ಕ.ಸಾ.ಪ ಪುತ್ತೂರು ಗ್ರಾಮ ಸಾಹಿತ್ಯ ಸಂಭ್ರಮ -7 | ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ನೀಡುವ ದೃಢಸಂಕಲ್ಪ ಪುತ್ತೂರು ಕ.ಸಾ.ಪ ದಿಂದ : ಪ್ರಶಾಂತ್. ಎನ್.
ಪುತ್ತೂರು: ತಾಲೂಕಿನ ಗ್ರಾಮೀಣ ಪ್ರದೇಶದ ಶಾಲಾ ಕಾಲೇಜುಗಳಲ್ಲಿರುವ ಅನೇಕ ಉದಯೋನ್ಮುಖ ಸಾಹಿತಿಗಳಿಗೆ ಮತ್ತು ಗ್ರಾಮದ ಸಾಹಿತ್ಯ ಕ್ಷೇತ್ರದ ಸಾಧಕರನ್ನು ಗುರುತಿಸಿ ಸಾಹಿತ್ಯ ವೇದಿಕೆ ನೀಡುವ ನಿಟ್ಟಿನಲ್ಲಿ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮವನ್ನು ಕ ಸಾ ಪ ಪುತ್ತೂರು ಹಮ್ಮಿಕೊಂಡಿರುವುದು ಶ್ಲಾಘನೀಯ. ಇಂತಹಾ ಸಮಾಜ ಮುಖಿ ಕಾರ್ಯಕ್ಕೆ ಗ್ರಾಮ ಪಂಚಾಯಿತಿ ಸದಾ ಬೆಂಬಲವಾಗಿ ನಿಲ್ಲುತ್ತದೆ ಎಂದು ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಎನ್ ಹೇಳಿದರು. ನೆಕ್ಕಿಲಾಡಿ ಗ್ರಾಮದ ಸ. ಹಿ. ಪ್ರಾ ಶಾಲೆಯಲ್ಲಿ ಪುತ್ತೂರು […]










