ಪುತ್ತೂರು

ಒಂದನೇ ತರಗತಿ ಸೇರಲು 6 ವರ್ಷ : ಸರಕಾರದ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್‌

2025-26ನೇ ಶೈಕ್ಷಣಿಕ ವರ್ಷದಿಂದ ಜಾರಿ ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 5 ವರ್ಷ 5 ತಿಂಗಳು ಬದಲು 6 ವರ್ಷ ತುಂಬಿರಬೇಕು ಎಂದು ರಾಜ್ಯ ಸರ್ಕಾರ 2022ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಈ ಕುರಿಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು 2022ರ ಜು.26ರಂದು ಹೊರಡಿಸಿದ್ದ ಅಧಿಸೂಚನೆ ರದ್ದು ಕೋರಿ ಬೆಂಗಳೂರಿನ ಅನಿಕೇತ್ ಎಂಬವರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ […]

ಒಂದನೇ ತರಗತಿ ಸೇರಲು 6 ವರ್ಷ : ಸರಕಾರದ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್‌ Read More »

ಪುತ್ತೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಅವ್ಯವಹಾರ | ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಶಾಸಕರು

ಪುತ್ತೂರು: ಇಲ್ಲಿನ ಮಹಿಳಾ ಮತ್ತು ಕಲ್ಯಾಣ ಇಲಾಖೆಯಲ್ಲಿ ಬಾರೀ ಗೋಲ್‌ಮಾಲ್ ನಡೆಯುತ್ತಿದೆ ಎಂದು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬುಧವಾರ ಸಂಜೆ ಸಿಡಿಪಿಒ ಕಚೇರಿಗೆ ಭೇಟಿ ನೀಡಿದ್ದಾರೆ. ಶಾಸಕರು ಭೇಟಿ ನೀಡುವ ವೇಳೆ ಸಿಡಿಪಿಒ ಅಧಿಕಾರಿ ಕಚೇರಿಯಲ್ಲಿರಲಿಲ್ಲ. ಕರೆ ಮಾಡಿದಾಗ ಬೆಳ್ತಂಗಡಿ ಹೋಗಿರುವುದಾಗಿ ತಿಳಿಸಿದರು. ಈ ವೇಳೆ ಮೊಬೈಲ್ ಮೂಲಕವೇ ಅಧಿಕಾರಿಯನ್ನು ತರಾಟೆಗೆತ್ತಿಕೊಂಡ ಶಾಸಕರು “ ಇಲಾಖೆಯಿಂದ ” ಅಂಗನವಾಡಿಗೆ ಆಹಾರ (ಫುಡ್) ವಿತರಣೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಖಾಸಗಿ ವ್ಯಕ್ತಿಗಳ

ಪುತ್ತೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಅವ್ಯವಹಾರ | ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಶಾಸಕರು Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು : ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು  ಪ್ರಥಮ ಸ್ಥಾನ ಪಡೆದು ಆಗಸ್ಟ್ 12 ಹಾಗೂ 13 ರಂದು ಬೆಂಗಳೂರಿನ ಬೊಮ್ಮಸಂದ್ರ  ಶ್ರೀ ಸರಸ್ವತಿ  ವಿದ್ಯಾನಿಕೇತನದಲ್ಲಿ ನಡೆಯುವ ರಾಜ್ಯ ಮಟ್ಟ ಮಟ್ಟದ ಖೋ ಖೋ ಸ್ಪರ್ಧೆಗೆ ಆಯ್ಕೆಯಾಗಿದೆ. ತಂಡವನ್ನು ವಿದ್ಯಾರ್ಥಿಗಳಾದ ಅಶ್ವಿತ್ ಭಂಡಾರಿ, ಪಿ. ಎಸ್. ವರುಣ್ ಕುಮಾರ್, ಧನುಷ್ ,ಜೀವನ್ ಎಸ್, ಮನ್ವಿತ್ ಬಿ ಗೌಡ, ದೇಶಿಕ್ ಕೆ, ಶ್ರೇಯಸ್ ಪಿ,

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆ Read More »

ಬೀಡಿ ಕಾರ್ಮಿಕರ ಬೋನಸ್ ಬಿಡುಗಡೆ | ಸಾವಿರ ಬೀಡಿಗೆ 38.15 ರೂ.

ಪುತ್ತೂರು:  2022-23 ನೇ ಸಾಲಿನ ಬೀಡಿ ಕಾರ್ಮಿಕರ ಬೋನಸ್‌ ಬಿಡುಗಡೆಯಾಗಿದ್ದು ರಜಾಸಂಬಳ, ಹಬ್ಬದ ರಜಾ ಸಂಬಳ, ಸೇರಿ ಒಟ್ಟು ಸಾವಿರ ಬೀಡಿಗೆ ರೂ 38.15 ಕಾರ್ಮಿಕರಿಗೆ ಸಿಗಲಿದೆ ಎಂದು ಪುತ್ತೂರು ತಾಲೂಕು ಬೀಡಿ ಕೆಲಸಗಾರ ಸಂಘದ ಅದ್ಯಕ್ಷ ಗುಡ್ಡಪ್ಪ ಗೌಡ, ಕಾರ್ಯದರ್ಶಿ ಬಿ.ಎಂ.ಭಟ್‌, ಮುಖಂಡರಾದ ಪಿಕೆ ಸತೀಶನ್‌, ಈಶ್ವರಿ  ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈವರ್ಷದ ಬೋನಸ್‌ 8.33 % ನಂತೆ ರೂ 19.35 , ರಜಾ ಸಂಬಳ 5 % ನಂತೆ ರೂ. 11.61 , ಹಬ್ಬದ

ಬೀಡಿ ಕಾರ್ಮಿಕರ ಬೋನಸ್ ಬಿಡುಗಡೆ | ಸಾವಿರ ಬೀಡಿಗೆ 38.15 ರೂ. Read More »

ನರೇಂದ್ರ ಕಾಲೇಜಿನಲ್ಲಿ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಪ್ರಾರಂಭ

ಪುತ್ತೂರು: ಕರಾಟೆ ಪ್ರಪಂಚದಾದ್ಯಂತ ಅಭ್ಯಾಸ ಮಾಡುವ ಅಗ್ರ ಸಮರ ಕಲೆಗಳಲ್ಲಿ ಒಂದಾಗಿದೆ. ಕರಾಟೆ ಕಲೆ ಆತ್ಮರಕ್ಷಣೆಗಿದ್ದು ಇದರ ತರಬೇತಿ ಪಡೆಯುವುದರಿಂದ ಆತ್ಮಬಲ ಮತ್ತು ಮಾನಸಿಕವಾಗಿ ಸದೃಢದ ಜತೆಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರ ಶಿವಪ್ರಸಾದ್ ಡಿ. ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರಾಟೆ ಸಮನ್ವಯವನ್ನು ಅಭಿವೃದ್ಧಿಪಡಿಸುತ್ತದೆ. ಮತ್ತು ಶಕ್ತಿ ನಮ್ಯತೆಯನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳಿಗೆ

ನರೇಂದ್ರ ಕಾಲೇಜಿನಲ್ಲಿ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಪ್ರಾರಂಭ Read More »

ಶಾಂತಿಗೋಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ | ಸದಸ್ಯರಿಗೆ ಶೇ.10 ಲಾಭಾಂಶ ಘೋಷಣೆ

ಪುತ್ತೂರು:  ಶಾಂತಿಗೋಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2022-23ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಆ.9 ಬುಧವಾರ ಶಾಂತಿಗೋಡು ಸಂಘದ ವಠಾರದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಮ್ಮ ಸಹಕಾರವು ಹೀಗೆ ಮುಂದುವರೆಯಲಿ. ಸಂಘವು ಉನ್ನತ ಶ್ರೇಣಿಯ ಕೊಂಡೊಯ್ಯಲು ತಮ್ಮ ಸಹಕಾರವು ಅತ್ಯಮೂಲ್ಯ ಎಂದು ಹೇಳಿದ ಅವರು, ದನಗಳಿಗೆ ವಿಮೆ ಮಾಡಿಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು. ಹಾಲು ಒಕ್ಕೂಟದ ವೈದ್ಯಾಧಿಕಾರಿ ಡಾಕ್ಟರ್ ಅನುದೀಪ್ ಸಾಕಾಣಿಕೆಯ ಬಗ್ಗೆ ಮತ್ತು ದನಗಳಿಗೆ

ಶಾಂತಿಗೋಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ | ಸದಸ್ಯರಿಗೆ ಶೇ.10 ಲಾಭಾಂಶ ಘೋಷಣೆ Read More »

ವಿಟ್ಲಮುಡ್ನೂರು ಗ್ರಾಪಂ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ವಿಟ್ಲ: ವಿಟ್ಲಮೂಡ್ನೂರು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಪುನೀತ್ ಮಾಡತ್ತಾರು ಹಾಗೂ ಉಪಾಧ್ಯಕ್ಷರಾಗಿ ರೋಹಿಣಿ ಆಯ್ಕೆಯಾಗಿದ್ದು, ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಪ್ರಮುಖರಾದ ಹರಿಪ್ರಸಾದ್ ಯಾದವ್, ಹರೀಶ್ ಬಿಜತ್ರೆ, ನಿತೇಶ್ ಕುಮಾರ್ ಶಾಂತಿವನ, ವಿಶ್ವನಾಥ ಕುಲಾಲ್, ಶಕ್ತಿ ಕೇಂದ್ರದ ಅಧ್ಯಕ್ಷ ಗೋವಿಂದರಾಜ್ ಪಂಚಾಯತ್ ಮಾಜಿ ಅಧ್ಯಕ್ಷ ಜಯಪ್ರಕಾಶ್ ನಾಯಕ್, ಸದಸ್ಯರಾದ ಮಹಾಬಲೇಶ್ವರ ಭಟ್ ಹೇಮಲತಾ, ಉಮೇಶ್ ಎರ್ಕಲ್ತೋಟ, ಲೋಕೇಶ್ ಮೊದಲಾದವರು

ವಿಟ್ಲಮುಡ್ನೂರು ಗ್ರಾಪಂ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ Read More »

ಆ.14 : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಪುತ್ತೂರು ಶಾಖಾ ಕಟ್ಟದಲ್ಲಿ ನೂತನ ಎಟಿಎಂ ಉದ್ಘಾಟನೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಪುತ್ತೂರು ಶಾಖಾ ಕಟ್ಟಡದಲ್ಲಿ ನೂತನ ಎಟಿಎಂ ಉದ್ಘಾಟನೆಗೊಳ್ಳಲಿದ್ದು, ಉದ್ಘಾಟನಾ ಸಮಾರಂಭ ಆ.14 ಸೋಮವಾರ ಬೆಳಿಗ್ಗೆ 11 ಗಂಟೆಗೆ ಬ್ಯಾಂಕ್‍ನ ಸಭಾಭವನದಲ್ಲಿ ನಡೆಯಲಿದೆ ಎಂದು ಬ್ಯಾಂಕ್‍ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ  ಅವರು ಮಾತನಾಡಿ, 1914 ರಲ್ಲಿ ಮೊಳಹಳ್ಳಿ ಶಿವರಾಯರ ನೇತೃತ್ವದಲ್ಲಿ ಪುತ್ತೂರಿನಲ್ಲಿ ಬ್ಯಾಂಕ್‍ ಸ್ಥಾಪನೆಗೊಂಡಿದ್ದು, ಇದೀಗ ಬ್ಯಾಂಕ್‍ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರ ನಾಯಕತ್ವದಲ್ಲಿ ಬೆಳೆದು ಸಾಧನೆಯತ್ತ ದಾಪುಗಾಲಿಟ್ಟಿದೆ ಎಂದು ತಿಳಿಸಿದರು. ಎಟಿಎಂ ಉದ್ಘಾಟನೆಯನ್ನು

ಆ.14 : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಪುತ್ತೂರು ಶಾಖಾ ಕಟ್ಟದಲ್ಲಿ ನೂತನ ಎಟಿಎಂ ಉದ್ಘಾಟನೆ Read More »

ತೆಂಗಿನ ಮರದಿಂದ ಬಿದ್ದು ಮಹಿಳೆ ಮೃತ್ಯು

ಸವಣೂರು: ತೆಂಗಿನಕಾಯಿ ಕೀಳುವ ಸಂದರ್ಭ ತೆಂಗಿನ ಮರದಿಂದ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿಯಲ್ಲಿ ನಡೆದಿದೆ. ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದ ಸುಚಿತ್ರ (30) ಮೃತಪಟ್ಟವರು. ಸುಚಿತ್ರ ಅವರು ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದು, ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು. ಸುಚಿತ್ರ ರವರ ಈ ಕಾಯಕಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು. ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ತೆಂಗಿನ ಮರದಿಂದ ಬಿದ್ದು ಮಹಿಳೆ ಮೃತ್ಯು Read More »

ಆ.13: ಬಂಟರ ಸಂಘದ ಆಶ್ರಯದಲ್ಲಿ “ಆಟಿಡೊಂಜಿ ದಿನ-2023” | ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಆಯೋಜನೆ

ಪುತ್ತೂರು: ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶನದಲ್ಲಿ ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಮತ್ತು ಯುವ, ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ “ಆಟಿಡೊಂಜಿ ದಿನ-2023” ಆ.13 ಭಾನುವಾರ ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರಗತಿಪರ ಕೃಷಿಕ ಅರುಣ್ ಕುಮಾರ್ ರೈ ಆನಾಜೆ,

ಆ.13: ಬಂಟರ ಸಂಘದ ಆಶ್ರಯದಲ್ಲಿ “ಆಟಿಡೊಂಜಿ ದಿನ-2023” | ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಆಯೋಜನೆ Read More »

error: Content is protected !!
Scroll to Top