ಪುತ್ತೂರು

ಆ.23 : ಜಾನಪದ ತಜ್ಞ ಡಾ.ಚಿನ್ನಪ್ಪ ಗೌಡ ಕೆ. ಸಂದರ್ಶನ ವರದಿ ಚಂದನವಾಹಿನಿಯಲ್ಲಿ ಬಿತ್ತರ

ಪುತ್ತೂರು: ಜಾನಪದ ತಜ್ಙ ನಿವೃತ್ತ  ಉಪಕುಲಪತಿ ಡಾ.ಚಿನ್ನಪ್ಪ ಗೌಡ ಕೆ. ಅವರ ಸಂದರ್ಶನ ವರದಿ ದೂರದರ್ಶನ ಚಂದನ್ ವಾಹಿನಿಯಲ್ಲಿ ಆ.23 ರಂದು ಸಂಜೆ ಬಿತ್ತರಗೊಳ್ಲಲಿದೆ. ಕೃಷಿ ತಜ್ಞ,ಲೇಖಕ ಡಾ.ನರೇಂದ್ರ ರೈ ದೇರ್ಲ ಅವರು ಸಂದರ್ಶನ ಮಾಡಲಿದ್ದಾರೆ. ಆ.26 ರಂದು ಬೆಳಿಗ್ಗೆ 9.30 ಕ್ಕೆ ಎರಡನೇ ಕಂತು ಬಿತ್ತರಗೊಳ್ಳಲಿದೆ.

ಆ.23 : ಜಾನಪದ ತಜ್ಞ ಡಾ.ಚಿನ್ನಪ್ಪ ಗೌಡ ಕೆ. ಸಂದರ್ಶನ ವರದಿ ಚಂದನವಾಹಿನಿಯಲ್ಲಿ ಬಿತ್ತರ Read More »

ಕೊಡಂಕೀರಿ ಗದ್ದೆಯಲ್ಲಿ  ಫಿಲೋಮಿನಾ ಪಿ.ಯು ವಿದ್ಯಾರ್ಥಿಗಳು |  ಗರಿಗೆದರಿದ ” ಫಿಲೋ ಸಂಭ್ರಮ”-ಕೆಸರ್ಡ್ ಒಂಜಿ ದಿನ

ಪುತ್ತೂರು : ಗದ್ದೆ ತುಂಬಾ ಕೆಸರು, ಕೆಸರಿನ ನಡುವೆ ವಿವಿಧ ಸ್ಪರ್ಧೆಗಳು, ಕೆಸರಲ್ಲಿ ಎದ್ದು ಬಿದ್ದು ಹೊರಳಾಡಿ ಸ್ಪರ್ಧೆಗಳಲ್ಲಿ ಪಾಲ್ಗೊಂಡ ಫಿಲೋಮಿನಾ ಪ. ಪೂ ಕಾಲೇಜಿನ  ವಿದ್ಯಾರ್ಥಿ ವಿದ್ಯಾರ್ಥಿನಿಯರು  ಹಾಗೂ  ಊರಿನ  ಯುವಕರು, ಮಹನಿಯರು, ಮಹಿಳೆಯರು  ಇವೆಲ್ಲ ಸನ್ನಿವೇಶಗಳು ನರಿಮೊಗರಿನ ಕೊಡಂಕೀರಿಯ  ಶ್ರೀಧರ ಪೂಜಾರಿಯವರ ಗದ್ದೆಯಲ್ಲಿ  ಭಾನುವಾರ ಕಂಡುಬಂದವು. ಸಂತ  ಫಿಲೋಮಿನಾ ಪ.ಪೂ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಹಾಗೂ ರೆಡ್ ಕ್ರಾಸ್ ಘಟಕದ ಸಂಯೋಜನೆಯಲ್ಲಿ ಒಂದು ದಿನದ “ಫಿಲೋ ಸಂಭ್ರಮ”-ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ನಡೆಯಿತು

ಕೊಡಂಕೀರಿ ಗದ್ದೆಯಲ್ಲಿ  ಫಿಲೋಮಿನಾ ಪಿ.ಯು ವಿದ್ಯಾರ್ಥಿಗಳು |  ಗರಿಗೆದರಿದ ” ಫಿಲೋ ಸಂಭ್ರಮ”-ಕೆಸರ್ಡ್ ಒಂಜಿ ದಿನ Read More »

ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಂಭ್ರಮದ ನಾಗರಪಂಚಮಿ

ಪುತ್ತೂರು: ನಗರದ ರೈಲ್ವೇ ನಿಲ್ದಾಣದ ಬಳಿ ಇರುವ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಂಭ್ರಮದ ನಾಗರಪಂಚಮಿಯನ್ನು ಸೋಮವಾರ ಆಚರಿಸಲಾಯಿತು. ಕ್ಷೇತ್ರದ ನಾಗಸನ್ನಿಧಿಯಲ್ಲಿ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ನೆರವೇರಿಸಲಾಯಿತು. ಕ್ಷೇತ್ರದ ಧರ್ಮದರ್ಶಿ ಐತ್ತಪ್ಪ ಸಪಲ್ಯ ಸೇರಿದಂತೆ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಶ್ರೀ ಲಕ್ಷ್ಮೀ ದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಂಭ್ರಮದ ನಾಗರಪಂಚಮಿ Read More »

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ

ಶಾಂತಿಮೊಗರು: ಕಾಣಿಯೂರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ ಸೋಮವಾರ ನಡೆಯಿತು. ಬೆಳಿಗ್ಗೆ ಶ್ರೀ ಕ್ಷೇತ್ರದ ನಾಗಸನ್ನಿಧಿಯಲ್ಲಿ ನಾಗತಂಬಿಲ, ಹಾಲಿನ ಅಭಿಷೇಕ ನಡೆಯಿತು. ದೇವಸ್ಥಾನದ ಅರ್ಚಕ ರಮಾನಂದ್ ಭಟ್ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಭಕ್ತಾದಿಗಳು ಹಾಲು, ಸೀಯಾಳಾ ಅರ್ಪಿಸಿದರು.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ Read More »

ಬಡಗನ್ನೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ | ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಪುತ್ತೂರು: ಬಡವರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ತಾನು ಶಾಸಕನಾಗಿ ಮೊದಲ ಆದ್ಯತೆ ನೀಡುತ್ತೇನೆ. ಸರಕಾರದ ಯೋಜನೆಗಳು ಎಲ್ಲ ಅರ್ಹ ಫಲಾನುಭವಿಗಳಿಗೂ ಸಿಗುವಂತಾಗಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬಡಗನ್ನೂರು ವಲಯ ಕಾಂಗ್ರೆಸ್ ವತಿಯಿಂದ ಬಡಗನ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು. ಐದು ಗ್ಯಾರಂಟಿ ಯೋಜನೆಗಳು ಇಂದು ಎಲ್ಲರ ಮನೆಯನ್ನು ಬೆಳಗಿಸಿದೆ. ಅಧಿಕಾರಕ್ಕೆ ಬಂಧ ಮೂರೇ ತಿಂಗಳೊಳಗೆ ಗ್ಯಾರಂಟಿಯನ್ನು ಈಡೇರಿಸಿದ್ದೇವೆ ಇದು ಕಾಂಗ್ರೆಸ್ ಪಕ್ಷದ ತಾಕತ್ತು ರಂದು ಶಾಸಕರು ಹೇಳಿದರು.

ಬಡಗನ್ನೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ | ಸಾರ್ವಜನಿಕರಿಂದ ಅಹವಾಲು ಸ್ವೀಕಾರ Read More »

ನೆಟ್ಟಣಿಗೆ ಮುಡ್ನೂರು ಗ್ರಾಪಂ ಚುನಾವಣೆ | ಅಕ್ರಮ ನಡೆದಿದೆ ಎಂದು ಪುತ್ತಿಲ ಪರಿವಾರ  Vs ಬಿಜೆಪಿ ಪ್ರತಿಭಟನೆ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪುತ್ತಿಲ ಪರಿವಾರ ಹಾಗೂ ಬಿಜೆಪಿಯವರು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಈ ಪಂಚಾಯಿತಿಯಲ್ಲಿ 21 ಸದಸ್ಯ ಬಲ ಹೊಂದಿದೆ. ವಿಶೇಷವೆಂದರೆ 23 ಬ್ಯಾಲೆಟ್ ಪೇಪರ್ ಚಲಾವಣೆಯಾಗಿದ್ದು , ಇದು ಹೇಗೆ ಎಂದು ಪ್ರಶ್ನಿಸಿ ಪಂಚಾಯಿತಿ ಎದುರು ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಪುತ್ತಿಲ ಪರಿವಾರ ಹಾಗೂ ಬಿಜೆಪಿ ಬೆಂಬಲಿಗರು ಚುನಾವಣಾಧಿಕಾರಿಗಳಿಗೆ ದಿಕ್ಕಾರ ಕೂಗಿ ಪ್ರತಿಭಟಿಸುತ್ತಿದ್ದಾರೆ.

ನೆಟ್ಟಣಿಗೆ ಮುಡ್ನೂರು ಗ್ರಾಪಂ ಚುನಾವಣೆ | ಅಕ್ರಮ ನಡೆದಿದೆ ಎಂದು ಪುತ್ತಿಲ ಪರಿವಾರ  Vs ಬಿಜೆಪಿ ಪ್ರತಿಭಟನೆ Read More »

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥನೆ | ಸುಳ್ಯ ಅಜ್ಜಾವರದ ಅಯ್ಯಪ್ಪ ಭಕ್ತರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥನೆ

ಸುಳ್ಯ: ಸೌಜನ್ಯ ಕೊಲೆ ನೈಜ ಆರೋಪಿಗಳು ಆದಷ್ಟು ಬೇಗ ಪತ್ತೆಯಾಗಿ ಸೂಕ್ತ ಶಿಕ್ಷೆಯಾಗುವಂತೆ ಅಜ್ಜಾವರ ಗ್ರಾಮದ ಶಿವಪ್ರಕಾಶ್ ಗುರುಸ್ವಾಮಿ ಅವರ ನೇತೃತ್ವದಲ್ಲಿ ತೆರಳಿದ ಅಯ್ಯಪ್ಪ ಭಕ್ತರು ಶಬರಿಮಲೆಯಲ್ಲಿ ಇಂದು ಮುಂಜಾನೆ ಪ್ರಾರ್ಥನೆ ಮಾಡಿದರು. ಈ ಪ್ರಕರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಕೆಟ್ಟ ಹೆಸರುಗಳು ಕೇಳಿ ಬರುತ್ತಿದ್ದು, ಅಯ್ಯಪ್ಪನ ಕೃಪಾಕಟಾಕ್ಷದಿಂದ ಮುಂದಿನ ಸಂಕ್ರಮಣದೊಳಗೆ ದುಷ್ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕ ಡಾ.ರವಿ ಕಕ್ಕೆಪದವು ಮತ್ತಿತರರು ಉಪಸ್ಥಿತರಿದ್ದರು.

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಪ್ರಾರ್ಥನೆ | ಸುಳ್ಯ ಅಜ್ಜಾವರದ ಅಯ್ಯಪ್ಪ ಭಕ್ತರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥನೆ Read More »

ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನಾಗರಪಂಚಮಿ

ಕುದ್ಮಾರು: ಕುದ್ಮಾರು ಗ್ರಾಮದ ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ನಾಗಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರೀ ನಾಗದೇವರಿಗೆ ಹಾಲಿನ ಅಭಿಷೇಕ ನಡೆಯಿತು. ಭಕ್ತಾದಿಗಳು ಶ್ರೀ ನಾಗದೇವರಿಗೆ ಹಾಲು, ಸೀಯಾಳ ಅರ್ಪಿಸಿದರು. ಬೆಳಗ್ಗಿನಿಂದಲೇ ಭಕ್ತಾದಿಗಳು ಆಗಮಿಸಿ ಸಂಭ್ರಮದ ನಾಗರಪಂಚಮಿ ಹಬ್ಬದಲ್ಲಿ ಪಾಲ್ಗೊಂಡರು.

ಕುದ್ಮಾರು ಅನ್ಯಾಡಿ ಗ್ರಾಮದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ನಾಗರಪಂಚಮಿ Read More »

ಬೆಳಂದೂರು ಗ್ರಾಪಂ ಅಧ್ಯಕ್ಷರಾಗಿ ಪಾರ್ವತಿ ಮರಕ್ಕಡ, ಉಪಾಧ್ಯಕ್ಷರಾಗಿ ಜಯಂತ ಅಬೀರ ಆಯ್ಕೆ

ಬೆಳಂದೂರು ಗ್ರಾಪಂ ಎರಡನೇ ಅವಧಿಗೆ ಅಧ್ಯಕ್ಷರಾಗಿ ಪಾರ್ವತಿ ಮರಕ್ಕಡ, ಉಪಧ್ಯಕ್ಷರಾಗಿ ಜಯಂತ ಅಬೀರ ಆಯ್ಕೆಯಾಗಿದ್ದಾರೆ. ಒಟ್ಟು 15 ಸದಸ್ಯ ಬಲವಿರುವ ಪಂಚಾಯತ್‍ನಲ್ಲಿ 10 ಬಿಜೆಪಿ, 5 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರು, ನಿಕಟಪೂರ್ವ ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಬೆಳಂದೂರು ಗ್ರಾಪಂ ಅಧ್ಯಕ್ಷರಾಗಿ ಪಾರ್ವತಿ ಮರಕ್ಕಡ, ಉಪಾಧ್ಯಕ್ಷರಾಗಿ ಜಯಂತ ಅಬೀರ ಆಯ್ಕೆ Read More »

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ನಾಗನಿಗೆ ಹಾಲಿನ ಅಭಿಷೇಕ

ಕಾಣಿಯೂರು : ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ನಾಗದೇವರಿಗೆ ಹಾಲಿನ ಅಭಿಷೇಕ ನಡೆಯಿತು. ದೇವಸ್ಥಾನದ ಅರ್ಚಕ ಜಿನೇಶ್ ಭಟ್ ಬರೆಪ್ಪಾಡಿ ಪೂಜಾ ವಿಧಿ ವಿಧಾನ ನಡೆಸಿದರು. ಈ ಸಂದರ್ಭದಲ್ಲಿ ಭಕ್ತಾದಿಗಳು ಹಾಲು, ಸೀಯಾಳ ಅರ್ಪಿಸಿದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ನಾಗನಿಗೆ ಹಾಲಿನ ಅಭಿಷೇಕ Read More »

error: Content is protected !!
Scroll to Top