ಪುತ್ತೂರು

ರೋಟರಿ ಸೆಂಟ್ರಲ್ ವತಿಯಿಂದ  “ಮನೆಗೊಂದು ಗಿಡ “

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಪ್ರಶಾಂತಿ ಸದ್ಭಾವನ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ವತಿಯಿಂದ ಕೇಪುಳು ಸಿಗಂದೂರು ಮನೆಯಲ್ಲಿ ಮನೆಗೊಂದು ಗಿಡ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೈಸೂರಿನ ಅವಧೂತರಾದ ಅರ್ಜುನ್ ಮಹಾರಾಜ್ ಗುರೂಜಿಯವರು ಗಿಡ ವಿತರಣೆಗೆ ಚಾಲನೆ ನೀಡಿದರು. ಸಿಗಂದೂರು ಮನೆಯ ಡಾ ಸಂತೋಷ್ ಪ್ರಭು, ಪ್ರಶಾಂತಿ ಸದ್ಭಾವನಾ ಟ್ರಸ್ಟ್ ನ ಮದುಸೂದನ್ ನಾಯಕ್, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನ ಅಧ್ಯಕ್ಷ ಡಾ ರಾಜೇಶ್ ಬೆಜ್ಜಂಗಳ, ಮೆಂಬರ್ಶಿಪ್ ಡೆವಲಪ್ ಮೆಂಟ್ ಚಯರ್ ಮೇನ್ […]

ರೋಟರಿ ಸೆಂಟ್ರಲ್ ವತಿಯಿಂದ  “ಮನೆಗೊಂದು ಗಿಡ “ Read More »

ಜು.30: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮಹಾಸಭೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಜು.30 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಗಂಟೆ 9.30ಕ್ಕೆ ವಾರ್ಷಿಕ ಮಹಾಸಭೆ ನಡೆಯಲಿದೆ. ಸದಸ್ಯರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ ತಿಳಿಸಿದ್ದಾರೆ.

ಜು.30: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಮಹಾಸಭೆ Read More »

ಗ್ರಾಮೀಣ ಬಡವರ ಮಕ್ಕಳೂ ಉನ್ನತ ವ್ಯಾಸಂಗ ಮಾಡುವಂತಾಗಬೇಕು: ಶಾಸಕ ಅಶೋಕ್ ರೈ | ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಸಿಇಟಿ, ನೀಟ್ ಕೋಚಿಂಗ್ ತರಗತಿ ಉದ್ಘಾಟನೆ

ಪುತ್ತೂರು: ಸರಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಗದ ಬಡವರ ಮಕ್ಕಳೂ ಸಿಇಟಿ, ನೀಟ್ ಪರೀಕ್ಷೆ ಬರೆದು ಉನ್ನತ ವ್ಯಾಸಂಗ ಮಾಡುವಂತಗಬೇಕು, ಪ್ರತೀಯೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಗಬೇಕೆಂಬುದೇ ನನ್ನ ಉದ್ದೇಶವಾಗಿದೆ ಇದಕ್ಕಾಗಿ ಜಿಲ್ಲೆಯಲ್ಲೇ ಪ್ರಥಮ ಬಾರಿ ಎಂಬಂತೆ ಪುತ್ತೂರಿನ ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಸಿಇಟಿ ಮತ್ತು ನೀಟ್ ಕೋಚಿಂಗ್ ತರಗತಿಯನ್ನು ಪ್ರಾರಂಭಿಸಲಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಶಿಕ್ಷಕರ ನೂತನ ಕೊಠಡಿ,

ಗ್ರಾಮೀಣ ಬಡವರ ಮಕ್ಕಳೂ ಉನ್ನತ ವ್ಯಾಸಂಗ ಮಾಡುವಂತಾಗಬೇಕು: ಶಾಸಕ ಅಶೋಕ್ ರೈ | ಕೊಂಬೆಟ್ಟು ಸರಕಾರಿ ಪ ಪೂ ಕಾಲೇಜಿನಲ್ಲಿ ಸಿಇಟಿ, ನೀಟ್ ಕೋಚಿಂಗ್ ತರಗತಿ ಉದ್ಘಾಟನೆ Read More »

ಗೃಹ ಮಂತ್ರಿ ಪರಮೇಶ್ವರರಿಂದ ಕೆಜೆ, ಡಿಜೆ ಹಳ್ಳಿ ಅಮಾಯಕ ಮೇಲಿನ ಕೇಸು ಹಿಂತೆಗೆಯಬೇಕು ಹೇಳಿಕೆ | ವಿಹಿಂಪ, ಬಜರಂಗದಳ ಖಂಡನೆ

ಪುತ್ತೂರು: ಪರಮೇಶ್ವರರವರು ಗೃಹ ಮಂತ್ರಿಗಳಾಗಿ ಕೆಜೆ ಹಳ್ಳಿ .ಡಿಜೆ ಹಳ್ಳಿಯ ಅಮಾಯಕರ ಹೆಸರಿನಲ್ಲಿರುವ ಕೇಸ್ ಗಳನ್ನು ತೆಗೆಯಬೇಕೆಂದು ಹೇಳಿರುವುದನ್ನು ವಿಶ್ವ  ಹಿಂದೂ ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬಜರಂಗದಳ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ, ಇಂದು ಉಡುಪಿಯಲ್ಲಿ ಬಹಳ ಒತ್ತಡಕ್ಕೆ ಮಣಿದು ಶೌಚಾಲಯದಲ್ಲಿ ವೀಡಿಯೊ ಮಾಡಿರುವ ಮತಾಂಧ ದುಷ್ಟ ಶಕ್ತಿಗಳ ವಿರುದ್ಧ ಎಫ್.ಐ.ಅರ್ ಮಾಡಿದ್ದಾರೆ. ಆದರೆ ಅವರನ್ನು ಬಂಧನ ಮಾಡಲು ಆಗದ ಪೊಲೀಸ್  ವ್ಯವಸ್ಥೆಯನ್ನು ಖಂಡಿಸುತ್ತೇವೆ. ಇದೇ ರೀತಿಯ ಕೆಜೆ

ಗೃಹ ಮಂತ್ರಿ ಪರಮೇಶ್ವರರಿಂದ ಕೆಜೆ, ಡಿಜೆ ಹಳ್ಳಿ ಅಮಾಯಕ ಮೇಲಿನ ಕೇಸು ಹಿಂತೆಗೆಯಬೇಕು ಹೇಳಿಕೆ | ವಿಹಿಂಪ, ಬಜರಂಗದಳ ಖಂಡನೆ Read More »

ಚಾರ್ವಾಕ ಶ್ರೀ ಕುಕ್ಕೆನಾಥ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಜನರೇಟರ್ ಉದ್ಘಾಟನೆ

ಚಾರ್ವಾಕ : ಚಾರ್ವಾಕ ಗ್ರಾಮದ ಕುಕ್ಕೆನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದ ನೂತನ ಜನರೇಟರ್ ಉದ್ಗಾಟನೆ ನೆರವೇರಿತು. ಅರುವಗುತ್ತು ಯಜಮಾನ ಪ್ರದೀಪ್ ಆರ್. ಗೌಡ ಜನರೇಟರನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ ಸದಸ್ಯ ವೆಂಕಪ್ಪ ಮೀಯೊಳ್ಪೆ, ಪ್ರಕಾಶ್ ಅರುವ, ಜತ್ತಪ್ಪ ಉದುಲಡ್ಡ, ಅರ್ಚಕ ನೂತನ್ ಭಟ್, ಸಮಿತಿ ಸದಸ್ಯರಾದ ಸುಲೋಚನಾ ಮೀಯೊಳ್ಪೆ, ಸುಮ ದೇವಸ್ಯ, ಆಡಳಿತ ಪಂಗಡದ ಅಧ್ಯಕ್ಷ ಶೀನಪ್ಪ ಮಾಚಿಲ  ಮತ್ತು ಕೂಡುಕಟ್ಟಿನ ಭಕ್ತಾದಿಗಳು ಉಪಸ್ಥಿತರಿದ್ದರು.

ಚಾರ್ವಾಕ ಶ್ರೀ ಕುಕ್ಕೆನಾಥ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಜನರೇಟರ್ ಉದ್ಘಾಟನೆ Read More »

ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸ್ ಆಚರಣೆ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಕ್ರಮ

ಪುತ್ತೂರು: ಕ್ಷಾತ್ರ ಪರಂಪರೆ, ವೀರತ್ವವನ್ನು ಮರೆತ ದೇಶಕ್ಕೆ ಭವಿಷ್ಯವಿಲ್ಲ. ಯಾವಾಗ ರಾಷ್ಟ್ರದ ಸೈನಿಕ ತನ್ನ ಕೋವಿಯನ್ನು ಕೆಳಗಿಳಿಸುತ್ತಾನೋ ಆಗ ಆ ರಾಷ್ಟ್ರ ಅರಾಜಕತೆಯಿಂದ ನಲುಗಿಹೋಗುತ್ತದೆ. ಹಾಗಾಗಿ ಸೈನಿಕರಿಗೆ ನೈತಿಕ ಶಕ್ತಿ ತುಂಬುವ, ನಿರಂತರವಾಗಿ ಬೆಂಬಲ ತೋರುವ ಸಂಸ್ಕಾರವನ್ನು ನಾಡಿನ ಜನ ಬೆಳೆಸಿಕೊಳ್ಳಬೇಕು ಎಂದು ಉಡುಪಿಯ ವಾಗ್ಮಿ ಶ್ರೀಕಾಂತ ಶೆಟ್ಟಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ರೂಪಿಸಲ್ಪಟ್ಟಿರುವ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಬುಧವಾರ ನಡೆದ

ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸ್ ಆಚರಣೆ | ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ನಡೆದ ವಿಶೇಷ ಕಾರ್ಯಕ್ರಮ Read More »

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಸ್ಮೃತಿ ದಿನ | ರಕ್ತದಾನ ಶಿಬಿರ

ಬೆಳ್ಳಾರೆ : ಒಂದು ವರ್ಷದ ಹಿಂದೆ ಪಿಎಫ್ಐನ ಮತಾಂಧ ಜಿಹಾದಿಗಳಿಂದ ಹತ್ಯೆಗೀಡಾಗಿರುವ ಬಿಜೆಪಿಯ ಯುವ ಮುಖಂಡ, ದಿ ಪ್ರವೀಣ್ ನೆಟ್ಟಾರು ಅವರ ಸ್ಮ್ರತಿದಿನ ದಂದು ಅವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪ್ರವೀಣ್ ನೆಟ್ಟಾರು ಅವರ ಮನೆಯ ಪರಿಸರದಲ್ಲಿರುವ ಅವರ ಪುತ್ಥಳಿಗೆ ಮಾಲಾರ್ಪಾಣೆಗೈದರು. ನಂತರ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಬೆಳ್ಳಾರೆ ಪೆರುವಾಜೆ ಜೆ.ಡಿ. ಆಡಿಟೋರಿಯಂ ಜರುಗಿದ ರಕ್ತದಾನ ಶಿಬಿರವನ್ನು

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಸ್ಮೃತಿ ದಿನ | ರಕ್ತದಾನ ಶಿಬಿರ Read More »

ಆರ್ಯಾಪು ಗ್ರಾಪಂ ಉಪ ಚುನಾವಣೆ | ಪುತ್ತಿಲ ಬೆಂಬಲಿತ ಅಭ್ಯರ್ಥಿ ಗೆಲುವು | ವಿಜಯೋತ್ಸವ ಮೆರವಣಿಗೆ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯಿತಿ ಒಂದು ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಜಯಭೇರಿ ಗಳಿಸಿದ ಹಿನ್ನಲೆಯಲ್ಲಿ ಪುತ್ತಿಲ ಪರಿವಾರದಿಂದ ವಿಜಯೋತ್ಸವ ಬುಧವಾರ ನಡೆಯಿತು. ಆಡಳಿತ ಸೌಧದ ಬಳಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದ ಬಳಿಕ ತೆರೆದ ವಾಹನದಲ್ಲಿ ಆಡಳಿತ ಸೌಧದ ಬಳಿಯಿಂದ ವಿಜಯೋತ್ಸವ ಮೆರವಣಿಗೆ ಸಾಗಿ ಮುಖ್ಯ ರಸ್ತೆಯಲ್ಲಿ ಸಂಚರಿಸಿತು. ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಸದಸ್ಯರು ಪಾಲ್ಗೊಂಡಿದ್ದರು.

ಆರ್ಯಾಪು ಗ್ರಾಪಂ ಉಪ ಚುನಾವಣೆ | ಪುತ್ತಿಲ ಬೆಂಬಲಿತ ಅಭ್ಯರ್ಥಿ ಗೆಲುವು | ವಿಜಯೋತ್ಸವ ಮೆರವಣಿಗೆ Read More »

ವಿವೇಕಾನಂದ ಕಲಾ-ವಿಜ್ಞಾನ-ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) : ಶೇ.94 ಉತ್ತೀರ್ಣತೆ ದಾಖಲು

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಯ (ಸ್ವಾಯತ್ತ) ಇದರ ದ್ವಿತೀಯ ಸೆಮಿಸ್ಟರ್ ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿಬಿಎ, ಬಿಸಿಎ ಪದವಿ ತರಗತಿಗಳ ಫಲಿತಾಂಶ ಪ್ರಕಟವಾಗಿದ್ದು ಒಟ್ಟು ಶೇ.94 ಉತ್ತೀರ್ಣತೆ ದಾಖಲಾಗಿದೆ. ದ್ವಿತೀಯ ಬಿ.ಎ. ಶೇ.95, ಬಿ.ಎಸ್ಸಿ. ಶೇ.90, ಬಿ.ಕಾಂ. ಶೇ.92, ಬಿ.ಬಿ.ಎ. ಶೇ.99, ಬಿ.ಸಿ.ಎ. ಶೇ.95 ರಂತೆ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಉತ್ತಮ ಫಲಿತಾಂಶ ಬಂದಿದೆ ಎಂದು ಪರೀಕ್ಷಾಂಗ ಕುಲಸಚಿವ ಡಾ. ಶ್ರೀಧರ ಎಚ್. ಜಿ. ಮತ್ತು ಪ್ರಾಂಶುಪಾಲ ವಿ. ಜಿ. ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವೇಕಾನಂದ ಕಲಾ-ವಿಜ್ಞಾನ-ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) : ಶೇ.94 ಉತ್ತೀರ್ಣತೆ ದಾಖಲು Read More »

ಜು.24 ರಿಂದ ಮುಳಿಯ ಕೇಶವ ಭಟ್ಟ & ಸನ್ಸ್ ಪುತ್ತೂರು, ಬೆಳ್ತಂಗಡಿ ಸಂಸ್ಥೆಯಲ್ಲಿ ಮುಳಿಯ “ಮಾನ್ಸೂನ್ ಧಮಾಕ”

ಪುತ್ತೂರು: ದ.ಕ.ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕೊಡಗು ಜಿಲ್ಲೆಯ ಗೋಣಿಕೊಪ್ಪದಲ್ಲಿ ತನ್ನ ಶಾಖೆಯನ್ನು ಹೊಂದಿರುವ ಮುಳಿಯ ಕೇಶವ ಭಟ್ಟ & ಸನ್ಸ್ ನ ಪುತ್ತೂರು ಹಾಗೂ ಬೆಳ್ತಂಗಡಿ ಸಂಸ್ಥೆಯಲ್ಲಿ ಮುಳಿಯ ಮಾನ್ಸೂನ್ ಧಮಾಕ ಜು.24 ರಿಂದ ಆರಂಭಗೊಂಡಿದೆ. ಕಳೆದ ಹಲವಾರು ವರ್ಷಗಳಿಂದ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಮುಳಿಯ ಜ್ಯುವೆಲ್ಲರ್ಸ್ ಎಲ್ಲೆಡೆ ತನ್ನ ಸಂಸ್ಥೆಯನ್ನು ತೆರೆದು ಗ್ರಾಹಕ ವರ್ಗದ ವಿಶ್ವಾಸ ಪಡೆದು ಪ್ರಾಮಾಣಿಕ ಸೇವೆಯೊಂದಿಗೆ ಬೆಳೆದು ಬಂದಿದೆ. ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸುವ ನಿಟ್ಟಿನಲ್ಲಿ ಮುಳಿಯ ಮಾನ್ಸೂನ್

ಜು.24 ರಿಂದ ಮುಳಿಯ ಕೇಶವ ಭಟ್ಟ & ಸನ್ಸ್ ಪುತ್ತೂರು, ಬೆಳ್ತಂಗಡಿ ಸಂಸ್ಥೆಯಲ್ಲಿ ಮುಳಿಯ “ಮಾನ್ಸೂನ್ ಧಮಾಕ” Read More »

error: Content is protected !!
Scroll to Top