ಪುತ್ತೂರು

ಸರಕಾರಿ ಆಸ್ಪತ್ರೆ ಆಂಬುಲೆನ್ಸ್ ಚಾಲಕರ ಕೊಠಡಿ ಮೇಲೆ ಬಿದ್ದ ಮರ

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯ ಗೇಟ್ ಬಳಿ ಇರುವ ಬೃಹತ್ ಮರವೊಂದು ಧರೆಗುರುಳಿದ ಘಟನೆ ಆ.1ರಂದು ನಡೆದಿದೆ. ಮರ ಬಿದ್ದ ಪರಿಣಾಮ ಸರಕಾರಿ ಆಸ್ಪತ್ರೆಯ ಆಂಬುಲೆನ್ಸ್ ಚಾಲಕರ ಕೊಠಡಿಗೆ ಹಾನಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಮರದ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಸರಕಾರಿ ಆಸ್ಪತ್ರೆ ಆಂಬುಲೆನ್ಸ್ ಚಾಲಕರ ಕೊಠಡಿ ಮೇಲೆ ಬಿದ್ದ ಮರ Read More »

ರಬ್ಬರ್ ನಿಗಮದಿಂದ ಬೋನಸ್ ಬಾಕಿ ವಿಚಾರ : ಶಾಸಕ ಅಶೋಕ್ ರೈಗೆ ಮನವಿ

ಪುತ್ತೂರು: ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ಸಿಗಬೇಕಾದ ಬೋನಸ್ ಬಾಕಿ ಇದ್ದು ಕಳೆದ ಒಂದು ವರ್ಷದಿಂದ ನಿಗಮಕ್ಕೆ ಮನವಿ ಮಾಡುತ್ತಿದ್ದರೂ ಬೋನಸ್ ಇನ್ನೂ ಸಿಗದೇ ಇದ್ದು ಈ ವಿಚಾರವನ್ನು ಸರಕಾರದ ಗಮನಸೆಳೆಯಬೇಕೆಂದು ಆಗ್ರಹಿಸಿ ಮತ್ತು ಬೋನಸ್ ಕೊಡಿಸುವಲ್ಲಿ ನೆರವು ನೀಡಬೇಕೆಂದು ಪೆರ್ಲಂಪಾಡಿ ಸಿಆರ್‌ಸಿ ಕಾಲನಿ ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಸಾಸಕ ಅಶೋಕ್ ರೈಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.  ರಬ್ಬರ್ ನಿಗಮದಲ್ಲಿ ದುಡಿಯುತ್ತಿರುವ ಕಾರ್ಮಿಕರುಗಳಿಗೆ ಪ್ರತಿ ವರ್ಷ ದೀಪಾವಳಿಯ ಸಂದರ್ಭದಲ್ಲಿ ಕನಿಷ್ಟ ಬೋನಸ್ (8.33) ನೀಡಲಾಗುತ್ತಿದೆ.  ಈ ವರ್ಷ ೨೦%

ರಬ್ಬರ್ ನಿಗಮದಿಂದ ಬೋನಸ್ ಬಾಕಿ ವಿಚಾರ : ಶಾಸಕ ಅಶೋಕ್ ರೈಗೆ ಮನವಿ Read More »

ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಪರಿಹಾರ ಪ್ರಾಯಶ್ಚಿತ್ತ ಅಂಗವಾಗಿ ನಡೆಯುತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಶರವೂರು: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಪ್ರಾಯಶ್ಚಿತ್ತ ಕಾರ್ಯಕ್ರಮಗಳು ಜು.24 ರಿಂದ ಆರಂಭಗೊಂಡಿದ್ದು, ಆ.1 ಮಂಗಳವಾರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ಹರಿಪ್ರಸಾದ್ ಹಾಗೂ ರಾಘವೇಂದ್ರ ಪ್ರಸಾದ್ ಅವರ ಉಪಸ್ಥಿತಿಯಲ್ಲಿ ಜು.24 ಸೋಮವಾರ ಬೆಳಿಗ್ಗೆ 8 ರಿಂದ ಗಣಪತಿ ಹವನ, ಸುಕೃತ ಹವನ, ಪವಮಾನ ಹೋಮ, ದ್ವಾದಶಮೂರ್ತಿ ಆರಾಧನೆ, ಸಂಜೆ ಮಹಾಸುದರ್ಶನ ಹೋಮ, ಸಪ್ತಪತೀ ಪಾರಾಯಣ, ದುರ್ಗಾಪೂಜೆ ಜರಗಿತು.

ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾ ಪರಿಹಾರ ಪ್ರಾಯಶ್ಚಿತ್ತ ಅಂಗವಾಗಿ ನಡೆಯುತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು Read More »

ಕೊಂಬೆಟ್ಟು ಉದ್ಯಮಿ ಮನೆಯಿಂದ ಕಳವಿಗೆ ಯತ್ನ

ಪುತ್ತೂರು: ಸ್ವರ್ಣೋದ್ಯಮಿಯೊಬ್ಬರ ಮನೆಗೆ ಕಳ್ಳರು ನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಜು.31 ಸೋಮವಾರ ರಂದು ಬೆಳಕಿಗೆ ಬಂದಿದೆ. ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನ ಜಿ.ಎಲ್ ಬಲರಾಮ ಆಚಾರ್ಯ ಅವರ ಪುತ್ರ ಲಕ್ಷ್ಮೀಕಾಂತ್ ಆಚಾರ್ಯ ಅವರ ಕೊಂಬೆಟ್ಟಿನಲ್ಲಿರುವ ಮನೆಗೆ ಕಳ್ಳರು ನುಗ್ಗಿ ಕಳವಿಗೆ ವಿಫಲ ಯತ್ನ ಮಾಡಿದ್ದಾರೆ. ಕಳವಿಗೆ ಸಂಬಂಧಿಸಿ ಬೆರಳಚ್ಚು ತಜ್ಞರು ಮನೆಗೆ ಆಗಮಿಸಿ ಕೆಲವೊಂದು ಸಾಕ್ಷಾದಾರ ಸಂಗ್ರಹ ಮಾಡುತ್ತಿದ್ದಾರೆ.

ಕೊಂಬೆಟ್ಟು ಉದ್ಯಮಿ ಮನೆಯಿಂದ ಕಳವಿಗೆ ಯತ್ನ Read More »

ಪುತ್ತೂರು ಸಿಟಿಗುಡ್ಡೆ ಶ್ರೀ ಕೃಷ್ಣ ಯುವಕ ಮಂಡಲದ ಸೇವಾ ಯೋಜನೆಯ ಸಹಾಯ ಧನ ಹಸ್ತಾಂತರ

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಮಂಗಳೂರಿನ ಕುಂಪಲದ ದಿನೇಶ್  ಅವರಿಗೆ ಚಿಕಿತ್ಸಾ ವೆಚ್ಚಕ್ಕೆ ಸಿಟಿಗುಡ್ಡೆ ಶ್ರೀ ಕೃಷ್ಣ ಯುವಕ ಮಂಡಲದ ವತಿಯಿಂದ ಸಹಾಯಧನವನ್ನು ಸೋಮವಾರ ಹಸ್ತಾಂತರಿಸಲಾಯಿತು. ಜುಲೈ  ತಿಂಗಳ ತಂಡದ  ಜೊತೆ ನಿರಂತರವಾಗಿ ಸೇವೆಯಲ್ಲಿ ತೊಡಗಿಕೊಂಡು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ನಿಸ್ವಾರ್ಥ ಸೇವಾರ್ಥಿಗಳ ಸಹಾಯದಿಂದ  8200 ರೂ.ಪಾಯಿಗಳನ್ನು ಅವರ ಮನೆಗೆ ತೆರಳಿ  ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪುತ್ತೂರು ಸಿಟಿಗುಡ್ಡೆ ಶ್ರೀ ಕೃಷ್ಣ ಯುವಕ ಮಂಡಲದ ಸೇವಾ ಯೋಜನೆಯ ಸಹಾಯ ಧನ ಹಸ್ತಾಂತರ Read More »

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ

ಪುತ್ತೂರು: ಔಷಧೀಯ ಗಿಡಮೂಲಿಕೆಗಳು ನಶಿಸಿ ಹೋಗುತ್ತಿರುವ ಕಾಲ ಘಟ್ಟದಲ್ಲಿ ಅವುಗಳ ಸಂರಕ್ಷಣೆಯ ಮಹತ್ವದ ಕುರಿತು ಇಂದಿನ ಯುವ ಸಮೂಹದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪೇರಲ್ತಡ್ಕ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲಾ ಶಿಕ್ಷಕಿ ಯಶೋಧ ಹೇಳಿದರು. ಅವರು ನರೇಂದ್ರ ಪ.ಪೂ. ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ವಿವಿಧ ರೋಗಗಳ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗಾಗಿ ಔಷಧೀಯ ಸಸ್ಯಗಳ ಬಳಕೆ ಹಳೆಯ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ ಮತ್ತು ಸಮರ್ಥನೀಯ ಬಳಕೆ ಬಗ್ಗೆ ಮಾಹಿತಿ ಕಾರ್‍ಯಕ್ರಮ Read More »

ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾದಲ್ಲಿ ಹೆತ್ತವರ ಸಭೆ

ಪುತ್ತೂರು: ಶಿಕ್ಷಣ ಎನ್ನುವುದು ಜ್ಞಾನಾರ್ಜನೆಗೆ ಇರುವುದೇ ಹೊರತು ಧನಾರ್ಜನೆಗಾಗಿ ಅಲ್ಲ. ಧನಾರ್ಜನೆಗಾಗಿ ಮಕ್ಕಳನ್ನು ತಯಾರು ಮಾಡಿದರೆ ಅವರು ನಾಳೆ ನಮ್ಮ ಅಂಕೆಯಲ್ಲಿ ಇರುವುದಿಲ್ಲ. ಡಾಕ್ಟರ್ ಇಂಜಿನಿಯರ್‌ಗಳನ್ನು ತಯಾರು ಮಾಡುವುದಕ್ಕಿಂತ ದೇಶಪ್ರೇಮ ಹೊಂದಿರುವ ನಾಯಕರನ್ನು ತಯಾರು ಮಾಡುವುದೇ ಆದ್ಯತೆಯಾಗಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ನಡೆದ ರಕ್ಷಕ-ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ದಿನೇಶ್ ಕುಮಾರ್

ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ | ಅಂಬಿಕಾದಲ್ಲಿ ಹೆತ್ತವರ ಸಭೆ Read More »

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ

ಸವಣೂರು : ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಭಾಗಗಳ ಕರಾಟೆ ಸ್ವರ್ಧಾಕೂಟದ ಉದ್ಘಾಟನೆ ಜು.31 ಸೋಮವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ಜರಗಿತು. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಿದರು. ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ಸುಂದರ ಗೌಡ, ಸವಣೂರು ಸ.ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್, ವಿದ್ಯಾರಶ್ಮಿ ವಿದ್ಯಾಲಯದ ಆಡಳಿತಾಧಿಕಾರಿ ಅಶ್ವಿನ್

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧಾಕೂಟ ಉದ್ಘಾಟನೆ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೆ.19 ರಿಂದ 22ರ ತನಕ ನಡೆಯಲಿರುವ ಶ್ರೀ ಮಹಾಲಿಂಗೇಶ್ವರ ದೇವಳ ವಠಾರದ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್  ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಜೊತೆ ಕಾರ್ಯದರ್ಶಿ ನೀಲಂತ್ ಕುಮಾರ್, ಕೋಶಾಧಿಕಾರಿ ಶ್ರೀನಿವಾಸ ಮೂಲ್ಯ, ಉಪಾಧ್ಯಕ್ಷರಾದ ರವೀಂದ್ರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಭಾರತೀಯ ಜೀವ ವಿಮಾ ನಿಗಮದ ಸಹಾಭಾಗಿತ್ವದಲ್ಲಿ ವನಮಹೋತ್ಸವ

ಪುತ್ತೂರು: ಭಾರತೀಯ ಜೀವ ವಿಮಾ ನಿಗಮ ಮತ್ತು ಸರಸ್ವತಿ ವಿದ್ಯಾ ಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಹಭಾಗಿತ್ವದಲ್ಲಿ ನಡುಗುಡ್ಡೆಯ ಸರಸ್ವತಿ ವಿದ್ಯಾ ಮಂದಿರದ ನೂತನ ನಿವೇಶನದಲ್ಲಿ ವೃಕ್ಷಾರೋಪಣ ಕಾರ್ಯಕ್ರಮವನ್ನು ಆಚರಿಸಲಾಯಿತು. ಭಾರತೀಯ ಜೀವ ವಿಮಾ ನಿಗಮದ ಚೀಫ್ ಮ್ಯಾನೇಜರ್ ಡಿ. ಬಾಲಕೃಷ್ಣ ಹಣ್ಣಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಸಿಸ್ಟೆಂಟ್ ಡಿವಿಷನಲ್ ಮ್ಯಾನೇಜರ್ ಜಯರಾಮ ನೆಲ್ಲಿತ್ತಾಯ ಮಾತನಾಡಿ,  ಹಣ್ಣಿನ ಗಿಡಗಳ ಮಹತ್ವ ಮತ್ತು ಗಿಡ ನೆಡುವುದರ ಮಹತ್ವವನ್ನು ತಿಳಿಸಿದರು. ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್

ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ಭಾರತೀಯ ಜೀವ ವಿಮಾ ನಿಗಮದ ಸಹಾಭಾಗಿತ್ವದಲ್ಲಿ ವನಮಹೋತ್ಸವ Read More »

error: Content is protected !!
Scroll to Top