ಪುತ್ತೂರು

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2023-24ನೇ ಸಾಲಿನ ಶಿಕ್ಷಕ – ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ ನಡೆಯಿತು. ಪ್ರಸಕ್ತ ವರ್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಜಯಂತ್ ಗೌಡ ಕೆ, ಉಪಾಧ್ಯಕ್ಷರಾಗಿ ಆಶಾ ಕೆ, ಕಾರ್ಯದರ್ಶಿಯಾಗಿ ಯುವರಾಜ ಕೆ, ಆಯ್ಕೆಗೊಂಡರು. ಮಾತೃಭಾರತಿಯ ಅಧ್ಯಕ್ಷೆಯಾಗಿ ಮಂಗಳ ಗೌರಿ, ಉಪಾಧ್ಯಕ್ಷೆಯಾಗಿ ಪ್ರೀತಿಕಲಾ, ಕಾರ್ಯದರ್ಶಿಯಾಗಿ ಮಂಜುಳಾ ಆಯ್ಕೆಗೊಂಡರು.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ Read More »

ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ಮಂಗಳೂರಿನ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಆಗಸ್ಟ್ 12 ಹಾಗೂ 13ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದೆ. ತಂಡವನ್ನು ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಮನ್ಯ ಎಂ ವಿ, ಅನ್ನಪೂರ್ಣ ರೈ, ವಾಣಿಜ್ಯ ವಿಭಾಗದ ಹೇಮಲತಾ ಕೆ, ವರ್ಷಿತಾ ಎಚ್ ವಿ, ತ್ರಿಷಾ, ಕಾರ್ತಿಕಾ, ಪ್ರಣತಿ,ಹರ್ಷಿತಾ ವಿ ವಿ, ಕಲಾ ವಿಭಾಗದ ಧನುಶ್ರೀ,

ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯಮಟ್ಟಕ್ಕೆ ಆಯ್ಕೆ Read More »

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪೋಷಕರು, ಸಮಿತಿ ಸಮನ್ವಯ ಸಭೆ

ಪುತ್ತೂರು: ಮಕ್ಕಳ ಮೂಲಕ ಪೋಷಕರಲ್ಲೂ ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಮಕ್ಕಳಿಂದ ಪ್ರಾತ್ಯಕ್ಷಿತಗೊಂಡ ವಿಜ್ಞಾನದ ದೈನಂದಿನ ಬದುಕಿಗೆ ಸಂಬಂಧಿಸಿದ ಪ್ರಯೋಗಗಳನ್ನು ನಮಗೂ ತಿಳಿಸುವುದು ಮಕ್ಕಳ ಪ್ರಯತ್ನ ಶ್ಲಾಘನೀಯ ಎಂದು ಪೋಷಕಿ ಆಶಾ ಹೇಳಿದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ನಡೆದ ವಿಭಾಗವಾರು ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಮಕ್ಕಳಿಂದ ಶ್ಲೋಕ, ಅಮೃತ ವಚನ, ಮಂಕುತಿಮ್ಮನ ಕಗ್ಗ, ದೇಶಭಕ್ತಿ ಗೀತೆ, ಕನ್ನಡ ಮತ್ತು ಆಂಗ್ಲ ಭಾಷೆಯ ಭಾಷಣ ಹಾಗೂ ವಿಜ್ಞಾನ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಪೋಷಕರು, ಸಮಿತಿ ಸಮನ್ವಯ ಸಭೆ Read More »

ವಿದ್ಯಾಭಾರತಿ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟ : ಶ್ರೀ ಭಾರತಿ ವಿದ್ಯಾಸಂಸ್ಥೆ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ ಮಂಗಳೂರು ಸಹಯೋಗದೊಂದಿಗೆ ನಡೆದ 14 ರ ವಯೋಮಾನದ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಶ್ರೀ ಭಾರತಿ ವಿದ್ಯಾಸಂಸ್ಥೆಯ ಬಾಲಕಿಯರ ಕಬ್ಬಡ್ಡಿ ತಂಡ ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಹಂಸಿಕ ಅಂಬುಲ,ಯಶಸ್ವಿನಿ.ಬಿ, ಭವ್ಯ. ಕೆ,ಚಿನ್ಮಯಿ, ಇಂಚರ ಎಲ್ ಶೆಟ್ಟಿ, ಅಲ್ವಿತಾ, ವಾತ್ಸಲ್ಯ ಬಿ ಗೌಡ, ಪಲ್ಲವಿ, ಕೃತಿ, ಸಿಂಚನ ಎಸ್, ದೀಕ್ಷಾ ಶ್ರೀ, ಹಂಸಿಕ ಅಂಬುಲ, ಭೂಮಿಕಾ ಜೆ. ಪ್ರತಿನಿಧಿಸಿದ್ದರು. ತಂಡಕ್ಕೆ ಶಾಲಾ ಶಿಕ್ಷಕರಾದ ಸಂತೋಷ್

ವಿದ್ಯಾಭಾರತಿ ಜಿಲ್ಲಾಮಟ್ಟದ ಕಬ್ಬಡ್ಡಿ ಪಂದ್ಯಾಟ : ಶ್ರೀ ಭಾರತಿ ವಿದ್ಯಾಸಂಸ್ಥೆ ರಾಜ್ಯಮಟ್ಟಕ್ಕೆ ಆಯ್ಕೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ | ವಿಗ್ರಹ ರಚನೆಗೆ ಮುಹೂರ್ತ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಶ್ರೀ ಗಣೇಶೋತ್ಸವದ ವಿಗ್ರಹ ರಚನೆಗೆ ಮುರ್ಹೂತ ಕಾರ್ಯಕ್ರಮ ಶುಕ್ರವಾರ ಬೊಳುವಾರಿನಲ್ಲಿ ನಡೆಯಿತು. ಮೊದಲಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣಪತಿ ಗುಡಿಯಲ್ಲಿ ಸಂಕಲ್ಪ ಪ್ರಾರ್ಥನೆ ನೆರವೇರಿಸಲಾಯಿತು. ದೇವಳದ ಪ್ರಧಾನ ಅರ್ಚಕರಾಗಿರುವ ವ್ಯವಸ್ಥಾಪನಾ ಸಮಿತಿ ಸದಸ್ಯ ವೇ.ಮೂ.ವಿ.ಎಸ್ ಭಟ್ ಅವರು ಪ್ರಾರ್ಥನೆ ಮಾಡಿದರು. ಬಳಿಕ ಸಮಿತಿಯ ವತಿಯಿಂದ ಮಹಾಲಿಂಗೇಶ್ವರ ದೇವರ ಸತ್ಯಧರ್ಮ ನಡೆಯಲ್ಲಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಶ್ರೀ ಮಹಾಮ್ಮಾಯಿ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ | ವಿಗ್ರಹ ರಚನೆಗೆ ಮುಹೂರ್ತ Read More »

ಆ.7 : ಸೌಜನ್ಯ ಕೊಲೆಯ ನೈಜ ಆರೋಪಿಗಳ ಪತ್ತೆಗಾಗಿ ದೈವ-ದೇವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ

ಪುತ್ತೂರು: ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ದೇವಸ್ಥಾನ, ದೈವಸ್ಥಾನ ಹಾಗೂ ಮಠ-ಮಂದಿರಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಆ.7 ರಂದು ಹಮ್ಮಿಕೊಳ್ಳಲಾಗಿದೆ. ದ.ಕ.ಜಿಲ್ಲಾ ವಿಶ್ವ ಹಿಂದೂ ಪರಿಷತ್, ಬಜರಂಗದಳ  ಈ ಕುರಿತು ಕರೆ ನೀಡಿದೆ. ಆದ್ದರಿಂದ ಎಲ್ಲಾ ಕಾರ್ಯಕರ್ತರು, ಹಿಂದೂ ಸಮಾಜ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೌಜನ್ಯಳಿಗೆ ನ್ಯಾಯ ಸಿಗುವಂತೆ ಪ್ರಾರ್ಥನೆ ಮಾಡಬೇಕೆಂದು ಸಂಘಟನೆ ವಿನಂತಿಸಿದೆ.

ಆ.7 : ಸೌಜನ್ಯ ಕೊಲೆಯ ನೈಜ ಆರೋಪಿಗಳ ಪತ್ತೆಗಾಗಿ ದೈವ-ದೇವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ Read More »

ಕೊಳ್ತಿಗೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ರೈ ನಿಧನ

ಪುತ್ತೂರು: ಕೊಳ್ತಿಗೆ ಸರಕಾರಿ ಹಿ.ಪ್ರಾ. ಶಾಲೆಯ ವಿಶ್ರಾಂತ ಮುಖ್ಯ ಶಿಕ್ಷಕ, ಕೊಳ್ತಿಗೆ ಕೆಳಗಿನ ಮನೆಯ ತರವಾಡ್ ಯಜಮಾನ ನಾರಾಯಣ ರೈ (90) ಗುರುವಾರ ಮಧ್ಯಾಹ್ನ ನಿಧನರಾದರು. ಮುರುಳ್ಯ, ಕೊಳ್ತಿಗೆ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು, ಅವರ ಅವಧಿಯಲ್ಲಿ ಶಾಲೆ ಶೈಕ್ಷಣಿಕವಾಗಿ ಪ್ರಗತಿ ಹೊಂದಿತ್ತು. ಮೃತರು ಮಕ್ಕಳು, ಸೊಸೆಯಂದಿರು, ಸಹೋದರ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕೊಳ್ತಿಗೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ರೈ ನಿಧನ Read More »

ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ

ಪುತ್ತೂರು: ಮಾನವನ ಆರ್ಥಿಕಾಭಿವೃದ್ಧಿ ಹಾಗೂ ಕೊಳ್ಳುಬಾಕತನವು ಪರಿಸರದ ಮೇಲೆ ಅಗಾಧ ದುಷ್ಪರಿಣಾಮ ಬೀರುತ್ತಿದ್ದು, ಮಾಲಿನ್ಯ ಮುಕ್ತ ಪ್ರಕೃತಿಯನ್ನು ಬೆಳೆಸಿ, ಉಳಿಸಿ ಅದರ ಜತೆ ನಾವೂ ಬೆಳೆಯುವ ಸಂಕಲ್ಪವನ್ನು ಮಾಡಬೇಕು ಎಂದು ಪುತ್ತೂರಿನ ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎನ್‌ಎಸ್‌ಎಸ್ ಮತ್ತು ಯೂತ್ ರೆಡ್‌ಕ್ರಾಸ್ ವಿಭಾಗಗಳ ಆಶ್ರಯದಲ್ಲಿ ನಡೆದ ವಿಶ್ವ ಪ್ರಕೃತಿ ಸಂರಕ್ಷಣ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ

ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ Read More »

ಊರಿಗೆ ಹೋಗಲು ಹಣವಿಲ್ಲ ಎಂದು ಶಾಸಕರ ಬಳಿ ಬಂದ ಬೀದರ್ ನ ಯುವಕ | ಕೇಳಿದಷ್ಟು ಹಣ ನೀಡಿದ ಶಾಸಕರು

ಪುತ್ತೂರು: ಊರಿಗೆ ತೆರಳಲು ಹಣವಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಲ್ಲಿ ಬಂದ ಯುವಕನೊಬ್ಬನಿಗೆ ಶಾಸಕರು ಆತ ಕೇಳಿದಷ್ಟು ಹಣ ನೀಡಿದ ಘಟನೆ ನಡೆದಿದೆ. ನಾನು ಬೀದರ್ ಜಿಲ್ಲೆಯ ಬಾಲ್ಕಿ ನಿವಾಸಿ ಕಲ್ಲಪ್ಪ ಊರು ಸುತ್ತುವ ಅಲೆಮಾರಿ ಯುವಕ, ನನ್ನಲ್ಲಿ ಉಚಿತ ಬಸ್ ಪಾಸ್ ಇತ್ತು ಅದನ್ನು ಕಳೆದುಕೊಂಡಿದ್ದೇನೆ. ನನಗೆ ಊರಿಗೆ ಹೋಗಲು ನನ್ನಲ್ಲಿ ನಯಾ ಪೈಸೆ ಇಲ್ಲ ನನಗೆ ಸಹಾಯ ಮಾಡಿ, ನೀವು ಬಡವರಿಗೆ ಸಹಾಯ ಮಾಡುತ್ತೀರಿ ಎಂದು ಯಾರೋ ನನ್ನನ್ನು ಇಲ್ಲಿಗೆ

ಊರಿಗೆ ಹೋಗಲು ಹಣವಿಲ್ಲ ಎಂದು ಶಾಸಕರ ಬಳಿ ಬಂದ ಬೀದರ್ ನ ಯುವಕ | ಕೇಳಿದಷ್ಟು ಹಣ ನೀಡಿದ ಶಾಸಕರು Read More »

ವಿಷ್ಣುಮೂರ್ತಿ ಹೊಳ್ಳ ನಿಧನ

ಪುತ್ತೂರು:  ತಾಲೂಕಿನ ಕುರಿಯ ಗ್ರಾಮದ  ಮಾಪಾಲ ನಿವಾಸಿ, ಪ್ರಗತಿ ಪರ ಕೃಷಿಕ ಮಾಪಾಲ ವಿಷ್ಣುಮೂರ್ತಿ ಹೊಳ್ಳ (86) ಮಂಗಳವಾರ  ಸ್ವಗೃಹದಲ್ಲಿ ನಿಧನರಾದರು. ಅವರು ಕುರಿಯ ವಿಷ್ಣುಮೂರ್ತಿ ದೇವಸ್ಥಾನದ  ಟ್ರಸ್ಟಿಯಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ರಾಜೀವಿ ಹೊಳ್ಳ, ಪುತ್ರಿ ಕಳಸ ಗ್ರಾಮ ಪಂಚಾಯಿತಿ ಸದಸ್ಯೆ ಅನುರಾಧ, ಪುತ್ರರಾದ ಕೋಲಾರದ ಉದ್ಯಮಿ ಹರೀಶ್ ಹೊಳ್ಳ, ವಿಜಯ ಕರ್ನಾಟಕದ ರೆಸ್ಪಾನ್ಸ್ ವಿಭಾಗದ ಮುಖ್ಯ ಉಪ ಸಂಪಾದಕ ಯೋಗೀಶ ಹೊಳ್ಳ ಅವರನ್ನು ಅಗಲಿದ್ದಾರೆ.

ವಿಷ್ಣುಮೂರ್ತಿ ಹೊಳ್ಳ ನಿಧನ Read More »

error: Content is protected !!
Scroll to Top