್ತೂರು ಕೊಲೆ ಪ್ರಕರಣ ಖಂಡನೀಯ | ಆರೋಪಿಗೆ ಕಠಿಣ ಶಿಕ್ಷೆಗೆ ಒಳಪಡಿಸಲು ಆಗ್ರಹ : ವಿಶ್ವ ಹಿಂದೂ ಪರಿಷದ್ ದುರ್ಗಾವಾಹಿನಿ Read More »

ಚೂರಿ ಇರಿತಕ್ಕೊಳಗಾದ ಯುವತಿ ಮೃತ್ಯು | ಪರಸ್ಪರ ಪ್ರೀತಿಸುತ್ತಿದ್ದ ಪದ್ಮರಾಜ್-ಗೌರಿ | ಇವರಿಬ್ಬರ ಜಗಳದಲ್ಲಿ ವಿಟ್ಲ ಠಾಣೆಯಲ್ಲೂ ದಾಖಲಾಗಿತ್ತು ಪ್ರಕರಣ !?

ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ದುಷ್ಕರ್ಮಿಯಿಂದ ಚೂರಿ ಇರಿತಕ್ಕೆ ಒಳಗಾಗಿದ ಯುವತಿ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾಳೆ. ವಿಟ್ಲ ಸಮೀಪದ ಅಳಿಕೆ ಗ್ರಾಮದ ಆದಾಳ ನಿವಾಸಿ ಗೌರಿ (18) ಮೃತಪಟ್ಟವರು. ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಬಂದಿ ಪದ್ಮರಾಜ್ ಎಂಬಾತ ಮಾರಕಾಯುದದಿಂದ ಹಲವು ಬಾರಿ ದಾಳಿ ಮಾಡಿದ್ದ. ಬೈಕ್ ನಲ್ಲಿ ಬಂದಿದ್ದ ಆತ, ಕೃತ್ಯ ಎಸಗಿ ಬೈಕನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದಾನೆ. ತಕ್ಷಣ ಗಾಯಾಳು ಗೌರಿಯವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ತಂದು ತುರ್ತು ನಿಗಾ

ಚೂರಿ ಇರಿತಕ್ಕೊಳಗಾದ ಯುವತಿ ಮೃತ್ಯು | ಪರಸ್ಪರ ಪ್ರೀತಿಸುತ್ತಿದ್ದ ಪದ್ಮರಾಜ್-ಗೌರಿ | ಇವರಿಬ್ಬರ ಜಗಳದಲ್ಲಿ ವಿಟ್ಲ ಠಾಣೆಯಲ್ಲೂ ದಾಖಲಾಗಿತ್ತು ಪ್ರಕರಣ !? Read More »

ಚಂದ್ರಯಾನ-3 ಯಶಸ್ವಿ ಹಿನ್ನೆಲೆ : ನರೇಂದ್ರ ಪ.ಪೂ. ಕಾಲೇಜಿನಲ್ಲಿ ಸಂಭ್ರಮಾಚರಣೆ

ಪುತ್ತೂರು: ಶಶಾಂಕನ ದಕ್ಷಿಣ ಧ್ರುವಕ್ಕೆ ಪ್ರವೇಶ ಮಾಡಿದ ಮೊದಲ ರಾಷ್ಟ್ರ ಭಾರತ. ಚಂದ್ರಯಾನ 3 ಗೆ ಸಿಕ್ಕ ಯಶಸ್ಸು  ಭರತಖಂಡದಲ್ಲಿ ಸಂಭ್ರಮ ಮೂಡಿಸಿದೆ.ಈ ಯಶಸ್ಸಿನಿಂದಾಗಿ ಅಭಿವೃದ್ಧಿ ಹೊಂದಿದ ನವಭಾರತದ ಉದಯವಾಗಿದೆ.  ವೈಜ್ಞಾನಿಕ ವಿಕ್ರಮವೊಂದರ ಹೊತ್ತಿನಲ್ಲಿ ಈ ಹಿಂದೆಂದೂ ಕಂಡುಬರದ ಏಕತೆ, ಐಕ್ಯತೆ, ಉತ್ಸಾಹ ಭಾರತೀಯರಲ್ಲಿ ಪ್ರಕಟವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಹೇಳಿದರು. ನರೇಂದ್ರ ಪ.ಪೂ. ಕಾಲೇಜಿನಲ್ಲಿ ಚಂದ್ರಯಾನ-3 ರ ಯಶಸ್ವಿಯ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು. ಇಸ್ರೋದ ಈ ಯಶಸ್ಸು ಬರೀ ಅದರ

ಚಂದ್ರಯಾನ-3 ಯಶಸ್ವಿ ಹಿನ್ನೆಲೆ : ನರೇಂದ್ರ ಪ.ಪೂ. ಕಾಲೇಜಿನಲ್ಲಿ ಸಂಭ್ರಮಾಚರಣೆ Read More »

ಚೂರಿ ಇರಿತಕ್ಕೊಳಗಾದ ಯುವತಿ ಮೃತ್ಯು | ಆರೋಪಿ ಪದ್ಮರಾಜ್ ಬಂಧನ

ಪುತ್ತೂರು: ಇಲ್ಲಿನ ಪೊಲೀಸ್ ಠಾಣಾ ಬಳಿ ಚೂರಿ ಇರಿತಕ್ಕೊಳಗಾಗದ  ಯುವತಿ ಇದೀಗ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆಇದೀಗ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತ ಯುವಕನ್ನು ಯುವಕನನ್ನು ಬಂಟ್ವಾಳ ಮೂಲಕ ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ಅಳಿಕೆ ಮೂಲದ ಗೌರಿ (20 ವ.) ಎಂದು ಗುರುತಿಸಲಾಗಿದೆ. ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದ್ದು, ಇದೀಗ ಯುವತಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಚೂರಿ ಇರಿತಕ್ಕೊಳಗಾದ ಯುವತಿ ಮೃತ್ಯು | ಆರೋಪಿ ಪದ್ಮರಾಜ್ ಬಂಧನ Read More »

error: Content is protected !!
Scroll to Top