ಪುತ್ತೂರು

ಐ.ಎ.ಎಸ್- ಐ.ಪಿ.ಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರ ಹಾಗೂ ಐ.ಎ.ಎಸ್ ದರ್ಶನ’ ಯೂಟ್ಯೂಬ್ ಚಾನೆಲ್ ಲೋಕಾರ್ಪಣೆ

ಪುತ್ತೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ನೇತೃತ್ವದಲ್ಲಿ ಜ್ಞಾನ ಗಂಗಾ ಪುಸ್ತಕ ಮಳಿಗೆ ಇವರ ಸಹಕಾರದೊಂದಿಗೆ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಮೂರು ದಿನಗಳು ನಡೆಯುವ  ’ಪುಸ್ತಕ ಹಬ್ಬ’,  ’ಪುಸ್ತಕದಾನಿಗಳ ಮೇಳ’ ಮತ್ತು ’ಸಾಹಿತ್ಯ ವೈಭವ’ವದ ೨ನೇ ದಿನವಾದ ಶನಿವಾರ ಬೆಳಿಗ್ಗೆ ವಿವೇಕಾನಂದ ಐ.ಎ.ಎಸ್ ಅಧ್ಯಯನ ಕೇಂದ್ರ ಯಶಸ್ ನೆಹರುನಗರ, ಪುತ್ತೂರು ಇವರ ಸಹಯೋಗದೊಂದಿಗೆ ಆಸಕ್ತ ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ ಮತ್ತು ಸಾರ್ವಜನಿಕರಿಗೆ ಐ.ಎ.ಎಸ್- ಐ.ಪಿ.ಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರ […]

ಐ.ಎ.ಎಸ್- ಐ.ಪಿ.ಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರ ಹಾಗೂ ಐ.ಎ.ಎಸ್ ದರ್ಶನ’ ಯೂಟ್ಯೂಬ್ ಚಾನೆಲ್ ಲೋಕಾರ್ಪಣೆ Read More »

13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮದ ಅಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪಿಸಲ್ಪಟ್ಟ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನದ ಪ್ರಯುಕ್ತ ನಡೆಯಲಿರುವ 13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆಯ ಅಮಂತ್ರಣ ಪತ್ರ ಬಿಡುಗಡೆಯು ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿ ಎದುರು ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತ್ತಡ್ಕ,ವಿಶ್ವ ಹಿಂದೂ  ಪರಿಷದ್ ಪುತ್ತೂರು ಜಿಲ್ಲಾ

13ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಹಾಗೂ ಶೋಭಾಯಾತ್ರೆ ಕಾರ್ಯಕ್ರಮದ ಅಮಂತ್ರಣ ಪತ್ರ ಬಿಡುಗಡೆ Read More »

ಪಾಲ್ತಾಡಿ ಧರ್ಮರಸು ಉಳ್ಳಾಕುಲು ದೈವಸ್ಥಾನದ ಮಣ್ಣಿನಲ್ಲಿ ಮೇಳೈಸಿದ ಕೆಸರ್ ಡೊಂಜಿ ದಿನ, ಕಂಬಳ ಉತ್ಸವ, ರಕ್ತದಾನ ಶಿಬಿರ | ಲೋಹಿತ್ ಬಂಗೇರಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ

ಪುತ್ತೂರು: ಪುತ್ತೂರು ತಾಲೂಕಿನ ಮಾಡಾವು ಪಾಲ್ತಾಡಿ ಗ್ರಾಮದ ಧರ್ಮರಸು ಉಳ್ಳಾಕುಲು ದೈವಸ್ಥಾನದ ಮಣ್ಣಿನಲ್ಲಿ ಪ್ರಥಮ ಬಾರಿಗೆ ಎಂಬಂತೆ ಕೆಸರ್ ಡೊಂಜಿ ದಿನ ಕಂಬಳ ಉತ್ಸವ ಹಾಗೂ ರಕ್ತದಾನ ಶಿಬಿರ ಭಾನುವಾರ ಮೇಳೈಸಿತು. ಅಲ್ಲಿ ನೆರೆದಿದ್ದ ಸಾವಿರಾರು ಮಂದಿ ಇದಕ್ಕೆ ಸಾಕ್ಷಿಯಾದರು. ಸಾರಾಕರೆ ದಿ.ಶೀನಪ್ಪ ಪೂಜಾರಿ ಅವರ ಸ್ಮರಣಾರ್ಥ ನಡೆದ ಕೆಸರ್ ಡೊಂಜಿ ದಿನ ಕಾರ್ಯಕ್ರಮದಲ್ಲಿ ಭಾನುವಾರ ಮುಂಜಾನೆಯಿಂದಲೇ ಮಕ್ಕಳು, ಮಹಿಳೆಯರು, ಪುರುಷರು ಎನ್ನದೆ ಎಲ್ಲರೂ ಸೇರಿದ್ದರು. ಈ ಕೆಸರುಗದ್ದೆ ಕ್ರೀಡಾಕೂಟ, ಕಂಬಳ ಕ್ರೀಡಾ ಸ್ಪರ್ಧೆಗಾಗಿ ದೈವಸ್ಥಾನದ ಗದ್ದೆಯನ್ನು

ಪಾಲ್ತಾಡಿ ಧರ್ಮರಸು ಉಳ್ಳಾಕುಲು ದೈವಸ್ಥಾನದ ಮಣ್ಣಿನಲ್ಲಿ ಮೇಳೈಸಿದ ಕೆಸರ್ ಡೊಂಜಿ ದಿನ, ಕಂಬಳ ಉತ್ಸವ, ರಕ್ತದಾನ ಶಿಬಿರ | ಲೋಹಿತ್ ಬಂಗೇರಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ Read More »

ಚೆಸ್ ಪಂದ್ಯಾಟ : ಅವನಿ ಎಸ್. ನಾಯಕ್ ಕ್ಷೇತ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು  ಹೈದರಾಬಾದ್‌ನಲ್ಲಿ ನಡೆಯಲಿರುವ ಕ್ಷೇತ್ರ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಈಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸುಮ ಅವರ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಚೆಸ್ ಪಂದ್ಯಾಟ : ಅವನಿ ಎಸ್. ನಾಯಕ್ ಕ್ಷೇತ್ರ ಮಟ್ಟಕ್ಕೆ ಆಯ್ಕೆ Read More »

ಡಾ. ಮೀರಾಮಣಿಯವರಿಗೆ “ಉತ್ತಮ ಗ್ರಂಥಪಾಲಕರು” ರಾಜ್ಯ ಪ್ರಶಸ್ತಿ ಪುರಸ್ಕಾರ.

ಬೆಂಗಳೂರು: ಡಾ. ಮೀರಾಮಣಿಯವರು ಗ್ರಂಥಾಲಯ ಅಭಿವೃದ್ಧಿ ಹಾಗೂ ಗ್ರಂಥಾಲಯ ವಿಜ್ಞಾನ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಗಣನೀಯ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರಕಾರವು 2023ರ “ಉತ್ತಮ ಗ್ರಂಥಪಾಲಕರು” ಎಂಬ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಈ ಪೈಕಿ ಪುತ್ತೂರು ತಾಲೂಕಿನ ಕುದ್ಮಾರು ಗ್ರಾಮದ ದಿ.ನೂಜಿ ಲಿಂಗಪ್ಪ ಗೌಡ, ದುಗ್ಗಮ್ಮ ದಂಪತಿ ಪುತ್ರಿ ಡಾ.ಮೀರಾರಾಣಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಬೆಂಗಳೂರು ಹಂಪಿನಗರದ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಲಾದ ಗ್ರಂಥಾಲಯ ದಿನಾಚರಣೆ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ಪ್ರಾಥಮಿಕ

ಡಾ. ಮೀರಾಮಣಿಯವರಿಗೆ “ಉತ್ತಮ ಗ್ರಂಥಪಾಲಕರು” ರಾಜ್ಯ ಪ್ರಶಸ್ತಿ ಪುರಸ್ಕಾರ. Read More »

ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡಬೇಕಿದೆ: ಶಾಸಕ ಅಶೋಕ್ ರೈ | ಸಾಮೆತ್ತಡ್ಕ ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ತರಗತಿ ಉದ್ಘಾಟನೆ

ಪುತ್ತೂರು: ಸರಕಾರಿ ಶಾಲೆಗಳಲ್ಲಿ ಕನ್ನಡ ಕಲಿಕೆಯ ಜೊತೆಗೆ ಇಂಗ್ಲೀಷ್ ಕಲಿಕೆಗೂ ಅವಕಾಶ ನೀಡಿದರೆ ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯೂ ಹೆಚ್ಚಾಗಲಿದೆ ಈ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಸರಕಾರವನ್ನು ಒತ್ತಾಯಮಾಡುವುದಾಗಿ ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಸಾಮೆತ್ತಡ್ಕ ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು. ಬಡವರ ಮಕ್ಕಳು ಇಂಗ್ಲೀಷ್‌ಕಲಿಯಬೇಕು, ಕೇವಲ ಉಳ್ಳವರ ಮಕ್ಕಳು ಮಾತ್ರ ಖಾಸಗಿ ಶಾಲೆಗಳಿಗೆ ತೆರಳಿ ಇಂಗ್ಲೀಷ್ ಕಲಿಯುವಂತಾಗಬಾರದು, ಉಳ್ಳವರೂ ಇಲ್ಲದವರೂ ಎಲ್ಲರ ಮಕ್ಕಳೂ

ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಅನುಮತಿ ನೀಡಬೇಕಿದೆ: ಶಾಸಕ ಅಶೋಕ್ ರೈ | ಸಾಮೆತ್ತಡ್ಕ ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ತರಗತಿ ಉದ್ಘಾಟನೆ Read More »

 “ಪ್ರೇರಣಾ” ಸಂಸ್ಥೆಯಲ್ಲಿ ಪಿಜಿಸಿಇಟಿ ತರಬೇತಿ ಆರಂಭ

ಪುತ್ತೂರು : ಪುತ್ತೂರು ನಗರದ ಅರುಣಾ ಥಿಯೇಟರ್ ಎದುರುಗಡೆ ಪ್ರಭು ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯಲ್ಲಿ ಪಿಜಿಸಿಇಟಿ ತರಬೇತಿ ತರಗತಿ ಆರಂಭಗೊಂಡಿದೆ. ಸ್ನಾತಕೋತ್ತರ ಪದವಿ ಪ್ರವೇಶಾತಿ ಪರೀಕ್ಷೆಗೆ ತರಬೇತಿ ನುರಿತ ಶಿಕ್ಷಕರಿಂದ ನಡೆಯಲಿದ್ದು, ಆಸಕ್ತರು ತಕ್ಷಣ ನೋಂದಾವಣೆ ಮಾಡಬಹುದು. ನೋಂದಾವಣೆಗಾಗಿ “ಪ್ರೇರಣಾ”, ಪ್ರಥಮ ಮಹಡಿ, ಪ್ರಭು ಬಿಲ್ಡಿಂಗ್ ಅರುಣಾ ಥಿಯೇಟರ್ ಎದುರುಗಡೆ, ಕೆನರಾ ಬ್ಯಾಂಕ್‍ ಬಳಿ ಇರುವ ಸಂಸ್ಥೆಯನ್ನು ಸಂಪರ್ಕಿಸಬಹುದು. 08251-200721, 7204977721, 8904877721 ಹೆಚ್ಚಿನ ಮಾಹಿತಿಗಾಗಿ ಕರೆಮಾಡಬಹುದು.

 “ಪ್ರೇರಣಾ” ಸಂಸ್ಥೆಯಲ್ಲಿ ಪಿಜಿಸಿಇಟಿ ತರಬೇತಿ ಆರಂಭ Read More »

ಸೌಜನ್ಯ ನೈಜ ಆರೋಪಿಗಳನ್ನು ಪತ್ತೆಹಚ್ಚುವಂತೆ ಆಗ್ರಹ | ಸಮಾನ ಮನಸ್ಕರ ಹೋರಾಟ ಸಮಿತಿಯಿಂದ ಕಾಣಿಯೂರಿನಲ್ಲಿ ಶಾಂತಿಯುತ ಮೌನ ಪ್ರತಿಭಟನೆ

ಕಾಣಿಯೂರು: ಕಾಣಿಯೂರು, ದೋಳ್ಪಾಡಿ, ಚಾರ್ವಾಕ ಹಾಗೂ ಪುಣ್ಚತ್ತಾರು ಸೌಜನ್ಯ ಪರ ನ್ಯಾಯಕ್ಕಾಗಿ ಸಮಾನ ಮನಸ್ಕರ ಹೋರಾಟ ಸಮಿತಿ ವತಿಯಿಂದ ಶಾಂತಿಯುತ ಮೌನ ಪ್ರತಿಭಟನೆ ಶನಿವಾರ ಬೆಳಿಗ್ಗೆ ಕಾಣಿಯೂರಿನಲ್ಲಿ ನಡೆಯಿತು. ಸೌಜನ್ಯ ಹತ್ಯೆ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಮರು ತನಿಖೆ ನಡೆಯಲಿ ಎಂಬ ಘೋಷಣೆಯೊಂದಿಗೆ ಫಲಕಗಳನ್ನು ಹಿಡಿದು ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಪ್ರತಿಭಟನೆಯನ್ನುದ್ದೇಶಿಸಿ ಪದ್ಮಯ್ಯ ಗೌಡ ಅನಿಲ, ಧರ್ಮೇಂದ್ರ ಕಟ್ಟತ್ತಾರು, ಪರಮೇಶ್ವರ ಅನಿಲ, ಧನಂಜಯ ಕೇನಾಜೆ, ಧರ್ಮಪಾಲ ರೈ ದೋಳ್ಪಾಡಿ, ರಾಮಣ್ಣ ಗೌಡ,

ಸೌಜನ್ಯ ನೈಜ ಆರೋಪಿಗಳನ್ನು ಪತ್ತೆಹಚ್ಚುವಂತೆ ಆಗ್ರಹ | ಸಮಾನ ಮನಸ್ಕರ ಹೋರಾಟ ಸಮಿತಿಯಿಂದ ಕಾಣಿಯೂರಿನಲ್ಲಿ ಶಾಂತಿಯುತ ಮೌನ ಪ್ರತಿಭಟನೆ Read More »

ಕೇಪು ಗ್ರಾ.ಪಂ. ಮಾಜಿ  ಉಪಾಧ್ಯಕ್ಷ, ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಆಲಂಗಾರು ಈಶ್ವರ ಭಟ್ ನಿಧನ

ವಿಟ್ಲ: ಕೇಪು ಗ್ರಾಮದ ಆಲಂಗಾರು ನಿವಾಸಿ, ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಆಲಂಗಾರು ಈಶ್ವರ ಭಟ್(66) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇಪು ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾಗಿದ್ದ ಅವರು ಪಡಿಬಾಗಿಲು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿ, ಅಭಿವೃದ್ಧಿ ಸಮಿತಿ ಸ್ಥಾಪಕ ಅಧ್ಯಕ್ಷರಾಗಿದ್ದರು. ಕೇಪು ಮೈರ ಶ್ರೀ ದುರ್ಗಾ ಮಿತ್ರ ವೃಂದದ ಸ್ಥಾಪಕ ಅಧ್ಯಕ್ಷರಾಗಿ, ಜನಸಂಘ ಸ್ವಯಂಸೇವಕರಾಗಿ, ಕೇಪು ಗ್ರಾಮದಲ್ಲಿ ಬಿಜೆಪಿಯನ್ನು ಸಂಘಟಿಸಿ, ಕೇಪು ಗ್ರಾಮ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ವಿಟ್ಲ ಸೀಮೆ

ಕೇಪು ಗ್ರಾ.ಪಂ. ಮಾಜಿ  ಉಪಾಧ್ಯಕ್ಷ, ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಆಲಂಗಾರು ಈಶ್ವರ ಭಟ್ ನಿಧನ Read More »

ಪುತ್ತೂರು,ಕುದ್ಮಾರಿನ ಡಾ:ಮೀರಾಮಣಿ ಅವರಿಗೆ ಉತ್ತಮ ಗ್ರಂಥಪಾಲಕ ಪ್ರಶಸ್ತಿ

ಪುತ್ತೂರು:ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಗ್ರಂಥಪಾಲಕ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದು ಕೇಂದ್ರ ಸಚಿವರು ಆಗಿರುವ ನಿರ್ಮಲ ಸೀತಾರಾಮನ್ ಮತ್ತು ಶ್ರೀ ಎನ್ ರಾಜೀವ್ ಹಾಗೂ ಅನೇಕ ರಾಜ್ಯ ಸಚಿವರು ಭಾಗವಹಿಸಲಿದ್ದಾರೆ. ಇವರು ಬೆಂಗಳೂರಿನ ಜೈನ್ ಯೂನಿವರ್ಸಿಟಿಯಲ್ಲಿ ಗ್ರಂಥಪಾಲಕರಾಗಿ ಅನೇಕ ವರುಷದಿಂದ ಕಾರ್ಯ ನಿರ್ವಹಿಸುತ್ತಿದ್ದು ಇವರ ಪತಿ ಎಡಮಂಗಲ ಪರ್ಲ ನಿವಾಸಿ ಬೆಂಗಳೂರಿನ MNC ಕಂಪೆನಿಯಲ್ಲಿ accounts head ಆಗಿರುವ ಶ್ರೀ ಆನಂದ ಪರ್ಲ ಹಾಗೂ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಪುತ್ತೂರು,ಕುದ್ಮಾರಿನ ಡಾ:ಮೀರಾಮಣಿ ಅವರಿಗೆ ಉತ್ತಮ ಗ್ರಂಥಪಾಲಕ ಪ್ರಶಸ್ತಿ Read More »

error: Content is protected !!
Scroll to Top