ದಿನದಿಂದ ದಿನಕ್ಕೆ ಕಾವೇರುತ್ತಿರುವ ಸೌಜನ್ಯ ಪ್ರಕರಣ | ಜಿಲ್ಲೆಯಾದ್ಯಂತ ವಾಹನ ಜಾಥಾ, ಪ್ರತಿಭಟನೆ, ಮೌನ ಮೆರವಣಿಗೆ
ನಿಂತಿಕಲ್ಲು: ಸೌಜನ್ಯ ಕೊಲೆಯಾಗಿ 11 ವರ್ಷ ಕಳೆದರೂ ನೈಜ ಕೊಲೆ ಅಪರಾಧಿಗಳ ಪತ್ತೆಗೆ ಪ್ರತಿಭಟನೆ, ಹಕ್ಕೊತ್ತಾಯಗಳು ದಿನದಿಂದ ದಿನಕ್ಕೆ ಕಾವೇರುತ್ತಿದೆ. ದ.ಕ.ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳಲ್ಲಿರುವ ಸಂಘ ಸಂಸ್ಥೆಗಳು, ಸಮುದಾಯಗಳು ನೈಜ ಆರೋಪಿಗಳ ಪತ್ತೆಗಾಗಿ ದೈವ-ದೇವಸ್ಥಾನಗಳಲ್ಲಿ, ಮಠ-ಮಂದಿರಗಳಲ್ಲಿ ಪ್ರಾರ್ಥನೆಗಳನ್ನು ನಡೆಸುತ್ತಿರುವುದಲ್ಲದೆ, ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಮೌನ ಮೆರವಣಿಗೆ, ವಾಹನ ಜಾಥಾ, ಪ್ರತಿಭಟನೆಗಳನ್ನು ಹಮ್ಮಿಕೊಳ್ಳುತ್ತಿದೆ. ಸಮುದಾಯದವರು ತಾಲೂಕು ಮಟ್ಟದಿಂದ ತೊಡಗಿ ಜಿಲ್ಲಾ ಮಟ್ಟದ ತನಕ ಹಕ್ಕೊತ್ತಾಯದ ಸಭೆಗಳನ್ನು ನಡೆಸುವ ಮೂಲಕ ಮುಂದಿನ ನಡೆಯ ಕುರಿತು ಚರ್ಚೆಗಳನ್ನು ನಡೆಸುತ್ತಿದೆ. […]










