ಪುತ್ತೂರು

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬಡ್ಡಿ ತಂಡ ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ

ಆಲಂಕಾರು:   ಆಲಂಕಾರು ಶ್ರೀ ಭಾರತಿ  ವಿದ್ಯಾ ಸಂಸ್ಥೆಗಳ ಬಾಲಕಿಯರ ತಂಡ ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ನೇ ವಯೋಮಾನದ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ವಿದ್ಯಾಭಾರತಿ ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ಮಂಗಳೂರು ಶಕ್ತಿನಗರ ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾಗಿದೆ. ಆಲಂಕಾರು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ಬಾಲಕಿಯರ ತಂಡ ಅಂತಿಮ ಸುತ್ತಿನಲ್ಲಿ ಮಂಡ್ಯ ಜಿಲ್ಲೆಯನ್ನು ಸೊಲಿಸಿ  ವಿದ್ಯಾ ಭಾರತಿಯ, ಮಧ್ಯಕ್ಷೇತ್ರಿಯ ದಕ್ಷಿಣ ಭಾರತ […]

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬಡ್ಡಿ ತಂಡ ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ Read More »

ಆ.26 : ಸವಣೂರು ರೈತ ಉತ್ಪಾದಕ ಕಂಪೆನಿ ವತಿಯಿಂದ ಷೇರು ಪತ್ರ ವಿತರಣೆ, ಅಡಿಕೆ ಕೃಷಿ ಕುರಿತು ಮಾಹಿತಿ, ಹೊಸ ಸದಸ್ಯರ ನೋಂದಾವಣೆ

ಸವಣೂರು: ಕಾಣಿಯೂರು ಸವಣೂರು ರೈತ ಉತ್ಪಾದಕ ಕಂಪೆನಿ ಲಿ. ಆಶ್ರಯದಲ್ಲಿ ಪಾಲ್ತಾಡಿ ಗ್ರಾಮದ ಸದಸ್ಯರಿಗೆ ಷೇರು ಪತ್ರ ವಿತರಣೆ, ಅಡಿಕೆ ಕೃಷಿಯ ಸಮಗ್ರ ನಿರ್ವಹಣೆ ಕುರಿತು ಮಾಹಿತಿ ಹಾಗೂ ಹೊಸ ಸದಸ್ಯರ ನೋಂದಾವಣೆ ಆ.26 ಶನಿವಾರ ಬೆಳಿಗ್ಗೆ 10.30 ಕ್ಕೆ ಪಾಲ್ತಾಡಿ ಚೆನ್ನಾವರ ಶ್ರೀ ಉಳ್ಳಾಕುಲು ದೈವಸ್ಥಾನದ ವಠಾರದಲ್ಲಿ ನಡೆಯಲಿದೆ. ಕಂಪೆನಿಗೆ ಇನ್ನೂ ಸದಸ್ಯತನ ಪಡೆಯದ 15 ಸೆಂಟ್ಸ್ ಗಿಂತ ಹೆಚ್ಚಿನ ಜಮೀನು ಹೊಂದಿರುವ ಎಲ್ಲಾ ರೈತ ಬಾಂಧವರು ಆರ್ ಟಿಸಿ, ಆಧಾರ್, ಮೂರು ಫೋಟೊ, ಪಾನ್

ಆ.26 : ಸವಣೂರು ರೈತ ಉತ್ಪಾದಕ ಕಂಪೆನಿ ವತಿಯಿಂದ ಷೇರು ಪತ್ರ ವಿತರಣೆ, ಅಡಿಕೆ ಕೃಷಿ ಕುರಿತು ಮಾಹಿತಿ, ಹೊಸ ಸದಸ್ಯರ ನೋಂದಾವಣೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾರ್ಯಾಲಯ ಉದ್ಘಾಟನೆ

ಕಾಣಿಯೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾರ್ಯಾಲಯದ ಉದ್ಘಾಟನೆ ಆ.23 ಬುಧವಾರ ನಡೆಯಿತು. ಉದ್ಘಾಟನೆ ಅಂಗವಾಗಿ ದೇವಸ್ಥಾನದ ಅರ್ಚಕರಿಂದ ಗಣಹೋಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾರ್ಯಾಲಯ ಉದ್ಘಾಟನೆ Read More »

ಸೌಜನ್ಯ ಹತ್ಯೆ ಆರೋಪಿಗಳಿಗೆ ಶೀಘ್ರ ಶಿಕ್ಷೆಯಾಗುವಂತೆ ಕಾಶ್ಮೀರದ ಅಮರನಾಥದಲ್ಲಿ ಪ್ರಾರ್ಥನೆ

ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ಕಾರ್ಯಕರ್ತರಿಂದ ಸಹೋದರಿ ಸೌಜನ್ಯಳಿಗೆ ನ್ಯಾಯ ಸಿಗಬೇಕೇಂದು ಕಾಶ್ಮೀರದ ಅಮರನಾಥದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾಶ್ಮೀರದ ಅಮರನಾಥ ಯಾತ್ರೆಯಲ್ಲಿರುವ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪುತ್ತೂರು ಜಿಲ್ಲೆಯ ಕಾರ್ಯಕರ್ತರು ಕುಮಾರಿ ಸೌಜನ್ಯಳ ಹತ್ಯೆ ಆರೋಪಿಗಳಿಗೆ ಶೀಘ್ರವಾಗಿ ಶಿಕ್ಷೆ ಸಿಗಬೇಕು ಹಾಗೂ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಅಮರನಾಥದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ, ಬಜರಂಗದಳ ಕಾರ್ಯಕರ್ತರು ಉಪಸ್ಥಿತರಿದ್ದರು.

ಸೌಜನ್ಯ ಹತ್ಯೆ ಆರೋಪಿಗಳಿಗೆ ಶೀಘ್ರ ಶಿಕ್ಷೆಯಾಗುವಂತೆ ಕಾಶ್ಮೀರದ ಅಮರನಾಥದಲ್ಲಿ ಪ್ರಾರ್ಥನೆ Read More »

ಚಂದ್ರಯಾನ-3 ಯಶಸ್ವಿಗಾಗಿ ಶರವೂರು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಸರ್ವಸೇವೆ

ಕಡಬ: ಕಡಬ ತಾಲೂಕಿನ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ದಲ್ಲಿ ಚಂದ್ರಯಾನ-3 ಯಶಸ್ವಿಗಾಗಿ ಬುಧವಾರ ಪೂಜೆ ಸಲ್ಲಿಸಲಾಯಿತು. ಚಂದ್ರಯಾನ-3 ಯಶಸ್ವಿಗಾಗಿ ಶ್ರೀ ಕ್ಷೇತ್ರದಲ್ಲಿ ಮದ್ಯಾಹ್ನ ಗಂಟೆ 12.00ಕ್ಕೆ ವಿಶೇಷ ಪ್ರಾರ್ಥನೆ ಹಾಗೂ ಸರ್ವಸೇವೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು, ಭಕ್ತಾದಿಗಳು, ಉಪಸ್ಥಿತರಿದ್ದರು.

ಚಂದ್ರಯಾನ-3 ಯಶಸ್ವಿಗಾಗಿ ಶರವೂರು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಸರ್ವಸೇವೆ Read More »

ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ನಿಧನ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ಸೀತಾರಾಮ ಶೆಟ್ಟಿ ಹೃದಯಾಘಾತದಿಂದ ಬುಧವಾರ ನಿಧನರಾದರು. ಆರ್ಯಾಪು ಗ್ರಾಮದ ಕಂಬಳತ್ತಡ್ಡ ನಾರಾಯಣ ಶೆಟ್ಟಿಯವರ ಪುತ್ರರಾಗಿದ್ದು, ನೈತ್ತಾಡಿಯ ಕಲ್ಲಗುಡ್ಡೆ ಎಂಬಲ್ಲಿ ಬಾರ್ & ರೆಸ್ಟೋರೆಂಟ್ ನ್ನು ನಿರ್ವಹಣೆ ಮಾಡುತ್ತಿದ್ದರು. ಸೀತಾರಾಮ ಶೆಟ್ಟಿ ಅವರು ಎಂದಿನಂತೆ ರೆಸ್ಟೋರೆಂಟ್ ಗೆ ಬಂದಿದ್ದ ವೇಳೆ ಹಠಾತ್ತನೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ.

ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸೀತಾರಾಮ ಶೆಟ್ಟಿ ನಿಧನ Read More »

ಆ.31 : ಸಮುದಾಯದತ್ತ ಸಾಂತ್ವನ –ಸಮಾಲೋಚನೆ-ಸಂವಾದ-ಸಂಕಲ್ಪ

ಪುತ್ತೂರು: ಜನಶಿಕ್ಷಣ ಟ್ರಸ್ಟ್ ವತಿಯಿಂದ ಸಮುದಾಯದತ್ತ ಸಾಂತ್ವನ ಸಮಾಲೋಚನೆ-ಸಂವಾದ-ಸಂಕಲ್ಪ ಆ.31 ರಂದು ನರಿಮೊಗರು ಗ್ರಾಪಂ ಸಭಾಂಗಣದಲ್ಲಿ ನಡೆಯಲಿದೆ. ಪುತ್ತೂರು ಸಾಂತ್ವನ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನರಿಮೊಗರು ಗ್ರಾಮ ಪಂಚಾಯಿತಿ ಹಾಗೂ ಶ್ರೀ ದುರ್ಗಾ ಸಂಜೀವಿನಿ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ.31 : ಸಮುದಾಯದತ್ತ ಸಾಂತ್ವನ –ಸಮಾಲೋಚನೆ-ಸಂವಾದ-ಸಂಕಲ್ಪ Read More »

ಕಲ್ಪಣೆ ಸರಕಾರಿ ಪ್ರೌಢ  ಶಾಲೆಯಲ್ಲಿ ಸವಣೂರು ವಲಯ ಮಟ್ಟದ ಕಬಡ್ಡಿ ಕ್ರೀಡಾಕೂಟ

ಪುತ್ತೂರು: ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಧೈಹಿಕ ಚಟುವಟಿಕೆ ದೇಹದ ಬೆಳವಣಿಗೆ ಜತೆಗೆ ಅವರಲ್ಲಿನ ಪ್ರತಿಭೆಗಳನ್ನು ಗುರುತಿಸಲು ಅತೀ ಅಗತ್ಯ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸರ್ವೆ ಕಲ್ಪಣೆ ಪ್ರೌಢ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರೌಢ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸರಕಾರಿ ಶಾಲೆಗಳ ಕಡೆಗಣನೆ ಸಲ್ಲದು. ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ಸೌಲಭ್ಯಗಳು ದೊರೆಯುವಂತಾಗಲಿದೆ. ಖಾಸಗಿ ಶಾಲೆಯನ್ನು ತೊರೆದು

ಕಲ್ಪಣೆ ಸರಕಾರಿ ಪ್ರೌಢ  ಶಾಲೆಯಲ್ಲಿ ಸವಣೂರು ವಲಯ ಮಟ್ಟದ ಕಬಡ್ಡಿ ಕ್ರೀಡಾಕೂಟ Read More »

ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

ಪೆರ್ನೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ವಿಟ್ಲ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಪೆರ್ನೆ ಅಯೋಧ್ಯಾನಗರ ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯದ ಬಳಿ ಶ್ರಮದಾನ ಮಾಡಿದರು. ವಿದ್ಯಾಲಯದ ಸುತ್ತಾ ಮುತ್ತ  ಗಿಡ ಗಂಟಿಗಳನ್ನು ತೆಗೆದು ಸ್ವಚ್ಛ ಕಾರ್ಯ ಮಾಡಿದರು. ಈ ಸಂದರ್ಭದಲ್ಲಿ ವಿದ್ಯಾಲಯದ ಪ್ರಾಂಶುಪಾಲ ಶೇಖರ್ ರೈ,  ಮೇಲ್ವಿಚಾರಕಿ ಶಾರದ,  ಸಂಯೋಜಕಿ ಅಶ್ಮಿತಾ, ಶೌರ್ಯ ಸದಸ್ಯರಾದ ಸುರೇಶ, ಅಶೋಕ, ಗೋಪಾಲ, ರಮೇಶ, ಮಮತಾ, ಕೇಶವ, ಚಂದ್ರಾವತಿ, ಯೋಗಿಶ್, ಸುಂದರ,

ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ Read More »

ಅಪರಿಚಿತನಿಂದ ಇಬ್ಬರು ಮಹಿಳೆಯರಿಗೆ ಹಲ್ಲೆ | ಹಲ್ಲೆ ನಡೆಸಿದ ಆರೋಪಿ ಪರಾರಿ

ಪುತ್ತೂರು: ಅಪರಿಚಿತ ವ್ಯಕ್ತಿಯೋರ್ವ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ತಾಲೂಕಿನ ಬಡಗನ್ನೂರಿನಲ್ಲಿ ನಡೆದಿದೆ. ಕೂಲಿ ಕೆಲಸ ಮಾಡುತ್ತಿರುವ ಗಿರಿಜಾ ಹಾಗೂ ಸುಲೇಖಾ ಹಲ್ಲೆಗೊಳಗಾದವರು. ಬಡಗನ್ನೂರು ಸಮೀಪದ ಗುಡ್ಡೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರ ಮೇಲೆ ಅಪರಿಚಿತ ವ್ಯಕ್ತಿ ಮಾರಣಾಂತಿಕ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. ಗಂಭೀರ ಗಾಯಗೊಂಡ ಮಹಿಳೆಯರನ್ನು ಈಶ್ವರಮಂಗಲದ ಹಿಂದೂ ಜಾಗರಣ ವೇದಿಕೆ ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಇಬ್ಬರಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಗೋಳಿತ್ತೊಟ್ಟು

ಅಪರಿಚಿತನಿಂದ ಇಬ್ಬರು ಮಹಿಳೆಯರಿಗೆ ಹಲ್ಲೆ | ಹಲ್ಲೆ ನಡೆಸಿದ ಆರೋಪಿ ಪರಾರಿ Read More »

error: Content is protected !!
Scroll to Top