ಪುತ್ತೂರು

ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಹಾಗೂ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರ ಜಂಟಿ ಆಶ್ರಯದಲ್ಲಿ ಸವಣೂರು ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವು ಶುಕ್ರವಾರ ಸರಸ್ವತಿ ಶಾಲಾ ಕ್ರೀಡಾಂಗಣದಲ್ಲಿ ಜರುಗಿತು. ನರಿಮೊಗರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಿ ನಿತ್ಯಾನಂದ ಪಂಜಳ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ ಅಧ್ಯಕ್ಷತೆ ವಹಿಸಿದ್ದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ಆಡಳಿತಾಧಿಕಾರಿ ಶುಭಾ ಅವಿನಾಶ್, ನೋಡಲ್ ಅಧಿಕಾರಿ ಬಾಲಕೃಷ್ಣ ಸವಣೂರು ಮತ್ತು […]

ಸವಣೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ Read More »

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂಚೆ ಸೇವೆಗಳ ಬಗ್ಗೆ ವಿಶೇಷ ಉಪನ್ಯಾಸ

ಪುತ್ತೂರು:  ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಅಂಚೆ ಸೇವೆಗಳ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕಿಯಾಗಿ ಪುತ್ತೂರು ಅಂಚೆ ವಿಭಾಗದ ಮಾರ್ಕೆಟಿಂಗ್ ಕಾರ್ಯನಿರ್ವಾಹಕ ಗುರುಪ್ರಸಾದ್ ಕೆ ಎಸ್ ಮಾತನಾಡಿ, ಅಂಚೆ ಕಚೇರಿಯಲ್ಲಿ ಸಿಗುವ ಬ್ಯಾಂಕ್ ಸೇವೆಗಳು, ಅಂಚೆ ವಿಮೆ, ಆಕ್ಸಿಡೆಂಟ್ ಪರಿಹಾರ ವಿಮೆ, ವಿವಿಧ ಪೆನ್ಷನ್ ಫಂಡ್  ಹಾಗೂ ಅಂಚೆ ವಿಭಾಗದಲ್ಲಿ ಇರುವ ವಿವಿಧ ಉದ್ಯೋಗದ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಿದರು. ಪೋಸ್ಟಲ್ ಆರ್ಡರ್, ವಿವಿಧ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂಚೆ ಸೇವೆಗಳ ಬಗ್ಗೆ ವಿಶೇಷ ಉಪನ್ಯಾಸ Read More »

ಪುತ್ತಿಲ ಪರಿವಾರದಿಂದ ದೈವನರ್ತಕ ರಮೇಶ್ ಅಜಲರ ಮನೆಗೆ ಭೇಟಿ | ಸಹಾಯ ಧನ  ಹಸ್ತಾಂತರ

ಪುತ್ತೂರು: ದೈವ ನರ್ತನ ಸೇವೆಗೈಯುವ ಖ್ಯಾತ ಕುಟುಂಬವಾದ ಪೆರ್ಲಂಪಾಡಿಯ  ರಮೇಶ್ ಅಜಲರು ಕೆಲ ಸಮಯಗಳಿಂದ ಅನಾರೋಗ್ಯ ಪೀಡಿತರಾಗಿದ್ದು, ಅವರ ಮನೆಗೆ ಪುತ್ತಿಲ ಪರಿವಾರದವರು ಭೇಟಿ ನೀಡಿದರು. ಪುತ್ತಿಲ ಪರಿವಾರದ ವತಿಯಿಂದ  ರಮೇಶ್ ರ ಮನೆಗೆ ಭೇಟಿ ನೀಡಿ ಧನಸಹಾಯ ಮತ್ತು ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ನಗರಾಧ್ಯಕ್ಷ ಅನಿಲ್ ತೆಂಕಿಲ, ಉಪಾಧ್ಯಕ್ಷ ರಾಜ್ ಶೆಟ್ಟಿ , ಶನ್ಮಿತ್ ರೈ, ಕೊಳ್ತಿಗೆ ಗ್ರಾಮದ ಸತ್ಯಪ್ರಕಾಶ್ ಕುಂಟಿಕಾನ,  ಕಾರ್ಯದರ್ಶಿ

ಪುತ್ತಿಲ ಪರಿವಾರದಿಂದ ದೈವನರ್ತಕ ರಮೇಶ್ ಅಜಲರ ಮನೆಗೆ ಭೇಟಿ | ಸಹಾಯ ಧನ  ಹಸ್ತಾಂತರ Read More »

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ

ಪುತ್ತೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವತಿಯಿಂದ ತಿರಂಗಾ ಯಾತ್ರೆ ಶುಕ್ರವಾರ ನಡೆಯಿತು. ನಗರದ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಿರಂಗಾ ಯಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ತಿರಂಗಾ ಯಾತ್ರೆ ಕೋರ್ಟ್ ರಸ್ತೆಯಿಂದ ಸಾಗಿ ಟೌನ್ ಬ್ಯಾಂಕ್‍ಸಭಾಂಗಣದಲ್ಲಿ ಸಮಾಪನಗೊಂಡಿತು. ನೂರಾರು ಕಾರ್ಯಕರ್ತರು ರಾಷ್ಟ್ರಧ್ವಜದೊಂದಿಗೆ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ಮಾಜಿ ಶಾಸಕ ಸಂಜೀವ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ Read More »

ವಿಟ್ಲ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕ ಸದಸ್ಯರ ತರಬೇತಿ ಕಾರ್ಯಕ್ರಮ

ವಿಟ್ಲ: ವಿಟ್ಲ ತಾಲೂಕು ಮಟ್ಟದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರ ತರಬೇತಿ ಕಾರ್ಯಕ್ರಮ ವಿಟ್ಲ ಯೋಜನಾ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಅಖಿಲ ಕರ್ನಾಟಕ ಜನ ಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕ ವಿವೇಕ ವಿನ್ಸೆಂಟ್  ಪಾಯ್ಸ್ ಮಾತನಾಡಿ, ಆಕಸ್ಮಿಕವಾಗಿ ವಿಪತ್ತು ಬರುತ್ತದೆ. ಅಂತಹ ಸಂದರ್ಭದಲ್ಲಿ ಎಲ್ಲೋ ದೂರದಲ್ಲಿರುವ ಸಹಾಯಕರನ್ನು ಕರೆದು ಬರುವಾಗ ಅವಗಡದ ತೀವ್ರತೆ ಹೆಚ್ಚಾಗಿ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು. ಆಗ ಆಪದ್ಬಾಂಧವರಾಗಿ ಸಹಾಯಕ್ಕೆ ಬರುವವರೇ ಧರ್ಮಸ್ಥಳ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಸದಸ್ಯರು.

ವಿಟ್ಲ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕ ಸದಸ್ಯರ ತರಬೇತಿ ಕಾರ್ಯಕ್ರಮ Read More »

ಹಿರೇಬಂಡಾಡಿ ಗ್ರಾಪಂ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ, ಉಪಾಧ್ಯಕ್ಷರಾಗಿ ಶಾಂಭವಿ

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಶಾಂಭವಿ ಆಯ್ಕೆಯಾಗಿದ್ದಾರೆ. ಒಟ್ಟು 15 ಸದಸ್ಯ ಬಲವನ್ನು ಹಿರೇಬಂಡಾಡಿ ಗ್ರಾ.ಪಂ.ನಲ್ಲಿ 11 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದು, 5 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು. ಇಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯ ಸದಾನಂದ ಶೆಟ್ಟಿ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯ ಸತೀಶ್ ಶೆಟ್ಟಿ ಎಚ್. ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ

ಹಿರೇಬಂಡಾಡಿ ಗ್ರಾಪಂ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ, ಉಪಾಧ್ಯಕ್ಷರಾಗಿ ಶಾಂಭವಿ Read More »

ಖಾಸಗಿ ಆಂಬುಲೆನ್ಸ್ ವಾಹನ ಪಲ್ಟಿ | ಚಾಲಕ ಮೃತ್ಯು

ಬಿ.ಸಿ.ರೋಡ್ : ರೋಗಿಯೋರ್ವನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ವಾಹನವೊಂದು‌ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,  ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಗುರುವಾಯನಕೆರೆ ನಿವಾಸಿ ಶಬೀರ್ ಮೃತಪಟ್ಟ ಚಾಲಕ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸಾರ ಅಂಬ್ಯುಲೆನ್ಸ್ ವಾಹನ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ಅಂಬ್ಯುಲೆನ್ಸ್ ವಾಹನ ರಸ್ತೆ ಮಧ್ಯ ಪಲ್ಟಿಯಾಗಿದ್ದು, ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದಾರೆ, ತಕ್ಷಣ ಆತನನ್ನು ಬೇರೆ

ಖಾಸಗಿ ಆಂಬುಲೆನ್ಸ್ ವಾಹನ ಪಲ್ಟಿ | ಚಾಲಕ ಮೃತ್ಯು Read More »

ನೈತಾಡಿ ಜನನಿ ರೈತ ಉತ್ಪಾದಕರ ಕಂಪೆನಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ

ಪುತ್ತೂರು:  ಪುತ್ತೂರು ನೈತಾಡಿ ಜನನಿ ರೈತ ಉತ್ಪಾದಕರ ಕಂಪೆನಿ ನಿಯಮಿತ ವತಿಯಿಂದ 77 ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಂಪೆನಿಯ ಆಡಳಿತ ನಿರ್ದೇಶಕ ಅರುಣ್ ಕುಮಾರ್ ಪುತ್ತಿಲ ಧ್ವಜಾರೋಹಣ ನೆರವೇರಿಸಿದರು ಈ ಸಂದರ್ಭದಲ್ಲಿ ಕಂಪೆನಿಯ ನಿರ್ದೇಶಕರು, ಮುಖ್ಯ ಕಾರ್ಯ ನಿರ್ವಹಣ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ನೈತಾಡಿ ಜನನಿ ರೈತ ಉತ್ಪಾದಕರ ಕಂಪೆನಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ Read More »

ಆ.20 : ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆ | ಪುತ್ತೂರಿನಲ್ಲಿ ಹೊರೆಕಾಣಿಕೆ  ಕಾರ್ಯಾಲಯ ಉದ್ಘಾಟನೆ

ಪುತ್ತೂರು: ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತರದಲ್ಲಿ 48 ದಿನಗಳ ಪರ್ಯಂತ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಅಂಗವಾಗಿ ಪುತ್ತೂರಿನಿಂದ ಆ.20 ರಂದು ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಇದರ ಅಂಗವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೊರೆಕಾಣಿಕೆ ಕಾರ್ಯಾಲಯ ಶುಕ್ರವಾರ ಉದ್ಘಾಟನೆಗೊಂಡಿತು. ಈಗಾಗಲೇ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಜು.16 ರಿಂದ ಆರಂಭಗೊಂಡಿದ್ದು, ಆ.25 ರ ತನಕ ನಡೆಯಲಿದೆ. ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತಾಚರಣೆ ಆ.25 ರಿಂದ ಆರಂಭಗೊಂಡು ಆ.27

ಆ.20 : ಮಾಣಿಲ ಕ್ಷೇತ್ರಕ್ಕೆ ಬೃಹತ್ ಹೊರೆಕಾಣಿಕೆ ಮೆರವಣಿಗೆ | ಪುತ್ತೂರಿನಲ್ಲಿ ಹೊರೆಕಾಣಿಕೆ  ಕಾರ್ಯಾಲಯ ಉದ್ಘಾಟನೆ Read More »

ಧಾರ್ಮಿಕತೆ, ಸಾಂಸ್ಕೃತಿಕತೆ ಹಿರಿಯರ ಉಸಿರಾಗಿತ್ತು: ಕೆ.ಕೆ ಪೇಜಾವರ | ಅಕ್ಷಯ ಕಾಲೇಜಿನಲ್ಲಿ ಸಂಭ್ರಮದ ಆಟಿ ಕೂಟ

ಪುತ್ತೂರು: ವರ್ಷದ ಹನ್ನೆರಡು ತಿಂಗಳುಗಳ ವೈಶಿಷ್ಟ್ಯ ಹಾಗೂ ಕಲ್ಪನೆಯನ್ನು ಹಿಂದಿನ ಕಾಲದ ಹಿರಿಯರು ಅಕ್ಷರಾಭ್ಯಾಸವಿಲ್ಲದಿದ್ದರೂ ತುಳು ಬದುಕನ್ನು ಉಳಿಸಿಕೊಂಡು ಬಂದಿರುತ್ತಾರೆ. ತುಳುನಾಡಿನಲ್ಲಿ ಸಾಕಷ್ಟು ಆಚಾರ ವಿಚಾರಗಳಿವೆ ಅಲ್ಲದೆ ಧಾರ್ಮಿಕತೆ ಮತ್ತು ಸಾಂಸ್ಕೃತಿಕತೆ ನಮ್ಮ ಹಿರಿಯರ ಉಸಿರಾಗಿತ್ತು ಎಂದು ತುಳು ವಿದ್ವಾಂಸಕರಾದ ಕೆ.ಕೆ ಪೇಜಾವರರವರು ಹೇಳಿದರು. ಸಂಪ್ಯದಲ್ಲಿ ಅಕ್ಷಯ ಎಜ್ಯುಕೇಶನಲ್ ಟ್ರಸ್ಟ್‌ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜ್ ವತಿಯಿಂದ ಹಮ್ಮಿಕೊಂಡ ‘ಆಟಿ ಕೂಟ’ವನ್ನು ಉದ್ಘಾಟಿಸಿ ಮಾತನಾಡಿದರು. ಆಟಿ ಕಾಲದಲ್ಲಿ ಊರಿನ ಮಾರಿ ಓಡಿಸಲು ಆಟಿ ಕಳೆಂಜ ಬರುವುದಾಗಿತ್ತು. ಹಿಂದಿನ ಬಡತನದ

ಧಾರ್ಮಿಕತೆ, ಸಾಂಸ್ಕೃತಿಕತೆ ಹಿರಿಯರ ಉಸಿರಾಗಿತ್ತು: ಕೆ.ಕೆ ಪೇಜಾವರ | ಅಕ್ಷಯ ಕಾಲೇಜಿನಲ್ಲಿ ಸಂಭ್ರಮದ ಆಟಿ ಕೂಟ Read More »

error: Content is protected !!
Scroll to Top