ಪುತ್ತೂರು

ಕ.ಸಾ.ಪ ಪುತ್ತೂರು ಗ್ರಾಮ ಸಾಹಿತ್ಯ ಸಂಭ್ರಮ -7 |  ಗ್ರಾಮೀಣ ಪ್ರತಿಭೆಗಳಿಗೆ  ವೇದಿಕೆ ನೀಡುವ ದೃಢಸಂಕಲ್ಪ ಪುತ್ತೂರು ಕ.ಸಾ.ಪ ದಿಂದ : ಪ್ರಶಾಂತ್. ಎನ್.

ಪುತ್ತೂರು: ತಾಲೂಕಿನ ಗ್ರಾಮೀಣ ಪ್ರದೇಶದ ಶಾಲಾ ಕಾಲೇಜುಗಳಲ್ಲಿರುವ   ಅನೇಕ ಉದಯೋನ್ಮುಖ ಸಾಹಿತಿಗಳಿಗೆ ಮತ್ತು ಗ್ರಾಮದ ಸಾಹಿತ್ಯ  ಕ್ಷೇತ್ರದ ಸಾಧಕರನ್ನು ಗುರುತಿಸಿ ಸಾಹಿತ್ಯ ವೇದಿಕೆ ನೀಡುವ ನಿಟ್ಟಿನಲ್ಲಿ ಗ್ರಾಮ ಗ್ರಾಮದಲ್ಲೂ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮವನ್ನು ಕ ಸಾ ಪ ಪುತ್ತೂರು  ಹಮ್ಮಿಕೊಂಡಿರುವುದು ಶ್ಲಾಘನೀಯ. ಇಂತಹಾ ಸಮಾಜ ಮುಖಿ ಕಾರ್ಯಕ್ಕೆ ಗ್ರಾಮ ಪಂಚಾಯಿತಿ ಸದಾ ಬೆಂಬಲವಾಗಿ ನಿಲ್ಲುತ್ತದೆ ಎಂದು ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಎನ್ ಹೇಳಿದರು. ನೆಕ್ಕಿಲಾಡಿ ಗ್ರಾಮದ ಸ. ಹಿ. ಪ್ರಾ ಶಾಲೆಯಲ್ಲಿ ಪುತ್ತೂರು […]

ಕ.ಸಾ.ಪ ಪುತ್ತೂರು ಗ್ರಾಮ ಸಾಹಿತ್ಯ ಸಂಭ್ರಮ -7 |  ಗ್ರಾಮೀಣ ಪ್ರತಿಭೆಗಳಿಗೆ  ವೇದಿಕೆ ನೀಡುವ ದೃಢಸಂಕಲ್ಪ ಪುತ್ತೂರು ಕ.ಸಾ.ಪ ದಿಂದ : ಪ್ರಶಾಂತ್. ಎನ್. Read More »

ಆಯಾ ತಾಲೂಕಿನ ಪರಿಸ್ಥಿತಿ ಅವಲೋಕಿಸಿ ರಜೆ ನೀಡಿ’ – ತಹಸೀಲ್ದಾರ್‌ಗಳಿಗೆ ಡಿಸಿ ಆದೇಶ

ಪುತ್ತೂರು :  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಪುತ್ತೂರು, ಬಂಟ್ವಾಳ ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾ‌ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿರುವುದಿಲ್ಲ ಎಂದು ಡಿಸಿ ತಿಳಿಸಿದ್ದಾರೆ. ಕಡಬ ತಾಲೂಕಿನಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ

ಆಯಾ ತಾಲೂಕಿನ ಪರಿಸ್ಥಿತಿ ಅವಲೋಕಿಸಿ ರಜೆ ನೀಡಿ’ – ತಹಸೀಲ್ದಾರ್‌ಗಳಿಗೆ ಡಿಸಿ ಆದೇಶ Read More »

ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಬೈಕ್‍ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ‍ಘಟನೆ ಭಾನುವಾರ ನಡೆದಿದೆ. ಸೇಡಿಯಾಪು ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಮೃತಪಟ್ಟವರು ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು Read More »

ಮಣಿಪುರ ಪ್ರಕರಣ : ಮಾಯಿದೆ ದೇವುಸ್ ಚರ್ಚ್‌ನ ಕಥೋಲಿಕ್ ಸಭಾದಿಂದ ಮೌನ ಪ್ರತಿಭಟನೆ

ಪುತ್ತೂರು : ಮಣಿಪುರದಲ್ಲಿ ನಡೆಯುತ್ತಿರುವ ದಾರುಣ ಘಟನೆಗೆ ಸಬಂಧಿಸಿದಂತೆ ಪುತ್ತೂರಿನ ಮಾಯಿದೆ ದೇವುಸ್ ಚರ್ಚ್‌ನ ಕಥೋಲಿಕ್ ಸಭಾದ ವತಿಯಿಂದ ಮೌನ ಪ್ರತಿಭಟನೆ ಭಾನುವಾರ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ 124 ಚರ್ಚ್ ಗಳ ಪರಿಸರದಲ್ಲಿ ಫಲಕಗಳನ್ನು ಹಿಡಿದು ಹತ್ತು ನಿಮಿಷಗಳ ಮೌನ ಪ್ರತಿಭಟನೆಯನ್ನು ಹಮ್ಮಿಕೊಳ್ಳುವಂತೆ ಮಂಗಳೂರಿನ ಬಿಷಪ್ ಹೌಸಿನಲ್ಲಿ ಕಾರ್ಯಾಚರಿಸುತ್ತಿರುವ ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ಅಧ್ಯಕ್ಷರಾದ ಆಲ್ವಿನ್ ಡಿ’ಸೋಜರವರು ಆಯಾ ಚರ್ಚ್ ವ್ಯಾಪ್ತಿಯ ಕಥೋಲಿಕ್ ಸಭಾ ಸಂಘಟನೆಗೆ ಮನವಿ ಮಾಡಿದ ಹಿನ್ನಲೆಯಲ್ಲಿ ಮೌನ ಪ್ರತಿಭಟನೆ ನಡೆಯಿತು.

ಮಣಿಪುರ ಪ್ರಕರಣ : ಮಾಯಿದೆ ದೇವುಸ್ ಚರ್ಚ್‌ನ ಕಥೋಲಿಕ್ ಸಭಾದಿಂದ ಮೌನ ಪ್ರತಿಭಟನೆ Read More »

ಎಸ್‌ಡಿಪಿಐಯಿಂದ ಅರ್ಹ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಪುತ್ತೂರು : ಎಸ್‌ಡಿಪಿಐ ಬನ್ನೂರು ವಾರ್ಡ್ ವತಿಯಿಂದ ಅರ್ಹ ಕುಟುಂಬಕ್ಕೆ ದಾನಿಗಳ ಸಹಕಾರದಿಂದ ನಿರ್ಮಾಣಗೊಂಡ ಮನೆಯನ್ನ ಹಸ್ತಾಂತರ ಕಾರ್ಯಕ್ರಮ ಭಾನುವಾರ ಬನ್ನೂರಿನಲ್ಲಿ ನಡೆಯಿತು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನುಷ್ಯನಾದವನಿಗೆ ತಿನ್ನೋಕೆ ಅನ್ನ, ಹಾಕಿಕೊಳ್ಳಲು ಬಟ್ಟೆ ಹಾಗೆಯೇ ಸುಂದರವಾದ ಮನೆ ಇವೆಲ್ಲವೂ ಅತ್ಯಗತ್ಯ. ಹೀಗಿರುವಾಗ ಅದೆಷ್ಟೋ ಜನ ನಮ್ಮ ದೇಶದಲ್ಲಿ ತಿನ್ನಲು ಅನ್ನವಿಲ್ಲದೆ,  ಉಳಿದುಕೊಳ್ಳಲು ಮನೆಯಿಲ್ಲದೆ ಕಂಗಾಲಾಗಿದ್ದಾರೆ. ಇದನ್ನು ಗಮನಿಸಿ ಬನ್ನೂರಿನಲ್ಲಿ ಜಮೀಲ ಎಂಬವರು ಕಡು ಬಡತನದಿಂದ ಕೂಡಿದ್ದು, ಅವರನ್ನ ಗುರುತಿಸಿ ಎಸ್‌ಡಿಪಿಐ

ಎಸ್‌ಡಿಪಿಐಯಿಂದ ಅರ್ಹ ಬಡ ಕುಟುಂಬಕ್ಕೆ ಮನೆ ಹಸ್ತಾಂತರ Read More »

ಶಾಂತಿಯುತವಾಗಿ ನಡೆದ ನಿಡಳ್ಳಿ, ಆರ್ಯಾಪು ಗ್ರಾ.ಪಂ. ಉಪಚುನಾವಣೆ

ಪುತ್ತೂರು : ಪುತ್ತೂರು ತಾಲೂಕಿನ ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾಪಂಗಳಲ್ಲಿ ಸದಸ್ಯರಿಬ್ಬರ ನಿಧನದಿಂದ ತೆರವಾಗಿರುವ ಎರಡು ಸ್ಥಾನಗಳಿಗೆ ಸದಸ್ಯರ ಆಯ್ಕೆಗೆ ಮತದಾನ ಪ್ರಕ್ರಿಯೆ ಭಾನುವಾರ ಶಾಂತಿಯುತವಾಗಿ ನಡೆಯಿತು. ಎರಡು ಪಂಚಾಯಿತಿಗಳಿಗೆ ತಲಾ ಒಂದು ಸ್ಥಾನಗಳಿಗೆ ಶಾಂತಿಯುತ ಮತದಾನ ನಡೆಯಿತು. ಚುನಾವಣೆ ಅಂತಿಮ ಹಂತದಲ್ಲಿ ಆರ್ಯಾಪು ಗ್ರಾ.ಪಂ. ನಲ್ಲಿ 85.79 ಶೇ. ಹಾಗೂ ನಿಡ್ಪಳ್ಳಿ ಗ್ರಾ.ಪಂ.ನಲ್ಲಿ 87.14 ಶೇ. ಮತ ಚಲಾವಣೆಯಾಗಿದೆ.  ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗಳು ಎರಡೂ ಕಡೆ ಸ್ಪರ್ಧಿಸುತ್ತಿದ್ದು, ತ್ರಿಕೋನ

ಶಾಂತಿಯುತವಾಗಿ ನಡೆದ ನಿಡಳ್ಳಿ, ಆರ್ಯಾಪು ಗ್ರಾ.ಪಂ. ಉಪಚುನಾವಣೆ Read More »

ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಪ್ರಶಸ್ತಿ ಪ್ರದಾನ, ವಾರ್ಷಿಕ ಮಹಾಸಭೆ, ವಿದ್ಯಾರ್ಥಿ ವೇತನ ವಿತರಣೆ

ಪುತ್ತೂರು: ಪುತ್ತೂರು ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಪ್ರಶಸ್ತಿ ಪ್ರದಾನ ಸಮಾರಂಭ, ವಿದ್ಯಾರ್ಥಿ ವೇತನ ಹಾಗೂ ವಾರ್ಷಿಕ ಮಹಾಸಭೆ ಭಾನುವಾರ ನಗರದ ಪುರಭವನದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ನಿವೃತ್ತ ಯೋಧರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ, ನಿವೃತ್ತ ಡೆಪ್ಯೂಟಿ ಕಮಾಂಡೆಂಟ್ ಚಂದಪ್ಪ ಮೂಲ್ಯ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕುಲಾಲ ಸಂಘ ನಂಬಿಕೆ, ವಿಶ್ವಾಸ ದ್ರೋಹ, ದಬ್ಬಾಳಿಕೆ ಮಾಡದ ಸಮಾಜವಾಗಿದ್ದು, ಮುಂದಿನ ಪೀಳಿಗೆ ಹಿರಿಯರು ಸಮಾಜಕ್ಕೆ ಸಲ್ಲಿಸಿದ ಸೇವೆ, ಅಭಿವೃದ್ಧಿ ಕಾರ್ಯಗಳಿಂದ ಪ್ರೇರಣೆಗೊಂಡು ಮತ್ತಷ್ಟು

ಕುಲಾಲ ಸಮಾಜಸೇವಾ ಸಂಘದ ವತಿಯಿಂದ ಪ್ರಶಸ್ತಿ ಪ್ರದಾನ, ವಾರ್ಷಿಕ ಮಹಾಸಭೆ, ವಿದ್ಯಾರ್ಥಿ ವೇತನ ವಿತರಣೆ Read More »

ಕೋಡಿಂಬಾಡಿಯಲ್ಲಿ ಭಾರೀ ಮಳೆಗೆ ಆವರಣ ಗೋಡೆ ಕುಸಿತ

ಪುತ್ತೂರು: ಕೋಡಿಂಬಾಡಿ-ಉಪ್ಪಿನಂಗಡಿ ಮೋರಿಯೊಂದು ಭಾರೀ ಮಳೆಗೆ ಬ್ಲಾಕ್ ಆಗಿ ಸ್ಥಳೀಯ ಖಾಸಗಿ ವ್ಯಕ್ತಿಯೊಬ್ಬರ ಜಮೀನಿನ ಆವರಣ ಗೋಡೆ ಕುಸಿದಿದೆ. ಮೋರಿ ಬ್ಲಾಕ್ ಆಗಿರುವ ಕುರಿತು ಲೋಕೋಪಯೋಗಿ ಇಲಾಖೆಗೆ ದೂರು ನೀಡಿ ವಾರ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಮಳೆ ನೀರು ನಿಂತು ಜಮೀನು ಆವರಣಗೋಡೆ ಕುಸಿದಿದೆ ಎಂದು ರಮೇಶ್ ಎಂಬವರು ತಿಳಿಸಿದ್ದಾರೆ. ಮೋರಿ ಬ್ಲಾಕ್ ಆಗಿದ್ದರಿಂದ ಚರಂಡಿಯಲ್ಲಿ ನೀರು ತುಂಬಿ ದೊಡ್ಡ ಕೊಳವಾಗಿದೆ. ರಸ್ತೆಯಲ್ಲಿ ಸಾವಿರಾರು ವಾಹನಗಳು ಚಲಿಸುತ್ತಿದ್ದು ಇಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ.

ಕೋಡಿಂಬಾಡಿಯಲ್ಲಿ ಭಾರೀ ಮಳೆಗೆ ಆವರಣ ಗೋಡೆ ಕುಸಿತ Read More »

ಬಿಲ್ಲವ ಸಮಾಜಕ್ಕೆ ಮುಖ್ಯಮಂತ್ರಿ ಸಹಿತ ಕಾಂಗ್ರೆಸ್ ಅನ್ಯಾಯ ಮಾಡಿಲ್ಲ | ಶಿಕ್ಷಣ ಸಚಿವ ಮಧು ಬಂಗಾರಪ್ಪ

ಪುತ್ತೂರು: ನಾನು ಕೂಡಾ ಬಿಲ್ಲವ. ನಮ್ಮ ಬಿಲ್ಲವ, ಈಡಿಗ, ನಾಮದಾರಿ ಸಮಾಜಕ್ಕೆ ಯಾವುದೇ ತರದ ಅನ್ಯಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರಾಗಲಿ, ಕಾಂಗ್ರೆಸ್ ಆಗಲಿ ಮಾಡಿಲ್ಲ. ನಮ್ಮ ಸಮಾಜಕ್ಕೆ ಪ್ರಾತಿನಿಧ್ಯ ಕಾಂಗ್ರೆಸ್ ನೂರಕ್ಕೆ ನೂರು ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪುತ್ತೂರು ಗೆಜ್ಜೆಗಿರಿ ಕ್ಷೇತ್ರಕ್ಕೆ ತೆರಳುವ ಮುಂದೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯ ಬಳಿಕ ಮಾತನಾಡಿದರು. ಕಾಂಗ್ರೆಸ್ ಹಿರಿಯ ನಾಯಕ

ಬಿಲ್ಲವ ಸಮಾಜಕ್ಕೆ ಮುಖ್ಯಮಂತ್ರಿ ಸಹಿತ ಕಾಂಗ್ರೆಸ್ ಅನ್ಯಾಯ ಮಾಡಿಲ್ಲ | ಶಿಕ್ಷಣ ಸಚಿವ ಮಧು ಬಂಗಾರಪ್ಪ Read More »

ಬಂಟ್ವಾಳ ನೇತ್ರಾವತಿ ನದಿ ನೀರಿನ ಮಟ್ಟ 6.7 ಕ್ಕೆ ತಲುಪಿದೆ

ಬಂಟ್ವಾಳ : ಭಾರೀ ಮಳೆಯಿಂದಾಗಿ ಬಂಟ್ವಾಳ ನೇತ್ರಾವತಿ ನೀರಿನ ಮಟ್ಟ ಏರಿಕೆ  ಇಂದು 6.7 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ. ಬಂಟ್ವಾಳ ನೇತ್ರಾವತಿ ನದಿಯ ಅಪಾಯದ ಮಟ್ಟ 8.5 ಮೀಟರ್ ಆಗಿದೆ. ಮಳೆಯ ಪ್ರಮಾಣ ಜಾಸ್ತಿಯಾದಲ್ಲಿ ಅಪಾಯದ ಮಟ್ಟವನ್ನು ತಲುಪುವ ಸಾಧ್ಯತೆಯಿದೆ.

ಬಂಟ್ವಾಳ ನೇತ್ರಾವತಿ ನದಿ ನೀರಿನ ಮಟ್ಟ 6.7 ಕ್ಕೆ ತಲುಪಿದೆ Read More »

error: Content is protected !!
Scroll to Top