ಜನಾರ್ದನ ಯಾನೆ ಜಾರಪ್ಪ ಗೌಡ ನಿಧನ
ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಹೊಸಮನೆ ನಿವಾಸಿ ಜನಾರ್ದನ ಯಾನೆ ಜಾರಪ್ಪ ಗೌಡ (55) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಜನಾರ್ದನ ಅವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಹಿರೇಬಂಡಾಡಿ ಸುಬ್ರಹ್ಮಣ್ಯ ದೇವಸ್ಥಾನದ ಭಜನಾ ಮಂಡಳಿ ಸದಸ್ಯರಾಗಿದ್ದರು. ಅಲ್ಲದೆ ಹಲವಾರು ನಾಟಕಗಳಲ್ಲಿ ಹಾಸ್ಯ ಕಲಾವಿದರಾಗಿ ಅಭಿನಯಿಸಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಜನಾರ್ದನ ಯಾನೆ ಜಾರಪ್ಪ ಗೌಡ ನಿಧನ Read More »









