ಪುತ್ತೂರು

ಪುತ್ತೂರು ಒಕ್ಕಲಿಗ ಮಹಿಳಾ ಗೌಡ ಸಂಘದಿಂದ ಆಟಿ ಹಬ್ಬ -2023 | 93  ವರ್ಷ ಪ್ರಾಯದ ಹಿರಿಯೆ ಮಾಧವಿ ಕೆ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು: ಪುತ್ತೂರು ಒಕ್ಕಲಿಗ ಮಹಿಳಾ ಗೌಡ ಸಂಘದಿಂದ ಆಟಿ ಹಬ್ಬ -2023 ಕಾರ್ಯಕ್ರಮ ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಆ.6 ಭಾನುವಾರ ನಡೆಯಿತು. ವಿಶೆಷವಾಗಿ 93 ವರ್ಷ ಪ್ರಾಯದ ದರ್ಬೆ ನಿವಾಸಿ ಮಾಧವಿ ಕೆ ಅವರು ಕಾರ್ಯಕ್ರಮ ಉದ್ಘಾಟಿಸಿ, ಚೆನ್ನೆಮಣೆ ಆಡುವ ಮೂಲಕ ಆಟೋಟ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಮೂಡನಂಬಿಕೆಯಲ್ಲ ವೈಜ್ಞಾನಿಕ ಸತ್ಯವಿದೆ: ಗೀತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಒಕ್ಕಲಿಗ ಗೌಡ ಮಹಿಳಾ ಸಂಘದ ಉಪಾಧ್ಯಕ್ಷೆ ಗೀತಾ ಮಾತನಾಡಿ, ಆಟಿ ಆಚರಣೆ ಮೂಡನಂಬಿಕೆಯಲ್ಲ ವೈಜ್ಞಾನಿಕ […]

ಪುತ್ತೂರು ಒಕ್ಕಲಿಗ ಮಹಿಳಾ ಗೌಡ ಸಂಘದಿಂದ ಆಟಿ ಹಬ್ಬ -2023 | 93  ವರ್ಷ ಪ್ರಾಯದ ಹಿರಿಯೆ ಮಾಧವಿ ಕೆ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ Read More »

ಲಕ್ಷಾಂತರ ಮೌಲ್ಯದ ಅಡಿಕೆ ಕಳವು | ಇಬ್ಬರು ಕಳ್ಳರ ಬಂಧನ | ಸೊತ್ತುಗಳು  ವಶಕ್ಕೆ

ಪುತ್ತೂರು: ಮಾಡನ್ನೂರು ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ವಿಷ್ಣು ಕಲ್ಲೂರಾಯ ಎಂಬವರ ಮನೆಯಂಗಳದ ಉಗ್ರಾಣದಿಂದ 12 ಕ್ವಿಂಟಾಲ್ ಅಡಿಕೆ ಕಳವು ಪ್ರಕರಣದ ಆರೋಪಿಗಳನ್ನು ಸಂಪ್ಯ ಪೊಲೀಸರು ಎರಡೇ ವಾರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಡನ್ನೂರ್ ಗ್ರಾಮದ ಕಾವು ಅಮ್ಮಿನಡ್ಕ ಉಜ್ರುಗುಳಿ ನಿವಾಸಿ ಕಿರಣ್ ಕುಮಾರ್ (27) ಮತ್ತು ಸಂತೋಷ್ ಯು (30) ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತ ಆರೋಪಿಗಳಿಬ್ಬರಿಂದ ಕೃತ್ಯಕ್ಕೆ ಬಳಸಿದ ಮಾರುತಿ ವ್ಯಾನ್ ಸಹಿತ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಡನ್ನೂರ್ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ

ಲಕ್ಷಾಂತರ ಮೌಲ್ಯದ ಅಡಿಕೆ ಕಳವು | ಇಬ್ಬರು ಕಳ್ಳರ ಬಂಧನ | ಸೊತ್ತುಗಳು  ವಶಕ್ಕೆ Read More »

ಆ.11,12, 13 : ಪುಸ್ತಕ ಹಬ್ಬ, ಪುಸ್ತಕ ದಾನಿಗಳ ಮೇಳ, ಸಾಹಿತ್ಯ ವೈಭವ | ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಒಂದು ಪುಸ್ತಕ ಉಚಿತ

ಪುತ್ತೂರು: ಜ್ಞಾನಗಂಗಾ ಪುಸ್ತಕ ಮಳಿಗೆ ಪುತ್ತೂರು ಇವರ ಸಹಕಾರದೊಂದಿಗೆ ಆಗಸ್ಟ್ 11, 12, 13ರಂದು ಪುತ್ತೂರಿನ ಕೋ ಆಪರೇಟಿವ್  ಬ್ಯಾಂಕಿನ ಸಭಾಂಗಣದಲ್ಲಿ ಪುಸ್ತಕ ಹಬ್ಬ- ಪುಸ್ತಕದಾನಿಗಳ ಮೇಳ- ಸಾಹಿತ್ಯ ವೈಭವ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ  ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಒಂದು ಪುಸ್ತಕ ಉಚಿತವಾಗಿ ನೀಡಲಾಗುವುದು. ಮೂರು ದಿನದಲ್ಲಿ ಪುಸ್ತಕ ಪ್ರದರ್ಶನ- ಮಾರಾಟ  10%ರಿಂದ 90% ರಿಯಾಯಿತಿ ದರದಲ್ಲಿ ಲಭ್ಯವಿದೆ. ಅಧಿಕಮಾಸದಲ್ಲಿ ದಾನ ಮಾಡಿದರೆ ಉತ್ತಮ ಫಲವಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮದಲ್ಲಿ ಪುಸ್ತಕದ ದಾನಿಗಳ ಮೇಳ

ಆ.11,12, 13 : ಪುಸ್ತಕ ಹಬ್ಬ, ಪುಸ್ತಕ ದಾನಿಗಳ ಮೇಳ, ಸಾಹಿತ್ಯ ವೈಭವ | ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಒಂದು ಪುಸ್ತಕ ಉಚಿತ Read More »

ಕಾರ್ಯಕರ್ತರಿಗೆ ಪಕ್ಷದಲ್ಲಿ ವಿಶೇಷ ಸ್ಥಾನ ಮಾನ ಎಂದಿಗೂ ಇದೆ: ಶಾಸಕ ಅಶೋಕ್ ರೈ | ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ಪಕ್ಷದ ಅಭಿವೃದ್ದಿಯಾಗಬೆಕಾದರೆ ಕಾರ್ಯಕರ್ತರು ಮುಖ್ಯ, ಪಕ್ಷದಲ್ಲಿ ಕಾರ್ಯಕರ್ತರ ನೋವು, ನಲಿವುಗಳಿಗೆ ಸ್ಪಂದನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸ ಮಾಡಬೇಕು. ಕಾರ್ಯಕರ್ತರಿಗೆ ಪಕ್ಷದಲ್ಲಿ ಎಂದಿಗೂ ಸ್ಥಾನಮಾನ ಇರುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕರ್ತರು ಕಳೆದ ಚುನಾವಣೆಯಲ್ಲಿ ಯಾವುದೇ ಪ್ರತಿಫಲಾಕ್ಷೆಯಿಲ್ಲದೆ ಹಗಲಿರುಳು ದುಡಿದ ಪರಿಣಾಮ ಪುತ್ತೂರಿನಲ್ಲಿ ಕಾಂಗ್ರೆಸ್ ಗೆದ್ದಿದೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕೇವಲ ನಾಯಕರಿಂದ ಮಾತ್ರ ಏನೂ ಮಾಡಲು

ಕಾರ್ಯಕರ್ತರಿಗೆ ಪಕ್ಷದಲ್ಲಿ ವಿಶೇಷ ಸ್ಥಾನ ಮಾನ ಎಂದಿಗೂ ಇದೆ: ಶಾಸಕ ಅಶೋಕ್ ರೈ | ಕಾಂಗ್ರೆಸ್ ಕಾರ್ಯಕರ್ತರ ಸಭೆ Read More »

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ : ಎಸ್‍ಐ ವಿದ್ಯಾ ಜೆ.ಕೆ. | ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮ

ಮಾಣಿಲ : ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ  ಎಂದು ವಿಟ್ಲ ಪೊಲೀಸ್ ಠಾಣೆಯ ಎಸ್ ಐ  ವಿದ್ಯಾ ಜೆ ಕೆ ಹೇಳಿದರು. ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಉದಾಹರಿಸುತ್ತಾ ಇಂತಹ ಅಮಾನವೀಯ ಕೃತ್ಯಗಳನ್ನು ತಡೆಗಟ್ಟುವಲ್ಲಿ ಸಮಾಜದ ಪ್ರತಿಯೊಬ್ಬರೂ ಸಹಕರಿಸಬೇಕಾದ ಅನಿವಾರ್ಯತೆಯನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದದಲ್ಲಿ ಇವರು ಪೊಲೀಸ್

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ : ಎಸ್‍ಐ ವಿದ್ಯಾ ಜೆ.ಕೆ. | ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮ Read More »

ಅಂಗಡಿ ಮುಂಭಾಗ ಸರಕು ಇಳಿಸುವ ವಾಹನ, ಚಾಲಕರಿಗೆ ದಂಡ ವಿಧಿಸದಂತೆ ಸಂಚಾರಿ ಠಾಣಾಧಿಕಾರಿಗಳಿಗೆ ವರ್ತಕರಿಂದ ಮನವಿ

ಪುತ್ತೂರು: ಪುತ್ತೂರು ಪೇಟೆಯ ಪ್ರಮುಖ ರಸ್ತೆಗಳಲ್ಲಿ ಅಂಗಡಿಯ ಮುಂಭಾಗ ವಾಹನದಲ್ಲಿ ಬಂದಂತಹ ಸರಕು ಸಾಗಣೆ ಸಮಯ ತುರ್ತಾಗಿ ನಿಲ್ಲಿಸಿ ತೆರಳುತ್ತಿರುವ ಸಮಯದಲ್ಲಿ ವರ್ತಕರಲ್ಲಿಗೆ ಬಂದಂತ ವಾಹನಗಳಿಗೆ ಹಾಗೂ ಚಾಲಕರಿಗೆ ದಂಡ ವಿಧಿಸದಂತೆ ಸಂಚಾರಿ ಠಾಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪುತ್ತೂರು  ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿದ್ದು, ಸಂಘದ ಜಾನ್ ಕುಟಿನ್ಹಾ, ವಾಮನ್ ಪೈ, ಉಲ್ಲಾಸ್ ಪೈ, ಮನೋಜ್ ಟಿವಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮುಖ್ಯ ರಸ್ತೆಯಿಂದ ಕೋರ್ಟ್ ರಸ್ತೆಗೆ ಹೋಗಲು ವ್ಯವಸ್ಥೆ ಮಾಡುವುದರಿಂದ ಮುಖ್ಯ

ಅಂಗಡಿ ಮುಂಭಾಗ ಸರಕು ಇಳಿಸುವ ವಾಹನ, ಚಾಲಕರಿಗೆ ದಂಡ ವಿಧಿಸದಂತೆ ಸಂಚಾರಿ ಠಾಣಾಧಿಕಾರಿಗಳಿಗೆ ವರ್ತಕರಿಂದ ಮನವಿ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಾಣಿಜ್ಯ, ವಿಜ್ಞಾನ, ಸಾಹಿತ್ಯ ಸಂಘಗಳ ಉದ್ಘಾಟನೆ

ಪುತ್ತೂರು: ಪ್ರಜಾಪ್ರಭುತ್ವದ ಅರಿವು ವಿದ್ಯಾರ್ಥಿಗಳಿಗೆ ಆಗಬೇಕಾದರೆ ವಿದ್ಯಾರ್ಥಿ ಸಂಘಗಳು ಸಕ್ರಿಯವಾಗಬೇಕು. ವಿದ್ಯಾರ್ಥಿ ಶಕ್ತಿ ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನ ನಡೆಯಬೇಕು. ಕಲಿಕೆಯ ಜೊತೆಗೆ ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ ಸಮಾಜದ ಸದ್ಬಳಕೆಯಾಗುವುದು ಎಂದು ಬೆಂಗಳೂರಿನ ಹೈಕೋರ್ಟ್ ನ್ಯಾಯವಾದಿ ಸುಯೋಗ್ ಹೇರಳೆ. ಇ. ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 2023-24ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾಯಕತ್ವದ ಬೆಳವಣಿಗೆಗೆ ಹಾಗೂ ಆರೋಗ್ಯಯುತ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ವಿದ್ಯಾರ್ಥಿ ಸಂಘಗಳು ಮಾರ್ಗಸೂಚಿಗಳಾಗಲಿವೆ.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಾಣಿಜ್ಯ, ವಿಜ್ಞಾನ, ಸಾಹಿತ್ಯ ಸಂಘಗಳ ಉದ್ಘಾಟನೆ Read More »

ಸೌಜನ್ಯ ಕೊಲೆ ಪ್ರಕರಣ ತಕ್ಷಣದಿಂದಲೇ ಮರು ತನಿಖೆ ಆರಂಭಿಸಬೇಕು | ಇಲ್ಲದಿದ್ದಲ್ಲಿ ತೀವ್ರ ಸ್ವರೂಪದ ಹೋರಾಟ | ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಎಚ್ಚರಿಕೆ

ಪುತ್ತೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾದ ಆರೋಪಿಯನ್ನು ಈಗಾಗಲೇ ನ್ಯಾಯಾಲಯ ನಿರಪರಾಧಿಯೆಂದು ಘೋಷಿಸಿದ್ದು, ಪ್ರಕರಣವನ್ನು ತಕ್ಷಣದಿಂದಲೇ ಮರು ತನಿಖೆ ನಡೆಸಿ ನೈಜ ಆರೋಪಿಯನ್ನು ಬಂಧಿಸಬೇಕು. ಇಲ್ಲದಿದ್ದರೆ ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ತೀವ್ರ ಸ್ವರೂಪದ ಹೋರಾಟವನ್ನು ನಡೆಸಲಾಗುವುದು ಎಂದು ಸಂಘ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 2011 ರಲ್ಲಿ ಸೌಜನ್ಯರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು, 11 ವರ್ಷಗಳು ಕಳೆದಿದೆ.

ಸೌಜನ್ಯ ಕೊಲೆ ಪ್ರಕರಣ ತಕ್ಷಣದಿಂದಲೇ ಮರು ತನಿಖೆ ಆರಂಭಿಸಬೇಕು | ಇಲ್ಲದಿದ್ದಲ್ಲಿ ತೀವ್ರ ಸ್ವರೂಪದ ಹೋರಾಟ | ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಎಚ್ಚರಿಕೆ Read More »

ಠೇವಣಿ ಹಣ ನಿಗದಿತ ಅವಧಿಯಲ್ಲಿ ಹಿಂದಿರುಗಿಸದ ಆರೋಪ : ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಮ್ಯಾನೇಜರ್, ನಿರ್ದೇಶಕರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಠೇವಣಿ ಅವಧಿ ಮುಗಿದರೂ ಠೇವಣಿ ಹಣವನ್ನು  ನಿಗದಿತ ಸಮಯದಲ್ಲಿ ವಾಪಾಸ್ಸು ನೀಡದೆ ವಂಚನೆ ಮಾಡಿರುವ ಕುರಿತು ಸೌಹಾರ್ದ ಸಹಕಾರಿ ಸಂಘದ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಅಕ್ಷಯ್ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಭಾರತ್ ಒನ್ ಸೌಹಾರ್ದ ಸಹಕಾರಿ ಸಂಘ ಮತ್ತು ಈ ಸಂಸ್ಥೆಯ ಅಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಟಾರ್ಗೆಟ್ 2 ಸಕ್ಸೆಸ್ ಟ್ರೇಡಿಂಗ್ ಸಂಸ್ಥೆಯ ಅಧ್ಯಕ್ಷ ಗಿರೀಶ್ ರೈ, ಉಪಾಧ್ಯಕ್ಷ ಸುದೇಶ್ ರೈ ಅಲೆಕ್ಕಾಡಿ, ಮ್ಯಾನೇಜರ್ ಸಂದೀಪ್ ಹಾಗೂ ಇತರ ನಿರ್ದೇಶಕರ ವಿರುದ್ಧ

ಠೇವಣಿ ಹಣ ನಿಗದಿತ ಅವಧಿಯಲ್ಲಿ ಹಿಂದಿರುಗಿಸದ ಆರೋಪ : ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಮ್ಯಾನೇಜರ್, ನಿರ್ದೇಶಕರ ವಿರುದ್ಧ ಪ್ರಕರಣ ದಾಖಲು Read More »

ವಿಟ್ಲ ರೋಟರಿ ಕ್ಲಬ್ ವತಿಯಿಂದ “ವನಸಿರಿ, ವಿದ್ಯಾಸಿರಿ” ವಿಶಿಷ್ಟ ಕಾರ್ಯಕ್ರಮ

ಮಾಣಿಲ : ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಯಶಸ್ಸಿನ ಮೂಲಮಂತ್ರ ಎಂದು ವಿಟ್ಲ ರೋಟರಿ ಕ್ಲಬ್ ನ ಯೋಜನಾ ನಿರ್ವಾಹಕ ಡಾ. ವಿ. ಕೆ ಹೆಗ್ಗಡೆ  ಹೇಳಿದರು. ಅವರು ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ  ವಿಟ್ಲ ರೋಟರಿ ಕ್ಲಬ್ ಪ್ರಾಯೋಜಕತ್ವದಲ್ಲಿ ನಡೆದ ‘ವನಸಿರಿ’ ಹಾಗೂ ‘ವಿದ್ಯಾಸಿರಿ’ ವಿಶಿಷ್ಟ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳು  ಹಾಗೂ  ಗಿಡಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮ ನಡೆಯಿತು. ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಕಿರಣ್ ಕುಮಾರ್ ಅಧ್ಯಕ್ಷತೆ

ವಿಟ್ಲ ರೋಟರಿ ಕ್ಲಬ್ ವತಿಯಿಂದ “ವನಸಿರಿ, ವಿದ್ಯಾಸಿರಿ” ವಿಶಿಷ್ಟ ಕಾರ್ಯಕ್ರಮ Read More »

error: Content is protected !!
Scroll to Top