ಪುತ್ತೂರು

ಮಳೆಯ ಅವಾಂತರ | ರಸ್ತೆಗೆ ಬಿದ್ದ ಮರ ತೆರವು ಮಾಡಿ ಜವಾಬ್ದಾರಿ ಮೆರೆದ ಪತ್ರಕರ್ತರು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ ಭಾಗದಲ್ಲಿ ಅತೀ ಹೆಚ್ಚಿನ ಅನಾಹುತಗಳು ನಡೆದಿದೆ. ಮಂಜೇಶ್ವರ ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಹಲವೆಡೆ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯಿಂದ ಯಾವುದೇ ವಾಹನಗಳು ಮುಂದಕ್ಕೆ ಸಾಗುವಂತಿಲ್ಲ. ಕಳೆದ ಎರಡು ದಿನಗಳಿಂದ ಇದೇ ಪರಿಸ್ಥಿತಿ ಇದ್ದು ಈ ರಸ್ತೆಯಲ್ಲಿ ಸಾಗುವವರು ಬಳ್ಪ ಗ್ರಾಮದಿಂದ ಗುತ್ತಿಗಾರು ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಬೇಕಾಗಿದೆ. ಮಳೆಯ ಈ ಅವಾಂತರದ ವರದಿ ಮಾಡಲು ತೆರಳಿದ್ದ ಟಿವಿ ಮಾದ್ಯಮದವರೂ […]

ಮಳೆಯ ಅವಾಂತರ | ರಸ್ತೆಗೆ ಬಿದ್ದ ಮರ ತೆರವು ಮಾಡಿ ಜವಾಬ್ದಾರಿ ಮೆರೆದ ಪತ್ರಕರ್ತರು Read More »

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ | ಮಾದಕ ವಸ್ತು ಸೇವನೆ ಶಂಕೆ

ಪುತ್ತೂರು: ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಂಪ್ಯ ಪೊಲೀಸರು ವಿಚಾರಿಸಿದಾಗ ಯುವಕ ಗಾಂಜಾ ಸೇವನೆ ಮಾಡಿ ಈ ರೀತಿ ವರ್ತಿಸಿದ್ದಾನೆ ಎಂದು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇರ್ದೆ ಗ್ರಾಮ ತನ್ನೀರ್ ಮಂಜಿಲ್ ನಿವಾಸಿ ಮೊಹಮ್ಮದ್ ತಪ್ಪಿರ್ (21)ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗ್ರಾಮಾಂತರ ಠಾಣಾ ಎಸ್.ಐ ಧನಂಜಯ ಬಿ.ಸಿ ಅವರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಇರ್ದೆ ಗ್ರಾಮದ ದೂಮಡ್ಕ ಗೋಳಿಪದವು ಸಮೀಪ

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ | ಮಾದಕ ವಸ್ತು ಸೇವನೆ ಶಂಕೆ Read More »

ಹೆಜ್ಜೇನು ಕಡಿದು ವ್ಯಕ್ತಿಯೋರ್ವರು ಮೃತ್ಯು

ಪುತ್ತೂರು: ಪುತ್ತೂರು: ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡೆಗೆ ಹೋಗಿದ್ದ ವೇಳೆ ಹೆಜ್ಜೇನು(ಪಿಲಿಕುಡೊಲು)ಕಡಿದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಮಾಯಿಲ ಎಂಬವರ ಪುತ್ರ ಗುರುವ (55)  ಮೃತಪಟ್ಟವರು. ಅವರು ಜು.23ರಂದು ಮಧಾಹ್ನ ಕಟ್ಟಿಗೆಗೆಂದು ಮನೆ ಪಕ್ಕದ ಗುಡ್ಡೆಗೆ ಹೋದವರು ಅರ್ಧ ಗಂಟೆ ಬಿಟ್ಟು ಗುಡ್ಡೆಯಿಂದ ಓಡೋಡಿ ಬಂದಾಗ ಅವರ ಮುಖ, ಕುತ್ತಿಗೆ, ಮೈಯೆಲ್ಲಾಯಾವುದೋ ಊದಿಕೊಂಡಿರುವುದು ಕಂಡು ಬಂದಿತ್ತು. ಈ ಕುರಿತು ಅವರ ತಾಯಿ ವಿಚಾರಿಸಿದಾಗ ಹೆಚ್ಚೇನು

ಹೆಜ್ಜೇನು ಕಡಿದು ವ್ಯಕ್ತಿಯೋರ್ವರು ಮೃತ್ಯು Read More »

ನಾಳೆ (ಜು.26) : ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023”

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ಮತ್ತು ಎಂಸಿಎ ವಿಭಾಗ ಹಾಗೂ ವೆಸ್ಟರ್ನ್ ಆಸ್ಟ್ರೇಲಿಯಾ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-೨೦೨೩ ಜು.26 ಬುಧವಾರ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆಯಲಿದೆ. ಪ್ರಪಂಚದಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು ವಿದ್ಯಾರ್ಥಿಗಳು ಮತ್ತು ಉದ್ಯಮ ಕ್ಷೇತ್ರದ ತಜ್ಞರನ್ನು ಒಟ್ಟುಗೂಡಿಸಿ, ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬಗ್ಗೆ ಬೆಳಕುಚೆಲ್ಲುವ, ಚರ್ಚೆ ಹಾಗೂ ವಿಚಾರ ವಿನಿಮಯವನ್ನು ನಡೆಸುವ ಉದ್ದೇಶದಿಂದ

ನಾಳೆ (ಜು.26) : ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023” Read More »

ಭಾರೀ ಮಳೆ ಹಿನ್ನಲೆ | ನಾಳೆ (ಜು.25) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಪುತ್ತೂರು: ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಪುತ್ತೂರು, ಸುಳ್ಯ ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ. ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂ. 08257-231231 ನಂಬರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಭಾರೀ ಮಳೆ ಹಿನ್ನಲೆ | ನಾಳೆ (ಜು.25) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನಲೆ | ಕಡಬ ತಾಲೂಕಿನಲ್ಲಿ ನಾಳೆಯೂ (ಜು.25) ಶಾಲೆಗಳಿಗೆ ರಜೆ ಘೋಷಣೆ

ಪುತ್ತೂರು : ಭಾರೀ ಮಳೆ ಹಿನ್ನಲೆಯಲ್ಲಿ ಜು.25 ರಂದೂ ಕಡಬ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಕಡಬ ತಹಶೀಲ್ದಾರ್ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ಜು.24 ರಂದು ರಜೆ ಘೋಷಿಸಲಾಗಿತ್ತು. ಇದೀಗ ಜು.25 ರಂದು ರಜೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಭಾರೀ ಮಳೆ ಹಿನ್ನಲೆ | ಕಡಬ ತಾಲೂಕಿನಲ್ಲಿ ನಾಳೆಯೂ (ಜು.25) ಶಾಲೆಗಳಿಗೆ ರಜೆ ಘೋಷಣೆ Read More »

ಮಿತ್ತೂರು ಬಳಿ ರಸ್ತೆಗೆ ಉರುಳಿದ ಮರ | ಸಂಚಾರದಲ್ಲಿ ವ್ಯತ್ಯಯ

ಪುತ್ತೂರು: ಮಿತ್ತೂರು ಕುಕ್ಕರೆಬೆಟ್ಟು ಬಳಿ ಸೋಮವಾರ ಮಧ್ಯಾಹ್ನ ಭಾರೀ ಮಳೆಗೆ ಮರ ರಸ್ತೆಗೆ ಉರುಳಿ ಬಿದ್ದು ಪುತ್ತೂರು ಮಾಣಿ ನಡುವಣ ವಾಹನ ಸಂಚಾರ ಸ್ಥಗಿತಗೊಂಡಿತು. ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು. ಮರ ಬಿದ್ದ ಪರಿಣಾಮ ಪುತ್ತೂರು ಮಾಣಿ ನಡುವಣ ಓಡಾಟ ನಡೆಸುವವರಿಗೆ ತೊಂದರೆ ಉಂಟಾಯಿತು. ವಾಹನಗಳು ಮುರ ಮತ್ತು ಇತರೆ ಮಾರ್ಗಗಳ ಮೂಲಕ ಸಂಚರಿಸಿತು.

ಮಿತ್ತೂರು ಬಳಿ ರಸ್ತೆಗೆ ಉರುಳಿದ ಮರ | ಸಂಚಾರದಲ್ಲಿ ವ್ಯತ್ಯಯ Read More »

ಬಿರುಕುಬಿಟ್ಟ ಅರಿಯಡ್ಕ ಹಿಪ್ರಾ ಶಾಲೆ ಕಟ್ಟಡ: ವಿದ್ಯಾರ್ಥಿಗಳ ಸ್ಥಳಾಂತರ | 100 ವರ್ಷಗಳ ಹಿಂದಿನ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿ

ಪುತ್ತೂರು: ಭಾರೀ ಮಳೆಗೆ ಅರಿಯಡ್ಕ ಸರಕಾರಿ ಹಿ ಪ್ರಾ ಶಾಲಾ ಕಟ್ಟಡದ ಗೋಡೆ ಬಿರುಕುಬಿಟ್ಟಿದ್ದು ಕುಸಿಯುವ ಭೀತಿಯಲ್ಲಿದ್ದು ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ. ಶತಮಾನಗಳ ಇತಿಹಾಸ ಹೊಂದಿರುವ ಅರಿಯಡ್ಕ ಶಾಲೆಯಲ್ಲಿ ಒಂದರಿಂದ ಏನೇ ತರಗತಿ ತನಕ ವಿದ್ಯಾರ್ಥಿಗಳಿದ್ದು ಒಂದೇ ಕಟ್ಟಡದಲ್ಲಿ 2, 3 ನೇ ತರಗತಿ ತನಕ ಕ್ಲಾಸ್‌ಗಳು ನಡೆಯುತ್ತಿದ್ದು ಅದೇ ಕಟ್ಟಡದ ಗೋಡೆ ಬಿರುಕುಬಿಟ್ಟಿದೆ. ಗೋಡೆ ಬಿರುಕುಬಿಟ್ಟಿರುವ ಕಾರಣ ಕಟ್ಟಡದ ಮಾಡು, ಪಕ್ಕಾಸುಗಳು ಕುಸಿತಗೊಂಡಿದ್ದು ಮುರಿದು ಬೀಳುವ ಹಂತದಲ್ಲಿದೆ. ಭಾನುವಾರ ಈ ಘಟನೆ ನಡೆದಿದ್ದು ಇಂದು ತರಗತಿಗೆ

ಬಿರುಕುಬಿಟ್ಟ ಅರಿಯಡ್ಕ ಹಿಪ್ರಾ ಶಾಲೆ ಕಟ್ಟಡ: ವಿದ್ಯಾರ್ಥಿಗಳ ಸ್ಥಳಾಂತರ | 100 ವರ್ಷಗಳ ಹಿಂದಿನ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿ Read More »

ಪುತ್ತೂರಿನಲ್ಲಿ ಮೇಳೈಸಿದ “ತುಳುನಾಡ ಬಂಟೆರೆ ಪರ್ಬ-2023” | ಅನಾವರಣಗೊಂಡ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು

ಪುತ್ತೂರು:.ಯುವ ಬಂಟರು ಸಮಾಜದಲ್ಲಿ ಶಕ್ತಿಯಾಗಿ ಬೆಳೆಯಬೇಕು. ಇದಕ್ಕೆ ಪುತ್ತೂರು ಯುವ ಬಂಟರ ನೇತೃತ್ವದಲ್ಲಿ ಜರಗಿದ ಅದ್ದೂರಿ  ಕಾರ್ಯಕ್ರಮ ಬಂಟೆರೆ ಪರ್ಬ ಮಾದರಿಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಭಾನುವಾರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್‌ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿದ ‘ತುಳುನಾಡ ಬಂಟೆರೆ ಪರ್ಬ-2023 ‘ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಂಟರ ಪರವಾಗಿ ಯಾವುದೇ ಸರಕಾರ ಈತನಕ ಬೆಂಬಲ ನೀಡಿಲ್ಲ.ರಾಜ್ಯದ ಈಗಿನ ಸರಕಾರ

ಪುತ್ತೂರಿನಲ್ಲಿ ಮೇಳೈಸಿದ “ತುಳುನಾಡ ಬಂಟೆರೆ ಪರ್ಬ-2023” | ಅನಾವರಣಗೊಂಡ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು Read More »

ಕಡಬ ಐಐಸಿಟಿ ವಿದ್ಯಾಸಂಸ್ಥೆಯಿಂದ ನರ್ಸರಿ ಶಿಕ್ಷಕಿ ತರಬೇತಿ ಕೋರ್ಸ್‍ಗೆ ಚಾಲನೆ

ಕಡಬ: ಕಳೆದ 9 ವರ್ಷಗಳಿಂದ ಕಡಬದಲ್ಲಿ ಕಡಬದಲ್ಲಿ ವೃತ್ತಿಪರ ಕೋರ್ಸ್ ಗಳನ್ನು ಅಭ್ಯರ್ಥಿಗಳಿಗೆ ನೀಡಿ ಉದ್ಯೋಗದ ದಾರಿಯನ್ನು ಕಲ್ಪಿಸುತ್ತಿರುವ ಐಐಸಿಟಿ (IICT) ವಿದ್ಯಾ ಸಂಸ್ಥೆ ಇದೀಗ ಮತ್ತೊಂದು ತರಬೇತಿ ಕೋರ್ಸ್ ಆರಂಭಿಸಿದೆ. ಕಂಪ್ಯೂಟರ್ ತರಗತಿ, ಟುಟೋರಿಯಲ್, ಟ್ಯೂಷನ್ ಕ್ಲಾಸ್, ನವೋದಯ ತರಬೇತಿ, ಅಬಾಕಸ್  ಶಿಕ್ಷಣ ನೀಡುತ್ತಿದ್ದ ಸಂಸ್ಥೆ ಈಗ ಬಹಳಷ್ಟು ಬೇಡಿಕೆಯನ್ನು ಹೊಂದಿರುವ ನರ್ಸರಿ( ಮೊಂಟೆಸ್ಸರಿ) ಶಿಕ್ಷಕಿ ಕೋರ್ಸ್‌ಅನ್ನು ಆರಂಭಿಸುತ್ತಿದೆ. ಈ ಮೂಲಕ ಕಡಬ ಸೇರಿದಂತೆ ವಿವಿಧ ತಾಲೂಕಿನ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ. ಹೊಸ ಕೋರ್ಸ್

ಕಡಬ ಐಐಸಿಟಿ ವಿದ್ಯಾಸಂಸ್ಥೆಯಿಂದ ನರ್ಸರಿ ಶಿಕ್ಷಕಿ ತರಬೇತಿ ಕೋರ್ಸ್‍ಗೆ ಚಾಲನೆ Read More »

error: Content is protected !!
Scroll to Top