ಪುತ್ತೂರು

ಆ.2 : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸೌಜನ್ಯ ನ್ಯಾಯಕ್ಕಾಗಿ ಹಕ್ಕೊತ್ತಾಯ | ಕಾಲ್ನಡಿಗೆ ಜಾಥಾ

ಕಡಬ : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸೌಜನ್ಯ ನ್ಯಾಯಕ್ಕಾಗಿ ಹಕ್ಕೊತ್ತಾಯ ಕಾಲ್ನಡಿಗೆ ಜಾಥಾ ಆ.2 ರಂದು ಕಡಬದಲ್ಲಿ ನಡೆಯಲಿದೆ. ಶನಿವಾರ ಕಡಬ ತಾಲೂಕು ಒಕ್ಕಲಿಗ ಗೌಡ ಸಂಘದ ವತಿಯಿಂದ ನಡೆದ ಸಭೆಯಲ್ಲಿ ಈ ಕುರಿತು ನಿರ್ಣಯಿಸಲಾಯಿತು. ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆ.2 : ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸೌಜನ್ಯ ನ್ಯಾಯಕ್ಕಾಗಿ ಹಕ್ಕೊತ್ತಾಯ | ಕಾಲ್ನಡಿಗೆ ಜಾಥಾ Read More »

ದರ್ಬೆ ಪ್ರಶಾಂತ್ ಮಹಲ್‍ ನಲ್ಲಿ ಮೇಳೈಸಿದ “ಆಟಿಡೊಂಜಿ ದಿನ” | ಜನಮನ ಸೂರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು, 49 ಬಗೆಯ ಖಾದ್ಯಗಳು

ಪುತ್ತೂರು: ಸವಣೂರು ಸೀತಾರಾಮ ರೈ ಅವರ ಮುಂದಾಳುತ್ವದಲ್ಲಿ ತುಳು ಜಾನಪದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೊಳಗೊಂಡ “ಆಟಿಡೊಂಜಿ ದಿನ” ಕಾರ್ಯಕ್ರಮ ಶನಿವಾರ ದರ್ಬೆ ಪ್ರಶಾಂತ್ ಮಹಲ್‍ ನ ಸನ್ನಿಧಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಆಟಿದ ಅಟಿಲ್ ನಲ್ಲಿ 49 ಬಗೆಯ ಖಾದ್ಯಗಳು ನೆರೆದಿದ್ದವರ ಬಾಯಿ ಚಪ್ಪರಿಸುವಂತೆ ಮಾಡಿತು. ಕಾರ್ಯಕ್ರಮದ ಆರಂಭದಲ್ಲಿ ಹಿರಿಯರ ಆಟಿ ತಿಂಗಳ ಸುಂದರ ಆಟವಾಗಿರುವ “ಚೆನ್ನಮಣೆ” ಆಟವನ್ನು ಮಹಿಳೆಯರು ಹಾಗೂ ಪುರುಷರು ಆಟವಾಡುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಕಳೆಯನ್ನು ಒದಗಿಸಲಾಯಿತು. ಪುರುಷರಕಟ್ಟೆ, ಗುರುಕುಲ ಕಲಾ ಕೇಂದ್ರದ ಮಕ್ಕಳಿಂದ

ದರ್ಬೆ ಪ್ರಶಾಂತ್ ಮಹಲ್‍ ನಲ್ಲಿ ಮೇಳೈಸಿದ “ಆಟಿಡೊಂಜಿ ದಿನ” | ಜನಮನ ಸೂರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು, 49 ಬಗೆಯ ಖಾದ್ಯಗಳು Read More »

ಸೌಜನ್ಯ ಕೊಲೆ ಪ್ರಕರಣ | ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗ ಯುವ ಗೌಡ ಸಂಘದ ವತಿಯಿಂದ ಆ.1 ರಂದು ಸುಳ್ಯದಲ್ಲಿ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಕೆಗೆ ನಿರ್ಧಾರ

ಸುಳ್ಯ: ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರು ತನಿಖೆಗೆ ಒಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸಲು ಸುಳ್ಯದ ಗೌಡರ ಯುವ ಸೇವಾ ಸಂಘ ಒತ್ತಾಯಿಸಿದ್ದು, ಆ.1ರಂದು ಸುಳ್ಯದಲ್ಲಿ ವಾಹನ ಜಾಥಾ ನಡೆಸಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರರ ಮೂಲಕ ಸರಕಾರವನ್ನು ಒತ್ತಾಯಿಸಲು ನಿರ್ಧರಿಸಿದೆ. ಶನಿವಾರ ಸುಳ್ಯ ಪ್ರೆಸ್ರ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಟಾರ್ ಮಾತನಾಡಿ, ಬೆಳ್ತಂಗಡಿ ಸೌಜನ್ಯ ಹತ್ಯೆ ಪ್ರಕರಣ 2011

ಸೌಜನ್ಯ ಕೊಲೆ ಪ್ರಕರಣ | ಮರು ತನಿಖೆಗೆ ಒತ್ತಾಯಿಸಿ ಒಕ್ಕಲಿಗ ಯುವ ಗೌಡ ಸಂಘದ ವತಿಯಿಂದ ಆ.1 ರಂದು ಸುಳ್ಯದಲ್ಲಿ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಕೆಗೆ ನಿರ್ಧಾರ Read More »

ಮಾಂತೂರು ಅಂಗನವಾಡಿ ಕೇಂದ್ರದ ಹೊರಾಂಗಣ ಉದ್ಘಾಟನೆ

ಸವಣೂರು : ಸವಣೂರು ಗ್ರಾಮ ಪಂಚಾಯಿತಿ ಅನುದಾನದಲ್ಲಿ ನಿರ್ಮಾಣಗೊಂಡ ಮಂತೂರು ಅಂಗನವಾಡಿ ಕೇಂದ್ರದ ಹೊರಂಗಣದ ಉದ್ಘಾಟನಾ ಕಾರ್ಯಕ್ರಮ ನಡೆಯಿತು ಸವಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜೀವಿ ವಿ ಶೆಟ್ಟಿ ಉದ್ಘಾಟಿಸಿದರು.  ಬಾಲವಿಕಾಸ ಸಮಿತಿ ಅಧ್ಯಕ್ಷೆ ರುಬೀನಾ ಸಭೆಯ ಅಧ್ಯಕ್ಷತೆ ವಹಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ  ಪುಷ್ಪ, ಇಡನ್ ಗ್ಲೋಬ್ಲೆಲ್ ಸ್ಕೂಲ್ ಟ್ರಸ್ಟಿ ಅಬ್ದುಲ್ ಖಾದರ್ ಮಂತೂರು  ,ಅಲ್ನೂರ್ ಮುಸ್ಲಿಂ ಯೂಥ್ ಫೆಡರೇಶನ್ ಅಧ್ಯಕ್ಷ ಝಕರಿಯ ಮಂತೂರು, ಸವಣೂರು ಮೊಗರು ಶಾಲಾ ಮುಖ್ಯ ಶಿಕ್ಷಕಿಜುಸ್ತಿನಾ

ಮಾಂತೂರು ಅಂಗನವಾಡಿ ಕೇಂದ್ರದ ಹೊರಾಂಗಣ ಉದ್ಘಾಟನೆ Read More »

ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ | ನರಿಮೊಗರು ಸಾಂದೀಪನಿ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು:  ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ನಿಖಿತಾ ಎ.ಎಂ. ರಿಧಮಿಕ್ ವಿಭಾಗದಲ್ಲಿ ಪ್ರಥಮ, 7ನೇ ತರಗತಿ ವಿದ್ಯಾರ್ಥಿನಿ ಶ್ರಾವ್ಯ ದ್ವಿತೀಯ ಸ್ಥಾನ ಪಡೆದು ಆಗಸ್ಟ್ 17 ಹಾಗೂ 18 ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ವಿದ್ಯಾಭಾರತಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ | ನರಿಮೊಗರು ಸಾಂದೀಪನಿ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ Read More »

ಲಘು ಉದ್ಯೋಗ ಭಾರತೀ ಕರ್ನಾಟಕದ ಪುತ್ತೂರು ಹಾಗೂ ಸುಳ್ಯ ಉದ್ದಿಮೆದಾರರ  17ನೇ ಮಾಸಿಕ ಸಭೆ | ಡಿಜಿಟಲ್ ಮಾರ್ಕೆಟ್ ತರಬೇತಿ

ಪುತ್ತೂರು: ಲಘು ಉದ್ಯೋಗ ಭಾರತಿ ಕರ್ನಾಟಕ ಪುತ್ತೂರು ಘಟಕ ಹಾಗೂ ಸುಳ್ಯ ತಾಲೂಕಿನ ಉದ್ದಿಮೆದಾರ ಸದಸ್ಯರ 17ನೇ ಮಾಸಿಕ ಸಭೆ ಏಳ್ಮುಡಿ ಪ್ರಭು ಬಿಲ್ಡಿಂಗ್‍ನಲ್ಲಿರವ ಪ್ರೇರಣಾ ಸಂಸ್ಥೆಯ ಹಾಲ್‍ ನಲ್ಲಿ ನಡೆಯಿತು. ಕೋಕೋಗುರು ಕೋಕನಟ್ ಇಂಡಸ್ಟ್ರೀಸ್ ಮತ್ತು ಕೋಕೋಗುರು ಅಡಿಗೆ ಮನೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸ್ವತಃ ಕಂಪ್ಯೂಟರ್ ಇಂಜಿನಿಯರ್ ಆಗಿರುವ ಕೇಶವರಾಮ್ ಬೋನಂತಾಯ ಸಂಪನ್ಮೂಲ ವ್ಯಕ್ತಿಯಾಗಿ, ಸ್ವಂತ ಉದ್ಯಮದಲ್ಲಿ ತಾವು ತಮ್ಮ ತಂಡದೊಂದಿಗೆ ಯಾವ ರೀತಿ ಆನ್‌ಲೈನ್ ಮಾರ್ಕೆಟಿಂಗ್ ಉಪಯೋಗವನ್ನು ಪಡೆದುಕೊಳ್ಳುತ್ತಿದ್ದೇನೆ ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ

ಲಘು ಉದ್ಯೋಗ ಭಾರತೀ ಕರ್ನಾಟಕದ ಪುತ್ತೂರು ಹಾಗೂ ಸುಳ್ಯ ಉದ್ದಿಮೆದಾರರ  17ನೇ ಮಾಸಿಕ ಸಭೆ | ಡಿಜಿಟಲ್ ಮಾರ್ಕೆಟ್ ತರಬೇತಿ Read More »

ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದಾಗ ಬ್ಯಾಗ್‍ನಿಂದ ಸಾವಿರಾರು ಮೌಲ್ಯದ ವಸ್ತುಗಳ ಕಳವು | ಪುತ್ತೂರು ಠಾಣೆಗೆ ದೂರು

ಪುತ್ತೂರು: ಬೆಂಗಳೂರಿನಿಂದ ಪುತ್ತೂರಿಗೆ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಬರುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಸಾವಿರಾರು ರೂ.ಮೌಲ್ಯದ ಸೊತ್ತುಗಳು ಕಳವಾದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಪುಣಚ ಗ್ರಾಮದ ಅಜೇರು ನಿವಾಸಿ ದಿವಾಕರ ನಾಯಕ್ ಎಂಬವರ ಪುತ್ರಿ ದೀಪಿಕಾ ಅವರ ಬ್ಯಾಗ್‌ನಿಂದ ಲ್ಯಾಪ್‌ಟಾಪ್, ಸ್ಯಾಮ್‌ಸಂಗ್ ಕಂಪೆನಿಯ ಮೊಬೈಲ್, ಡೇನಿಯಲ್ ಕ್ಲೀನ್ ಕಂಪೆನಿಯ ವಾಚ್ ಸಹಿತ ಒಟ್ಟು ರೂ.53 ಸಾವಿರ ಮೌಲ್ಯದ ಸೊತ್ತು ಕಳವಾಗಿದೆ. ಅವರು ಬೆಂಗಳೂರಿನ ಟಿಸಿಎಸ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು ಜು.26ರಂದು ರಾತ್ರಿ ಬೆಂಗಳೂರಿನಿಂದ ಪುತ್ತೂರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದರು. ಪುತ್ತೂರಿಗೆ

ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದಾಗ ಬ್ಯಾಗ್‍ನಿಂದ ಸಾವಿರಾರು ಮೌಲ್ಯದ ವಸ್ತುಗಳ ಕಳವು | ಪುತ್ತೂರು ಠಾಣೆಗೆ ದೂರು Read More »

ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು:  ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನ ಪಡೆದು ಆಗಸ್ಟ್ 17 ಹಾಗೂ 18 ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದೆ. ತಂಡವನ್ನು  ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಧನುಷ್ ಆರ್, ಲಿಖಿತ್ ಗೌಡ ಕೆ, ಶ್ರೀನಿಧಿ ಎ, ವಾಣಿಜ್ಯ ವಿಭಾಗದ ನಿರ್ಮಿತ್ ,ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿನಯ್ ಡಿ ಪ್ರತಿನಿಧಿಸಿದ್ದರು. ಈ ವಿದ್ಯಾರ್ಥಿಗಳು ಕಾಲೇಜಿನ ದೈಹಿಕ

ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಪ್ಪೊಪ್ಪಿಕೊಳ್ಳಲು ಆರೋಪಿಗಳಿಗೆ ಕಿರುಕುಳ ನೀಡಿದ ಇಲಾಖೆ | ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ಕೇಂದ್ರ ಯೋಜನಾ ಸಂಚಾಲಕರು, ತಾಂತ್ರಿಕ ತಂಡಕ್ಕೆ ಹೈಕೋರ್ಟ್ ನಿರ್ದೇಶನ

ಪುತ್ತೂರು: ಬೆಳ್ಳಾರೆ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳಿಗೆ ಕಿರುಕುಳ ನೀಡಿ ತಪ್ಪೋಪ್ಪಿಗೆ ಹೇಳಿಕೆ ದಾಖಲಿಸಿದ್ದಾರೆ ಎಂಬ ಆರೋಪದಿಂದ ಅದಕ್ಕೆ ಸಂಬಂಧಪಟ್ಟ ಮತ್ತು ಕಚೇರಿಯಲ್ಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ತನ್ನ ಕೇಂದ್ರ ಯೋಜನಾ ಸಂಚಾಲಕರು ಮತ್ತು ತಾಂತ್ರಿಕ ತಂಡಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಜಾಬಿರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ವಿಭಾಗೀಯ ಪೀಠ, ಎಫ್‌ಎಸ್ಎಲ್ ಮತ್ತು ಎನ್ಎಐ ಕಚೇರಿಗಳಲ್ಲಿ 2022ರ ನವೆಂಬರ್ ತಿಂಗಳ ಸಿಸಿಟಿವಿ ದೃಶ್ಯಾವಳಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಪ್ಪೊಪ್ಪಿಕೊಳ್ಳಲು ಆರೋಪಿಗಳಿಗೆ ಕಿರುಕುಳ ನೀಡಿದ ಇಲಾಖೆ | ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ಕೇಂದ್ರ ಯೋಜನಾ ಸಂಚಾಲಕರು, ತಾಂತ್ರಿಕ ತಂಡಕ್ಕೆ ಹೈಕೋರ್ಟ್ ನಿರ್ದೇಶನ Read More »

ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ವಿವೇಕಾನಂದಕ್ಕೆ ಎರಡು ರ್‍ಯಾಂಕ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2023-24ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 2 ರ್‍ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಜಾಗೃತಿ.ಜೆ.ನಾಯಕ್ 9.59 ಸಿಜಿಪಿಎ ಅಂಕಗಳೊಂದಿಗೆ 4ನೇ ರ್‍ಯಾಂಕ್ ಹಾಗೂ ದಿವ್ಯಶ್ರೀ.ಎಸ್ 9.58 ಸಿಜಿಪಿಎ ಅಂಕಗಳೊಂದಿಗೆ ಏಳನೇ ರ್‍ಯಾಂಕ್ ಗಳಿಸಿಕೊಂಡಿದ್ದಾರೆ. ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್ ಹಾಗೂ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು

ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ವಿವೇಕಾನಂದಕ್ಕೆ ಎರಡು ರ್‍ಯಾಂಕ್ Read More »

error: Content is protected !!
Scroll to Top