ಪುತ್ತೂರು

ಶರವೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನಾಗರಪಂಚಮಿ

ಕಡಬ : ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗತಂಬಿಲ, ಕ್ಷೀರಾಭಿಷೇಕ ಸೇವೆ, ಪಂಚಾಮೃತಾಭಿಷೇಕ ಸೇವೆ ಸೋಮವಾರ ಬೆಳಿಗ್ಗೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು ಸೇವೆ ಮಾಡಿಸಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನದ ಮಹಾಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರಗಿತು.

ಶರವೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನಾಗರಪಂಚಮಿ Read More »

ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವು ನೇತೃತ್ವದಲ್ಲಿ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ಸಭಾ ಭವನದಲ್ಲಿ ನಡೆಯುವ 40ನೇ ವರ್ಷದ  ಗಣೇಶೋತ್ಸವ ಕಾರ್ಯಕ್ರಮ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿಯಂದು ನಡೆಸುವ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಿತು. ಕಾವು  ಶ್ರೀ ಗಣೇಶೋತ್ಸವ ಸಮಿತಿಯ  ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್  ಮಂಜಲ್ತಡ್ಕ, ಜೊತೆ

ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಇಂದು ಶ್ರಾವಣ ಮಾಸದ ಪ್ರಥಮ ಹಬ್ಬ ನಾಗರಪಂಚಮಿ | ನಾಗ ಪೂಜೆಯ ಮಹತ್ವವೇನು |  ನಾಗದೇವರನ್ನು ಯಾಕೆ ಪೂಜಿಸಬೇಕು ?|ಇಲ್ಲಿದೆ ಡಿಟೈಲ್ಸ್

ಪುತ್ತೂರು: ನಾಗರಪಂಚಮಿ ಹಬ್ಬಗಳ ತಿಂಗಳಾಗಿರುವ ಶ್ರಾವಣಮಾಸದಲ್ಲಿ ಬರುವ ಪ್ರಥಮ ಹಬ್ಬ. ಶ್ರಾವಣ ಶುಕ್ಲ ಪಂಚಮಿಯಂದು (ಈ ಬಾರಿ ಆ.21 ಸೋಮವಾರ) ಆಚರಿಸಲಾಗುತ್ತದೆ. ಈ ದಿನದಂದು ಸ್ತ್ರೀಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ. ಹೊಸ ಬಟ್ಟೆ ಧರಿಸಿ, ನಾಗದೇವರನ್ನು ಪೂಜಿಸಿ, ಹಾಲಿನ ನೈವೇದ್ಯವನ್ನು ಅರ್ಪಿಸುತ್ತಾರೆ. ನಾಗಗಳ ಪೂಜೆಯನ್ನು ಮಾಡುವುದರಿಂದ ಸರ್ಪಭಯ ಉಳಿಯುವುದಿಲ್ಲ. ಜತೆಗೆ ವಿಷಭಯದ ಸಂಕಟ ತಪ್ಪುತ್ತದೆ ಎಂದು ಭಕ್ತರಲ್ಲಿ ಬಲವಾದ ನಂಬಿಕೆಯಿದೆ. ಉಪವಾಸದಿಂದ ಶಕ್ತಿ ಹೆಚ್ಚಾಗಿ ಅದರ ಫಲ ಲಭಿಸುತ್ತದೆ. ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ

ಇಂದು ಶ್ರಾವಣ ಮಾಸದ ಪ್ರಥಮ ಹಬ್ಬ ನಾಗರಪಂಚಮಿ | ನಾಗ ಪೂಜೆಯ ಮಹತ್ವವೇನು |  ನಾಗದೇವರನ್ನು ಯಾಕೆ ಪೂಜಿಸಬೇಕು ?|ಇಲ್ಲಿದೆ ಡಿಟೈಲ್ಸ್ Read More »

ಪುತ್ತಿಲ ಪರಿವಾರದ ನಗರ, ಗ್ರಾಮಾಂತರ ಬೂತ್ ಅಧ್ಯಕ್ಷ, ಕಾರ್ಯದರ್ಶಿಗಳ ಸಮಾಗಮ

ಪುತ್ತೂರು: ಒಗ್ಗಟ್ಟಿನಿಂದ ಮಾಡುವ ಕೆಲಸದಲ್ಲಿ ಯಶಸ್ಸು ಲಭಿಸುತ್ತದೆ. ಸಾಮಾಜಿಕ ಚಟುವಟಿಕೆಯಿಂದ ನಿಜವಾದ ಸಂತೋಷವನ್ನು ಗಳಿಸಬಹುದು. ಜಯ ಸಿಗುವ ತನಕ ಪ್ರಯತ್ನವನ್ನು ಕೈಬಿಡಬಾರದು ಎಂದು ನಿವೃತ್ತ ಪ್ರಾಂಶುಪಾಲ ಬಿ. ವಿ. ಸೂರ್ಯನಾರಾಯಣ ಹೇಳಿದರು. ಅವರು ಭಾನುವಾರ ಪುತ್ತೂರು ಕೋಟೆಚಾ ಹಾಲ್ ನಲ್ಲಿ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಪುತ್ತಿಲ ಪರಿವಾರದ ಸಮಾಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ ಪುತ್ತಿಲ ಮಾತನಾಡಿ, ರಾಜಕೀಯ ಉದ್ದೇಶ ಮಾತ್ರವಲ್ಲದೆ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ

ಪುತ್ತಿಲ ಪರಿವಾರದ ನಗರ, ಗ್ರಾಮಾಂತರ ಬೂತ್ ಅಧ್ಯಕ್ಷ, ಕಾರ್ಯದರ್ಶಿಗಳ ಸಮಾಗಮ Read More »

ಅಂದ್ರಿಗೇರು ನಿವಾಸಿ ತಿಮ್ಮಪ್ಪ ಗೌಡ ಆತ್ಮಹತ್ಯೆ

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರು ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರು ನಿವಾಸಿ ತಿಮ್ಮಪ್ಪ ಗೌಡ ಆತ್ಮಹತ್ಯೆ ಮಾಡಿಕೊಂಡವರು. ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಈ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿರುವುದಾಗಿ ತಿಳಿದು ಬಂದಿದೆ.

ಅಂದ್ರಿಗೇರು ನಿವಾಸಿ ತಿಮ್ಮಪ್ಪ ಗೌಡ ಆತ್ಮಹತ್ಯೆ Read More »

ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ | ನೂರಾರು ವಾಹನಗಳಲ್ಲಿ ತೆರಳಿದ ಹೊರೆಕಾಣಿಕೆ

ಪುತ್ತೂರು: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತರದಲ್ಲಿ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಅಂಗವಾಗಿ ಪುತ್ತೂರಿನಿಂದ ತೆರಳುವ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ಚಾಲನೆ ನೀಡಲಾಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿ, ಎಲ್ಲೆಡೆ ನಡೆಯುವ ಬ್ರಹ್ಮಕಲಶೋತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಕೇಂದ್ರಗಳಿಗೆ ಹೊರೆಕಾಣಿಕೆ ಸಮರ್ಪಣೆಯಾಗುತ್ತಿದೆ. ಅದರಂತೆ ಮಾಣಿಲ ಮಹಾಲಕ್ಷ್ಮೀ ಕ್ಷೇತ್ರದ ಸ್ವಾಮೀಜಿಯವರು ಪ್ರತಿಯೊಂದು

ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ | ನೂರಾರು ವಾಹನಗಳಲ್ಲಿ ತೆರಳಿದ ಹೊರೆಕಾಣಿಕೆ Read More »

ಮೌನಕ್ರಾಂತಿಯ ಹರಿಕಾರ ಡಿ.ದೇವರಾಜು ಅರಸು 108ನೇ ಜನ್ಮ ದಿನಾಚರಣೆ

ಪುತ್ತೂರು: ದೇವರಾಜರು ಮಾಡಿದ ಉತ್ತಮ ಕೆಲಸವನ್ನು ದೇಶವೆ ಗುರುತಿಸಿದ್ದು, ಇಂದಿರಾ ಗಾಂಧಿ ಭೂಸುಧಾರಣೆ ಕಾನೂನು ಜಾರಿಗೆ ತಂದಾಗ ಅದನ್ನು ರಾಜ್ಯದಲ್ಲಿ ಜಾರಿಗೆ ತಂದಿದ್ದು ದೇವರಾಜು ಅರಸು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಭಾನುವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ, ಮೌನಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೌನಕ್ರಾಂತಿಯ ಹರಿಕಾರ ಡಿ.ದೇವರಾಜು ಅರಸು 108ನೇ ಜನ್ಮ ದಿನಾಚರಣೆ Read More »

ಸೆ.2 ರಿಂದ 24 : ಲೋಕಕಲ್ಯಾಣಾರ್ಥವಾಗಿ “ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ” :  ಪೂರ್ವಭಾವಿ ಸಭೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಲೋಕ ಕಲ್ಯಾಣಾರ್ಥ, ಸಮಗ್ರತೆ, ಹಿಂದೂ ಬಾಂಧವರ ಏಕತೆಗಾಗಿ, ಶ್ರೀ ಮಹಾಲಿಂಗೇಶ್ವರ ದೇವರ ಸಾನಿಧ್ಯ ವೃದ್ಧಿಗಾಗಿ ಸೆ.2 ರಿಂದ 24 ರ ತನಕ ನಡೆಯಲಿರುವ “ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ”ದ ಪೂರ್ವಭಾವಿ ಸಭೆ ಭಾನುವಾರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ್ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಮಾತನಾಡಿ, ಹಿಂದೂ ಧರ್ಮಕ್ಕೆ ಬಂದಿರುವ ಸರ್ವ ಕಷ್ಟ, ನಷ್ಟಗಳು,

ಸೆ.2 ರಿಂದ 24 : ಲೋಕಕಲ್ಯಾಣಾರ್ಥವಾಗಿ “ಏಕಾದಶ ಕೋಟಿ ಮಹಾಲಿಂಗೇಶ್ವರ ಜಪ” :  ಪೂರ್ವಭಾವಿ ಸಭೆ Read More »

ವಿದ್ಯಾಭಾರತಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ

ಪುತ್ತೂರು: ಬೆಳಗಾವಿಯ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ  ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದೆ. ತಂಡವನ್ನು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ಆರ್, ಲಿಖಿತ್ ಗೌಡ ಕೆ, ವಾಣಿಜ್ಯ ವಿಭಾಗದ ನಿರ್ಮಿತ್ ,ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ, ವಿಜ್ಞಾನ ವಿಭಾಗದ ಮೋನಿಷ್ ಪ್ರತಿನಿಧಿಸಿದ್ದರು. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ ಆರ್ಟಿಸ್ಟಿಕ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿನ

ವಿದ್ಯಾಭಾರತಿ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ Read More »

ಕಾವೇರುತ್ತಿರುವ ಸೌಜನ್ಯ ಕೊಲೆ ಪ್ರಕರಣ | ಜಿಲ್ಲೆಯಾದ್ಯಂತ ಪ್ರತಿಭಟನೆ | ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಜಿ.ಪರಮೇಶ್ವರ್ ಸಾವಿನ ತನಿಖೆ ಮುಗಿದಿದೆ ಎಂದು ಹೇಳಿಕೆ ನೀಡಿರುವುದು ಸರಿಯೇ? | ಹಾಗಾದರೆ ಪ್ರಕರಣದ ನೈಜ ಆರೋಪಿಗಳ ಪತ್ತೆಯಾಗದೇ ಇರುವುದು ತನಿಖಾಧಿಕಾರಿಗಳ ವೈಫಲ್ಯವೇ ? | ಹಾಗಾದರೇ ಸೌಜನ್ಯ ಸಾವಿಗೆ ನ್ಯಾಯ ದೊರಕಿಸಿಕೊಡುವವರು ಯಾರು?

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಟ, ಯುವ ಘಟಕ ಹಾಗೂ ಮಹಿಳಾ ಸಂಘ, ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ನೇತೃತ್ವದಲ್ಲಿ ಕುಮಾರಿ ಸೌಜನ್ಯಳ ಸಾವಿಗೆ ನ್ಯಾಯ ದೊರಕಿಸಿಕೊಡಲು ಹಕ್ಕೊತ್ತಾಯ ಮಾಡುವ ಬೃಹತ್ ಪ್ರತಿಭಟನಾ ಮೆರವಣಿಗೆಯು ಆ.19 ಬೆಳಿಗ್ಗೆ ವಿಟ್ಲದಲ್ಲಿ ನಡೆಯಿತು. ಧರ್ಮಸ್ಥಳದ ಕುಮಾರಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಅಲ್ಲಿಂದ ವಿಟ್ಲ ಜಂಕ್ಷನ್

ಕಾವೇರುತ್ತಿರುವ ಸೌಜನ್ಯ ಕೊಲೆ ಪ್ರಕರಣ | ಜಿಲ್ಲೆಯಾದ್ಯಂತ ಪ್ರತಿಭಟನೆ | ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಜಿ.ಪರಮೇಶ್ವರ್ ಸಾವಿನ ತನಿಖೆ ಮುಗಿದಿದೆ ಎಂದು ಹೇಳಿಕೆ ನೀಡಿರುವುದು ಸರಿಯೇ? | ಹಾಗಾದರೆ ಪ್ರಕರಣದ ನೈಜ ಆರೋಪಿಗಳ ಪತ್ತೆಯಾಗದೇ ಇರುವುದು ತನಿಖಾಧಿಕಾರಿಗಳ ವೈಫಲ್ಯವೇ ? | ಹಾಗಾದರೇ ಸೌಜನ್ಯ ಸಾವಿಗೆ ನ್ಯಾಯ ದೊರಕಿಸಿಕೊಡುವವರು ಯಾರು? Read More »

error: Content is protected !!
Scroll to Top