ಪುತ್ತೂರು

ನರಿಮೊಗರು ಗ್ರಾ.ಪಂ ಅಧ್ಯಕ್ಷೆಯಾಗಿ ಹರಿಣಿ, ಉಪಾಧ್ಯಕ್ಷರಾಗಿ ಉಮೇಶ್ ಆಯ್ಕೆ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ಅಧ್ಯಕ್ಷೆಯಾಗಿ ಹರಿಣಿ ಅವರು ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಉಮೇಶ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠದೂರು,ನರಿಮೊಗರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವಿದ್ಯಾ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,ನರಿಮೊಗರು ಗ್ರಾಮ ಗ್ರಾಮ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷ ಸುಧಾಕರ್ ಕುಲಾಲ್, ನವೀನ್ ರೈ ಶಿಬರ, ಹಾಗೂ ಪಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನರಿಮೊಗರು ಗ್ರಾ.ಪಂ ಅಧ್ಯಕ್ಷೆಯಾಗಿ ಹರಿಣಿ, ಉಪಾಧ್ಯಕ್ಷರಾಗಿ ಉಮೇಶ್ ಆಯ್ಕೆ Read More »

ಶಾಂತಿಗೋಡಿನಲ್ಲಿ ಸಸ್ಯ ಸಪ್ತಾಹ “ವಿವೇಕ ಸಂಜೀವಿನಿ” ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇದರ ಗ್ರಾಮ ವಿಕಾಸ, ಇಕೋ ಕ್ಲಬ್ ಹಾಗೂ ಎನ್ ಎಸ್ ಎಸ್ ಸಹಯೋಗದಲ್ಲಿ ಸಸ್ಯ ಸಪ್ತಾಹ ಕಾರ್ಯಕ್ರಮದಡಿಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ “ವಿವೇಕ ಸಂಜೀವಿನಿ” ಕಾರ್ಯಕ್ರಮ ಶಾಂತಿಗೋಡು ಶಾಲಾ ವಠಾದಲ್ಲಿ  ಆ.11 ಶುಕ್ರವಾರ ನಡೆಯಿತು. ಗ್ರಾಮ ವಿಕಾಸ ಸಮಿತಿ ಸದಸ್ಯ ಕೃಷ್ಣ ಸಾಲ್ಯಾನ್ ಮಾತನಾಡಿ, ಒಂದು ಮರದಿಂದ  ವಿವಿಧ ರೀತಿಯ ಉಪಯೋಗ ಇದೆ. ಈ ನಿಟ್ಟಿನಲ್ಲಿ ವಿವಿಧ ಬಗೆಯ ಸಸ್ಯಗಳನ್ನು ನೆಟ್ಟು ಪೋಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. ಗ್ರಾಮ

ಶಾಂತಿಗೋಡಿನಲ್ಲಿ ಸಸ್ಯ ಸಪ್ತಾಹ “ವಿವೇಕ ಸಂಜೀವಿನಿ” ಕಾರ್ಯಕ್ರಮ Read More »

ಆ.13: ರಾಮಕುಂಜದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದಿಂದ ಆಟಿಡೊಂಜಿ ದಿನ, ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ಆಲಂಕಾರು ವಲಯ, ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ ರಾಮಕುಂಜ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಹಾಗೂ ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ, ಅಭಿನಂದನಾ ಕಾರ್ಯಕ್ರಮ ಆ.13ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ರಾಮಕುಂಜ ಗ್ರಾಮದ ಸಮಾಜ ಬಾಂಧವರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ. ಮಧ್ಯಾಹ್ನ 11 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ನಿವೃತ್ತ ಮುಖ್ಯಶಿಕ್ಷಕಿ ಚಂದ್ರಾವತಿ

ಆ.13: ರಾಮಕುಂಜದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದಿಂದ ಆಟಿಡೊಂಜಿ ದಿನ, ಸ್ವಸಹಾಯ ಸಂಘಗಳ ವಾರ್ಷಿಕೋತ್ಸವ Read More »

ಪಂಚೋಡಿ-ಕರ್ನೂರು-ಗಾಳಿಮುಖ ರಸ್ತೆಗೆ 3.72 ಕೋಟಿ ಅನುದಾನ : ಶಾಸಕ ಅಶೋಕ್ ರೈ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಂಚೋಡಿ-ಕರ್ನೂರು-ಗಾಳಿಮುಖ ರಸ್ತೆಗೆ ಸರಕಾರ ರೂ. 3.72 ಕೋಟಿ ಅನುದಾನ ಮಂಜೂರು ಮಾಡಿದ್ದು ಈ ಮೂಲಕ 15 ವರ್ಷಗಳ ಬೇಡಿಕೆ ಈ ಬಾರಿ ಈಡೇರಿದಂತಾಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. 3.72 ಕೋಟಿ ರೂ. ಅನುದಾನದಲ್ಲಿ ನಡೆಯುತ್ತಿರುವ ನೆಟ್ಟಣಿಗೆ ಮುಡ್ನೂರು ಗ್ರಾಮದ ಪಂಚೋಡಿ-ಕರ್ನೂರು-ಗಾಳಿಮುಖ ರಸ್ತೆಯ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಈ ರಸ್ತೆಯು ಕೇರಳವನ್ನು ಸಂಪರ್ಕಿಸುವ ರಸ್ತೆಯಾಗಿದ್ದು 15 ವರ್ಷಗಳಿಂದ ದುರಸ್ಥಿಯಾಗಿರಲಿಲ್ಲ. ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು ವಾಹನ

ಪಂಚೋಡಿ-ಕರ್ನೂರು-ಗಾಳಿಮುಖ ರಸ್ತೆಗೆ 3.72 ಕೋಟಿ ಅನುದಾನ : ಶಾಸಕ ಅಶೋಕ್ ರೈ Read More »

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಮೂಲಭೂತ ಸೌಕರ್ಯ ವೃದ್ದಿ: ಅಶೋಕ್ ರೈ | ನೆಟ್ಟಣಿಗೆ ಮುಡ್ನೂರು ಪ್ರೌಢ ಶಾಲೆಯಲ್ಲಿ ವಿವೇಕ ತರಗತಿ ಕೊಠಡಿ ಉದ್ಘಾಟನೆ

ಪುತ್ತೂರು: ಸರಕಾರಿ ಶಾಲೆಗಳಲ್ಲಿನ ಮೂಲಭೂತ ಸೌಕರ್ಯಗಳ ಕೊರತೆಗಳನ್ನು ನೀಗಿಸಿ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಸರಕಾರ ಒತ್ತು ನೀಡಲಿದೆ. ಈ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು ವೃದ್ಧಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ನೆಟ್ಟಣಿಗೆ ಮುಡ್ನೂರು ಸರಕಾರಿ ಪ್ರೌಢ ಶಾಲೆಯಲ್ಲಿ ವಿವೇಕ ತರಗತಿ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಗಳಲ್ಲಿ ಕೊಠಡಿಯ ಕೊರತೆಯನ್ನು ಬಹುತೇಕ ಪರಿಹರಿಸಲಾಗಿದೆ. ಶಾಲಾ ಪ್ರಾರಂಭದ ವೇಳೆಯೇ ಶಿಕ್ಷಕರ ಕೊರತೆ ಇರುವಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. 13,500 ಶಿಕ್ಷಕರ

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಮೂಲಭೂತ ಸೌಕರ್ಯ ವೃದ್ದಿ: ಅಶೋಕ್ ರೈ | ನೆಟ್ಟಣಿಗೆ ಮುಡ್ನೂರು ಪ್ರೌಢ ಶಾಲೆಯಲ್ಲಿ ವಿವೇಕ ತರಗತಿ ಕೊಠಡಿ ಉದ್ಘಾಟನೆ Read More »

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ | ಯಾರೂ, ಯಾವಾಗ ಬೇಕಾದರೂ ತನಿಖೆ ನಡೆಸಲಿ : ಸಿಡಿಪಿಒ ಸ್ಪಷ್ಟನೆ

ಪುತ್ತೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಯಾರು ಬೇಕಾದರೂ, ಯಾವಾಗ ಬೇಕಾದರೂ ತನಿಖೆ ನಡೆಸಬಹುದು ಎಂದು ಸಿಡಿಪಿಒ ಸ್ಪಷ್ಟನೆ ನೀಡಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅವರು ಬುಧವಾರ ಇಲಾಖೆಯಲ್ಲಿ ಅವ್ಯವಹಾರ ನಡೆದಿದ ಎಂಬ ದೂರಿನ ಹಿನ್ನಲೆಯಲ್ಲಿ ಇಲಾಖೆಗೆ ದಿಢೀರ್ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಇಲಾಖಾ ಅಧಿಕಾರಿ ಇರಲಿಲ್ಲ. ಇದರಿಂದ ಆಕ್ರೋಶಗೊಂಡ ಶಾಸಕರು ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡಿದ್ದರು. ಇದು ಸತ್ಯಕ್ಕೆ ದೂರವಾಗಿದ್ದು, ಧಾರಾಳವಾಗಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ | ಯಾರೂ, ಯಾವಾಗ ಬೇಕಾದರೂ ತನಿಖೆ ನಡೆಸಲಿ : ಸಿಡಿಪಿಒ ಸ್ಪಷ್ಟನೆ Read More »

ಆ.12 ರಿಂದ 15 : ಖ್ಯಾತ ಪ್ರಭು ಸ್ಟೀಟ್ಸ್ & ಚರುಂಬುರಿ ಸಂಸ್ಥೆಯಿಂದ “ಚರುಂಬುರಿ ಹಬ್ಬ”

ಪುತ್ತೂರು: ಪುತ್ತೂರು ನಗರದ ಕೊಂಬೆಟ್ಟಿನಲ್ಲಿರುವ ಬಂಟರ ಭವನದ ಎದುರಿನ ಜಿ.ಎಲ್.ಟ್ರೇಡ್ ಸೆಂಟರ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಭು ಸ್ವೀಟ್ಸ್ & ಚರುಂಬುರಿ ಸ್ಟಾಲ್ “ಚರುಂಬುರಿ ಹಬ್ಬ”ವನ್ನು ಆಯೋಜಿಸಿದೆ. ಆ.12 ಶನಿವಾರದಿಂದ ಆ.15 ಮಂಗಳವಾರದ ತನಕ ಸಂಜೆ 4 ರಿಂದ ರಾತ್ರಿ 10 ತನಕ ಜಿ.ಎಲ್. ಟ್ರೇಡ್ ಸೆಂಟರ್ ನ ಸಭಾಂಗಣದಲ್ಲಿ ನಡೆಯಲಿರುವ ಈ ಹಬ್ಬದಲ್ಲಿ ಗ್ರಾಹಕರ ನೆಚ್ಚಿನ ಚರುಂಬುರಿ ಹಲವಾರು ವೆರೈಟಿಗಳಲ್ಲಿ ಆಸ್ವಾದಿಸಬಹುದು. ವಿಶೇಷವಾಗಿ ಚರುಂಬುರಿಯ ಸ್ವಾದ ಕೇವಲ 20 ರೂಪಾಯಿಯಿಂದ ಆರಂಭಗೊಳ್ಳಲಿ‍ದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಆ.12 ರಿಂದ 15 : ಖ್ಯಾತ ಪ್ರಭು ಸ್ಟೀಟ್ಸ್ & ಚರುಂಬುರಿ ಸಂಸ್ಥೆಯಿಂದ “ಚರುಂಬುರಿ ಹಬ್ಬ” Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ದ.ಕ.ಜಿಲ್ಲೆ ವಿದ್ಯಾಭಾರತಿ ಕರ್ನಾಟಕ ವತಿಯಿಂದ ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ಬಾಲವರ್ಗದ ಬಾಲಕಿಯರ ಮತ್ತು ಬಾಲವರ್ಗದ ಬಾಲಕರ ಎರಡೂ ವಿಭಾಗಗಳಲ್ಲಿ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಬಾಲವರ್ಗದ ಬಾಲಕಿಯರ ವಿಭಾಗವನ್ನು ಕೃತಿ, ಶ್ರಾವ್ಯ, ಸಂಧ್ಯಾ , ಶೀಲ, ದೃಷ, ನಳಿನ ಎಚ್.ಬಿ., ಸಿಂಚನ, ನೇಹಾ ಎಂ., ಪಿ ರಕ್ಷಾ, ಪೃಥ್ವಿ, ಭುವಿ ಆರ್., ಧನ್ಯ ಕೆ., ವರ್ಷಾ ಬಿ.ಕೆ., ಹರ್ಷಿತಾ ಜಿ., ಅರ್ಚನಾ, ಯೋಗ್ಯ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಖೋ-ಖೋ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ Read More »

ಕಾಂಗ್ರೆಸ್ ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿದಿದೆ : ಹರಿಪ್ರಸಾದ್ ಯಾದವ್

ಪುತ್ತೂರು: ಕೆದಿಲ ಗ್ರಾಮ ಪಂಚಾಯತಿಗೆ ನಡೆದ ಅಧ್ಯಕ್ಷ ,ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿದಿದ್ದು, ಬಿಜೆಪಿ ಬೆಂಬಲಿತ ಮೂವರು ಸದಸ್ಯರಿಗೆ ಹಣ ಮತ್ತು ಅಧಿಕಾರದ ಅಮಿಷ ತೋರಿಸಿ ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ ಎಂದು ಪುಣಚ ಮಹಾಶಕ್ತೀ ಕೇಂದ್ರ ಅಧ್ಯಕ್ಷ ಹರಿಪ್ರಸಾದ್ ಯಾದವ್ ಆರೋಪಿಸಿದ್ದಾರೆ. ಬಿಜೆಪಿ ಬೆಂಬಲದಿಂದ ಗೆದ್ದು ಬಂದು ಇದೀಗ ಕಾಂಗ್ರೇಸ್ ಸೇರಿರುವ ಸದಸ್ಯರು ಪಾರ್ಟಿಗೆ ಮತ್ತು ಕಾರ್ಯಕರ್ತರಿಗೆ ದ್ರೋಹ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಅವರು ಸದಸ್ಯತನಕ್ಕೆ

ಕಾಂಗ್ರೆಸ್ ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿದಿದೆ : ಹರಿಪ್ರಸಾದ್ ಯಾದವ್ Read More »

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು

ಟ್ಯೂಷನ್‌ ಮುಗಿಸಿ ವಾಪಸಾಗುತ್ತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದ ವಾಹನ ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ರಾಮನಗರದಲ್ಲಿ ಸಂಭವಿಸಿದೆ. ರಾಮನಗರ ತಾಲ್ಲೂಕಿನ ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಐವರು ಮಕ್ಕಳ ಮೇಲೆ ಟಾಟಾ ಏಸ್ ಗೂಡ್ಸ್‌ ವಾಹನ ಹರಿದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 7 ಮಂದಿಗೆ ಗಂಭೀರ ಗಾಯಗಳಾಗಿವೆ. 12

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು Read More »

error: Content is protected !!
Scroll to Top