ಪುತ್ತೂರು

ನಾಳೆ (ಆ.23) : ದ.ಕ.ಶಾಮಿಯಾನ ಮಾಲಕರ ಸಂಘದ ವಿಟ್ಲ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ

ವಿಟ್ಲ : ದ.ಕ.ಶಾಮಿಯಾನ ಮಾಲಕರ ಸಂಘ ವಿಟ್ಲ ಘಟಕದ ನೂತನ ಪದಾಧಿಕಾಗಳ ಪದಗ್ರಹಣ ಸಮಾರಂಭ ಆ.23 ಬುಧವಾರ ಬೆಳಿಗ್ಗೆ 11.30 ಕ್ಕೆ ವಿಟ್ಲ ಕಲ್ಲಕಟ್ಟ ಭಾರತ್ ಸಭಾಭವನದಲ್ಲಿ ನಡೆಯಲಿದೆ. ವಿಟ್ಲ ಅರಮನೆ ಬಂಗಾರು ಅರಸರು ಸಮಾರಂಭ ಉದ್ಘಾಟಿಸಲಿದ್ದು, ದ.ಕ.ಶಾಮಿಯಾನ ಮಾಲಕರ ಸಂಘದ ವಿಟ್ಲ ಘಟಕದ ಅಧ್ಯಕ್ಷ ಚಂದ್ರಹಾಸ ಸುವರ್ಣ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‍ ಉಳಿಪ್ಪಾಡಿಗುತ್ತು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದೇಲಂತಬೆಟ್ಟು ಸಂತ ಪಾವುಲ್ ಇಗರ್ಜಿ ಧರ್ಮಗುರು ಫಾ.ಸುನೀಲ್ […]

ನಾಳೆ (ಆ.23) : ದ.ಕ.ಶಾಮಿಯಾನ ಮಾಲಕರ ಸಂಘದ ವಿಟ್ಲ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ Read More »

ಆ.25 : ಪುತ್ತೂರು ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ಪೂಜೆ

ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಲಕ್ಷ್ಮೀದೇವಿ ಬೆಟ್ಟದಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ ಆ.25 ಶುಕ್ರವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಜರಗಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿ ಕ್ಷೇತ್ರದ ಧರ್ಮದರ್ಶಿ ಯನ್.ಐತ್ತಪ್ಪ ಸಪಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ.25 : ಪುತ್ತೂರು ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ಪೂಜೆ Read More »

ಕೊಳ್ತಿಗೆ ಗ್ರಾಪಂ ಅಧ್ಯಕ್ಷರಾಗಿ ಅಕ್ಕಮ್ಮ,, ಉಪಾಧ್ಯಕ್ಷರಾಗಿ ಪ್ರಮೋದ್ ಕೆ.ಎಸ್.

ಪುತ್ತೂರು: ಕೊಳ್ತಿಗೆ ಗ್ರಾಪಂನ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಅಕ್ಕಮ್ಮ ಹಾಗೂ ಉಪಾಧ್ಯಕ್ಷರಾಗಿ ಪ್ರಮೋದ್ ಕೆ.ಎಸ್. ಆಯ್ಕೆಯಾಗಿದ್ದಾರೆ. 16 ಸದಸ್ಯಬಲ ಹೊಂದಿರುವ ಪಂಚಾಯತ್‍ನಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಗಾದಿಗೆ ಚುನಾವಣೆ ಪ್ರಕ್ರಿಯೆ ಮಂಗಳವಾರ ನಡೆಯಿತು. ಅಧ್ಯಕ್ಷರಾಗಿ ಆಯ್ಕೆಯಾದ ಅಕ್ಕಮ್ಮ ಬಿಜೆಪಿ ಸದಸ್ಯೆಯಾಗಿದ್ದು, ಕಾಂಗ್ರೆಸ್ ಗೆ ಪಕ್ಷಾಂತರಗೊಳ್ಳುವ ಮೂಲಕ ಅಧ್ಯಕ್ಷೆಯಾಗಿ ಆಯ್ಕೆಯಾದರು. ಈ ಮೂಲಕ ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ.

ಕೊಳ್ತಿಗೆ ಗ್ರಾಪಂ ಅಧ್ಯಕ್ಷರಾಗಿ ಅಕ್ಕಮ್ಮ,, ಉಪಾಧ್ಯಕ್ಷರಾಗಿ ಪ್ರಮೋದ್ ಕೆ.ಎಸ್. Read More »

ಕರ್ಕುಂಜ ನಿವಾಸಿ ಹರೀಶ್ ನಿಧನ

ಪುತ್ತೂರು: ಪುತ್ತೂರು ತಾಲೂಕು ಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕರ್ಕುಂಜ ನಿವಾಸಿ ಹರೀಶ್ (45) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಕಳೆದ 25 ವರ್ಷಗಳಿಂದ ತಾಲೂಕು ಕಚೇರಿಯಲ್ಲಿ ಕೆಲಸ ನಿರ್ಯವಹಿಸುತ್ತಿದ್ದು, ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಪುತ್ರ ಹಾಗೂ ಸಹೋದರರು, ಕುಟುಂಬಸ್ಥರನ್ನು ಅಗಲಿದ್ದಾರೆ.

ಕರ್ಕುಂಜ ನಿವಾಸಿ ಹರೀಶ್ ನಿಧನ Read More »

ಅಂತರಾಷ್ಟ್ರೀಯ ಮಟ್ಟದ ಕರಾಟೆ | ವಿಟ್ಲ All India Shito-ryo Karate-do union ತಂಡಕ್ಕೆ ಹಲವು ಪ್ರಶಸ್ತಿ

ವಿಟ್ಲ : ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ All India Shito-ryo Karate-do union ತಂಡದ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶೋಟೊಕನ್ ಕರಾಟೆ-ಡೊ ಫೆಡರೆಷನ್ ಇವರ ಆಶ್ರಯದಲ್ಲಿ ಮರಾಠ ಮಂಡಲ್ ಹಾಲ್ ಮುಲುಂದ್ ಮುಂಬೈ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ Independence Cup Karate championship ನಲ್ಲಿ All India Shito-ryu Karate-do union ತಂಡದ ಕರಾಟೆ ವಿಧ್ಯಾರ್ಥಿಗಳು ಭಾಗವಹಿಸಿದ್ದು 12 ಪ್ರಥಮ ಸ್ಥಾನ, 7 ದ್ವಿತೀಯ, 8 ತೃತೀಯ

ಅಂತರಾಷ್ಟ್ರೀಯ ಮಟ್ಟದ ಕರಾಟೆ | ವಿಟ್ಲ All India Shito-ryo Karate-do union ತಂಡಕ್ಕೆ ಹಲವು ಪ್ರಶಸ್ತಿ Read More »

ಕಡಬ ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ

ರಾಮಕುಂಜ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ  ಹಾಗೂ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಸಹಯೋಗದಲ್ಲಿ ಕಡಬ ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು. ಪುತ್ತೂರು ಎಸ್ ಆರ್ ಕೆ ಲ್ಯಾಡರ್ಸ್ ಮಾಲಕರಾದ ಕೇಶವ ಎ. ಕಲಾಯಿಗುತ್ತು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಶವ ಎ. ಕಲಾಯಿಗುತ್ತು ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ರಾಮಕುಂಜ

ಕಡಬ ವಲಯ ಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ Read More »

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ

ಪುತ್ತೂರು: ಆದಿ ಸುಬ್ರಹ್ಮಣ್ಯದಲ್ಲಿ ಹುತ್ತಕ್ಕೆ ಪೂಜೆ ಸಲ್ಲುವಂತೆ ಪುತ್ತೂರು ತಾಲೂಕಿನಲ್ಲೂ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರವಾಗಿರುವ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವಸ್ಥಾನದ ನಾಗನಕಟ್ಟೆಯಲ್ಲಿ ಬೆಳಿಗ್ಗೆ ನಾಗದೇವರಿಗೆ ಹಾಲಿನ ಅಭಿಷೇಕ, ಸಿಯಾಳ ಅಭಿಷೇಕ ನಾಗತಂಬಿಲ ನಡೆಯಿತು. ಬಳಿಕ ವಲ್ಮಿಕ ರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದ ಬಳಿಕ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ Read More »

ಕರಾಟೆ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಅರುಣ್ ಕುಮಾರ್ ಗೆ ಪ್ರಶಸ್ತಿ

ಪುತ್ತೂರು : ಚೆನ್ನೈಯಲ್ಲಿ ನಡೆದ ಪ್ರಥಮ ಸೌತ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ  ಪಿಯುಸಿ ಕಲಾ ವಿಭಾಗದ ಅರುಣ್ ಕುಮಾರ್ ಎಂ. ಆರ್ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಈತ ಪುತ್ತೂರಿನ ಅಮ್ಚಿನಡ್ಕದ ಮಾಡ್ನೂರು ಗ್ರಾಮದ ರಮೇಶ್ ಎ ಎಂ ಮತ್ತು ಲಲಿತಾ ದಂಪತಿ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಕರಾಟೆ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಅರುಣ್ ಕುಮಾರ್ ಗೆ ಪ್ರಶಸ್ತಿ Read More »

ಶ್ರೀ ಕ್ಷೇತ್ರ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ

ಕಡಬ: ಕಡಬ ತಾಲೂಕಿನ ಎಣ್ಮೂರು ಗ್ರಾಮದ ಶ್ರೀ ಕ್ಷೇತ್ರ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಹಬ್ಬ ಸೋಮವಾರ ನಡೆಯಿತು. ಮುಂಜಾನೆಯಿಂದಲೇ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಹಾಲು, ಸೀಯಾಳ ಅರ್ಪಿಸಿದರು. ಆಡಳಿತ ಮಂಡಳಿ ಸದಸ್ಯರು, ಊರ, ಪರವೂರ ಭಕ್ತಾದಿಗಳು ಸಂಭ್ರಮದ ನಾಗರಪಂಚಮಿ ಹಬ್ಬದಲ್ಲಿ ಪಾಲ್ಗೊಂಡರು. ಬಳಿಕ ಅನ್ನಸಂತರ್ಪಣೆ ಜರಗಿತು.

ಶ್ರೀ ಕ್ಷೇತ್ರ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ Read More »

ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಗೆರಟೆ ಉತ್ಪನ್ನಗಳ ತರಬೇತಿ | ಪ್ರಗತಿ ಪರಿಶೀಲನಾ ಸಭೆ

ಪುತ್ತೂರು: ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ತೆಂಗಿನಕಾಯಿ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಿದ್ದು, ಅದರ ಪ್ರಗತಿ ಪರಿಶೀಲನಾ ಸಭೆ ಮಂಗಳೂರು ಕಾರ್ಪೋರೇಟ್ ಕಚೇರಿಯಲ್ಲಿ ನಡೆಯಿತು. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಒಂದಾದ ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಲಾಗಿದೆ. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ

ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಗೆರಟೆ ಉತ್ಪನ್ನಗಳ ತರಬೇತಿ | ಪ್ರಗತಿ ಪರಿಶೀಲನಾ ಸಭೆ Read More »

error: Content is protected !!
Scroll to Top