ಪುತ್ತೂರು

ಪುತ್ತೂರು ಕ. ಸಾ. ಪ ಕಾರ್ಯಕಾರಿ ಸಮಿತಿಯ ಸಭೆ | ಕನ್ನಡ ಭವನ ನಿರ್ಮಾಣ ಸಮಿತಿ ರಚನೆಗೆ ನಿರ್ಣಯ

ಪುತ್ತೂರು: ಕ.ಸಾ. ಪ ಪುತ್ತೂರು ಕಾರ್ಯಕಾರಿ ಸಮಿತಿಯ ಸಮಾಲೋಚನಾ ಸಭೆ ಅಧ್ಯಕ್ಷರ ಕಚೇರಿಯಲ್ಲಿ ನಡೆಯಿತು. ಕಸಾಪ ತಾಲೂಕು ಅಧ್ಯಕ್ಷ  ಪುತ್ತೂರು ಉಮೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕನ್ನಡ ಭಾಷೆ ಹಾಗೂ ಸಾಹಿತ್ಯ ಮತ್ತು ಮುಂದೆ ನಡೆಸುವ ಕಾರ್ಯಕ್ರಮಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಮುಖ್ಯವಾಗಿ  ಸಾಹಿತ್ಯ ಪರಿಷತ್ತಿಗೆ ಜಮೀನು  ಮಂಜೂರಾಗಲು ಸೂಚನೆ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ  ಸರ್ವ ರೀತಿಯಲ್ಲಿ ಸಹಕಾರ ನೀಡಿದ  ಸಹಾಯಕ ಅಯುಕ್ತ ಗಿರೀಶ್ ನಂದನ್ , ನಗರಸಭಾ […]

ಪುತ್ತೂರು ಕ. ಸಾ. ಪ ಕಾರ್ಯಕಾರಿ ಸಮಿತಿಯ ಸಭೆ | ಕನ್ನಡ ಭವನ ನಿರ್ಮಾಣ ಸಮಿತಿ ರಚನೆಗೆ ನಿರ್ಣಯ Read More »

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಜರುಗಿದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತಿ ವಿದ್ಯಾ ಮಂದಿರದ 10ನೇ ತರಗತಿಯ ವಿದ್ಯಾರ್ಥಿಗಳಾದ ವಿಸ್ಮಯ್ ಎನ್ ನಾಯಕ್ ಮತ್ತು ಮೋಕ್ಷಿತ್ ಪಿ ಎಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. 9ನೇ ತರಗತಿಯ ರಿಷಿ ಭಾರಧ್ವಜ್

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ Read More »

ನಾಳೆ (ಆ.2) : ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಅಪರಾಧಿ ಪತ್ತೆಗೆ ಹಕ್ಕೊತ್ತಾಯ | ಕಡಬದಲ್ಲಿ ಮೌನ ಮೆರವಣಿಗೆ

ಕಡಬ: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾವರ್ಜನಿಕ ಮೌನ ಮೆರವಣಿಗೆ ಆ.2 ಬುಧವಾರ ಕಡಬದಲ್ಲಿ ನಡೆಯಲಿದೆ. ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನೈಜ ಅಪರಾಧಿಯ ಪತ್ತೆಗೆ ಹಕ್ಕೊತ್ತಾಯದ ಕುರಿತು ಈ ಮೌನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಗೆ ಕಡಬ ಶ್ರೀಕಂಠ ಸ್ವಾಮಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಿಂದ ಮೌನ ಮೆರವಣಿಗೆ ನಡೆಯಲಿದೆ ಎಂದು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ (ಆ.2) : ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಅಪರಾಧಿ ಪತ್ತೆಗೆ ಹಕ್ಕೊತ್ತಾಯ | ಕಡಬದಲ್ಲಿ ಮೌನ ಮೆರವಣಿಗೆ Read More »

ಜನಾರ್ದನ ಯಾನೆ ಜಾರಪ್ಪ ಗೌಡ ನಿಧನ

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಹೊಸಮನೆ ನಿವಾಸಿ ಜನಾರ್ದನ ಯಾನೆ ಜಾರಪ್ಪ ಗೌಡ (55) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಜನಾರ್ದನ ಅವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಹಿರೇಬಂಡಾಡಿ ಸುಬ್ರಹ್ಮಣ್ಯ ದೇವಸ್ಥಾನದ ಭಜನಾ ಮಂಡಳಿ ಸದಸ್ಯರಾಗಿದ್ದರು. ಅಲ್ಲದೆ ಹಲವಾರು ನಾಟಕಗಳಲ್ಲಿ ಹಾಸ್ಯ ಕಲಾವಿದರಾಗಿ ಅಭಿನಯಿಸಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಜನಾರ್ದನ ಯಾನೆ ಜಾರಪ್ಪ ಗೌಡ ನಿಧನ Read More »

ಜನಸಂಖ್ಯೆ ಏರಿಕೆಯಿಂದ ಭೂಮಿ ಕ್ಷೀಣಿಸುತ್ತಿದೆ | ಸಹಾಯಕ ಆಯುಕ್ತ ಗಿರೀಶ್ ನಂದನ್ | ವಿಶ್ವ ಜನಸಂಖ್ಯಾ ದಿನಾಚರಣೆ

ಪುತ್ತೂರು: ದೇಶದಲ್ಲಿರುವ ಸಂಪನ್ಮೂಲಗಳನ್ನು ಸಮಗ್ರತೆಯಿಂದ ಬಳಸಿಕೊಳ್ಳಬೇಕು. ಸಂಪನ್ಮೂಲಗಳನ್ನು ಮುಂದಿನ ಪೀಳೀಗೆಗೆ ಕೊಂಡೊಯ್ಯವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸಂಪನ್ಮೂಲಗಳು ಉಳಿಸಿ ದೇಶದ ಸುಸ್ಥಿರ ಅಭಿವೃದ್ಧಿಯಾಗಬೇಕಾದರೆ ಜನಸಂಖ್ಯೆ ನಿಯಂತ್ರಣ ಅತೀ ಆವಶ್ಯಕ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಹೇಳಿದರು. ತಾಲೂಕು ಆರೋಗ್ಯಾಧಿಕಾರಿಯವರ ಕಚೇರಿ, ಪ್ರಗತಿ ಪ್ಯಾರಮೆಡಿಕಲ್ ಕಾಲೇಜು ಮತ್ತು ಹೆಚ್.ಪಿ.ಆರ್ ಪ್ಯಾರ ಮೆಡಿಕಲ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಪುರಭವನದಲ್ಲಿ ನಡೆದ ವಿಶ್ವಜನ ಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನಸಂಖ್ಯೆಯು ದಿನೇ ದಿನೇ ಬೆಳೆಯುತ್ತಿದೆ. ವಿಶ್ವದ ಜನಸಂಖ್ಯೆ

ಜನಸಂಖ್ಯೆ ಏರಿಕೆಯಿಂದ ಭೂಮಿ ಕ್ಷೀಣಿಸುತ್ತಿದೆ | ಸಹಾಯಕ ಆಯುಕ್ತ ಗಿರೀಶ್ ನಂದನ್ | ವಿಶ್ವ ಜನಸಂಖ್ಯಾ ದಿನಾಚರಣೆ Read More »

ಸೌಜನ್ಯ ಹತ್ಯೆ ಪ್ರಕರಣ ನೈಜ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿ ಸುಳ್ಯದಲ್ಲಿ ವಾಹನ ಜಾಥಾ

ಸುಳ್ಯ: ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರು ತನಿಖೆಗೊಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹಿಸಿ ಆ.1ರಂದು ಸುಳ್ಯದಲ್ಲಿ ಗೌಡ ಯುವ ಸೇವಾ ಸಂಘದಿಂದ ವಾಹನ ಜಾಥಾ ನಡೆಯಿತು. ಮೊಗರ್ಪಣೆ ಶ್ರೀ ವೆಂಕಟರಮಣ ಸೊಸೈಟಿ ಮುಂಭಾಗದಿಂದ ವಾಹನ ಜಾಥಕ್ಕೆ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಟಾರ್ ಚಾಲನೆ ನೀಡಿ ಮಾತನಾಡಿ, ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರು ತನಿಖೆಗೊಳಪಡಿಸಿ 6 ತಿಂಗಳೊಳಗೆ ನೈಜ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು

ಸೌಜನ್ಯ ಹತ್ಯೆ ಪ್ರಕರಣ ನೈಜ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿ ಸುಳ್ಯದಲ್ಲಿ ವಾಹನ ಜಾಥಾ Read More »

ಆ.6 : ಪುತ್ತೂರು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ “ಆಟಿ ಹಬ್ಬ-2023”

ಪುತ್ತೂರು: ಪುತ್ತೂರು ಪುತ್ತೂರು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸಹಯೋಗದಲ್ಲಿ “ಆಟಿ ಹಬ್ಬ-2023” ಆ.6 ಭಾನುವಾರ ಬೆಳಿಗ್ಗೆ 9 ರಿಂದ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 9 ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಧವಿ ಕೆ. ದರ್ಬೆ ನೆರವೇರಿಸಲಿದ್ದು, ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ. ಗೌಡ ಅಧ್ಯಕ್ಷತೆ ವಹಿಸುವರು. ಬಳಿಕ

ಆ.6 : ಪುತ್ತೂರು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ “ಆಟಿ ಹಬ್ಬ-2023” Read More »

ನಗರ ಪ್ರಾಥಮಿಕ ಕೇಂದ್ರದ ಸಿಸಿಟಿವಿ ಕ್ಯಾಮರಾ ಕಳವು

ಪುತ್ತೂರು: ನಗರದ ನೆಲ್ಲಿಕಟ್ಟೆಯಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಸಿ ಟಿವಿ ಕ್ಯಾಮರಾ ಕಳವಾದ ಘಟನೆ ನಡೆದಿದೆ. ಕೆಲವು ತಿಂಗಳ ಹಿಂದೊಮ್ಮೆ ಇದೇ ಪ್ರಾಥಮಿಕ ಕೇಂದ್ರದ ಸಿವಿಟಿವಿ ಕ್ಯಾಮರಾ ಕಳವಾಗಿದ್ದು, ಇದು ಎರಡನೇ ಬಾರಿ ಕಳವು ಪ್ರಕರಣವಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.

ನಗರ ಪ್ರಾಥಮಿಕ ಕೇಂದ್ರದ ಸಿಸಿಟಿವಿ ಕ್ಯಾಮರಾ ಕಳವು Read More »

ಬೈಕ್-ಆಟೋ ಡಿಕ್ಕಿ : ಇಬ್ಬರಿಗೆ ಗಾಯ

ಪುತ್ತೂರು: ಬೈಕ್ ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸಹಸವಾರ, ಆಟೋ ಚಾಲಕ ಇಬ್ಬರಿಗೂ ಗಾಯಗೊಂಡ ಘಟನೆ ನೆಹರುನಗರದ ಕಲ್ಲೇಗ ಸಮೀಪ ನಡೆದಿದೆ. ಬಂಟ್ವಾಳ ಬುಡೋಲಿ ನಿವಾಸಿ ಶ್ರವಣ್ ಕೆ ಪುತ್ತೂರು ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಎದುರಿನಿಂದ ಕಾರೊಂದನ್ನು ಹಿಂದಿಕ್ಕಿ ಬರುತ್ತಿದ್ದ ಆಟೋರಿಕ್ಷಾ ಡಿಕ್ಕಿಯಾಗಿದೆ. ಬೈಕ್ ಸಹಸವಾರ ಅವಿಷ್ ಹಾಗೂ ಆಟೋ ಚಾಲಕ ದಿನೇಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್-ಆಟೋ ಡಿಕ್ಕಿ : ಇಬ್ಬರಿಗೆ ಗಾಯ Read More »

ಪಡ್ಪು ಮುದ್ಯ ಗ್ರಾಮ ವಿಕಾಸ ಸಂಘದ ವತಿಯಿಂದ ವನಮಹೋತ್ಸವ

ಪುತ್ತೂರು: ಪಡ್ಪು ಮುದ್ಯ ಗ್ರಾಮ ವಿಕಾಸ ಸಂಘದ ವತಿಯಿಂದ ಪಡ್ಪು ಗ್ರಾಮ ದೈವಸ್ಥಾನದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸಂತೋಷ್ ಜೈನ್ ಬಾರಿಕೆ ಹಾಗೂ ದಾಮೋದರ ಶೇಡಿಗುತ್ತು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಗುಂಡ್ರುಪುನಿಂದ ಮಂಜುಪಲ್ಲದ ವರೆಗೆ ರಸ್ತೆಯ ಎರಡು ಬದಿಯಲ್ಲಿ ಗಿಡ ನೆಡಲಾಯಿತು ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರಾದ ಉಮೇಶ್ ಓಡ್ರಪಾಲ್, ಮಾಧವ ಒಂಬೋ೯ಡಿ, ಮುದ್ಯ ಶ್ರೀ ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಸೋಮಸುಂದರ ಕೊಡಿಪಾನ, ನೂತನ ಅಧ್ಯಕ್ಷ ಗೋಪಾಲ ದಡ್ಡು,

ಪಡ್ಪು ಮುದ್ಯ ಗ್ರಾಮ ವಿಕಾಸ ಸಂಘದ ವತಿಯಿಂದ ವನಮಹೋತ್ಸವ Read More »

error: Content is protected !!
Scroll to Top